ನಿಪ್ಪಾಣಿ ತಾಲೂಕಿನ ಭೋಜ ಗ್ರಾಮದ ಯೋಧರೊಬ್ಬರು ಪಂಜಾಬ್ನ ಪಠಾಣ್ಕೋಟ್ ರೈಲು ನಿಲ್ದಾಣದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಿಪ್ಪಾಣಿ ತಾಲೂಕಿನ ಭೋಜ ಗ್ರಾಮದ ವಿನಯ ಬಾಬಾಸಾಹೇಬ ಭೋಜೆ (37) ಎನ್ನುವ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಯೋಧನ ಸಾವಿನ ಸುದ್ದಿ ಕೇಳಿ ಭೋಜ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ವಿನಯ್ ಭೋಜೆ ಹದಿನೇಳು ವರ್ಷಗಳ ಹಿಂದೆ ಭಾರತೀಯ ಸೇನೆಗೆ ಸೇರ್ಪಡೆಗೊಂಡಿದ್ದರು. ಕಳೆದ ಹತ್ತು ವರ್ಷಗಳಿಂದ ಅವರು ಮಹಾರಾಷ್ಟ್ರದ ಹಾತಕಣಗಲೆ ತಾಲೂಕಿನ ತಿಲವಾಣಿ ಗ್ರಾಮದಲ್ಲಿ ನೆಲೆಸಿದ್ದರು. ಕಳೆದ …
Read More »ರಾಜ್ಯದಲ್ಲಿ ಲಾಕ್ಡೌನ್ ಮಾಡುವ ಅವಶ್ಯಕತೆ ಇಲ್ಲ: ಸಚಿವ ಉಮೇಶ್ ಕತ್ತಿ
ಹುಕ್ಕೇರಿ : ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳ ಕಸ ವಿಲೇವಾರಿ ವಾಹನಗಳಿಗೆ ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಚಾಲನೆ ನೀಡಿದರು. ರಾಜ್ಯದಲ್ಲಿ ಲಾಕ್ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದ ಸಚಿವ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಉಮೇಶ್ ಕತ್ತಿ, 54 ಪಂಚಾಯಿತಿಗಳಿಗೆ ಕಸ ವಿಲೇಮಾರಿ ವಾಹನ ನೀಡಲಾಗುತ್ತಿದೆ. ಇದನ್ನ ಹುಕ್ಕೇರಿ ತಾಲೂಕಿನ ಜನ ಸದುಪಯೋಗ ಪಡಿಸಿಕೊಳ್ಳಬೇಕು. ಹುಕ್ಕೇರಿ ತಾಲೂಕು ಸ್ವಚ್ಛ ತಾಲೂಕು ಮಾಡಲು ಸಾರ್ವಜನಿಕರು ಸಹಕರಿಸಿದರೆ ಹುಕ್ಕೇರಿ …
Read More »ಉತ್ತರಾಖಂಡದಲ್ಲಿ ಬಿಜೆಪಿ ನಾಯಕ ‘ಕೈ’ ಹಿಡಿಯುವ ಸಾಧ್ಯತೆ: ಗೋವಾದಲ್ಲಿ ಟಿಎಂಸಿಯೊಂದಿಗೆ ಮೈತ್ರಿ ಇಲ್ಲ ಎಂದ ದಿನೇಶ್ ಗುಂಡೂರಾವ್
ನವದೆಹಲಿ: ಪಂಚರಾಜ್ಯಗಳ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿ ಇದೆ. ಚುನಾವಣಾ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷಗಳು ಕಸರತ್ತು ನಡೆಸುತ್ತಿವೆ. ಕೆಲವು ರಾಜ್ಯಗಳಲ್ಲಿ ಈಗಾಗಲೇ ಮೊದಲ ಹಂತದ ಅಭ್ಯರ್ಥಿಗಳನ್ನು ಕೆಲವು ಪಕ್ಷಗಳು ಬಿಡುಗಡೆ ಮಾಡಿವೆ. ಉತ್ತರಾಖಂಡದಲ್ಲಿಯೂ ಚುನಾವಣಾ ಕಣ ರಂಗೇರಿದೆ. ಮಾಜಿ ಸಚಿವ ಹರಕ್ ಸಿಂಗ್ ರಾವತ್ ಬಿಜೆಪಿಯಿಂದ ಹೊರನಡೆದು, ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಮಾತುಕತೆಗಳೂ ತೀವ್ರಗೊಂಡಿವೆ ಎನ್ನಲಾಗುತ್ತಿದೆ. ಈವರೆಗೆ ಹರಕ್ಸಿಂಗ್ ರಾವತ್ ಅವರು ಕಾಂಗ್ರೆಸ್ ಸೇರ್ಪಡೆಯಾಗುವ …
Read More »ಕುಂದಾನಗರಿಯಲ್ಲಿ ಕೊರೊನಾ ಸೋಂಕಿನ ಮೂರನೇಯ ಅಲೆಯು ತನ್ನ ಅಟ್ಟಹಾಸವನ್ನು ತಲೆ ಎತ್ತಿ ಮೇರೆದು ಪುಟ್ಟ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತಿದೆ.
ಬೆಳಗಾವಿ : ಗಡಿ ಜಿಲ್ಲೆ ಕುಂದಾನಗರಿಯಲ್ಲಿ ಕೊರೊನಾ ಸೋಂಕಿನ ಮೂರನೇಯ ಅಲೆಯು ತನ್ನ ಅಟ್ಟಹಾಸವನ್ನು ತಲೆ ಎತ್ತಿ ಮೇರೆದು ಪುಟ್ಟ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತಿದೆ. ಹಂತದರಲ್ಲೂ ಸೋಮವಾರದಿಂದಲ್ಲೆ ಶಾಲೆಗಳು ಮತ್ತೆ ಪ್ರಾರಂಭವಾಗುತ್ತಿದೆ, ಎಂದು ಪಾಲಕರಲ್ಲಿ ಆತಂಕವು ಮನೆ ಮಾಡಿದೆ. ಹೌದು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾದ ಮೂರನೇಯ ಅಲ್ಲೆಯು ತನ್ನ ಅಟ್ಟಹಾಸವನ್ನು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಪುಟ್ಟ ಮಕ್ಕಳನ್ನು ಟಾರ್ಗೆಟ್ ಮಾಡುತ್ತಿದೆ. ಕಿತ್ತೂರು ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ …
Read More »ನಾನು ಮೋದಿಯನ್ನು ಹೊಡೆಯಬಲ್ಲೆ’, ವಿವಾದಾತ್ಮಕ ಹೇಳಿಕೆ ನೀಡಿ ಪೇಚಿಗೆ ಸಿಲುಕಿ Nana Patole, ನಂತರ ಹೇಳಿದ್ದೇನು?
ಮಹಾರಾಷ್ಟ್ರ ಕಾಂಗ್ರೆಸ್ (Maharashtra Congres) ಅಧ್ಯಕ್ಷರ ಆಕ್ಷೇಪಾರ್ಹ ಹೇಳಿಕೆಯೊಂದು ಅಲ್ಲಿನ ರಾಜಕೀಯ ತಾಪಮಾನ ಹೆಚ್ಚಳಕ್ಕೆ ಕಾರಣವಾಗಿದೆ, ಆದರೆ, ನಂತರ ಅವರು ತಮ್ಮ ಹೇಳಿಕೆಯನ್ನು ಸ್ಪಷ್ಟಪಡಿಸಿದ್ದಾರೆ ಮತ್ತು ಪ್ರಧಾನಿ ಮೋದಿ (PM Modi) ಬಗ್ಗೆ ಯಾವುದೇ ಆಕ್ಷೇಪಾರ್ಹ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ. ತಾವು ಸ್ಥಳೀಯ ಗೂಂಡಾ ಮೋದಿ ಬಗ್ಗೆ ಮಾತನಾಡುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ನಾನಾ ಪಟೋಲೆ (Nana Patole), ‘ನನ್ನ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ …
Read More »ಗೋವಾ; ಉತ್ಪಲ್ ಪರಿಕ್ಕರ್ಗೆ ಎಲ್ಲಾ ವಿರೋಧ ಪಕ್ಷಗಳ ಬೆಂಬಲ?
ಪಣಜಿ, ಜನವರಿ 18; “ಬಿಜೆಪಿಯೇತರ ಪಕ್ಷಗಳು ದಿ. ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಬೆಂಬಲಿಸಬೇಕು” ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಕರೆ ನೀಡಿದ್ದಾರೆ. ಫೆಬ್ರವರಿ 14ರಂದು ನಡೆಯುವಗೋವಾವಿಧಾನಸಭೆ ಚುನಾವಣೆಗೆ ಉತ್ಪಲ್ ಪರಿಕ್ಕರ್ ಬಿಜೆಪಿ ಟಿಕೆಟ್ ಆಕಾಂಕ್ಷಿ. ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ಗೆ ತಿರುಗೇಟು ನೀಡುವಂತೆ ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ. “ಗೋವಾದ ಎಲ್ಲ ವಿರೋಧ ಪಕ್ಷಗಳು ಉತ್ಪಲ ಪರಿಕ್ಕರ್ ಪಣಜಿ ಕ್ಷೇತ್ರದಿಂದ ಕಣಕ್ಕಿಳಿಯುವುದನ್ನು ಬೆಂಬಲಿಸಬೇಕು. ಯಾವ ಪಕ್ಷಗಳು …
Read More »ಇತಿಹಾಸ ಮರುಕಳಿಸುತ್ತದೆ ಎಂಬುದನ್ನು ಕೊನೆಗೂ ಭಕ್ತರು ಸಾಬೀತುಪಡಿಸಿದ್ದಾರೆ.
ಬಾಗಲಕೋಟೆ: ಇತಿಹಾಸ ಮರುಕಳಿಸುತ್ತದೆ ಎಂಬುದನ್ನು ಕೊನೆಗೂ ಭಕ್ತರು ಸಾಬೀತುಪಡಿಸಿದ್ದಾರೆ. ಇತಿಹಾಸದಲ್ಲಿ ಎಂದೂ ರದ್ದಾಗದ ರಥೋತ್ಸವವನ್ನು ಈ ಸಲವೂ ನಡೆಸುವ ಮೂಲಕ ಇದು ಚರಿತ್ರೆ ಸೃಷ್ಟಿಸೋ ಅವತಾರ ಎಂದು ಸಾರಿದ್ದಾರೆ. ತಡೆಯಲು ನಿಂತ ಪೊಲೀಸರು ಕೊನೆಗೂ ಸಾಲು ಸಾಲು ಎತ್ತಿನ ಬಂಡಿಗೆ, ಸಹಸ್ರಾರು ಭಕ್ತರ ದಂಡಿಗೆ ದಂಗಾಗಿ ಪಕ್ಕಕ್ಕೆ ಸರಿದು ದಾರಿ ಬಿಟ್ಟಿದ್ದಾರೆ. ಪೊಲೀಸರ ಸರ್ಪಗಾವಲನ್ನೂ ದಾಟಿ ನುಗ್ಗಿದ ಭಕ್ತರು ಕೊನೆಗೂ ತೇರನ್ನು ಎಳೆದಿದ್ದಾರೆ. ಹೌದು.. ಕರೊನಾತಂಕ, ಕೋವಿಡ್ ನಿರ್ಬಂಧದ ನಡುವೆಯೂ ಬಾಗಲಕೋಟೆ …
Read More »18 ವರ್ಷಗಳ ಅವರ ವಿವಾಹದ ಪಯಣಕ್ಕೆ ಫುಲ್ಸ್ಟಾಪ್ ಇಟ್ಟಿದ್ದಾರೆ ನಟ ಧನುಷ್
ಚೆನ್ನೈ , 18 ಜನವರಿ : ನಟ ಧನುಷ್ ಅವರು ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಕೊಟ್ಟಿದ್ದಾರೆ. ಬರೋಬ್ಬರಿ 18 ವರ್ಷಗಳ ಅವರ ವಿವಾಹದ ಪಯಣಕ್ಕೆ ಫುಲ್ಸ್ಟಾಪ್ ಇಟ್ಟಿದ್ದಾರೆ. ಈ ಮೂಲಕ ರಜನಿಕಾಂತ್ ಅವರ ಪುತ್ರಿಯಾದ ಐಶ್ವರ್ಯ ಅವರಿಂದ ಪ್ರತ್ಯೇಕಗೊಂಡಿದ್ದಾರೆ. ಈ ಸಂಬಂಧ ಟ್ವಿಟರ್ನಲ್ಲಿ ಧನುಷ್ ಅವರು ಬರೆದುಕೊಂಡಿದ್ದು, ಸ್ನೇಹಿತರು, ದಂಪತಿಗಳು, ಪೋಷಕರಾಗಿ ಮತ್ತು ಪರಸ್ಪರ ಹಿತೈಷಿಗಳಾಗಿ 18 ವರ್ಷಗಳ ಕಾಲ ಜೀವನ ಮಾಡಿದೆವು. ಈ ಪ್ರಯಾಣವು ಬೆಳವಣಿಗೆ, ತಿಳುವಳಿಕೆ, ಹೊಂದಾಣಿಕೆ …
Read More »ಸಿಗುತ್ತಿಲ್ಲ ಕೋವಿಡ್ ಪರಿಹಾರ!; ಪಾಸಿಟಿವ್ ಬಂದರೂ ಎಸ್ಆರ್ಎಫ್ ಐಡಿ ಸಿಗದೆ ಪರದಾಟ
ಕರೊನಾ ಪಾಸಿಟಿವ್ ಬಂದವರ ಎಸ್ಆರ್ಎಫ್ ಐಡಿ ರಚನೆಯಾಗದ ಪರಿಣಾಮ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ಸಿಗದಂತಾಗಿದೆ. ಹಲವು ತಿಂಗಳಿಂದ ಪರಿಹಾರಕ್ಕಾಗಿ ಕುಟುಂಬಗಳು ಆರೋಗ್ಯ ಇಲಾಖೆ, ಜಿಲ್ಲಾಡಳಿತದ ಬಾಗಿಲು ಬಡಿಯುತ್ತಿದ್ದರೂ ಇತ್ಯರ್ಥ ಕಾಣುತ್ತಿಲ್ಲ. ಮೊದಲ ಮತ್ತು ಎರಡನೇ ಅಲೆ ಮುಗಿದು ಮೂರನೇ ಅಲೆ ಕಾಲಿಟ್ಟಿದ್ದರೂ ತಾಂತ್ರಿಕ ಸಮಸ್ಯೆ ಬಗೆಹರಿಸದ ಅಧಿಕಾರಿಗಳ ನಡೆಯಿಂದ ಬೇಸತ್ತಿರುವ ರಾಜ್ಯದ 1550 ಕುಟುಂಬಗಳು ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿವೆ. ಎರಡನೇ ಅಲೆ ವೇಳೆ ಕೋವಿಡ್ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳಿಗೆ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಮಹಾಮಾರಿ ಕೊರೊನಾ ರಣಕೇಕೆ ಹಾಕಿದೆ. ಇಂದು ಹೊಸದಾಗಿ 294 ಪಾಸಿಟಿವ್ ಕೇಸ್ಗಳು ದೃಢ
ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಮಹಾಮಾರಿ ಕೊರೊನಾ ರಣಕೇಕೆ ಹಾಕಿದೆ. ಇಂದು ಹೊಸದಾಗಿ 294 ಪಾಸಿಟಿವ್ ಕೇಸ್ಗಳು ದೃಢಪಟ್ಟಿವೆ. ಸೋಮವಾರ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್ನಲ್ಲಿ ಜಿಲ್ಲೆಯಲ್ಲಿ 294 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟು ಸೋಂಕಿತರ ಸಂಖ್ಯೆ 82744ಕ್ಕೆ ಏರಿಕೆಯಾಗಿದೆ. ಈವರೆಗೆ 79466 ಜನರು ಗುಣಮುಖರಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 2329 ಆಕ್ಟಿವ್ ಕೇಸ್ಗಳು ಬಾಕಿಯಿವೆ. ಇನ್ನು ಬೆಳಗಾವಿ …
Read More »