Breaking News

ರಾಕೇಶ್ ಟಿಕಾಯತ್ ಗೆ ‘ಮಸಿ’ ಬಳಿದಿದ್ದರ ಹಿಂದಿನ ಕಾರಣ ಬಹಿರಂಗ

ರೈತ ನಾಯಕ ರಾಕೇಶ್ ಟಿಕಾಯತ್ ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಕೆಲವರು ಅವರ ಮುಖಕ್ಕೆ ಮಸಿ ಬಳಿದಿದ್ದು, ಇದು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ಹಲವರನ್ನು ಬಂಧಿಸಿದ್ದಾರೆ.   ಇದೀಗ ಆರೋಪಿಗಳ ವಿಚಾರಣೆ ವೇಳೆ ಕುತೂಹಲಕಾರಿ ಅಂಶವೊಂದು ಬಹಿರಂಗವಾಗಿದೆ. ಪ್ರಕರಣದ ಪ್ರಮುಖ ಆರೋಪಿ ಭರತ್ ಶೆಟ್ಟಿ, ಹೀಗೆ ಮಾಡಿದರೆ ತಾನು ಜನಪ್ರಿಯನಾಗಬಹುದೆಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದ ಎನ್ನಲಾಗಿದ್ದು ಜೊತೆಗೆ ಮೋದಿ ಎಂಬ …

Read More »

ಹಣದುಬ್ಬರ ಏರಿಕೆಯ ನಡುವೆ ಟೆಲಿಕಾಂ ಸೇವೆಗಳು ಮತ್ತೊಮ್ಮೆ ದುಬಾರಿ

ನವದೆಹಲಿ: ಹಣದುಬ್ಬರ ಏರಿಕೆಯ ನಡುವೆ ಟೆಲಿಕಾಂ ಸೇವೆಗಳು ಮತ್ತೊಮ್ಮೆ ದುಬಾರಿಯಾಗಬಹುದು. ಇದರಿಂದಾಗಿ ಗ್ರಾಹಕರ ಜೇಬಿಗೆ ಕತ್ತರಿ ಬೀಳೋದು ಪಕ್ಕಾ ಆಗಿದೆ. ವಾಸ್ತವವಾಗಿ, ಕೆಲವು ತಿಂಗಳ ಹಿಂದೆ ಸುಂಕದ ಹೆಚ್ಚಳದಿಂದಾಗಿ ಮೂರು ಖಾಸಗಿ ವಲಯದ ಟೆಲಿಕಾಂಗಳ ಒಟ್ಟು ಚಂದಾದಾರರ ಬೇಸ್ 37 ಮಿಲಿಯನ್ ಕಡಿಮೆಯಾಗಿದೆ. ಆದರೆ, ಅವರ ಸಕ್ರಿಯ ಚಂದಾದಾರರ ಬೇಸ್ 3% ರಷ್ಟು ಹೆಚ್ಚಾಗಿದೆ. ಅಂದರೆ, 29 ಮಿಲಿಯನ್. ಅಂತಹ ಪರಿಸ್ಥಿತಿಯಲ್ಲಿ. ಕಂಪನಿಗಳು ಸೇವಾ ಸುಂಕಗಳಲ್ಲಿ ಮತ್ತೊಂದು ಹೆಚ್ಚಳದ ಬಗ್ಗೆ …

Read More »

ರಸ್ತೆ ಬದಿ ನಡೆದು ಹೋಗುತ್ತಿದ್ದವನನ್ನು ಕಲ್ಲಿನಿಂದ ಹೊಡೆದು ಹತ್ಯೆ ಗೈದಿರುವ ಘಟನೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.

ಗೋಕಾಕ್: ರಸ್ತೆ ಬದಿ ನಡೆದು ಹೋಗುತ್ತಿದ್ದವನನ್ನು ಕಲ್ಲಿನಿಂದ ಹೊಡೆದು ಹತ್ಯೆ ಗೈದಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.   ಹುಕ್ಕೇರಿಯ ದುಂಡಯ್ಯಾ ನಂದಿಕೊಳ್ಳಮಠ (50) ಕೊಲೆಯಾದ ವ್ಯಕ್ತಿ. ಇಂದು ಬೆಳ್ಳಂ ಬೆಳಿಗ್ಗೆ ಈ ಕೊಲೆ ನಡೆದಿದ್ದು, ನಡೆದು ಹೋಗುತ್ತಿದ್ದವನನ್ನು ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಸಾಯಿಸಿದ್ದಾರೆ.   ಕೊಣ್ಣೂರ ಉಪ ಪೊಲೀಸ್ ಹಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಪಿಎಸ್ ಐ ಭೇಟಿ ನೀಡಿ ಪರಿಶೀಲನೆ …

Read More »

ಮತ್ತೊಂದು ಪೋಸ್ಟರ್ ಬಿಟ್ಟು ಮತ್ತೆ ತಲೆಗೆ ಹುಳಬಿಟ್ಟ ಉಪೇಂದ್ರ:

ಬೆಂಗಳೂರು: ಕಡ್ಡಾಯವಾಗಿ ಬುದ್ಧಿವಂತರಿಗೆ ಮಾತ್ರ..! – ಇದು ರಿಯಲ್​ ಸ್ಟಾರ್​ ಉಪೇಂದ್ರ ನಾಯಕನಾಗಿ ಅಭಿನಯಿಸಿ, ನಿರ್ದೇಶಿಸಿದ್ದ ಮೊದಲ ಚಿತ್ರ ‘A’ಗೆ ಕೊಟ್ಟಿದ್ದ ಟ್ಯಾಗ್​ಲೈನ್. ಹೀಗೆ ಆರಂಭದಿಂದಲೂ ಚಿತ್ರವಿಚಿತ್ರ ಟೈಟಲ್​, ವಿಶಿಷ್ಠ ಕಥೆ, ನಿರೂಪಣೆ ಇತ್ಯಾದಿಯಿಂದ ತಮ್ಮದೇ ಟ್ರೆಂಡ್​ ಸೆಟ್ ಮಾಡಿರುವ ಉಪೇಂದ್ರ ಇದೀಗ ತಮ್ಮ ನಿರ್ದೇಶನದ ಮತ್ತೊಂದು ಚಿತ್ರದ ಶೂಟಿಂಗ್​ಗೆ ಮುಂದಾಗಿದ್ದು, ಮುಹೂರ್ತಕ್ಕೆ ಇನ್ನೊಂದು ದಿನ ಬಾಕಿ ಇರುವಾಗಲೇ ಚಿತ್ರರಸಿಕರ ತಲೆಗೆ ಮತ್ತೆ ಹುಳ ಬಿಟ್ಟಿದ್ದಾರೆ.   ಹಿಂದಿನಂತೆ ಈ ಚಿತ್ರಕ್ಕೂ …

Read More »

ನಾಡದ್ರೋಹದ ಕೆಲಸ ಮಾಡಿದ ಪಾಲಿಕೆ ಉದ್ಯೋಗಿ!; 33 ವರ್ಷ ಕೆಲಸ ಮಾಡಿ, ಕೊನೇ ದಿನ ಹೇಳಿದ್ದೇನು ಗೊತ್ತಾ?

ಬೆಳಗಾವಿ: ಕನ್ನಡ-ಮರಾಠಿ ಭಾಷಾ ಸಂಘರ್ಷ ಹೊಸದೇನಲ್ಲ. ಈಗಲೂ ಆಗಾಗ ಕನ್ನಡ-ಕನ್ನಡಿಗರ ವಿರುದ್ಧವಾಗಿ ಬೆಳಗಾವಿ ಸುತ್ತಮುತ್ತಲ ಪ್ರದೇಶಗಳಲ್ಲಿ ಕನ್ನಡಿಗರ ಸ್ವಾಭಿಮಾನ ಕೆದಕುವಂಥ ಘಟನೆಗಳು ನಡೆಯುತ್ತಿರುತ್ತವೆ. ಅಂಥದ್ದೇ ಇನ್ನೊಂದು ಘಟನೆ ನಡೆದಿದೆ.   ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 33 ವರ್ಷಗಳ ಕಾಲ ದುಡಿದು, ಮೇ 31ರಂದು ನಿವೃತ್ತಿಯಾದ ದ್ವಿತೀಯ ದರ್ಜೆ ಸಹಾಯಕ ತನ್ನ ಬೀಳ್ಕೊಡುಗೆ ಸಮಾರಂಭದ ಸಂದರ್ಭದಲ್ಲೇ ನಿಜವಾದ ಮುಖವನ್ನು ತಾನೇ ಬಯಲು ಮಾಡಿಕೊಂಡಿದ್ದಾನೆ. ಈತನದ್ದು ನಾಡದ್ರೋಹದ ಕೆಲಸ ಎಂದು ಸ್ಥಳೀಯರು ತೀವ್ರ ಅಸಮಾಧಾನ …

Read More »

ಕೇವಲ 10 ದಿನಗಳಲ್ಲಿ NEET PG ಫಲಿತಾಂಶ ಪ್ರಕಟ

ನವದೆಹಲಿ: ವೈದ್ಯಕೀಯ ವಿಜ್ಞಾನದಲ್ಲಿ ರಾಷ್ಟ್ರೀಯ ಪರೀಕ್ಷಾ ಮಂಡಳಿ (NBE) NEET PG – ಸ್ನಾತಕೋತ್ತರ ವೈದ್ಯಕೀಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಪರೀಕ್ಷೆಯನ್ನು ನಡೆಸಿದ 10 ದಿನಗಳ ದಾಖಲೆಯ ಸಮಯದಲ್ಲಿ ಪ್ರಕಟಿಸಿದೆ. NEET-PG ಫಲಿತಾಂಶ ಹೊರಬಿದ್ದಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ NEET-PG ಗೆ ಅರ್ಹತೆ ಪಡೆದ ಎಲ್ಲಾ ವಿದ್ಯಾರ್ಥಿಗಳನ್ನು ಅವರು ಅಭಿನಂದಿಸಿದ್ದಾರೆ.   ನಿಮ್ಮ ಫಲಿತಾಂಶವನ್ನು https://natboard.edu.in ನಲ್ಲಿ ಪರಿಶೀಲಿಸಿ NEET PG ಫಲಿತಾಂಶ 2022 …

Read More »

ಸುವರ್ಣ ವಿಧಾನಸೌಧ ಘನತೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕೆಲಸ ಮಾಡಬೇಕು: ನಿತೇಶ್ ಪಾಟೀಲ

ಬೆಳಗಾವಿ: ‘ಇಲ್ಲಿನ ಸುವರ್ಣ ವಿಧಾನಸೌಧ ಘನತೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕೆಲಸ ಮಾಡಬೇಕು. ಭದ್ರತೆ, ಸ್ವಚ್ಛತೆ ಸೇರಿ ಸೌಧದ ಸಮರ್ಪಕ ನಿರ್ವಹಣೆಗೆ ಅಗತ್ಯ ಕ್ರಮಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು.   ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಕಾರ್ಮಿಕರ ಜೊತೆ ಚರ್ಚಿಸಿದ ನಂತರ ಅವರು ಮಾತನಾಡಿದರು. ‘ಸುವರ್ಣ ವಿಧಾನಸೌಧದ ಮುಂದೆ ಶಾವಿಗೆ ಒಣಗಿಸಲು ಹಾಕಿದ್ದ ಮಹಿಳಾ ಕಾರ್ಮಿಕರೊಬ್ಬರ ವಿರುದ್ಧ ಈಗಾಗಲೇ …

Read More »

‘ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವವರೆಗೂ ಹೋರಾಡುತ್ತೇವೆ.: ಎಂಇಎಸ್‌ ಆಗ್ರಹ

ಬೆಳಗಾವಿ: ‘ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವಂತೆ ಒತ್ತಾಯಿಸಿ ನೀವೂ ಹೋರಾಟ ಮುಂದುವರಿಸಿ. ನಾವೂ ನಿಮ್ಮ ಜೊತೆಗಿದ್ದೇವೆ’ ಎಂದು ಮಹಾರಾಷ್ಟ್ರದ ಶಿವಸೇನೆ ಮುಖಂಡ ಅರುಣ ದುಧವಾಡ್ಕರ್ ಮರಾಠಿಗರಿಗೆ ತಮ್ಮ ಬೆಂಬಲ ಸೂಚಿಸಿದರು. 1986ರಲ್ಲಿ ನಡೆದ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹೋರಾಟದಲ್ಲಿ ಹುತಾತ್ಮರಾದ 9 ಜನರಿಗೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಹಾಗೂ ಶಿವಸೇನೆ ಕಾರ್ಯಕರ್ತರು ತಾಲ್ಲೂಕಿನ ಹಿಂಡಲಗಾ ಗ್ರಾಮದಲ್ಲಿ ಬುಧವಾರ ಶ್ರದ್ಧಾಂಜಲಿ ಸಭೆ ಏರ್ಪಡಿಸಿದ್ದರು. ‘ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಬಗೆಹರಿಯುವವರೆಗೂ ಬೆಳಗಾವಿಯನ್ನು …

Read More »

ಇಬ್ಬರ ಜಗಳದ ಲಾಭ ಪಡೆಯುವ ನಿರೀಕ್ಷೆಯಲ್ಲಿ BJP

ಬೆಂಗಳೂರು: ರಾಜ್ಯಸಭೆ ಚುನಾವಣೆ ರೋಚಕ ಘಟ್ಟಕ್ಕೆ ಬಂದು ನಿಂತಿದೆ. 4ನೇ ಅಭ್ಯರ್ಥಿಯ ಗೆಲುವಿಗೆ ಮೂರೂ ಪಕ್ಷಗಳಲ್ಲೂ ರಾಜಕೀಯ ಲೆಕ್ಕಾಚಾರಗಳು ನಡೆಯುತ್ತಿವೆ. ಈ ನಡುವೆ ಜೆಡಿಎಸ್‌ನ ಕೆಲ ಶಾಸಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಚುನಾಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಕೇಳಿಕೊಂಡಿರುವುದು ಕುತೂಹಲ ಮೂಡಿಸಿದೆ. ರಾಜ್ಯಸಭೆ ಚುನಾವಣೆಯಲ್ಲಿ ಮೂರೂ ಪಕ್ಷಗಳೂ 4ನೇ ಅಭ್ಯರ್ಥಿಯ ಗೆಲುವಿಗೆ ರಣತಂತ್ರ ರೂಪಿಸುತ್ತಿವೆ. ಜೆಡಿಎಸ್ ಪಾಳಯದಲ್ಲಿ ಆತಂಕ, ಗೊಂದಲ ಮುಂದುವರಿದಿದೆ. ಶತಾಯಗತಾಯ ಕಾಂಗ್ರೆಸ್ ಬೆಂಬಲ ಪಡೆದು ತನ್ನ ಅಭ್ಯರ್ಥಿ …

Read More »

ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಚಿಕ್ಕೋಡಿ: ತಾಯಿಯೊಬ್ಬರು ಎಂಟು ವರ್ಷಗಳ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದಲ್ಲಿ ನಡೆದಿದೆ. ಸವೀತಾ ಮದಗೋಂಡ ಬೆಳಗಲಿ (24) ಪವಿತ್ರಾ ಮದಗೋಂಡ ಬೆಳಗಲಿ (8) ಮೃತ ದುರ್ದೈವಿಗಳು. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಶವಗಳನ್ನು ಸ್ಥಳೀಯರು ಹೊರತೆಗೆದಿದ್ದು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »