ಬೆಂಗಳೂರು: 2021-22ನೇ ಸಾಲಿನ ಆರ್ ಟಿ ಇ ಶುಲ್ಕ ( RTE Seat School Fee ) ಮರುಪಾವತಿಗೆ ಬೇಡಿಕೆ ಸಲ್ಲಿಸಲು ತಂತ್ರಾಂಶವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ( School Education Department ) ಬಿಡುಗಡೆ ಮಾಡಿದೆ. ಈ ತಂತ್ರಾಂಶದಡಿ ಶಾಲಾ ಮುಖ್ಯಸ್ಥರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪ ನಿರ್ದೇಶಕರು, ಕ್ರಮ ಕೈಗೊಳ್ಳುವಂತೆ ತಿಳಿಸಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಶಿಕ್ಷಣ ಹಕ್ಕು …
Read More »ಬಳ್ಳಾರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಗ್ಗಂಟಾಗಿದ್ದು, ಟಿಕೆಟ್ ಹಂಚಿಕೆಯ ಚೆಂಡು ಹೈಕಮಾಂಡ್ ಅಂಗಳಕ್ಕೆ
ಬಳ್ಳಾರಿ: ವಿಧಾನ ಪರಿಷತ್ ಚುನಾವಣೆಯ ಬಳ್ಳಾರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಗ್ಗಂಟಾಗಿದ್ದು, ಟಿಕೆಟ್ ಹಂಚಿಕೆಯ ಚೆಂಡು ಹೈಕಮಾಂಡ್ ಅಂಗಳಕ್ಕೆ ಹೋಗಿ ತಲುಪಿದೆ. ಆಕಾಂಕ್ಷಿಗಳ ಮಧ್ಯೆ ಹೆಚ್ಚಿದ ಪೈಪೋಟಿ, ಮುಖಂಡರಲ್ಲಿ ಒಮ್ಮತ ಮೂಡದಿರುವುದರಿಂದ ಅಭ್ಯರ್ಥಿ ಘೋಷಣೆಗೆ ವಿಳಂಬವಾಗುತ್ತಿದ್ದು, ಜಿಲ್ಲೆಯ ಮುಖಂಡರೊಂದಿಗೆ ಆಕಾಂಕ್ಷಿಗಳು ಸಹ ಗುರುವಾರ ದೆಹಲಿಗೆ ದೌಡಾಯಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಅ ಧಿಸೂಚನೆ ಪ್ರಕಟವಾಗಿ ಕೆಲ ದಿನ ಕಳೆದರೂ, ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. ಮುಖ್ಯವಾಗಿ ಕಾಂಗ್ರೆಸ್ …
Read More »ನಮ್ಮ ಈ ಪ್ರಯಾಣವನ್ನು ಪುನರಾರಂಭಿಸುತ್ತಿದ್ದೇವೆ’; ಪಿಆರ್ಕೆ ಪ್ರೊಡಕ್ಷನ್ನಿಂದ ಭಾವುಕ ಪೋಸ್ಟ್
2017ರ ಜುಲೈ 20ರಂದು ಪಿಆರ್ಕೆ ಪ್ರೊಡಕ್ಷನ್ ಸ್ಥಾಪನೆ ಆಯಿತು. ಹೊಸ ಮುಖಗಳಿಗೆ ಅವಕಾಶ ನೀಡುವ ಉದ್ದೇಶದಿಂದಲೇ ಈ ನಿರ್ಮಾಣ ಸಂಸ್ಥೆ ಆರಂಭಗೊಂಡಿದೆ. ‘ಕವಲುದಾರಿ’ ಈ ಪ್ರೊಡಕ್ಷನ್ ಹೌಸ್ನಿಂದ ಹೊರ ಬಂದ ಮೊದಲ ಸಿನಿಮಾ.ಪುನೀತ್ ರಾಜ್ಕುಮಾರ್ (Puneeth Rajkumar) ನಟನಾಗಿ ಮಾತ್ರವಲ್ಲ ನಿರ್ಮಾಪಕನಾಗಿಯೂ ಭೇಷ್ ಎನಿಸಿಕೊಂಡಿದ್ದಾರೆ. ಅವರು ಪಿಆರ್ಕೆ ಪ್ರೊಡಕ್ಷನ್ (PRK Production) ಆರಂಭಿಸುವ ಮೂಲಕ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಕೊಂಡಿದ್ದರು. ಹೊಸ ಪ್ರತಿಭೆಗಳಿಗೆ ಮಣೆ ಹಾಕುವ ಮೂಲಕ ಸ್ಯಾಂಡಲ್ವುಡ್ನಲ್ಲಿ ಅವರು ಎಲ್ಲರಿಂದಲೂ …
Read More »20 ಸ್ಥಾನಗಳಿಗೆ ಕಮಲಪಡೆ ಕಾದಾಟ: ಹಾಲಿ ಆರರಲ್ಲಿ ಒಬ್ಬರು ಅವಕಾಶ ವಂಚಿತ; ವಲಸಿಗರ, ಆಸೆಗೆ ತಣ್ಣೀರು
ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಶುಕ್ರವಾರ ಪ್ರಕಟಿಸಿದ್ದು, 25ರಲ್ಲಿ 20 ಸ್ಥಾನಗಳಿಗೆ ಸ್ಪರ್ಧಿಸುವ ತೀರ್ವನವೇ ಅಂತಿಮವಾಗಿದೆ. ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಬಿ.ಜಿ.ಪಾಟೀಲ್, ಮಾಜಿ ಸಿಎಂ ಜಗದೀಶ ಶೆಟ್ಟರ್ ಸಹೋದರ ಪ್ರದೀಪ್ ಶೆಟ್ಟರ್ ಮತ್ತೊಮ್ಮೆ ಸ್ಪರ್ಧೆ ಅವಕಾಶ ಪಡೆದಿದ್ದಾರೆ. ಜೆಡಿಎಸ್ನ ಹಾಲಿ ಸದಸ್ಯರಾದ ಸಂದೇಶ ನಾಗರಾಜ್ ಮತ್ತು ಸಿ.ಆರ್.ಮನೋಹರ್ ಕಮಲ ಪಡೆಗೆ ಸೇರಲು …
Read More »ಪುನೀತ್ ಅಂದುಕೊಂಡಿದ್ದ ವೆಬ್ ಸೈಟ್ ಮೂಲಕ ಅಪ್ಪು ಕಂಡ ಕನಸು ನನಸಾಗಿಯೇ ಉಳಿದು ಹೋಯ್ತು. ಅಪ್ಪುಗಾಗಿ ಕಾಯುತ್ತೇನೆ ಎಂದ ಸಿಎಂ
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿಕೆಯ ನೋವಿನಿಂದ ಚಿತ್ರರಂಗ ನಿಧಾನವಾಗಿ ಹೊರಬರಲು ಯತ್ನಿಸುತ್ತಿದೆ. ಚಿತ್ರರಂಗದ ಒಂದೊಂದೇ ಕಾರ್ಯಕ್ರಮಗಳು ಆರಂಭ ಆಗಿವೆ. ಇಂದು (ನವೆಂಬರ್ 19) ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ ‘ಮದಗಜ’ ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪುನೀತ್ ರಾಜ್ಕುಮಾರ್ ಅವರಿಗೆ ನಮಿಸಿ ಕಾರ್ಯಕ್ರಮವನ್ನು ಆರಂಭ ಮಾಡಲಾಯಿತು. ಈ ವೇಳೆ ಮತ್ತೆ ಬಸವರಾಜ್ ಬೊಮ್ಮಾಯಿ ಪುನೀತ್ ರಾಜ್ಕುಮಾರ್ ಅವರ …
Read More »ನಕಲಿ ಛಾಪಾ ಕಾಗದ ಸಿದ್ಧಪಡಿಸುತ್ತಿದ್ದ ಐವರು ಆರೋಪಿಗಳನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ನಕಲಿ ಛಾಪಾ ಕಾಗದ ಸಿದ್ಧಪಡಿಸುತ್ತಿದ್ದ ಐವರು ಆರೋಪಿಗಳನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಹುಸೇನ್ ಮೋದಿ ಬಾಬು, ಸೀಮಾ, ನಯಾಜ್ ಅಹ್ಮದ್, ಶಬ್ಬೀರ್ ಅಹ್ಮದ್, ಹರೀಶ್ನನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ 63 ಲಕ್ಷ ರೂಪಾಯಿ ಮೌಲ್ಯದ ನಕಲಿ ಛಾಪಾ ಕಾಗದ (stamp papers) ವಶಕ್ಕೆ ಪಡೆದಿದ್ದಾರೆ. ಹೈಕೋರ್ಟ್ (High court) ಸೂಚನೆ ಮೇರೆಗೆ ರಚನೆಯಾಗಿದ್ದ ಎಸ್ಐಟಿ (SIT) ಅಧಿಕಾರಿಗಳಿಂದ ಈ ಕಾರ್ಯಾಚರಣೆ ನಡೆಸಿದ್ದು, ಐವರು ಆರೋಪಿಗಳನ್ನು ಸದ್ಯ ವಿಚಾರಣೆಗೊಳಪಡಿಸಲಾಗಿದೆ. ನಕಲಿ …
Read More »ಕಲಘಟಗಿ: ಕೆಲಸದ ಒತ್ತಡ ತಾಳಲಾರದೇ ಅಧಿಕಾರಿ ಆತ್ಮಹತ್ಯೆ
ಕಲಘಟಗಿ: ಪಟ್ಟಣದ ಬಸ್ ನಿಲ್ದಾಣದ ಅಧಿಕಾರಿ ಹುಬ್ಬಳ್ಳಿಯ ಸುಭಾಷ ಬುಲಬುಲೆ (58) ಎಂಬುವವರು ಕೆಲಸದ ಒತ್ತಡ ತಾಳಲಾರದೆ ಪಾಸ್ ವಿತರಣೆ ಕೇಂದ್ರದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ‘ಈಗ ವಿದ್ಯಾರ್ಥಿಗಳ ಪಾಸುಗಳನ್ನು ಕಂಪ್ಯೂಟರ್ ಮೂಲಕ ವಿತರಣೆ ಮಾಡುತ್ತಿದ್ದು ನಾನು ಕಂಪ್ಯೂಟರ್ ತರಬೇತಿ ಪಡೆದಿಲ್ಲದ ಕಾರಣ ಪಾಸ್ ನೀಡಲು ಮಾಹಿತಿ ಗೊತ್ತಾಗುತ್ತಿಲ್ಲ. ಹೀಗಾಗಿ ಕೆಲಸದ ಒತ್ತಡ ಜಾಸ್ತಿ ಆಗಿದೆ’ ಎಂದು ಪತ್ರ …
Read More »ವಿಧಾನ ಪರಿಷತ್ ಚುನಾವಣೆ: ಲಿಂಗಾಯತ ಅಭ್ಯರ್ಥಿಗಳಿಗೆ ಕಾಂಗ್ರೆಸ್, ಬಿಜೆಪಿ ಮನ್ನಣೆ; ಇತರ ಸಮುದಾಯಗಳ ಕಡೆಗಣನೆ!
ಬೆಳಗಾವಿ : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ವಿವಿಧ ಪ್ರಬಲ ಸಮುದಾಯಗಳಿಂದ ಬೆಂಬಲ ಸಿಗುತ್ತಿದ್ದರೂ, ಈ ಭಾಗದ ನಾಲ್ಕು ಪ್ರಮುಖ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಎರಡೂ ಪಕ್ಷಗಳು ಪ್ರಭಾವಿ ಲಿಂಗಾಯತ ಮುಖಂಡರನ್ನು ಕಣಕ್ಕಿಳಿಸಲು ಮುಂದಾಗಿವೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ ಬಹುತೇಕ ಹಾಲಿ ವಿಧಾನ ಪರಿಷತ್ ಸದಸ್ಯರು ಲಿಂಗಾಯತ ಸಮುದಾಯದವರಾಗಿದ್ದಾರೆ. ಬೆಳಗಾವಿ/ಚಿಕ್ಕೋಡಿ, ಹುಬ್ಬಳ್ಳಿ-ಧಾರವಾಡ-ಗದಗ-ಹಾವೇರಿ, ವಿಜಯಪುರ-ಬಾಗಲಕೋಟ ಮತ್ತು ಕಲಬುರ್ಗಿ ಮತ್ತು ಯಾದಗಿರಿಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳ ಬಹುತೇಕ ಹಾಲಿ ಎಂಎಲ್ಸಿಗಳು …
Read More »₹1.92 ಕೋಟಿ ಮೌಲ್ಯದ ಹಳೆಯ ನೋಟುಗಳು ವಶಕ್ಕೆ, ಮೂವರ ಬಂಧನ
ಮಂಗಳೂರು: ಅಮಾನ್ಯಗೊಂಡ ನೋಟುಗಳನ್ನು ಸಾಗಿಸುತ್ತಿದ್ದ ಮೂವರನ್ನು ಬಂಧಿಸಿರುವ ನಗರ ಠಾಣೆ ಪೊಲೀಸರು, ಬಂಧಿತರಿಂದ ₹ 1.92 ಕೋಟಿ ಮೊತ್ತದ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಕಣ್ಣೂರಿನ ಜುಬೇರ್ ಹಮ್ಮಬ್ಬ (52), ಪಡೀಲ್ನ ದೀಪಕ್ ಕುಮಾರ್ (32) ಮತ್ತು ಬಜ್ಪೆ ನಿವಾಸಿ ಅಬ್ದುಲ್ ನಾಸೀರ್ (40) ಬಂಧಿತರು. ಜುಬೇರ್ ಮತ್ತು ನಾಸೀರ್ ಚಾಲಕರಾಗಿದ್ದು, ದೀಪಕ್ ವಿದ್ಯುತ್ ಗುತ್ತಿಗೆದಾರ. ಈ ಮೂವರು ಅಡ್ಯಾರ್ನಿಂದ ಲಾಲ್ಬಾಗ್ಗೆ ಅಮಾನ್ಯಗೊಂಡ ನೋಟುಗಳನ್ನು ಸಾಗಿಸುತ್ತಿದ್ದು, ಪೊಲೀಸರು ಕಾರು ನಿಲ್ಲಿಸಿ ತಪಾಸಣೆ ಮಾಡಿದಾಗ …
Read More »ಸತೀಶ ಜಾರಕಿಹೊಳಿ ಜಾಣ: ಏನು ಮಾಡಬೇಕು ಅಂತಾ ಅವರಿಗೆ ಗೊತ್ತಿದೆ,ಮಹಾಂತೇಶ ಕವಟಗಿಮಠ ಗೆಲ್ಲಿಸುವುದು ನಮ್ಮ ಮೊದಲ ಆಧ್ಯತೆ.
ಬಿಜೆಪಿ ಪಕ್ಷದ ಮೊದಲ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಗೆಲ್ಲಿಸುವುದು ನಮ್ಮ ಮೊದಲ ಆಧ್ಯತೆ. ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಗೊತ್ತಿಲ್ಲ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ತಮ್ಮ ಪುನರುಚ್ಚರಿಸಿದ್ದಾರೆ. ಗೋಕಾಕ್ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ರಮೇಶ ಜಾರಕಿಹೊಳಿ ಬಿಜೆಪಿ ಪಕ್ಷದಿಂದ ಒಬ್ಬ ಅಭ್ಯರ್ಥಿಯನ್ನು ಮಾತ್ರ ಕಣಕ್ಕೆ ಇಳಿಸುತ್ತಿದ್ದೇವೆ. ಎರಡನೇ ಅಭ್ಯರ್ಥಿ ಬೇಡ ಎಂದು ನಾನು ಮನವಿ ಮಾಡಿಕೊಂಡಿದ್ದೇನೆ. ಒಂದನೇ ಮತ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ …
Read More »