Breaking News

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಶವ ಮೆರವಣಿಗೆ: ಅನುಮತಿ ಕೊಟ್ಟವರಾರು? ನಿವೃತ್ತ ಪೊಲೀಸ್ ಅಧಿಕಾರಿಗಳ ಪ್ರಶ್ನೆ

ಬೆಂಗಳೂರು: ಬಜರಂಗದಳ ಕಾರ್ಯಕರ್ತ 26 ವರ್ಷದ ಯುವಕ ಹರ್ಷ ಕೊಲೆಯಾದ ನಂತರ ನಿನ್ನೆ ಸೋಮವಾರ ಶಿವಮೊಗ್ಗ ನಗರದಲ್ಲಿ ಶವವನ್ನು ಹೊತ್ತು ಕಾರ್ಯಕರ್ತರು ಮೆರವಣಿಗೆ ಸಾಗಿರುವ ಬಗ್ಗೆ ಈಗ ಹಲವು ಪ್ರಶ್ನೆಗಳು ಎದ್ದಿವೆ. ಕೋಮುಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ಘಟನೆಯಾದ ಬಳಿಕ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು ಹಲವು ಮನೆಗಳಿಗೆ ಮತ್ತು ವಾಹನಗಳಿಗೆ ಉದ್ರಿಕ್ತರ ಗುಂಪು ಕಲ್ಲು ಎಸೆದ ಬಳಿಕ ಪರಿಸ್ಥಿತಿ ಇನ್ನಷ್ಟು ಗಂಭೀರವಾಯಿತು. ಹೀಗಿರುವಾಗ ಮೆರವಣಿಗೆ ಸಾಗಲು ಶಿವಮೊಗ್ಗ ಪೊಲೀಸರು ಅನುಮತಿ ಹೇಗೆ …

Read More »

ಮಧ್ಯರಾತ್ರಿಯಲ್ಲಿ ರೆಸ್ಟಾರೆಂಟ್​ ಬಾಗಿಲು ಮುಚ್ಚಿಸುವ ಅಧಿಕಾರ ಪೊಲೀಸರಿಗಿಲ್ಲ’ -​ ಹೈಕೋರ್ಟ್​ ಮಹತ್ವದ ಆದೇಶ

ಕೆಫೆ ಹಾಗೂ ರೆಸ್ಟಾರೆಂಟ್​ಗಳನ್ನು ಬಂದ್​ ಮಾಡುವಂತೆ ಒತ್ತಾಯಿಸುವಂತಿಲ್ಲ ಹಾಗೂ ತಡರಾತ್ರಿಯಲ್ಲಿ ವ್ಯಾಪಾರ ಮಾಡದಂತೆ ನಿರ್ಬಂಧಿಸುವಂತಿಲ್ಲ ಎಂದು ಮದ್ರಾಸ್​ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ತಡರಾತ್ರಿಯಲ್ಲಿ ರೆಸ್ಟಾರೆಂಟ್​ಗಳನ್ನು ನಡೆಸುವುದಕ್ಕೆ ಕಿಲ್ವಾಕ್​ ಠಾಣೆ ಪೊಲೀಸರು ಅಡ್ಡಿಪಡಿಸುತ್ತಿರುವುದನ್ನು ವಿರೋಧಿಸಿ ಎನ್​ ಗುಣರಾಜ್​ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಕೃಷ್ಣನ್​ ರಾಮಸ್ವಾಮಿ ಈ ಮಹತ್ವದ ಆದೇಶವನ್ನು ನೀಡಿದ್ದಾರೆ.   ಸಂವಿಧಾನದ ಪರಿಚ್ಛೇದ 19(1)(ಜಿ) ಅಡಿಯಲ್ಲಿ ತಮ್ಮ ಹೋಟೆಲ್​ ಅಥವಾ ರೆಸ್ಟಾರೆಂಟ್​ಗಳಲ್ಲಿ ವ್ಯಾಪಾರ ನಡೆಸುವ ಹಕ್ಕನ್ನು …

Read More »

ಮಾತಿನ ಮಲ್ಲಿ ಆರ್ ಜೆ ರಚನಾ ಹೃದಯಾಘಾತದಿಂದ ನಿಧನ

ಬೆಂಗಳೂರು: ಮಾತಿನ ಮಲ್ಲಿಯಾಗಿ ಅಪಾರ ಕೇಳುಗರ ಪ್ರೀತಿ ಪ್ರೋತ್ಸಾಹವನ್ನು ಪಡೆದುಕೊಂಡಿದ್ದ ಆರ್ ಜೆ ರಚನಾ ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜೆ.ಪಿ ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ವಾಸವಾಗಿದ್ದ ಅವರಿಗೆ ಕಾರ್ಡಿಯಾಕ್ ಅರೆಸ್ಟ್ ಆಗಿದೆ ಎನ್ನಲಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ನಿಧನರಾಗಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ರಕ್ಷಿತ್ ಶೆಟ್ಟಿಯವರ ‘ಸಿಂಪಲ್ಲಾಗಿ ಒಂದು ಲವ್ ಸ್ಟೋರಿ’ ಚಿತ್ರದಲ್ಲಿ ಸಹೋದರಿ ಪಾತ್ರದ ಮೂಲಕ ರಚನಾ ಖ್ಯಾತಿಯಾಗಿದ್ದರು. ಮೂರು ವರ್ಷಗಳಿಂದ ರೇಡಿಯೋ ಜಾಕಿ ಕೆಲಸ …

Read More »

ಜನರ ಕಷ್ಟಕ್ಕೆ ದುಡ್ಡಿಲ್ಲ, ಸಂಬಳ, ಭತ್ಯೆ ಹೆಚ್ಚಿಸಿಕೊಂಡ ಶಾಸಕರು, ಸಚಿವರು!

ಶಾಸಕರು, ಸಭಾಧ್ಯಕ್ಷರು, ವಿಪಕ್ಷ ನಾಯಕ ಹಾಗೂ ಸಚೇತಕರ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಸದನ ಕಲಾಪ ಯಾವುದೇ ಚರ್ಚೆ ಇಲ್ಲದೇ ನಡೆದರೂ ಯಾವುದೇ ಪ್ರತಿರೋಧವಿಲ್ಲದೇ ಶಾಸಕರು, ಸಚಿವರು, ಸಭಾಧ್ಯಕ್ಷರು ಹಾಗೂ ವಿಪಕ್ಷ ನಾಯಕರು ತಮ್ಮ ಸಂಬಳ ಹಾಗೂ ಭತ್ಯೆ ಹೆಚ್ಚಿಸಿಕೊಂಡಿದ್ದಾರೆ. ಸರಕಾರಕ್ಕೆ ಜನರ ಕಷ್ಟಗಳಿಗೆ ಸ್ಪಂದಿಸಲು ಹಣವಿಲ್ಲ. ಆದರೆ ಇದಕ್ಕೆ ಹಣ ಎಲ್ಲಿಂದ ಬರುತ್ತದೆ? ಸಭಾಧ್ಯಕ್ಷರು/ ಉಪಸಭಾಧ್ಯಕ್ಷರ ಪರಿಷ್ಕೃತ ಭತ್ಯೆ (ರೂ.ಗಳಲ್ಲಿ) ಸಂಬಳ: 50,000ದಿಂದ 75,000 ಆತಿಥ್ಯ ವೇತನ …

Read More »

ಹರ್ಷ ಕುಟುಂಬಕ್ಕೆ ಒಂದು ತಿಂಗಳ ವೇತನ ಮೀಸಲಿರಿಸಿದ ಶಾಸಕ ಡಾ.ಭರತ್ ಶೆಟ್ಟಿ

ಮಂಗಳೂರು:ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರು ತಮ್ಮ ಒಂದು ತಿಂಗಳ ವೇತನವನ್ನು ನೀಡುತ್ತಿರುವುದಾಗಿ ಘೋಷಿಸಿದ್ದಾರೆ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ಮತಾಂಧರ ದುಷ್ಕೃತ್ಯಕ್ಕೆ ಇಂದು ನಾವು ನಮ್ಮ ಯುವ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಈ ಸಂದರ್ಭದಲ್ಲಿ ನಾವು ಮಾಡಬಹುದಾದ ಕನಿಷ್ಠವೆಂದರೆ ಅವರ ಕುಟುಂಬವನ್ನು ಬೆಂಬಲಿಸುವುದು. ನನ್ನ 1 ತಿಂಗಳ ಸಂಬಳ ಮತ್ತು allowances ಅನ್ನು …

Read More »

ಹಿಜಾಬ್ ವಿವಾದ: ನಾಳೆ ಮಧ್ಯಾಹ್ನಕ್ಕೆ ಅರ್ಜಿಯ ವಿಚಾರಣೆ ಮುಂದೂಡಿಕೆ

ಹಿಜಾಬ್ ಕುರಿತು ವಿಚಾರಣೆ ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠದ ಮುಂದೆ ವಿಚಾರಣೆ ನಡೆಸಿದ್ದು, ಮತ್ತೆ ನಾಳೆ ಮಧ್ಯಾಹ್ನ 2.30ಕ್ಕೆ ಅರ್ಜಿಯ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಈಗಾಗಲೇ ಅರ್ಜಿದಾರರ ಪರ ವಾದ ಮಂಡನೆಯ ಬಳಿಕ ಇಂದು ಮತ್ತೆ ಪುನಾರಂರಭಗೊಂಡ ಅರ್ಜಿಯ ವಿಚಾರಣೆ ವೇಳೆ, ನ್ಯಾಯಪೀಠದ ಮುಂದೆ ಸರ್ಕಾರದ ಪರ ಅಡ್ವಕೇಜ್ ಜನರಲ್ ವಾದ ಮಂಡನೆ ಮಾಡಿದರು. ಸರ್ಕಾರದ ವಾದ ಆಲಿಸಿದಂತ ನ್ಯಾಯಪೀಠವು, ನಾಳೆಗೆ ವಿಚಾರಣೆ ಮುಂದೂಡಿದೆ.

Read More »

ಜಿಲ್ಲಾಧಿಕಾರಿ ಮನೆ ಆವರಣದಲ್ಲಿನ ಶ್ರೀಗಂಧ ಮರ ಕಳ್ಳತನ

ಧಾರವಾಡ: ನಿನ್ನೆ ತಡರಾತ್ರಿ ಧಾರವಾಡ ಜಿಲ್ಲಾಧಿಕಾರಿಗಳ ನಿವಾಸದ ಆವರಣದಲ್ಲಿನ ಶ್ರೀಗಂಧದ ಮರ ಕಳ್ಳತನವಾಗಿದೆ. ಬೆಳಗ್ಗೆ ಸ್ಥಳ ಪರಿಶೀಲನೆ ಮಾಡಿ, ಪ್ರಕರಣ ದಾಖಲಿಸಲಾಗಿದೆ ಎಂದು ಧಾರವಾಡ ವಲಯ ಅರಣ್ಯ ಅಧಿಕಾರಿ ಆರ.ಎಸ್.ಉಪ್ಪಾರ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ನಿನ್ನೆ ತಡರಾತ್ರಿ ಜಿಲ್ಲಾಧಿಕಾರಿಗಳ ನಿವಾಸದ ಆವರಣದಲ್ಲಿದ್ದ ಶ್ರೀಗಂಧದ ಮರ ಕಳ್ಳತನವಾಗಿದೆ. ಬೆಳಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮರ ಕಡಿದ ಸ್ಥಳವನ್ನು ಪರಿಶೀಲಿಸಿದ್ದಾರೆ. 

Read More »

ಗೋಕಾಕ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಬಾಡಿಗೆ ನೀಡಿದ್ದ ಮಲಿಕಾನಿಂದ ಯುವತಿಗೆ ಆತ್ಯಚಾರ ವೆಸಗಿ ಮೋಸ..

ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ವಂಚಿಸಿದ ಎಂದು ಯುವಕನ ವಿರುದ್ಧ ನೊಂದ ಯುವತಿ ನ್ಯಾಯಕ್ಕಾಗಿ ಪೊಲೀಸ್ ಠಾಣಾ ಮೆಟ್ಟಿಲೇರಿಸಿದ್ದಾಳೆ. ಬೆಳಗಾವಿ ಜಿಲ್ಲೆ ಗೋಕಾಕ್‍ನ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಸೂಪರಿಂಟೆಂಡೆಂಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ವಸತಿ ನಿಲಯ ಬಾಡಿಗೆ ನೀಡಿದ್ದ ಕಟ್ಟಡ ಮಾಲೀಕನ ಪುತ್ರ ಆದರ್ಶ ಮಾಲದಿನ್ನಿ 2016ರ ಡಿಸೆಂಬರ್ 5ರಂದು ಅತ್ಯಾಚಾರವೆಸಗಿ, ಫೋಟೋ ತೆಗೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಲೋಡ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. …

Read More »

ಶಿವಮೊಗ್ಗದಲ್ಲಿ 2 ದಿನ ಕರ್ಫ್ಯೂ – ನಾಳೆ ಬೆಳಗ್ಗೆವರೆಗೂ ನಿಷೇಧಾಜ್ಞೆ,

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಮಧಿಸಿದಂತೆ ಶಿವಮೊಗ್ಗ ನಗರ ಬೂದಿ ಮುಚ್ಚಿದ ಕೆಂಡದಂತಿದ್ದು, ಇದೀಗ ಪೊಳೀಸರ ಭದ್ರಕೋಟೆಯಾಗಿದೆ. ಹರ್ಷನ ಹತ್ಯೆ ಬೆನ್ನಲ್ಲೇ ಖಾಕಿ ಫುಲ್ ಅಲರ್ಟ್ ಆಗಿದೆ. ಶಿವಮೊಗ್ಗ ನಗರದಾದ್ಯಂತ ನಾಳೆ ಬೆಳಗ್ಗೆ 6 ಗಂಟೆವರೆಗೂ ಸೆಕ್ಷನ್ 144 ಜಾರಿ ಮಾಡಲಾಗಿದೆ. ಮುನ್ನೆಚ್ಚರಿಕೆಗಾಗಿ ಶಾಲೆ-ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ನಿನ್ನೆ ರಾತ್ರಿಯಿಂದ ನಾಳೆ ಮುಂಜಾನೆ 6 ಗಂಟೆಯವರೆಗೆ ಕಫ್ರ್ಯೂ ಜಾರಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಬಿಗಿ ಪೊಲೀಸ್ …

Read More »

ಜಗದೀಶ್ ವಿರುದ್ಧ ಕೇಸ್: ಹೋರಾಟಕ್ಕೆ ಮುಂದಾದ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ

ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ವಿರುದ್ಧ ಫೇಸ್ ಬುಕ್​​ನಲ್ಲಿ ಅಕ್ರಮ ಆಸ್ತಿ ಗಳಿಕೆ ಆರೋಪ ಮಾಡಿದ್ದ, ವಕೀಲ ಜಗದೀಶ್ ವಿರುದ್ಧ ಸುಳ್ಳು ಜಾತಿ ನಿಂದನೆ ಕೇಸ್ ದಾಖಲಿಸಿರುವುದನ್ನು ಖಂಡಿಸಿ ವಕೀಲರು ಹೋರಾಟ ನಡೆಸಲು ಮುಂದಾಗಿದ್ದಾರೆ. ಈ ಕುರಿತಂತೆ ಪೂರ್ವಭಾವಿ ಸಭೆ ನಡೆಸಲು ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ ರಂಗನಾಥ್ ಮುಂದಾಗಿದ್ದಾರೆ. ನಾಳೆ ಸಂಜೆ ಸಭೆ ನಡೆಸಲು ತೀರ್ಮಾನಿಸಿದ್ದು, ಸಮಾನ ಮನಸ್ಕ ವಕೀಲರು ಹಾಗೂ ವಕೀಲರ ಸಂಘಟನೆಗಳು ಸಭೆ …

Read More »