ಹಾವೇರಿ : ಶಿಗ್ಗಾವಿ ಪಟ್ಟಣದ ರಾಜಶ್ರೀ ಚಿತ್ರಮಂದಿರದಲ್ಲಿ ಮಂಗಳವಾರ ರಾತ್ರಿ 10.30ರ ಸಮಯದಲ್ಲಿ ‘ಕೆಜಿಎಫ್-2’ ಸಿನಿಮಾ ನೋಡುವ ಸಂದರ್ಭ ಕ್ಷುಲ್ಲಕ ಕಾರಣಕ್ಕಾಗಿ ಪ್ರೇಕ್ಷಕರಿಬ್ಬರ ನಡುವೆ ಜಗಳ ನಡೆದು, ಪಿಸ್ತೂಲಿನಿಂದ ಗುಂಡು ಹೊಡೆದಿರುವ ಘಟನೆ ನಡೆದಿದೆ. ಶಿಗ್ಗಾವಿ ತಾಲ್ಲೂಕಿನ ಮುಗಳಿ ಗ್ರಾಮದ ವಸಂತಕುಮಾರ ಸಣ್ಣಕಲ್ಲಪ್ಪ ಶಿವಪುರ (28) ಗುಂಡೇಟು ತಿಂದು ಗಾಯಗೊಂಡ ಪ್ರೇಕ್ಷಕ. ಗಂಭೀರವಾಗಿ ಗಾಯಗೊಂಡಿರುವ ಇವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗುಂಡು ಹಾರಿಸಿದ ಆರೋಪಿ ಪರಾರಿಯಾಗಿದ್ದು, ಆತನ ಬಗ್ಗೆ ಯಾವುದೇ …
Read More »ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಲು ನೀವು ಸಿದ್ಧ ಇದ್ದೀರಾ? ‘
ಬೆಂಗಳೂರು: ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ವಿಧಾನಸಭಾದ ವಿಪಕ್ಷ ನಾಯಕ ಸಿದ್ದರಾಮಯ್ಯನವರ ನಡುವೆ ಸರಣಿ ಟ್ವೀಟ್ ಸಮರ ಈಗ ತಾರಕಕ್ಕೇರಿದೆ.ಈಗ ಕುಮಾರಸ್ವಾಮಿ ಅವರ ಸರಣಿ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಸಿದ್ಧರಾಮಯ್ಯ ‘ನಿತ್ಯ ನನ್ನ ವಿರುದ್ಧ ನಿತ್ಯ ನನ್ನ ವಿರುದ್ದ ನಂಜುಕಾರುತ್ತಿರುವ ಹೆಚ್.ಡಿ. ಕುಮಾರಸ್ವಾಮಿಯವರೇ ನೀವೆಲ್ಲಿ ನಿಂತಿದ್ದೀರಿ? ಎಂದು ಮೊದಲು ಹೇಳಿ’ ಎಂದು ಪ್ರಶ್ನಿಸಿದ್ದಾರೆ. ‘ದೇಶದಲ್ಲಿ ಇಂದು ನಡೆಯುತ್ತಿರುವ ಜಾತ್ಯತೀತತೆ ಮತ್ತು ಕೋಮುವಾದದ ನಡುವಿನ ನಿರ್ಣಾಯಕ ಹೋರಾಟದಲ್ಲಿ ನಾವೆಲ್ಲಿ ನಿಂತಿದ್ದೇವೆ ಎನ್ನುವುದನ್ನು ಜನತೆಗೆ …
Read More »ಉಡುಪಿ; ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ
ಉಡುಪಿ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಸಾರ್ವಜನಿಕವಾಗಿ ಲೈಂಗಿಕ ಕಿರುಕುಳ ನೀಡಿದ ಯುವಕನೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಎ.19ರಂದು ಮಧ್ಯಾಹ್ನ ನಗರದ ಅಜ್ಜರಕಾಡು ಎಂಬಲ್ಲಿ ನಡೆದಿದೆ. ಅಂಬಲಪಾಡಿಯ ನಿವಾಸಿ ನೀಲಗಾಮ (26) ಬಂಧಿತ ಆರೋಪಿ. ಅಜ್ಜರ ಕಾಡು ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ಮುಗಿಸಿ ಮನೆಗೆ ಹೋಗಲು ಅಜ್ಜರಕಾಡು ಎಲ್ಐಸಿ ಎದುರು ಬಸ್ಸಿಗೆ ಕಾಯುತ್ತಿದ್ದಳು. ಈ ವೇಳೆ ಸ್ಥಳಕ್ಕೆ ಆಗಮಿಸಿದ ನೀಲಗಾಮ, ಏಕಾಏಕಿ ವಿದ್ಯಾರ್ಥಿನಿಯ …
Read More »ಮನೆಯಲ್ಲಿದ್ದ ಕಪಾಟು ಒಡೆದು ಚಿನ್ನಾಭರಣ ಸಹಿತ ನಗದು ಹಣ ಕಳ್ಳತನ
ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿಂಬಾಗಿಲು ಮುರಿದು ಕಳ್ಳರು ನುಗ್ಗಿ ಮನೆಯಲ್ಲಿದ್ದ ಕಪಾಟು ಒಡೆದು ಚಿನ್ನಾಭರಣ ಸಹಿತ ನಗದು ಹಣ ಕಳ್ಳತನ ಮಾಡಿದ ಘಟನೆ ಚಾರ್ಮಾಡಿ ಗ್ರಾಪಂ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಕಕ್ಕಿಂಜೆ ಸಮೀಪದ ಕತ್ತರಿಗುಡ್ಡೆಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಇಕ್ಬಾಲ್ ಎಂಬವರಿಗೆ ಸೇರಿದ ಮನೆಯಲ್ಲಿ ಅವರ ತಂಗಿ ಝರಿನಾ ಮತ್ತು ಇಬ್ಬರು ಮಕ್ಕಳು ಮಾತ್ರ ವಾಸವಾಗಿದ್ದು, ಗಂಡ ಇಸ್ಮಾಯಿಲ್ ದುಬೈನಲ್ಲಿ ಉದ್ಯೋಗದಲ್ಲಿದ್ದಾರೆ. ಝರಿನಾ ಮತ್ತು ಮಕ್ಕಳು ಮೂರು …
Read More »ದಿವ್ಯಾ ಮನೆಯಲ್ಲಿ ತಿಂದ ಕೇಸರಿ ಬಾತ್ಗೆ ಇಷ್ಟೊಂದು ನಿಯತ್ತೇ: ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು: ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದು ಒಂದು ವಾರ ಕಳೆದರೂ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರನ್ನು ಬಂಧಿಸದಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ಹಲವು ದಿನಗಳವರೆಗೂ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿರಲಿಲ್ಲ. ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನವಿಲ್ಲ. ಗೃಹ ಸಚಿವ ಅರಗ …
Read More »DK ಬ್ಯಾಟಿಂಗ್ ನೋಡಿದ್ರೆ, ನಾನು ಮತ್ತೆ ಕ್ರಿಕೆಟ್ ಆಡ್ಬೇಕು ಅನ್ನಿಸ್ತಿದೆ..! A.B.D.
ನಾನು ದಿನೇಶ್ ಕಾರ್ತಿಕ್ ಅವರನ್ನು ಕೊನೆಯ ಬಾರಿಗೆ ನೋಡಿದಾಗ ಯುಕೆಯಲ್ಲಿ ಕಾಮೆಂಟ್ರಿ ಮಾಡುತ್ತಿದ್ದರು. ಆಗ ನಾನು ಅವರು ತಮ್ಮ ವೃತ್ತಿಜೀವನದ ಅಂತ್ಯದಲ್ಲಿದ್ದಾರೆ ಎಂದು ಭಾವಿಸಿದ್ದೆ.IPL 2022: ಇತ್ತೀಚೆಗೆ ಸಂದರ್ಶನವೊಂದರಲ್ಲಿ ದಿನೇಶ್ ಕಾರ್ತಿಕ್ಗೆ ಒಂದು ಜೋಕ್ ಹೇಳುವಂತೆ ಕೇಳಲಾಗಿತ್ತು…ಡಿಕೆ ಹೇಳಿದ ಜೋಕ್- ಎಬಿ ಡಿವಿಲಿಯರ್ಸ್ ಈ ಸಲ RCB ಯಲ್ಲಿ ಆಡ್ತಿಲ್ಲ. ಇದರಲ್ಲೇನು ತಮಾಷೆಯಿದೆ ಎಂದು ನೀವಂದುಕೊಂಡರೆ, ದಿನೇಶ್ ಕಾರ್ತಿಕ್ ಹಾಗೆ ಹೇಳಲು ಮುಖ್ಯ ಕಾರಣ, ಒಬ್ಬ ಆಟಗಾರ ಅತ್ಯುತ್ತಮವಾಗಿ ಆಡುತ್ತಿದ್ದರೂ …
Read More »ಹುಬ್ಬಳ್ಳಿ- ಬೆಂಗಳೂರ ರೈಲು ಪ್ರಯಾಣಿಕರಿಗೆ ‘ಗುಡ್ ನ್ಯೂಸ್’
ರಾಜ್ಯ ರಾಜಧಾನಿ ಬೆಂಗಳೂರಿನಿಂದ ಉತ್ತರ ಕರ್ನಾಟದ ಪ್ರಧಾನ ವಾಣಿಜ್ಯ ಕೇಂದ್ರ ಹುಬ್ಬಳ್ಳಿ ನಡುವಿನ ರೈಲ್ವೆ ಪ್ರಯಾಣ ಶೀಘ್ರವೇ ಒಂದು ತಾಸು ಕಡಿಮೆಯಾಗಲಿದೆ. ಸೌತ್ ವೆಸ್ಟ್ರನ್ ರೈಲ್ವೆಯು ಹುಬ್ಬಳ್ಳಿ – ಬೆಂಗಳೂರು ನಡುವಿನ ರೈಲ್ವೆ ಮಾರ್ಗವನ್ನು ಡಬಲಿಂಗ್ ಹಾಗೂ ವಿದ್ಯುದೀಕರಣಗೊಳಿಸುತ್ತಿದ್ದು, ಈ ಕೆಲಸ ಕೊನೆ ಹಂತ ತಲುಪಿದೆ. 2023ರ ಮಾರ್ಚ್ ಒಳಗಾಗಿ ಇದು ಪೂರ್ಣಗೊಳ್ಳುತ್ತದೆ. ಬಳಿಕ ರೈಲು ಸಂಚಾರ ವೇಗ ಹೆಚ್ಚಳಗೊಳ್ಳಲಿದೆ. ಬೆಂಗಳೂರು ಹುಬ್ಬಳ್ಳಿ ನಡುವೆ 469 ಕಿಲೋ ಮೀಟರ್ ಇದ್ದು, …
Read More »ಸಂಪ್ರದಾಯ ಮುರಿದು, ಸೂರ್ಯಾಸ್ತದ ನಂತರ ಕೆಂಪು ಕೋಟೆಯಲ್ಲಿ ಮೋದಿ ಭಾಷಣ
ನವದೆಹಲಿ: ಗುರು ತೇಗ್ ಬಹಾದೂರ್ ಅವರ 400ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ ಕೆಂಪು ಕೋಟೆಯಲ್ಲಿ ಭಾಷಣ ಮಾಡಲಿದ್ದಾರೆ. ಈ ಮೂಲಕ ಮೊಘಲರ ಕಾಲದ ಸ್ಮಾರಕದಲ್ಲಿ ಸೂರ್ಯಾಸ್ತ ನಂತರ ಭಾಷಣ ಮಾಡಿದ ಮೊದಲ ಪ್ರಧಾನಿ ಎಂದೆನಿಸಿಕೊಳ್ಳಲಿದ್ದಾರೆ. ರಾಷ್ಟ್ರವನ್ನು ಉದ್ದೇಶಿಸಿ ಪಿಎಂ ಮೋದಿ ಕೆಂಪು ಕೋಟೆಯ ಮೇಲೆ ಭಾಷಣ ಮಾಡುವ ಬದಲು ಹುಲ್ಲುಹಾಸಿನ ಮೇಲೆ ಮಾತನಾಡುತ್ತಿರುವುದು ವಿಶೇಷವಾಗಿದೆ. ಸಂಸ್ಕೃತಿ ಸಚಿವಾಲಯದ ಅಧಿಕೃತ ಮಾಹಿತಿ ಪ್ರಕಾರ, 1675ರಲ್ಲಿ …
Read More »ಈಶ್ವರಪ್ಪ ತಲೆದಂಡದ ಬೆನ್ನಲ್ಲೇ ಮತ್ತಿಬ್ಬರು ಸಚಿವರಿಗೆ ಶುರುವಾಯ್ತು ಕಮೀಷನ್ ಕಂಟಕ..!
ಬೆಂಗಳೂರು- 40% ಕಮೀಷನ್ ಆರೋಪಕ್ಕೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ರಾಜ್ ಸಚಿವ ಈಶ್ವರಪ್ಪ, ಸಚಿವ ಸ್ಥಾನ ತಲೆದಂಡವಾಗಿರುವ ಬೆನ್ನಲ್ಲೇ ಇದೀಗ ಮತ್ತಿಬ್ಬರು ಸಚಿವರಿಗೆ ಕಂಟಕ ಎದುರಾಗಿದೆ ಎನ್ನಲಾಗುತ್ತಿದೆ. ಬೃಹತ್ ನೀರಾವರಿ ಸಚಿವ ಗೋವಿಂದ ಕಾರಜೋಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಧಾಕರ್ ಅವರ ಮೇಲೆ ಇದೇ ಆರೋಪಗಳು ಕೇಳಿಬಂದಿದ್ದು, ಇಲಾಖೆಯಲ್ಲಿ 40% ಕಮೀಷನ್ ಕೊಡದೆ ಯಾವುದೇ ಕೆಲಸಗಳನ್ನು ಮಾಡಿಕೊಡುವುದಿಲ್ಲ ಎಂಬ ಆರೋಪ ಜಗಜ್ಜಾಹೀರವಾಗಿದೆ. ಸದ್ಯದಲ್ಲೇ ಗುತ್ತಿಗೆದಾರರು ಇವರಿಬ್ಬರ ವಿರುದ್ಧ ದಾಖಲೆಗಳ …
Read More »ಬೃಹತ್ ಮರ ಧರೆಗುರುಳಿದ ಬೆಳಗಾವಿಯಲ್ಲಿ ನೂರಾರು ಬೈಕ್ಗಳು ಜಖಂ
ಬೆಳಗಾವಿ :ಬೆಳಗಾವಿಯಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಸುರಿದ ಮಳೆ ದೊಡ್ಡ ಅವಾಂತರವನ್ನೇ ಸೃಷ್ಟಿ ಮಾಡಿತ್ತು. ನಗರದ ವಿವಿಧ ಕಡೆಗಳಲ್ಲಿ ಮರಗಳು ಧರೆಗುರುಳಿದಿದ್ದರಿಂದ ಸಾಕಷ್ಟು ವಾಹನಗಳು ಜಖಂಗೊಂಡಿವೆ. ಹೌದು ಬೆಳಗಾವಿ ನಗರದಲ್ಲಿ ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನರಿಗೆ ಮಂಗಳವಾರ ಸಾಯಂಕಾಲ ಸುರಿದ ಮಳೆ ಹರ್ಷ ತಂದಿದೆ. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆ ಆರಂಭವಾಯಿತು. ಈ ವೇಳೆ ಮಳೆಗಿಂತ ಗಾಳಿಯ ರಭಸವೇ ಹೆಚ್ಚಾಗಿದ್ದರಿಂದ ಸಿವಿಲ್ ಆಸ್ಪತ್ರೆ ರಸ್ತೆಯಲ್ಲಿರುವ ಬೃಹದಾಕಾರದ …
Read More »
Laxmi News 24×7