ಸಿಧು, ಸಿದ್ದು ಅವರಿಂದ ಕಾಂಗ್ರೆಸ್ ನಾಶವಾಗಲಿದೆ ಕಾರ್ಯಕ್ರಮಕ್ಕು ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ರಾಜ್ಯ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ರಾಷ್ಟ್ರೀಯ ಪಕ್ಷ ಎನ್ನುವ ಕಾಂಗ್ರೆಸ್ ಕೆಲವೆಡೆ ಮಾತ್ರ ಇದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಸಮನ್ವಯತೆ ಇಲ್ಲ. ಪಂಜಾಬ್ ನ ಸಿಧು ಹಾಗೂ ರಾಜ್ಯದ ಸಿದ್ದು ಅವರಿಂದ ಕಾಂಗ್ರೆಸ್ ವಿನಾಶ ಆಗಲಿದೆ ಎಂದು ಭವಿಷ್ಯ ನುಡಿದರು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ …
Read More »ಬಲೂನ್ ಸ್ಲೈಡ್ನಲ್ಲಿ ರಮೇಶ್ ಕತ್ತಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆಳಗಾವಿ: ಖಾಸಗಿ ಕಾರ್ಯಕ್ರಮದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಮಕ್ಕಳಂತೆ ಆಟವಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಖಾಸಗಿ ಕಾರ್ಯಕ್ರಮದಲ್ಲಿ ರಮೇಶ್ ಕತ್ತಿ ಮಕ್ಕಳಂತೆ ಕುಣಿದು ಕುಪ್ಪಳಿಸಿ ಸಂತೋಷಪಟ್ಟಿದ್ದಾರೆ. ಬಲೂನ್ ಸ್ಲೈಡ್ನಲ್ಲಿ ಮಕ್ಕಳಂತೆ ಜಾರಿ ಆಟವಾಡಿದ ಮಾಜಿ ಸಂಸದ ರಮೇಶ್ ಕತ್ತಿಯವರ ಹುಡುಗಾಟಿಕೆಯನ್ನು ಕಂಡು ಸಾರ್ವಜನಿಕರು ನಕ್ಕು ನಲಿದಿದ್ದಾರೆ. ಎರಡು ದಿನಗಳ ಹಿಂದೆ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ …
Read More »ಯಬೆಲೆ ಅಂಗಡಿ ಮಹಿಳೆಗೆ ಬ್ಲ್ಯಾಕ್ಮೇಲ್ ಪ್ರಕರಣ! ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಅರೆಸ್ಟ್!
ಚಿತ್ರದುರ್ಗ: ನ್ಯಾಯಬೆಲೆ ಅಂಗಡಿ ಮಹಿಳೆಗೆ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಕ್ಕೆ ಸಂಬಂಧಿಸಿ ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಅವಿನಾಶ್ ಬಂಧನಕ್ಕೊಳಗಾಗಿದ್ದಾರೆ. ಬಡಾವಣೆ ಠಾಣೆ ಪೊಲೀಸರು ಆರೋಪಿ ಅವಿನಾಶ್ನ ಬಂಧಿಸಿದ್ದು, ಭೀಮ್ ಆರ್ಮಿ ಉಪಾಧ್ಯಕ್ಷ ಪ್ರದೀಪ್ ಪರಾರಿಯಾಗಿದ್ದಾರೆ. ನ್ಯಾಯಬೆಲೆ ಅಂಗಡಿ ಮಹಿಳೆಗೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ್ದಾರೆ ಎಂಬ ದೂರಿನನ್ವಯ ಅರೆಸ್ಟ್ ಮಾಡಲಾಗಿದೆ. ನ್ಯಾಯಬೆಲೆ ಅಂಗಡಿ ನಡೆಸುತ್ತಿರುವ ಮಹಿಳೆಯೊಬ್ಬರಿಗೆ ಬ್ಲ್ಯಾಕ್ಮೇಲ್ ಮಾಡಿರುವ ಆರೋಪ ಕೇಳಿಬಂದಿತ್ತು. ಚಿತ್ರದುರ್ಗ ನಗರದ ಐಯುಡಿಪಿ ಬಡಾವಣೆಯ …
Read More »ಅತಿಯಾಗಿ ಮೊಬೈಲ್ ಬಳಸುತ್ತೀರಾ? ಎಚ್ಚರ ಇರಲಿ
ಆಧುನಿಕ ಜಗತ್ತಿನಲ್ಲಿ ಮೊದಲಿಗಿಂತ ಉತ್ತಮವಾದ ಸಂವಹನ ಪ್ರಾರಂಭವಾಗಿದೆ. ಇಂದಿನ ಕಾಲದಲ್ಲಿ ಕಂಪ್ಯೂಟರ್, ಲ್ಯಾಪ್ಟಾಪ್ ಮತ್ತು ಮೊಬೈಲ್ ಫೋನ್ (Mobile) ಇಲ್ಲದೆ ಬದುಕಲು ಸಾಧ್ಯವಿಲ್ಲ ಎಂಬ ಭಾವನೆ ಹೆಚ್ಚಾಗಿದೆ. ಅದರಲ್ಲೂ ಜನರು ಮೊಬೈಲ್ ಹೆಚ್ಚಾಗಿ ಬಳಸುತ್ತಾರೆ. ಆದರೆ ಇದು ಅನೇಕ ರೀತಿಯ ದೈಹಿಕ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಮುಖ್ಯವಾಗಿ ಮೊಬೈಲ್ ಬಳಕೆ ಚರ್ಮದ (Skin) ಮೇಲೂ ಪರಿಣಾಮ ಬೀರುತ್ತದೆ. ಹಾರ್ವರ್ಡ್ ಮೆಡಿಕಲ್ ಸ್ಕೂಲ್ ಪ್ರಕಾರ, ನೀಲಿ ಬೆಳಕು ನಿದ್ರೆಯ ಮೇಲೆ ಪರಿಣಾಮ ಬೀರುತ್ತದೆ …
Read More »ಭತ್ತ ಹಾಗೂ ಕಬ್ಬು ಬೆಳೆಗಳು ಅಪಾರ ನಷ್ಟ, ಡಾ.ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ
ಖಾನಾಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರೈತರ ಬೆಳೆಗಳು ಕೊಚ್ಚಿ ಹೊಗುತ್ತಿದ್ದು ಸೂಕ್ತ ಪರಿಹಾರ ನೀಡಬೇಕೆಂದು ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಶನಿವಾರ ಮನವಿ ಸಲ್ಲಿಸಲಾಯಿತು. ಬೆಳಗಾವಿ ಹಾಗೂ ಖಾನಾಪುರ ತಾಲೂಕಿನಲ್ಲಿ ಅಕಾಲಿಕ ಮಳೆಯಿಂದ ಭತ್ತ ಹಾಗೂ ಕಬ್ಬು ಬೆಳೆಗಳು ಅಪಾರ ನಷ್ಟವಾಗಿದೆ. ನಿನ್ನೆ ನಂದಗಡದಲ್ಲಿ ಬೆಳೆ ನಷ್ಟದಿಂದ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನೆಲ್ಲ ಉಲ್ಲೇಖಿಸಿ ಜಿಲ್ಲಾಧಿಕಾರಿ ವೆಂಕಟೇಶಕುಮಾರ ಅವರಿಗೆ ಮನವಿ …
Read More »ಬೈಕ್ ಅನ್ನು ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ಲಕ್ಷಾಂತರ ರೂಪಾಯಿಯನ್ನು ದೋಚಿದ್ದಾರೆ.
ದಾವಣಗೆರೆ: ತಡ ರಾತ್ರಿ ಬೈಕ್ ಅನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಸವಾರರ ಕಣ್ಣಿಗೆ ಖಾರದ ಪುಡಿ ಎರಚಿ ಲಕ್ಷಾಂತರ ರೂಪಾಯಿಯನ್ನು ದೋಚಿದ್ದಾರೆ. ಜಗದೀಶ್ (42) ವಿಶ್ವನಾಥ (31) ಹಣ ಕಳೆದುಕೊಂಡ ರೈತರು. ಇಬ್ಬರೂ ರೈತರು ವೀಳ್ಯದೆಲೆ ಮಾರಾಟ ಮಾಡಿ, ಗ್ರಾಮಕ್ಕೆ ವಾಪಸ್ಸಾಗುವಾಗ ತಡ ರಾತ್ರಿ ಈ ಘಟನೆ ನಡೆದಿದೆ. ಹರಿಹರ ತಾಲೂಕಿನ ಬೆಳ್ಳೂಡಿ- ರಾಮತೀರ್ಥ ಗ್ರಾಮಗಳ ನಡುವಿನ ಸೇತುವೆ ಮೇಲೆ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ರೈತರಿಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ …
Read More »ಮತ್ತೊಬ್ಬನ ಜೊತೆ ಹೆಂಡತಿಯ ರಾಸಲೀಲೆ: ಹೆಂಡತಿಯ ಕತ್ತು ಸೀಳಿ ಬೆರಳುಗಳನ್ನು ಕತ್ತರಿಸಿದ ಗಂಡ!
ಹೈದರಾಬಾದ್: ಆಗಸ್ಟ್ 27 ರಂದು ವಿವಾಹವಾಗಿದ್ದ ವ್ಯಕ್ತಿಯೊಬ್ಬರು ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪ್ರಗತಿನಗರದಲ್ಲಿ ಶನಿವಾರ ನಡೆದಿದೆ. ಮೃತ ಸುಧಾರಾಣಿ ಮೂಲತಃ ಕಾಮರೆಡ್ಡಿ ಜಿಲ್ಲೆಯವರಾಗಿದ್ದು, ಒಂದು ವಾರದಿಂದ ಬಾಚುಪಲ್ಲಿಯಲ್ಲಿ ಪತಿಯೊಂದಿಗೆ ನೆಲೆಸಿದ್ದರು. ಕಿರಣ್ ತನ್ನ ಹೆಂಡತಿ ಅಕ್ರಮ ವಿವಾಹೇತರ ಸಂಬಂಧ ಹೊಂದಿದ್ದು, ಆಕೆಯೊಂದಿಗೆ ನಿತ್ಯ ಜಗಳವಾಡುತ್ತಿದ್ದ ಎನ್ನಲಾಗಿದೆ. ಇತ್ತೀಚೆಗಷ್ಟೇ ಕುಟುಂಬದ ಹಿರಿಯರು ಇಬ್ಬರ ಜಗಳವನ್ನು ಬಗೆಹರಿಸಿ ಹೈದರಾಬಾದ್ಗೆ ಕಳುಹಿಸಿದ್ದಾರೆ. ಕಿರಣ್ ಕೋರಿಕೆಯ ಮೇರೆಗೆ ಸುಧಾರಾಣಿ ಅವರ ಪೋಷಕರು …
Read More »ವಿಧಾನಪರಿಷತ್ ಚುನಾವಣೆಗೆ ಶನಿವಾರ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ.
– ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಶನಿವಾರ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ. 5ನೇ ದಿನ ಪಕ್ಷೇತರ ಅಭ್ಯರ್ಥಿಯಾಗಿ ರಾಮದುರ್ಗ ತಾಲೂಕಿನ ಲಖನಾಯಕನಕೊಪ್ಪದ ಸಂಗಮೇಶ ನಾಗಪ್ಪ ಚಿಕ್ಕನರಗುಂದ ಎನ್ನುವವರ ನಾಮಪತ್ರ ಸಲ್ಲಿಸಿದ್ದಾರೆ. ಈವರೆಗೂ ಯಾವುದೇ ಪಕ್ಷದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿಲ್ಲ. ನ.23 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ. ಬಿಜೆಪಿಯಿಂದ ಮಹಾಂತೇಶ ಕವಟಗಿಮಠ, ಕಾಂಗ್ರೆಸ್ ನಿಂದ ಚನ್ನರಾಜ ಹಟ್ಟಿಹೊಳಿ ಸ್ಪರ್ಧೆ ಖಚಿತವಾಗಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.
Read More »ಗೋಲ್ಡನ್ ಟೆಂಪಲ್ನ ಅದ್ಭುತ ವೈಮಾನಿಕ ಫೋಟೋ ಹಂಚಿಕೊಂಡ ಉದ್ಯಮಿ ಮಹೀಂದ್ರಾ
ಅಮೃತಸರದ ಗೋಲ್ಡನ್ ಟೆಂಪಲ್ನ ಅದ್ಭುತ ವೈಮಾನಿಕ ಚಿತ್ರಣವನ್ನು ಶುಕ್ರವಾರ ಟ್ವಿಟ್ಟರ್ ನಲ್ಲಿ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಹಂಚಿಕೊಂಡಿದ್ದು, ಗುರುಪುರಬ್ ಸಂದರ್ಭದಲ್ಲಿ ಜನರಿಗೆ ಶುಭ ಹಾರೈಸಿದ್ದಾರೆ.ವಿದ್ಯುತ್ ದೀಪಗಳಿಂದ ಸುಂದರವಾಗಿ ಬೆಳಗಿರುವ ಗೋಲ್ಡನ್ ಟೆಂಪಲ್, ಅಕಾಲ್ ತಖ್ತ್ ಮತ್ತು ಸರೋವರದ ಅದ್ಭುತ ವೈಮಾನಿಕ ಚಿತ್ರವನ್ನು ಅವರು ಹಂಚಿಕೊಂಡಿದ್ದಾರೆ. ಈ ವೇಳೆ ಎಲ್ಲರಿಗೂ ಟ್ವೀಟ್ ಮುಖಾಂತರ ಉದ್ಯಮಿ ಆನಂದ್ ಮಹೀಂದ್ರಾ ಅವರು ಗುರುಪುರಬ್ನ ಶುಭಾಶಯಗಳನ್ನು ತಿಳಿಸಿದ್ದಾರೆ. ಆನಂದ್ ಮಹೀಂದ್ರಾ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿದ …
Read More »ಹಿಟ್ಲರ್ ಆಡಳಿತ ಅಂತ್ಯ – ರಾಜ್ಯದಲ್ಲೂ ಕೃಷಿ ಕಾಯ್ದೆ ಹಿಂಪಡೆಯಲು ಮಾಜಿ ಸಚಿವ ಜಯಚಂದ್ರ ಆಗ್ರಹ
ರೈತರ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ ತಲೆಬಾಗಿದ್ದು ಹಿಟ್ಲರ್ ಆಡಳಿತ ಕೊನೆಗೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಕೃಷಿ ಕಾಯ್ದೆಗಳನ್ನು ರಾಜ್ಯದಲ್ಲೂ ಹಿಂಪಡೆಯಬೇಕು ಎಂದು ಮಾಜಿ ಸಚಿವ ಟಿ.ಬಿ.ಜಯಂದ್ರ ಆಗ್ರಹಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ನಡೆದ ಹೋರಾಟದಲ್ಲಿ 700 ರೈತರು ಪ್ರಾಣ ಕಳೆದುಕೊಂಡರು. ಆದರೂ ಕೃಷಿ ಕಾಯ್ದೆ ರದ್ದುಪಡಿಸದ ಕೇಂದ್ರ ಸರ್ಕಾರ ಮುಂದಿನ ಚುನಾವಣಾ ದೃಷ್ಟಿಯಲ್ಲಿಟ್ಟುಕೊಂಡು ಈಗ ಹಿಂಪಡೆಯುವ ತೀರ್ಮಾನಕ್ಕೆ ಬಂದಿದ್ದು ಬಿಜೆಪಿಗೆ ಜ್ಞಾನೋದಯವಾಗಿದೆ ಎಂದು …
Read More »