Breaking News

ಪುತ್ರನಿಗೆ ಈಜು ಕಲಿಸಲು ಹೋದ ತಂದೆ – ಇಬ್ಬರು ನೀರು ಪಾಲು

ಬೀದರ್: ಬಾವಿಯಲ್ಲಿ ಪುತ್ರನಿಗೆ ಈಜು ಕಲಿಸಲು ಹೋದ ತಂದೆ ಹಾಗೂ ಮಗ ನೀರು ಪಾಲಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ತಾಲೂಕಿನ ಬಗದೂರಿ ಗ್ರಾಮದಲ್ಲಿ ನಡೆದಿದೆ. 42 ವರ್ಷದ ತಂದೆ ಸೂರ್ಯಕಾಂತ್ ಚಂದ್ರಾಶಾ ಹಾಗೂ 16 ವರ್ಷದ ಮಗ ಅಭಿಷೇಕ್ ದುರಂತ ಸಾವನ್ನಪ್ಪಿದ್ದಾರೆ. ಬಾವಿಯಲ್ಲಿ ಅಭಿಷೇಕ್ ನಿಗೆ ಈಜು ಕಲಿಸಲು ಹೋಗಿದ್ದರು. ಈ ವೇಳೆ ಸೂರ್ಯಕಾಂತ್ ಮೊದಲು ಮಗ ಅಭಿಷೇಕ್‍ನನ್ನು ನೀರಿಗೆ ಇಳಿಸಿದ್ದು, ಆತ ಬಾವಿಯ ಕೆಸರಿನಲ್ಲಿ ಸಿಲುಕಿಕೊಂಡಿದ್ದಾನೆ. ಈ ಹಿನ್ನೆಲೆ …

Read More »

FDA ನೇಮಕಾತಿಯಲ್ಲೂ ಅಕ್ರಮ- ಒಂದೇ ತಾಲೂಕಿನ 202 ಮಂದಿ ಆಯ್ಕೆ

ಕಲಬುರಗಿ: ಪಿಎಸ್‍ಐ(PSI), ಪಿಡಬ್ಲೂಡಿ(PWD) ಪರೀಕ್ಷೆ ಅಕ್ರಮ ಮಾದರಿಯಲ್ಲೇ ಎಫ್‍ಡಿಎ ಪರೀಕ್ಷೆಯಲ್ಲಿ ಸಹ ಅಕ್ರಮದ ವಾಸನೆ ಕೇಳಿಬರುತ್ತಿದೆ. ಎಫ್‍ಡಿಎ ಪರೀಕ್ಷೆಯಲ್ಲಿ ಅಫಜಲಪುರ ತಾಲೂಕಿನ 202 ಜನ ಆಯ್ಕೆಯಾಗಿರುವುದರಿಂದಲೇ ಇದೀಗ ಅಕ್ರಮ ವಿಚಾರ ಬಯಲಾಗಿದೆ. 2021 ರಲ್ಲಿ ನಡೆದ ಎಫ್‍ಡಿಎ ಪರೀಕ್ಷೆ ನಡೆದಿತ್ತು. ಇದರಲ್ಲಿ ಪಿಎಸ್‍ಐ/ಪಿಡಬ್ಲ್ಯೂಡಿ ಪರೀಕ್ಷೆಯಂತೇ ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಅಕ್ರಮ ಎಸಗಲಾಗಿತ್ತು. ಒಂದೇ ತಾಲೂಕಿನ 202 ಜನ ಆಯ್ಕೆಯಾಗೋದು ಎಂಟನೇ ಅದ್ಭುತವೇ. ಆಯ್ಕೆಯಾದ 202 ಜನರಲ್ಲಿ 11ಜನ ಸ್ಟೇಟ್ ಟಾಪರ್ಸ್ ಕೂಡ …

Read More »

ಸರ್ಕಾರ ಕತ್ತೆ ಕಾಯ್ತಿದ್ಯಾ? ಕಡ್ಲೆಪುರಿ ತಿಂತಿದ್ಯಾ? ಆರೋಪಿ ವಿರುದ್ಧ FIR ದಾಖಲಿಸಿಲ್ಲ ಯಾಕೆ – ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದ ವಿಚಾರವಾಗಿ ಸರ್ಕಾರ ಕತ್ತೆ ಕಾಯ್ತಿದೆಯಾ? ಕಡ್ಲೆಪುರಿ ತಿನ್ನುತ್ತಿದೆಯಾ? ಕೋಲಾಟ ಆಡುತ್ತಿದೆಯಾ? ನನ್ನ ಬಳಿ ಇನ್ಯಾವ ಸಾಕ್ಷಿ ಕೇಳುತ್ತಿದ್ದೀರಾ? ಆಡಿಯೋ ರಿಲೀಸ್ ಆಗಿ ಮೂರು ದಿನವಾದರೂ ಆರೋಪಿ ವಿರುದ್ಧ ಯಾಕೆ ಎಫ್‍ಐಆರ್ ದಾಖಲಿಸುತ್ತಿಲ್ಲ ಎಂದು ಪ್ರಿಯಾಂಕ್ ಖರ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಸಂಜೆ ನನ್ನ ಮನೆಗೆ ಸಿಐಡಿಯವರು ಒಂದು ನೋಟಿಸ್ ಕೊಟ್ಟಿದ್ದಾರೆ. ಅದರಲ್ಲಿ ಸುದ್ದಿಗೋಷ್ಠಿ …

Read More »

ಸಿದ್ದರಾಮಯ್ಯ ಪರ MLC ಹೆಚ್.ವಿಶ್ವನಾಥ್ ಬ್ಯಾಟಿಂಗ್

ಮೈಸೂರು: ಸಿಎಂ ಆದವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು. ವಿಪಕ್ಷ ನಾಯಕ ಸಿದ್ದರಾಮಯ್ಯ 5 ವರ್ಷ ಯಶಸ್ವಿ ಆಡಳಿತ ನಡೆಸಿದವರು, ಹುಣಸೂರಿನಿಂದ ಸ್ಪರ್ದಿಸಿದರೆ ಅವರನ್ನು ಗೆಲ್ಲಿಸುತ್ತೇವೆ ಎಂದು ಹೇಳುವ ಮೂಲಕ ಎಂಎಲ್ ಸಿ ಹೆಚ್.ವಿಶ್ವನಾಥ್ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.   ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್, ಸಿದ್ದರಾಮಯ್ಯ ಯಶಸ್ವಿಯಾಗಿ ಆಡಳಿತ ನಡೆಸಿದವರು, ಮುಂಬರುವ ಚುನಾವಣೆಗೆ ಸಿದ್ದರಾಮಯ್ಯ ಹುಣಸೂರಿನಿಂದ ಸ್ಪರ್ಧೆ ಮಾಡಿದರೆ ಅವರನ್ನು ಗೆಲ್ಲಿಸುತ್ತೇವೆ. ಅಂತ ಶೆಟ್ರ ಮಂಜನನ್ನೇ ಗೆಲ್ಲಿಸಿದ್ವಿ, ನಿಮ್ಮನ್ನು ಗೆಲ್ಲಿಸಲ್ವಾ? …

Read More »

ಈ ಗ್ರಾಮದ ಮನೆಗಳಿಗೆ ಬಾಗಿಲೇ ಇಲ್ಲ…!

ಮುಂಬೈ: ಒಂದು ಊರಿದೆ. ಆ ಊರಿನ ಮನೆಗಳಿಗೆ ಬಾಗಿಲೂ ಇಲ್ಲ, ಬೀಗವೂ ಹಾಕುವುದಿಲ್ಲ. ಹೌದು ಬರೋಬ್ಬರಿ 4000 ಮಂದಿ ವಾಸಿಸುತ್ತಿರುವ ಮಹಾರಾಷ್ಟ್ರದ ಶನಿ ಶಿಂಗ್ನಾಪುರದಲ್ಲಿ ಇದುವರೆಗೇ ಯಾವ ಮನೆಗೂ ಬಾಗಿಲೂ ಇಲ್ಲ, ಬೀಗವೂ ಇಲ್ಲ ಎಂದರೆ ಆಶ್ಚರ್ಯವಾದರೂ ಸತ್ಯ. ʼಸಬ್ ಭಗವಾನ್ ಭರೋಸೆ’ ಎಂಬ ಮಾತನ್ನು ಈ ಗ್ರಾಮದ ಜನರು ಅಕ್ಷರಶಃ ಅನುಸರಿಸುತ್ತಿದ್ದಾರೆ. ಏಕೆಂದರೆ ಮಹಾರಾಷ್ಟ್ರದ ಶನಿ ಶಿಂಗ್ನಾಪುರದಲ್ಲಿನ ಮಂದಿ ಹಿಂದೂ ದೇವತೆಯಾದ ಶನಿ (ಶನಿ ಗ್ರಹದ ಅಧಿಪತಿ) ಯಲ್ಲಿ ಅಪಾರ …

Read More »

ಶಾಲೆಯಲ್ಲೇ ಶಿಕ್ಷಕಿಯೊಂದಿಗೆ ಸಂಭೋಗ ನಡೆಸಿದ ಪ್ರಾಂಶುಪಾಲ ಅಮಾನತು

ಛತ್ತೀಸ್‌ಗಢ: ಛತ್ತೀಸ್‌ಗಢದ ಕಂಕೇರ್‌ನ ಸರ್ಕಾರಿ ಪ್ರೌಢಶಾಲೆಯ ಪ್ರಾಂಶುಪಾಲ ಶಾಲೆಯಲ್ಲೇ ಶಿಕ್ಷಕಿಯ ಜೊತೆ ಲೈಂಗಿಕ ಕ್ರಿಯೆ ನಡೆಸಿ ಸಿಕ್ಕಿಬಿದ್ದು, ಅಮಾನತುಗೊಂಡಿದ್ದಾನೆ. ಗ್ರಾಮದ ಕೆಲವರು ಕುಟುಕು ಕಾರ್ಯಾಚರಣೆ ನಡೆಸಿ ಶಿಕ್ಷಕನ ಕಾಮಚೇಷ್ಟೆಯನ್ನು ವಿಡಿಯೋ ಮಾಡಿದ್ದಾರೆ. ಪ್ರಾಂಶುಪಾಲ ಮತ್ತು ಮಹಿಳಾ ಸಿಬ್ಬಂದಿಯ ಈ ಕೃತ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಶಾಲೆಯಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಈ ಹಿಂದೆಯೇ ಕೆಲ ಗ್ರಾಮಸ್ಥರು ಆರೋಪಿಸಿದ್ದರು. ಇದೀಗ ಅವರೇ ವಿಡಿಯೋ ಸೆರೆ ಹಿಡಿದು ಕೃತ್ಯ ಬಯಲು ಮಾಡಿದ್ದಾರೆ. …

Read More »

‘ಓವರ್ ಟ್ಯಾಂಕ್’ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಇಡೀ ಕುಟುಂಬಸ್ಥರು: ಕೆಳಗಿಳಿಸಲು ಪೊಲೀಸರ ಹರಸಾಹಸ

ಬೆಂಗಳೂರು ಗ್ರಾಮಾಂತರ: ಚಿಂತಾಮಣಿ ಯಿಂದ ಬಂದಂತಹ ಕುಟುಂಬವೊಂದು ಬೆಳ್ಳಂ ಬೆಳಗ್ಗೆಯೇ ಓವರ್ ಟ್ಯಾಂಕ್ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರೀನ್ ವೇ ಲೇ ಔಟ್ ನಲ್ಲಿ ನಡೆದಿದೆ. ನಿವೃತ್ತಿ ಡಿವೈಎಸ್ಪಿ ಕೋನಪ್ಪ ರೆಡ್ಡಿಗೆ ದೊಡ್ಡಬಳ್ಳಾಪುರದ ಗ್ರೀನ್ ವೇ ಲೇ ಔಟ್ ಮಾಡಲು 38 ಲಕ್ಷ ಹಣ ನೀಡಿದ್ದೆ. ಆದರೆ ಕೊಟ್ಟ ಹಣವನ್ನು ಕೇಳಿದರೆ ಕೋನಪ್ಪ ರಡ್ಡಿ ಹಾಗೂ ಅವನ ಮಗ ದೌರ್ಜನ್ಯ ನಡೆಸುತ್ತಿದ್ದಾರೆ …

Read More »

ಹುಬ್ಬಳ್ಳಿಯಲ್ಲಿ ಎಚ್ಚೆತ್ತ ಖಾಕಿ : ಪಿಯು ಪರೀಕ್ಷಾ ಕೇಂದ್ರಕ್ಕೆ ಡಾಗ್, ಬಾಂಬ್ ಸ್ಕ್ವಾಡ್ ಭೇಟಿ

ಹುಬ್ಬಳ್ಳಿ : ಕೆಲವು ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಶಾಲೆಗಳಿಗೆ ಹುಸಿ‌ ಬಾಂಬ್ ಬೆದರಿಕೆ ಕರೆ ಬಂದ ಬೆನ್ನಲ್ಲೇ ‌ಹುಬ್ಬಳ್ಳಿಯಲ್ಲಿ ಖಾಕಿಪಡೆ ಎಚ್ಚೆತ್ತುಕೊಂಡಿದೆ. ನಗರದ ಪಿಯು ಪರೀಕ್ಷಾ ಕೇಂದ್ರಕ್ಕೆ ಡಾಗ್, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿಯ ಪಿಯು ಪರೀಕ್ಷಾ ಕೇಂದ್ರಕ್ಕೆ ಡಾಗ್, ಬಾಂಬ್ ಸ್ಕ್ವಾಡ್ ಭೇಟಿ..ಜಿಲ್ಲೆಯ ಮಹೇಶ ಪಿಯು ಕಾಲೇಜಿನಲ್ಲಿ ತಪಾಸಣೆ ನಡೆಸಿದ ಬಾಂಬ್ ಸ್ಕ್ವಾಡ್, ಪರೀಕ್ಷಾ ಕೇಂದ್ರದ ಸುತ್ತಮುತ್ತ ಪರಿಶೀಲನೆ ನಡೆಸಿದೆ. ಇನ್ನು ಇದೇ ಕಾಲೇಜಿನಲ್ಲಿ ಹಳೇ …

Read More »

“ಹೆಲೋ. ಬ್ಯುಸಿನೆಸ್‌ ಗೆ ಸಾಲ ಕೊಡುತ್ತೇವೆ”.. ಕಾಲ್‌ ಮಾಡಿ ಲೋನ್‌ ಆಮಿಷ ಬಳಿಕ ವಂಚನೆ; ಬಂಧನ

ಬೆಂಗಳೂರು: ಸಾರ್ವಜನಿಕರೇ ಎಚ್ಚರ! ಲೋನ್‌ ಕೊಡಿಸುವ ನೆಪದಲ್ಲಿ ಸಾರ್ವಜನಿಕರಿಗೆ ಕರೆ ಮಾಡಿ ಮೋಸ ಮಾಡುವ ವ್ಯವಸ್ಥಿತ ಜಾಲ ಸಿಲಿಕಾನ್‌ ಸಿಟಿಯಲ್ಲಿ ತಲೆ ಎತ್ತಿದ್ದು ಯಾಮಾರಿದರೆ ಮೋಸ ಹೋಗುವುದು ಗ್ಯಾರೆಂಟಿ. ಅಂತಹದ್ದೆ ಖತರ್ನಾಕ್‌ ವಂಚಕ ಜಾಲದ ಹೆಡೆಮುರಿ ಕಟ್ಟುವಲ್ಲಿ ಈಶಾನ್ಯ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ.   ಲೋನ್‌ ಕೊಡಿಸುವ ನೆಪದಲ್ಲಿ ಆನ್‌ಲೈನ್‌ನಲ್ಲಿ ಕರೆ ಮಾಡಿ ನಂಬಿಸಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ಜಾಲವನ್ನು ಈಶಾನ್ಯ ವಿಭಾಗದ ಸಿಎನ್‌ ಎನ್‌ ಪೊಲೀಸರು ಭೇದಿಸಿದ್ದು ನಾಲ್ವರು ವಂಚಕರನ್ನು ಬಂಧಿಸಿದ್ದಾರೆ. …

Read More »

ಬೆಳ್ಳಂಬೆಳಗ್ಗೆ ರಾಮನಗರದಲ್ಲಿ ದುರಂತ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರ ಸಾವು, ಮೂವರ ಸ್ಥಿತಿ ಗಂಭೀರ

ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆ ರಾಮನಗರದ ಕುಂಭಾಪುರ ಗೇಟ್ ಬಳಿ ಸೋಮವಾರ ಬೆಳಗ್ಗೆ 6 ಗಂಟೆಗೆ ಸಂಭವಿಸಿದೆ. ಸುಂದ್ರಶ್ (49) ಮತ್ತು ತನ್ಮಯ್ (9) ಮೃತ ದುದೈವಿಗಳು. ಶೀಲ, ಗಾನವಿ, ಸಾನವಿ ಗಂಭೀರ ಗಾಯಗೊಂಡಿದ್ದಾರೆ. ಒಂದೇ ಕುಟುಂಬದ ಐವರು ಬೆಂಗಳೂರಿನಿಂದ ಮಂಡ್ಯ ಜಿಲ್ಲೆ ಮಳವಳ್ಳಿ ಬಳಿಯ ಅಗಸನ ಪುರಕ್ಕೆ ಹಬ್ಬಕ್ಕೆಂದು ಹೋಗಿದ್ದರು. ಹಬ್ಬ ಮುಗಿಸಿಕೊಂಡು ವಾಪಸ್​ ಬೆಂಗಳೂರಿಗೆ ಒಮಿನಿ ಕಾರಿನಲ್ಲಿ ತೆರಳುವಾಗ ಮಾರ್ಗಮಧ್ಯೆ …

Read More »