Breaking News

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ

ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಫರ್ಧಿಸುವುದಾಗಿ ಗೋವಾ ಮಾಜಿ ಮುಖ್ಯಮಂತ್ರಿ ದಿ.ಮನೋಹರ್ ಪರ್ರಿಕರ್ ಪುತ್ರ ಉತ್ಪಲ್ ಪರ್ರಿಕರ್ ಶುಕ್ರವಾರ ಘೋಷಿಸಿದ್ದಾರೆ. ಪಣಜಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ರಾಜಕೀಯ ಭವಿಷ್ಯದ ಕುರಿತು ರಾಜ್ಯದ ಜನತೆ ನಿರ್ಧರಿಸಲಿದ್ದಾರೆ. ಕೇವಲ ಮನೋಹರ್ ಪರ್ರಿಕರ್ ರವರ ತತ್ವ ಸಿದ್ಧಾಂತಗಳನ್ನು ಮುಂದುವರೆಸಿಕೊಂಡು ಹೋಗಲು ನಾನು ಪಣಜಿ ಕ್ಷೇತ್ರದಿಂದ ಸ್ಫರ್ಧಿಸುತ್ತಿದ್ದೇನೆ ಎಂದರು. ಪಣಜಿ ಕ್ಷೇತ್ರದ ಹಾಲಿ ಬಿಜೆಪಿಯ ಉಮೇದುವಾರರ ಬಗ್ಗೆ ಮಾತನಾಡುವುದು ಕೂಡ ನಾಚಿಕೆಗೇಡಿನ …

Read More »

ಮೂತ್ರ ವಿಸರ್ಜನೆಗೆಂದು ನಿಂತ ಕ್ಷಣಾರ್ಧದಲ್ಲೇ ಸ್ನೇಹಿತರಿಬ್ಬರ ಪ್ರಾಣ ಹೊತ್ತೊಯ್ದ ಜವರಾಯ!

ನೆಲಮಂಗಲ: ಜವರಾಯ ಯಾವಾಗ? ಯಾವ ರೂಪದಲ್ಲಿ ಬರ್ತಾನೆ ಎಂದು ಊಹಿಸೋಕು ಆಗಲ್ಲ. ಆಟೋ ಚಾಲಕರಿಬ್ಬರು ಮನೆಗೆ ಹೋಗುವ ಮಾರ್ಗಮಧ್ಯೆ ಮೂತ್ರ ವಿಸರ್ಜನೆಗೆಂದು ರಸ್ತೆಬದಿ ಆಟೋ ನಿಲ್ಲಿಸಿದ ಕ್ಷಣಾರ್ಧದಲ್ಲೇ ದುರಂತ ಅಂತ್ಯಕಂಡಿದ್ದಾರೆ. ಇಂತಹ ಘಟನೆ ಬುಧವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 75ರ ಮಹದೇವಪುರ ಬಳಿಯ ಚಾಕಲೇಟ್​ ಕಾರ್ಖಾನೆ ಬಳಿ ಸಂಭವಿಸಿದೆ. ಚಕ್ಕಸಂದ್ರದ ರಮೇಶ್​(36) ಮತ್ತು ಅಡೇಪೇಟೆಯ ಉಮೇಶ್​ (35) ಮೃತ ದುರ್ದೈವಿಗಳು. ಸ್ನೇಹಿತರಾದ ಉಮೇಶ್​ ಮತ್ತು ರಮೇಶ್​ ಇಬ್ಬರೂ ಆಟೋ ಚಾಲಕರಾಗಿದ್ದರು. ಇವರಿಬ್ಬರೂ …

Read More »

ಐವರು ವಿದ್ಯಾರ್ಥಿಗಳಿಗೆ ಕೋವಿಡ್​​ ಬಂದ್ರೂ ಸ್ಕೂಲ್​​ ಕ್ಲೋಸ್​..​?

ಕೊರೊನಾ ರಜೆಯಲ್ಲಿರೋ ಮಕ್ಕಳೆಲ್ಲ ಸ್ಕೂಲ್ ಬ್ಯಾಗ್ ರೆಡಿ ಮಾಡ್ಕೊಳ್ಳಿ. ವೀಕೆಂಡ್ ಕರ್ಫ್ಯೂ ಕಡಿವಾಣ ತೆರವುಗೊಳಿಸಿರೋ ಸರ್ಕಾರ ಶಾಲಾ-ಕಾಲೇಜುಗಳ ಆರಂಭಕ್ಕೂ ಹಸಿರು ನಿಶಾನೆ ತೋರಿದೆ. ಆದರೆ ಬೆಂಗಳೂರಿನ ಶಾಲೆಗಳ ಬಾಗಿಲು ಮಾತ್ರ ಜನವರಿ 29ರವರೆಗೂ ಕ್ಲೋಸ್ ಆಗಿರಲಿದೆ.   ರಾಜ್ಯದಲ್ಲಿ ಕೊರೊನಾ ತೀವ್ರವಾಗುತ್ತಿದ್ದಂತೆ ಬೆಂಗಳೂರು ಮತ್ತು ಸೋಂಕು ಹೆಚ್ಚಿರುವ ಮೈಸೂರು, ಶಿವಮೊಗ್ಗ ಸೇರಿದಂತೆ ಕೆಲವು ಮಹಾನಗರಗಳಲ್ಲಿ ಶಾಲೆ-ಕಾಲೇಜುಗಳಿಗೆ ಬೀಗಬಿದ್ದಿತ್ತು. ಆದರೆ ಪುನಃ ಶಾಲೆಗಳ ಆರಂಭಕ್ಕೆ ಸರ್ಕಾರ ಗ್ನೀನ್ ಸಿಗ್ನಲ್ ನೀಡಿದೆ. ಬೆಂಗಳೂರಲ್ಲಿ …

Read More »

ಮಗನ ವರ್ತನೆಗೆ ಬೇಸತ್ತ ತಾಯಿ,ಮಗನನ್ನೇ ಸಂಬಂಧಿಕರೊಂದಿಗೆ ಸೇರಿ ಕೊಲೆ ಮಾಡಿದ ತಾಯಿ

ರಾಯಚೂರು : ವ್ಯಕ್ತಿಯೊಬ್ಬ ಇರುವ ಚಟಗಳಿಗೆಲ್ಲ ದಾಸನಾಗಿದ್ದ. ಇದರಿಂದಾಗಿ ಸಾಕಷ್ಟು ಸಾಲ ಮಾಡಿಕೊಂಡು ಕೊನೆಗೆ ಮನೆಯನ್ನೇ ಮಾರಲು ಮುಂದಾಗಿದ್ದ. ಮಗನ ವರ್ತನೆಗೆ ಬೇಸತ್ತ ತಾಯಿ ಹಾಗೂ ಸಂಬಂಧಿಕರು ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಸಿರವಾರದಲ್ಲಿ ನಡೆದಿದ್ದು, ಅಮರೇಶ್(43) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ಇಸ್ಪೀಟ್ ಸೇರಿದಂತೆ ಮದ್ಯದ ವ್ಯಸನಿಯಾಗಿದ್ದ ಎನ್ನಲಾಗಿದೆ. ಹೀಗಾಗಿ ಕಂಡ ಕಂಡವರಲ್ಲಿ ಸಾಕಷ್ಟು ಸಾಲ ಮಾಡಿದ್ದ. ಸಾಲ ತೀರಿಸಲು ಆಗದೆ ಕೊನೆಗೆ …

Read More »

ಪ್ರಧಾನಿ ಮೋದಿಯವರಿಗೆ ಮಾನ ಮರ್ಯಾದೆ ಇದ್ದರೆ ಕೃಷಿ ಕಾಯ್ದೆ ವಾಪಸ್ಸು ಪಡೆದ ಕೂಡಲೇ ರಾಜೀನಾಮೆ ನೀಡಬೇಕಿತ್ತು: ಸಿದ್ದರಾಮಯ್ಯ

ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ (Siddaramaiah) ಶುಕ್ರವಾರ ಬೆಂಗಳೂರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendra Modi) ಅವರ ವಿರುದ್ಧ ಕಿಡಿಕಾರಿದರು. ನಗರದಲ್ಲಿ ಕಾಂಗ್ರೆಸ್ ಪಕ್ಷ ನಡೆಸಿದ ಪತ್ರಿಕಾ ಗೋಷ್ಠಿಯೊಂದರಲ್ಲಿ (Press Conference) ಮಾತಾಡಿದ ಸಿದ್ದರಾಮಯ್ಯನವರು ಮೋದಿಯವರು ಪ್ರಧಾನಿಯಾದ ಬಳಿಕ ದೇಶವನ್ನು ಸಾಲದಲ್ಲಿ ಮುಳುಗಿಸಿದ್ದಾರೆ ಎಂದು ಹೇಳಿದರು. ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮೊದಲು ಭಾರತದ ಸಾಲ ರೂ. …

Read More »

ಕೋವಿಡ್ 19: ಶಾಲೆಗಳಿಗೆ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜ್ಯದ ಕೋವಿಡ್ 19 ಸ್ಥಿತಿಗತಿ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ತಜ್ಞರ ವರದಿ ಸೇರಿದಂತೆ ಹಲವಾರು ವಿಚಾರಗಳ ಆಧಾರದಲ್ಲಿ ರಾಜ್ಯದಲ್ಲಿ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂವನ್ನು ತೆರವು ಮಾಡಲು ಸರ್ಕಾರ ನಿರ್ಧರಿಸಿದೆ.   ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡೊದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ನಾಗೇಶ್, ಬೆಂಗಳೂರಿನಲ್ಲಿ ಜ.29ರವರೆಗೆ ಶಾಲೆಗಳನ್ನು ತೆರಯುವಂತಿಲ್ಲ. ಮುಂದಿನ ಶುಕ್ರವಾರ (ಜ.28)ದಂದು ಸಭೆ ನಡೆಸಿ …

Read More »

ಇಂಡಿಯಾ ಟುಡೇ MOTN ಸಮೀಕ್ಷೆ: ಸದ್ಯ ಲೋಕಸಭೆ ಚುನಾವಣೆ ನಡೆದರೆ ಬಿಜೆಪಿಗೆ ಎಷ್ಟು ಸ್ಥಾನ?

ನವದೆಹಲಿ, ಜನವರಿ 20: ಸದ್ಯ ದೇಶದಲ್ಲಿ ಲೋಕಸಭೆ ಚುನಾವಣೆ ನಡೆದರೆ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 296 ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿಯು ವೈಯಕ್ತಿಕವಾಗಿ 271 ಸ್ಥಾನಗಳನ್ನು ಗಳಿಸಬಹುದಿತ್ತು ಎಂದು ಇಂಡಿಯಾ ಟುಡೇನ ನೇಷನ್ ಪೋಲ್‌ನ ಮೂಡ್ ಸೂಚಿಸಿದೆ.   ಇಂಡಿಯಾ ಟುಡೆಯ MOTN ಸಮೀಕ್ಷೆಯಲ್ಲಿ, ಪಂಜಾಬ್ ಹೊರತುಪಡಿಸಿ ಎಲ್ಲಾ ಚುನಾವಣೆಗೆ ಒಳಪಟ್ಟ ನಾಲ್ಕು ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಕಾರ್ಯಕ್ಷಮತೆಯ ರೇಟಿಂಗ್‌ಗಳನ್ನು ಪಡೆದಿದ್ದಾರೆ. ಚುನಾವಣೆಗೆ …

Read More »

ಸೀನಿಯರ್ ಆಫೀಸರ್ ಆದ್ರೂ ಅಷ್ಟು ಗೊತ್ತಾಗೋದಿಲ್ವಾ; ಐಜಿಪಿಗೆ ಗದರಿದ ಸಿಎಂ

ತುಮಕೂರು: ತ್ರಿವಿದ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ ಮೂರನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ ದಾಸೋಹ ದಿನಾಚರಣೆಗೆ ಚಾಲನೆ ನೀಡಿದರು. ಈ ವೇಳೆ ಜನ ಗುಂಪು ಸೇರಿದ್ದಕ್ಕೆ ಐಜಿಪಿ ಮೇಲೆ ಸಿಎಂ ಗದರಿದ ಪ್ರಸಂಗ ನಡೆದಿದೆ.   ಸಿದ್ದಂಗಂಗಾ ಮಠದ ಬಳಿ ಸಿಎಂ ಬೊಮ್ಮಾಯಿ ಕಾರು ಇಳಿಯುತ್ತಿದ್ದಂತೆ ಜನರು ಜಮಾವಣೆಗೊಂಡಿದ್ದಾರೆ. ಈ ವೇಳೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್, ಡಿವೈ ಎಸ್ …

Read More »

ವಿಆರ್​ಎಲ್​ ಹೆಸರಲ್ಲಿ ವಂಚನೆ: ನಕಲಿ ವೆಬ್​​ಸೈಟ್​ ಸೃಷ್ಟಿಸಿ ಗ್ರಾಹಕರಿಗೆ ಮೋಸ, ಎಫ್​ಐಆರ್​ ದಾಖಲು

ಬೆಂಗಳೂರು: ವಿಆರ್​ಎಲ್​ ಕಂಪನಿಗೆ ಹೋಲುವಂತೆ ನಕಲಿ ವೆಬ್​ಸೈಟ್​ ಸೃಷ್ಟಿಸಿ, ಗ್ರಾಹಕರಿಗೆ ವಂಚನೆ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ದೀಪಕ್​ ಕೌಶಿಕ್​ ಎಂಬಾತನ ವಿರುದ್ಧ ಕೊಡಿಗೇಹಳ್ಳಿ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಆರೋಪಿ ದೀಪಕ್​ ಕೌಶಿಕ್​ ಹೈದರಾಬಾದ್​ನಲ್ಲಿರುವ ಮಾಹಿತಿ ಸಿಕ್ಕಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಟ್ರಾನ್ಸ್​ಪೋರ್ಟೇಷನ್​ ಮಾಡುವುದಾಗಿ ಬೆಂಗಳೂರಿನ ಬೃಂದಾ ಕೆ.ವರ್ಮಾ ಅವರಿಂದ 10500 ರೂ. ಪಾವತಿಸಿಕೊಂಡು ದೀಪಕ್​ ಕೌಶಿಕ್​ ವಂಚಿಸಿದ್ದಾನೆ. ಹೈದರಾಬಾದ್​ ಟ್ರಾನ್ಸ್​ಪೋರ್ಟೇಷನ್​ ಸಂಸ್ಥೆಗೆ ಸೇರಿದ ಪೀಣ್ಯ ಗೋದಾಮಿನಲ್ಲಿದ್ದ …

Read More »

ನಡುರಸ್ತೆಯಲ್ಲಿ ಧಗಧಗಿಸಿ ಹೊತ್ತಿ ಉರಿದ ಬಿಎಂಟಿಸಿ ಬಸ್, ತಪ್ಪಿದ ಭಾರೀ ಅನಾಹುತ

ಬೆಂಗಳೂರು: ದೀಪಾಂಜಲಿನಗರದ ಡಿಪೋಗೆ ಸೇರಿದಂತ BMTC ಬಸ್ಸೊಂದು ( BMTC Bus ) ಕೆ ಆರ್ ಮಾರುಕಟ್ಟೆಗೆ ತೆರಳುತ್ತಿದ್ದಂತ ಸಂದರ್ಭದಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ( Fire ) ರಸ್ತೆಯಲ್ಲೇ ಧಗಧಗಿಸಿ ಹೊತ್ತಿ ಉರಿದಿರೋ ಘಟನೆ, ಇಂದು ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆಯ ಮಕ್ಕಳ ಕೂಡದ ಬಳಿಯಲ್ಲಿ ತೆರಳುತ್ತಿದ್ದಂತ ಬಿಎಂಟಿಸಿ ಬಸ್ಸೊಂದು, ಕೆ ಆರ್ ಮಾರುಕಟ್ಟೆಗೆ ತೆರಳುತ್ತಿದ್ದಂತ ವೇಳೆ, ಕಾಣಿಸಿಕೊಂಡಂತ ಬೆಂಕಿಯಿಂದಾಗಿ ಧಗಧಗಿಸಿ ಹೊತ್ತಿ ಉರಿದಿದೆ. ಕೂಡಲೇ ಅಲ್ಲೇ ಇದ್ದಂತ ಮಹಾನಗರ …

Read More »