ಸುಧಾರಣೆಗಳು ಮತ್ತು ನಮ್ಮ ದೇಶದ ವ್ಯವಸ್ಥೆಯ ನಡುವೆ ಒಂದು ರೀತಿಯ ಎಣ್ಣೆ ಸೀಗೆಕಾಯಿ ನಡುವಿನ ಸಂಬಂಧ ಇದ್ದ ಹಾಗೆ. ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ (ನ.19) ಘೋಷಣೆ ಮಾಡಿದಂತೆ 32 ರೈತ ಒಕ್ಕೂಟಗಳು ಮತ್ತು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಬಣ್ಣಿಸುತ್ತಿದ್ದ “ರೈತ ವಿರೋಧಿ’ಯಾಗಿದ್ದ ಕಾಯ್ದೆಗಳನ್ನು ರದ್ದುಗೊಳಿಸಿದ್ದನ್ನು ಸ್ವಾಗತಿಸಿದ್ದಾರೆ. ಎಂಬಲ್ಲಿಗೆ ಕೃಷಿಯನ್ನೇ ನಂಬಿ ಕೊಂಡು ಬದುಕು ಸಾಗಿಸುತ್ತಿರುವ ದೇಶದ ಅಷ್ಟೂ ಮಂದಿ ರೈತರು ಯಾವತ್ತೂ ಸಂಕಷ್ಟಕ್ಕೇ ಮುಖ ಮಾಡಿಯೇ ಇರಬೇಕು ಎನ್ನುವುದು …
Read More »ಇನ್ಸ್ಟಾಗ್ರಾಂ ರೀಲ್ಸ್ ಚಟಕ್ಕೆ ಬಿದ್ದು ಪ್ರಾಣವನ್ನೇ ಕಳೆದುಕೊಂಡ ಯುವಕ..! ಸ್ನೇಹಿತನ ಮೊಬೈಲ್ನಲ್ಲಿ ರೆಕಾರ್ಡ್ ಆಯ್ತು ಭಯಾನಕ ದೃಶ್ಯ
ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋಗಳನ್ನು ಹರಿಬಿಡುವ ಹುಚ್ಚು ಹೊಂದಿದ್ದ ಯುವಕ ಇದಕ್ಕಾಗಿ ಜೀವವನ್ನೇ ತೆತ್ತ ದಾರುಣ ಘಟನೆಯು ಮಧ್ಯ ಪ್ರದೇಶ ಹೋಶಂಗಾಬಾದ್ನಲ್ಲಿ ನಡೆದಿದೆ.ಸಂಜು ಚೌರಿ ಎಂಬಾತ ತನ್ನ ಗೆಳೆಯನ ಜೊತೆಯಲ್ಲಿ ವಿಡಿಯೋ ರೆಕಾರ್ಡ್ ಮಾಡಲೆಂದು ರೈಲ್ವೆ ಹಳಿ ಬಳಿ ತೆರಳಿದ್ದ. ರೈಲ್ವೆ ಬರುತ್ತಿದ್ದ ವೇಳೆ ತಾನು ನಡೆದುಕೊಂಡು ಬರುತ್ತಿರುವ ಹಾಗೆ ವಿಡಿಯೋ ಚಿತ್ರೀಕರಿಸಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವುದು ಆತನ ಉದ್ದೇಶವಾಗಿತ್ತು. ಆದರೆ ವಿಧಿಯ ಆಟ ಬೇರೆಯದ್ದೇ ಇತ್ತು. ರೈಲು ಹಳಿಯ …
Read More »ಟಿಕೆಟ್ ಕೊಡಿಸುವಲ್ಲಿ ಡಿಕೆಶಿ, ಸಿದ್ದು ಯಶಸ್ವಿ
: ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ಹೈಕಮಾಂಡ್ ಮಣೆ ಹಾಕಿದ್ದರೆ ಮತ್ತೂಬ್ಬ ನಾಯಕ ಕೆ.ಎಚ್.ಮುನಿಯಪ್ಪ ಅವರ ಮಾತಿಗೆ ಸೊಪ್ಪು ಹಾಕಿಲ್ಲ. ಬಳ್ಳಾರಿ ಕ್ಷೇತ್ರದ ವಿಚಾರದಲ್ಲಿ ಕೊಂಡಯ್ಯ ಅವರಿಗೆ ಮತ್ತೊಮ್ಮೆ ಟಿಕೆಟ್ ಕೊಡಿಸಿಕೊಂಡು ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್ ಮಟ್ಟದಲ್ಲಿ ತಮ್ಮ ಪ್ರಭಾವ ಸಾಬೀತುಪಡಿಸಿಕೊಂಡರೆ ಅಲ್ಲಿ ಮುಂಡರಗಿ ನಾಗರಾಜ್ಗೆ ಟಿಕೆಟ್ ಕೊಡಿಸಲು ಪಟ್ಟು ಹಿಡಿದಿದ್ದ ಕೆ.ಎಚ್.ಮುನಿಯಪ್ಪ ಹಿನ್ನಡೆ ಅನುಭವಿಸುವಂತಾಗಿದೆ. ಕೋಲಾರ ಕ್ಷೇತ್ರಕ್ಕೆ …
Read More »ಹಿರಿಯ ನಾಯಕನಿಗೆ ತಪ್ಪಿದ ಕಾಂಗ್ರೆಸ್ ಟಿಕೆಟ್: ಕೈ ಬಿಡುವ ಪ್ರಶ್ನೆಯೇ ಇಲ್ಲವೆಂದ್ರು ಡಿಕೆಶಿ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದ್ದು, ಪಕ್ಷದ ನಾಯಕ, ಹಾಲಿ ವಿಧಾನಪರಿಷತ್ ಸದಸ್ಯರಾದ ಎಸ್.ಆರ್. ಪಾಟೀಲ್ ಮತ್ತು ಮೈಸೂರಿನ ಧರ್ಮಸೇನ ಅವರಿಗೆ ಟಿಕೆಟ್ ಕೈ ತಪ್ಪಿದೆ. ಅಭ್ಯರ್ಥಿಗಳ ಪಟ್ಟಿ ಪ್ರಕಟವಾದ ನಂತರ ಈ ಕುರಿತಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗಿದೆ. ಕಳೆದ ಬಾರಿಗಿಂತ ಈ ಬಾರಿ ನಮ್ಮ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಹೊರಗಿನವರಿಗೆ …
Read More »ಯಾಂಕಾ-ನಿಕ್ ದಾಂಪತ್ಯದಲ್ಲಿ ಬಿರುಕು?
ಪ್ರಿಯಾಂಕಾ ಹಾಗೂ ನಿಕ್ ಡಿಸೆಂಬರ್ 1, 2018ರಂದು ವಿವಾಹವಾಗಿದ್ದರು. ಪ್ರಿಯಾಂಕಾ ನಿಕ್ಗಿಂತಲೂ ದೊಡ್ಡವರು. ವಯಸ್ಸಿನ ಅಂತರ ಇವರಿಗೆ ಅಡ್ಡಿ ಆಗಲೇ ಇಲ್ಲ. ಪ್ರಿಯಾಂಕಾ ಅವರು ಮದುವೆ ನಂತರ ನ್ಯೂಯಾರ್ಕ್ನಲ್ಲಿಯೇ ಸೆಟಲ್ ಆಗಿದ್ದಾರೆ.ಸಮಂತಾ ಅವರು ಸೋಶಿಯಲ್ ಮೀಡಿಯಾ ಖಾತೆಯಲ್ಲಿ ‘ಅಕ್ಕಿನೇನಿ’ ಸರ್ನೇಮ್ಅನ್ನು ತೆಗೆದುಹಾಕಿದ್ದು ವಿಚ್ಛೇದನ ವದಂತಿಗೆ ಕಾರಣವಾಗಿತ್ತು. ನಂತರ ಅದು ನಿಜವೂ ಆಗಿತ್ತು. ಹೆಸರು ಬದಲಿಸಿದ ಕೆಲವೇ ತಿಂಗಳಲ್ಲಿ ಅವರು ಪತಿ ನಾಗ ಚೈತನ್ಯ ಅವರಿಂದ ದೂರವಾದರು. ಈಗ ಪ್ರಿಯಾಂಕಾ ಚೋಪ್ರಾ …
Read More »ಕಾಂಗ್ರೆಸ್ ಎಂಎಲ್ಸಿ ಅಭ್ಯರ್ಥಿಗಳ ವಿವರ
ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಪ್ರಪ್ರಥಮವಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮೊನ್ನೆಮೊನ್ನೆಯಷ್ಟೇ ಬಿಡುಗಡೆ ಮಾಡಿದ್ದು, ಇದೀಗ ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಬಂಧಿ ಎಸ್. ರವಿ ಹಾಗೂ ಬೆಳಗಾವಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಚನ್ನರಾಜ ಬಸವರಾಜ ಹಟ್ಟಿಹೊಳಿ ಸೇರಿ 20 ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅನುಮೋದಿಸಿದ್ದು, ಪಕ್ಷ ಆ ಪಟ್ಟಿಯನ್ನು ಅಧಿಕೃತವಾಗಿ …
Read More »ಸತತವಾಗಿ ಬೀಳುತ್ತಿರುವ ಅಕಾಲಿಕ ಮಳೆ ಇಂದೂ ಕೂಡ ಮುಂದುವರೆಯಲಿದೆ.
ಬೆಂಗಳೂರು, ನ.22- ಕಳೆದ ಎರಡು ವಾರಗಳಿಂದಲೂ ಸತತವಾಗಿ ಬೀಳುತ್ತಿರುವ ಅಕಾಲಿಕ ಮಳೆ ಇಂದೂ ಕೂಡ ಮುಂದುವರೆಯಲಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ಸತತವಾಗಿ ರಾಜ್ಯದ ಒಳನಾಡಿನಲ್ಲಿ ಮಳೆಯಾಗುತ್ತಿದೆ. ನಿನ್ನೆ ಸಂಜೆ ಹಾಗೂ ರಾತ್ರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಹಾಗೂ ಭಾರೀ ಪ್ರಮಾಣದ ಮಳೆಯಾಗಿದೆ. ರಾಮನಗರದ ಮೆಳ್ಳೇಹಳ್ಳಿ ಸೇತುವೆ ತೊರೆ ನೀರಿನಲ್ಲಿ ಕೊಚ್ಚಿ ಹೋಗಿದೆ. ನ.1ರಿಂದ ಈತನಕ ರಾಜ್ಯದಲ್ಲಿ ವಾಡಿಕೆಗಿಂತ ಶೇ.270ಕ್ಕೂ ಹೆಚ್ಚು ಮಳೆಯಾಗಿದೆ. …
Read More »ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದ ತಂದೆಯನ್ನು ಮಗಳು ತನ್ನ ಪ್ರಿಯಕರನಿಂದಲೇ ಕೊಲೆ ಮಾಡಿಸಿದ್ದಾಳೆ.
ಬೆಂಗಳೂರು: ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದ ತಂದೆಯನ್ನು ಮಗಳು ತನ್ನ ಪ್ರಿಯಕರನಿಂದಲೇ ಕೊಲ್ಲಿಸಿದ ಪ್ರಕರಣವೊಂದು ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿರುವ ಪುತ್ರಿ ತನ್ನ ಪ್ರಿಯಕರ ಹಾಗೂ ಆತನ ಸ್ನೇಹಿತರ ಮೂಲಕ ಕೊಲೆ ಮಾಡಿಸಿದ್ದಾಳೆ. ಯಲಹಂಕ ನ್ಯೂ ಟೌನ್ನ ಅಟ್ಟೂರು ಬಡಾವಣೆ ನಿವಾಸಿ ದೀಪಕ್ ಕುಮಾರ್ ಸಿಂಗ್ (46) ಕೊಲೆಯಾದ ವ್ಯಕ್ತಿ. ಬಿಹಾರ ಮೂಲದ ಇವರು ಜಿಕೆವಿಕೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಮಗಳ ಸುರಕ್ಷತೆಗಾಗಿ ಬುದ್ಧಿವಾದ ಹೇಳಲು ಹೋಗಿ 17 …
Read More »ಬೆಳಗಾವಿ ಉತ್ತರ ಮಂಡಳದ ವತಿಯಿಂದ ಮಹಾಶಕ್ತಿ ಕೇಂದ್ರದ ನಂ 5 ಕಣಬರ್ಗಿಯಲ್ಲಿ ಭೂತ ಮಟ್ಟದಲ್ಲಿ ಸಭೆ
ಬೆಳಗಾವಿ ಉತ್ತರ ಮಂಡಳದ ವತಿಯಿಂದ ಮಹಾಶಕ್ತಿ ಕೇಂದ್ರದ ನಂ 5 ಕಣಬರ್ಗಿಯಲ್ಲಿ ಭೂತ ಮಟ್ಟದಲ್ಲಿ ಸಭೆ ಮಾಡಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ಮತ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಅನಿಲ ಬೆನಕೆಯವರು, ಮಂಡಲದ ಅಧ್ಯಕ್ಷರು ಶ್ರೀ ಪಾಂಡುರಂಗ ದಾಮನೆಕರ,ಬೆಳಗಾವಿ ವಿಭಾಗ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಜಯಪ್ರಕಾಶ ಜಿ ಮಹಾನಗರದ ಪ್ರಧಾನ ಕಾರ್ಯದರ್ಶಿ ಶ್ರೀ ಮುರಗೇಂದ್ರಗೌಡ ಪಾಟೀಲ, ಉತ್ತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ವಿಜಯ ಕೊಡಗಾನೂರ, …
Read More »ಗುದನಾಳದಲ್ಲಿಟ್ಟು 1.52 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 10 ಜನ ಪ್ರಯಾಣಿಕರನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ
ಬೆಂಗಳೂರು: ಗುದನಾಳದಲ್ಲಿಟ್ಟು 1.52 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 10 ಜನ ಪ್ರಯಾಣಿಕರನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನವೆಂಬರ್ 20 ರಂದು ಕೊಲಂಬೊದಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರನ್ನು ತಪಾಸಣೆ ಮಾಡುತ್ತಿದ್ದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಈ ವೇಳೆ 10 ಪ್ರಯಾಣಿಕರು ತಮ್ಮ ಗುದನಾಳದಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನವನ್ನ ಮರೆಮಾಚಿ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
Read More »