ರಾಜ್ಯದಲ್ಲಿ ಇಂದು ಮತ್ತೆ ಮಹಾಮಾರಿ ಕೊರೊನಾ ರಣಕೇಕೆ ಹಾಕಿದೆ. ಇಂದು ಹೊಸದಾಗಿ 25005 ಪಾಸಿಟಿವ್ ಕೇಸ್ಗಳು ದೃಢಪಟ್ಟಿವೆ. ಇನ್ನು ಬೆಳಗಾವಿ ಜಿಲ್ಲೆಯಲ್ಲಿ 276 ಕೇಸ್ಗಳು ಪತ್ತೆಯಾಗಿವೆ. ಗುರುವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್ನಲ್ಲಿ ರಾಜ್ಯದಲ್ಲಿ 25005 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅದೇ ರೀತಿ 8 ಜನರು ಇಂದು ಸಾವನ್ನಪ್ಪಿದ್ದಾರೆ. ಇಂದು ಶೇ.12.39ರಷ್ಟು ಪಾಸಿಟಿವಿಟಿ ರೇಟ್ ದಾಖಲಾಗಿದೆ. ಇನ್ನು ಬೆಳಗಾವಿ ಜಿಲ್ಲೆಯಲ್ಲಿ 276 …
Read More »ಮೇಲ್ಮನೆ ರಾಜಕೀಯ ಪುನರ್ವಸತಿ ಕೇಂದ್ರವಾಗುತ್ತಿರುವುದು ದುರದೃಷ್ಟಕರ: ಬಸವರಾಜ ಹೊರಟ್ಟಿ
ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಪರಿಷತ್, ರಾಜಕೀಯ ಪುನರ್ವಸತಿ ಕೇಂದ್ರದಂತಾಗುತ್ತಿರುವುದು ದುರದೃಷ್ಟಕರ ಎಂದು ಸಭಾಪತಿ ಬಸವರಾಜ ಹೊರಟ್ಟಿ ವಿಷಾದ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, 114 ವರ್ಷ ಇತಿಹಾಸವಿರುವ ಪರಿಷತ್ಗೆ ತನ್ನದೇ ಆದ ಘನತೆಯಿದೆ. ಅದಕ್ಕೆ ಚ್ಯುತಿಯಾಗದಂತೆ ಉಳಿಸಿ ಮುಂದುವರಿಸಿಕೊಂಡು ಹೋಗಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.ಇತ್ತೀಚೆಗೆ ನಡೆದ ಪರಿಷತ್ ಚುನಾವಣೆಯಲ್ಲಿ ಕಿರಿಯ ವಯಸ್ಸಿನವರೇ ಹೆಚ್ಚಾಗಿ ಆರಿಸಿ ಬಂದಿದ್ದು, ಸೂಕ್ತ ತರಬೇತಿ, ಮಾಹಿತಿ ನೀಡಲು ಕ್ರಮ ವಹಿಸಲಾಗುತ್ತಿದೆ. ಪರಿಷತ್ಗೆ ಸಾಧ್ಯವಾದಷ್ಟು …
Read More »ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋದಲ್ಲಿ ಮಿಂಚಿದ ಬಾಲಕಿ ದುರಂತ ಸಾವು
ಬೆಂಗಳೂರು: ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಆರು ವರ್ಷದ ಬಾಲಕಿ ಟಿಪ್ಪರ್ ಹರಿದು ಮೃತಪಟ್ಟಿರುವ ಘಟನೆ ಕುಮಾರಸ್ವಾಮಿ ಪೊಲೀಸ್ ಠಾಣೆಯ ಕೋಣನಕುಂಟೆ ಕ್ರಾಸ್ ಬಳಿ ಸಂಭವಿಸಿತು. ಖಾಸಗಿ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಮೃತಪಟ್ಟ ಬಾಲಕಿ. ಅಪಘಾತ ವೇಳೆ ಗಾಯಗೊಂಡಿರುವ ತಾಯಿ ಅಮೃತಾ ನಾಯ್ಡು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮ್ಮನೊಂದಿಗೆ ಸಮನ್ವಿ ಅಮೃತಾ ನಾಯ್ಡು ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಗುರುವಾರ ಸಂಜೆ ಕೋಣನಕುಂಟೆ ರಸ್ತೆಯಿಂದ …
Read More »ಮಕರ ಸಂಕ್ರಾಂತಿ ಹಬ್ಬದ ಮಹತ್ವ, ಆಚರಣೆ
ಮಾನವೀಯ ಸಂಬಂಧ ಬೆಸೆಯುವ ಉತ್ತರಾಯಣ ಪುಣ್ಯಕಾಲದ ಮಕರ ಸಂಕ್ರಾಂತಿ ಹಬ್ಬವನ್ನು ರಾಜ್ಯದಲ್ಲಿಂದು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತದೆ. ಸೂರ್ಯನು ತನ್ನ ಚಲನೆಯನ್ನು ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಪಥವನ್ನು ಬದಲಿಸುವ ದಿನವನ್ನು ದೇಶದಲ್ಲಿ ಮಕರ ಸಂಕ್ರಮಣ ಎಂದು ಆಚರಿಸುತ್ತೇವೆ. ಈ ಹಬ್ಬವನ್ನು ವಿವಿಧ ರಾಜ್ಯಗಳಲ್ಲಿ ಒಂದೊಂದು ಹೆಸರಿನಲ್ಲಿ ಕರೆಯಲಾಗುತ್ತದೆ. ಕರ್ನಾಟಕದಲ್ಲಿ ಸುಗ್ಗಿ, ತಮಿಳುನಾಡಿನಲ್ಲಿ ಪೊಂಗಲ್, ಕೇರಳದಲ್ಲಿ ಮಕರವಿಳಕ್ಕು ಹಾಗೂ ತೆಲುಗು ರಾಜ್ಯಗಳಾದ ಆಂಧ್ರ, ತೆಲಂಗಾಣದಲ್ಲಿ ಭೋಗಿ ಹಬ್ಬವನ್ನಾಗಿ ಆಚರಿಸುತ್ತಾರೆ. ಈ ದಿನ ಶ್ರೀರಾಮನ ಪೂಜೆಯನ್ನು …
Read More »355 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ ₹ 42,000 ಸಂಬಳ
karnataka Village Accountant Recruitment 2022: ಕರ್ನಾಟಕ ಕಂದಾಯ ಇಲಾಖೆಯು(Karnataka Revenue Department) 355 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸರ್ಕಾರಿ ಉದ್ಯೋಗ(Government Job) ಅರಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಕ್ಟೋಬರ್ 25ರಂದು ಕರ್ನಾಟಕ ಗ್ರಾಮ ಲೆಕ್ಕಿಗ(Village Accountant) ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಖಾಲಿ ಇರುವ ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ revenue.kar.nic.in ಗೆ ಭೇಟಿ ನೀಡಿ. ಅರ್ಜಿ …
Read More »ಮೂರನೇ ಹಂತದ ಕೋವಿಡ್ ಅಲೆ ಜೋರಾಗಿದೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ
ನವದೆಹಲಿ: ದೇಶದಲ್ಲಿ ಮೂರನೇ ಹಂತದ ಕೋವಿಡ್ ಅಲೆ ಜೋರಾಗಿದೆ. ಪ್ರತಿದಿನ ಲಕ್ಷಾಂತರ ಹೊಸ ಹೊಸ ಸೋಂಕಿತ ಪ್ರಕರಣಗಳು ದಾಖಲಾಗ್ತಿವೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರಾಡಳಿತ ಪ್ರದೇಶಗಳು ಹಾಗೂ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಈ ಸಭೆಯಲ್ಲಿ ಮಾತನಾಡಿದ ಪ್ರಧಾನಿ, ಕೋವಿಡ್ ವಿರುದ್ಧ ಲಸಿಕೆ ಅತ್ಯುತ್ತಮ ಅಸ್ತ್ರ. ಯಾವುದೇ ಕಾರಣಕ್ಕೂ ಭಯ, ಗಾಬರಿಯಾಗಬೇಡಿ ಎಂದರು. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪಿಎಂ ವಿಡಿಯೋ ಕಾನ್ಫರೆನ್ಸ್ವೈದ್ಯಕೀಯ …
Read More »ಕೋರ್ಟ್ ಅಭಿಪ್ರಾಯ, ಸರ್ಕಾರದ ಆದೇಶ ಪಾಲನೆಯ ಸದ್ಬುದ್ಧಿ ಕೊಡಲಿ: ಪ್ರೀತಂಗೌಡ
ಹಾಸನ: ಪಾದಯಾತ್ರೆ ಮಾಡಿದ್ರೆ ಮಾತ್ರ ಮತ ಹಾಕ್ತಾರೆ ಅನ್ಕೊಂಡ್ರೆ ಮತ ಹಾಕದೇ ಇರುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಶಾಸಕ ಪ್ರೀತಂಗೌಡ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ಮೇಕೆದಾಟು ಪಾದಯಾತ್ರೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಎಲ್ಲರೂ ಅವರವರ ಇತಿಮಿತಿಯಲ್ಲಿರಬೇಕು. ರಾಜಕೀಯ ಪಕ್ಷವೂ ಸೇರಿದಂತೆ ಎಲ್ಲರೂ ತಮ್ಮ ಮಿತಿಯಲ್ಲಿ ಇರಬೇಕು. ಆರೋಗ್ಯ ಕಾಪಾಡಿಕೊಳ್ಳೋದಕ್ಕೆ ಎಲ್ಲರೂ ಸೂಕ್ಷ್ಮವಾಗಿರಬೇಕು. ನಿಯಮಪಾಲನೆ ಮಾಡಬೇಕು. ನಾನಂತೂ ಪಾಲನೆ ಮಾಡ್ತಾ ಇದ್ದೇನೆ. ಭಾರತೀಯ ಜನತಾ ಪಾರ್ಟಿಯೂ ಪಾಲನೆ ಮಾಡುತ್ತಿದೆ …
Read More »ಗೋವು ತಲೆ ರಸ್ತೆ ಬದಿ ಎಸೆದ ಪ್ರಕರಣ: ಆರೋಪಿಗಳ ಬಂಧನಕ್ಕೆ ಕಾಂಗ್ರೆಸ್ ಮನವಿ
ಮಂಗಳೂರು: ಗೋವಿನ ತಲೆಯನ್ನು ರಸ್ತೆ ಬದಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದ ಕಾಂಗ್ರೆಸ್ ನಿಯೋಗ ಗುರುವಾರ ಮಂಗಳೂರು ನಗರ ಪೊಲೀಸ್ ಕಮಿಷನರ್ ಭೇಟಿ ಮನವಿ ಸಲ್ಲಿಸಿದೆ. ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೀರ್ತಿ ನಗರದಲ್ಲಿ ದುಷ್ಕರ್ಮಿಗಳು ಗೋವಿನ ರುಂಡವನ್ನು ಗೋಣಿ ಚೀಲದಲ್ಲಿ ಕಟ್ಟಿ ರಸ್ತೆ ಬದಿಯಲ್ಲಿ ಬಿಸಾಡಿತ್ತು. ಇದರಿಂದಾಗಿ ಸಮಾಜದಲ್ಲಿ …
Read More »UP Election – ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ 50 ಮಹಿಳೆಯರು,
ನವದೆಹಲಿ: ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. 125 ಅಭ್ಯರ್ಥಿಗಳು ಪಟ್ಟಿಯಲ್ಲಿದ್ದು, ಅವರ ಪೈಕಿ 50 ಮಂದಿ ಮಹಿಳಾ ಅಭ್ಯರ್ಥಿಗಳಿದ್ದಾರೆ. ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಬಿಡುಗಡೆ ಮಾಡಿದರು. ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ತಾಯಿ ಆಶಾ ಸಿಂಗ್ ಅವರನ್ನು ಕಾಂಗ್ರೆಸ್ ಉನ್ನಾವ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ …
Read More »ಮಾಸ್ಕ್, ಸಾಮಾಜಿಕ ಅಂತರ ಮರೆತು ಹುಟ್ಟುಹಬ್ಬ ಆಚರಣೆ ಮಾಡಿಕೊಂಡ ಮಾರುತಿ ಅಷ್ಟಗಿ
ಚಿಕ್ಕೋಡಿ: ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಕಠಿಣ ಮಾರ್ಗಸೂಚಿಗಳನ್ನು ಜಾರಿ ಮಾಡಿದರೂ ಬಿಜೆಪಿ ಮುಖಂಡರಿಂದಲೇ ನಿಯಮಗಳನ್ನು ಉಲ್ಲಂಘಿಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕುರಣಿವಾಡಿ ಗ್ರಾಮದಲ್ಲಿ ಬಿಜೆಪಿ ಮುಖಂಡ ಮಾರುತಿ ಅಷ್ಟಗಿ ಅದ್ಧೂರಿ ಸಮಾರಂಭದಲ್ಲಿ ಚಿಕ್ಕಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಮಹಾರಾಷ್ಟ್ರ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸ್ಫೋಟಗೊಳ್ಳುತ್ತಿದ್ದು, ಗಡಿ ಜಿಲ್ಲೆಯಲ್ಲೆ ಈ ರೀತಿ ಸರ್ಕಾರದ ನಿಯಮಗಳನ್ನು ಬಿಜೆಪಿ ಮುಖಂಡರು ಗಾಳಿಗೆ …
Read More »