ಸಾಮಾಜಿಕ ಜಾಲತಾಣದಲ್ಲಿ ವೈದ್ಯರೊಬ್ಬರು ಸಗಣಿ ತಿನ್ನುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಯ್ಯೋ, ವೈದ್ಯರ್ಯಾಕಪ್ಪ ಸಗಣಿ ತಿಂತರೇ ಅನ್ನೋ ಕುತೂಹಲ ನಿಮ್ಮನ್ನ ಕಾಡ್ತಿರಬೇಕು. ಇಲ್ನೋಡಿ, ಅದಕ್ಕೂ ಆ ವೈದ್ಯರೇ ಉತ್ತರ ನೀಡ್ತಾರೆ. ಎಂಬಿಬಿಎಸ್ ಪದವಿ ಪಡೆದಿರುವ ಈ ವೈದ್ಯರ ಹೆಸ್ರು ಮನೋಜ್ ಮಿತ್ತಲ್ ಅಂತಾ.. ಕರ್ನಾಲ್ ನಿವಾಸಿ. ಕಳೆದ ಹಲವು ವರ್ಷಗಳಿಂದ ಗೋಮೂತ್ರ ಕುಡಿದು, ಸಗಣಿ ತಿನ್ನುತ್ತಿರುವ ಇವ್ರು ಸಗಣಿಯ ಮಹತ್ವವನ್ನ ಮನ ಮುಟ್ಟುವಂತೆ ವಿವರಿಸುತ್ತಾರೆ. ಈ ವೈದ್ಯರು ಹೇಳುವಂತೆ, …
Read More »ವಿಧಾನಸೌಧದಲ್ಲಿ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನ
ಬೆಂಗಳೂರು: ವ್ಯಕ್ತಿಯೊಬ್ಬ ವಿಧಾನಸೌಧದಲ್ಲಿ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. 50 ವರ್ಷದ ನಂದಕುಮಾರ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ವಿಧಾನಸೌಧದ ಎರಡನೇ ಮಹಡಿಯ ಪ್ರವೇಶ ದ್ವಾರದಲ್ಲಿಯೇ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮದ್ಯಪಾನ ಮಾಡಿದ್ದ ನಂದಕುಮಾರ್ ಸ್ಯಾನಿಟೈಸರ್ ಕುಡಿದು ಬಳಿಕ 100ಕ್ಕೆ ಕರೆ ಮಾಡಿ ತಾನೇ ಮಾಹಿತಿ ನೀಡಿದ್ದಾನೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ವಿಧಾನಸೌಧ ಠಾಣೆ ಪೊಲೀಸರು ನಂದಕುಮಾರ್ ನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ನಂದಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ …
Read More »ಪರಿಷತ್ ಚುನಾವಣೆ : ಅಭ್ಯರ್ಥಿಗಳ ಆಯ್ಕೆಯಲ್ಲಿ ಇನ್ನೂ ಕಸರತ್ತು ನಡೆಸುತ್ತಿರುವ ಮೂರು ಪಕ್ಷಗಳು!
ಬಳ್ಳಾಪುರ ಕ್ಷೇತ್ರದ ಸಿ.ಆರ್. ಮನೋಹರ್( C R Manohar) ಹಾಗೂ ಮೈಸೂರು-ಚಾಮರಾಜನಗರ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಗೆದ್ದಿದ್ದ ಸಂದೇಶ್ ನಾಗರಾಜ್ ಅವರು ಬಿಜೆಪಿಗೆ ಬರಲು ಉತ್ಸುಕರಾಗಿದ್ದಾರೆ. ಅವರ ಸೇರ್ಪಡೆಗೆ ಸ್ಥಳೀಯವಾಗಿ ವಿರೋಧ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ. ಮೂರು ಪಕ್ಷಗಳ ನಾಯಕರು, ಸಭೆಗಳನ್ನು ನಡೆಸುವ ಮೂಲಕ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ನವೆಂಬರ್ 23ರವರೆಗೂ ನಾಮಪತ್ರ ಸಲ್ಲಿಸಲು ಕಾಲಾವಕಾಶ ಇರುವುದರಿಂದ ಎರಡು ದಿನಗಳಲ್ಲಿ ಒಂದೊಂದು ರಾಜಕೀಯ ಪಕ್ಷವೂ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು …
Read More »ಬಳ್ಳಾರಿ: ಹುಚ್ಚ ಬಸ್ಯಾನ ಅಂತ್ಯ ಸಂಸ್ಕಾರದಲ್ಲಿ ಸಾವಿರಾರು ಜನರು ಭಾಗಿ, ಫೋಟೋ, ವಿಡಿಯೋ ವೈರಲ್
ಬಳ್ಳಾರಿ: ಖ್ಯಾತ ವ್ಯಕ್ತಿ, ರಾಜಕಾರಣಿ, ಸಿನಿಮಾ ನಟರು ಮೃತಪಟ್ಟಾಗ ಅವರ ಅಂತಿಮ ದರ್ಶನ ಪಡೆಯಲು ಸಾವಿರಾರು ಜನರು ಬರುವುದು ಸಹಜ. ಬುದ್ಧಿಮಾಂದ್ಯ, ಹುಚ್ಚನೊಬ್ಬ ಸಾವನ್ನಪ್ಪಿದಾಗ ಸಾವಿರಾರು ಜನರು ಅಂತಿಮ ನಮನ ಸಲ್ಲಿಸಿದ್ದನ್ನು ನೀವು ಕೇಳಿದ್ದೀರಾ? ನೋಡಿದ್ದೀರಾ?. ಬಳ್ಳಾರಿ ಜಿಲ್ಲೆಯ ಹಡಗಲಿ ಪಟ್ಟಣದಲ್ಲಿ ಇಂಥದ್ದೊಂದು ಕುತೂಹಲಕಾರಿ ಘಟನೆ ನಡೆದಿದೆ. ಪಟ್ಟಣದ ಮಾನಸಿಕ ಅಸ್ವಸ್ಥನೊಬ್ಬ ಮೃತಪಟ್ಟಿದ್ದು, ಅವನ ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದಲ್ಲದೇ ಊರ ತುಂಬಾ ಅವನ ಫೋಟೋವುಳ್ಳ ಫ್ಲೆಕ್ಸ್, ಬ್ಯಾನರ್ ಹಾಕಿಸಿ ಅದ್ಧೂರಿಯಾಗಿ …
Read More »ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ: ಸ್ವಾಮೀಜಿಗಳ ಭವಿಷ್ಯ
ಬಾಗಲಕೋಟೆ: ಬಾದಾಮಿ ಪಟ್ಟಣದಲ್ಲಿ ಮಂಗಲ ಭವನ ಉದ್ಘಾಟನೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ(Siddaramaiah) ಮುಂದೆ ಮುಖ್ಯಮಂತ್ರಿ ಆಗುತ್ತೀರಿ ಎಂದು ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ.ಮಂಗಲ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ, ಬಾಗಲಕೋಟೆ ಜಿಲ್ಲೆ ಸಿದ್ದನಕೊಳ್ಳದ ಡಾ.ಶಿವಕುಮಾರ ಸ್ವಾಮೀಜಿ, ವಿಜಯಪುರ ಜಿಲ್ಲೆ ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ ಸ್ವಾಮೀಜಿಗಳು ಸೇರಿದಂತೆ ಇನ್ನೂ ಕೆಲವು ಸ್ವಾಮೀಜಿಗಳು ಸಿದ್ದರಾಮಯ್ಯ ಸಿಎಂ ಆಗಬೇಕು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರ ಕುರಿತು …
Read More »ಕಾಂಗ್ರೆಸ್ ಪಾಳಯದಲ್ಲಿ ಸಿದ್ದು-ಡಿಕೆಶಿ ಬಣದ ಇಬ್ಬರು ಶಾಸಕರ ನಡುವೆ ಆಂತರಿಕ ಸಮರ
ಬೆಂಗಳೂರು: ಕಾಂಗ್ರೆಸ್ನ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಬಣ ರಾಜಕೀಯ ಬಯಲಾಗಿದ್ದು, ಕೈ ನಾಯಕರಿಗೆ ಭಾರಿ ಮುಜುಗರ ತಂದೊಡಿದೆ. ಅರಮನೆ ಮೈದಾನದಲ್ಲಿ ಮಂಗಳವಾರ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿರುವಾಗಲೇ ಕೆಲವರು ಡಿಕೆಶಿ.. ಡಿಕೆಶಿ.. ಜಮೀರ್ ಜಮೀರ್ ಎಂದು ಘೋಷಣೆ ಕೂಗುತ್ತಿದ್ದರು. ಇನ್ನು ಮುಂದು ವರೆದು ಜಮೀರ್ ಫೋಟೋ ಹಿಡಿದು ಜಮೀರ್ ಜಮೀರ್ ಎಂದು ಜೋರಾಗಿ ಕೂಗುತ್ತಿದ್ದರು. …
Read More »ಮಹಿಳೆ ಹಾಗೂ ಮಕ್ಕಳ ಸುರಕ್ಷತೆಗಾಗಿ ಹೊಸ ಐಟಿ ನಿಯಮಾವಳಿ; ಹೈಕೋರ್ಟ್ ಗೆ ಕೇಂದ್ರದಿಂದ ಮಹತ್ವದ ಮಾಹಿತಿ
2021ನೇ ಸಾಲಿನ ಐಟಿ ನಿಯಮಾವಳಿಗಳು ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಯನ್ನು ಹೆಚ್ಚಿಸುವ ಬಗ್ಗೆ ಸ್ಪಷ್ಟ ಗಮನವನ್ನು ಹೊಂದಿದೆ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್ ಗೆ ಮಾಹಿತಿಯನ್ನು ರವಾನಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಹಾಗೂ ನ್ಯಾಯಮೂರ್ತಿ ಜ್ಯೋತಿ ಸಿಂಗ್ ನೇತೃತ್ವದ ಪೀಠಕ್ಕೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರವು ಐಟಿ ಹೊಸ ನಿಯಮಾವಳಿಗಳು ಅಶ್ಲೀಲತೆ ಹಾಗೂ ಭೌತಿಕ ಗೌಪ್ಯತೆಯನ್ನು ಉಲ್ಲಂಘಿಸುವಂತಹ ವಿಷಯಗಳನ್ನು ತೆಗೆದು ಹಾಕಲಿದೆ ಎಂದು ಹೇಳಿದೆ. ‘ಐಟಿ …
Read More »ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ವರ್ಗಾವಣೆ ನೀತಿಯಲ್ಲಿ ಮಾರ್ಪಾಡು ಮಾಡಿ ಆದೇಶ ಹೊರಡಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraja Bommai) ಅವರ ಕಚೇರಿಗೆ ವರ್ಗಾವಣೆ ಸರ್ಕಾರಿ ಅಧಿಕಾರಿಗಳು ವರ್ಗಾವಣೆ ಕೋರಿ ಹೆಚ್ಚಿನ ಸಂಖ್ಯೆಯಲ್ಲಿ ಮನವಿ ಸಲ್ಲಿಸುತ್ತಿರುವುದು ಖುದ್ದು ಸಿಎಂಗೆ ದೊಡ್ಡ ತಲೆ ನೋವು ಆಗಿದೆ. ಈ ನಡುವೆ ವರ್ಗಾವಣೆ ನೀತಿಯ ಪ್ರಕಾರ (transfer policy) ಎಲ್ಲಾ ವೃಂದದ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ವರ್ಗಾವಣೆ ಅವಧಿ ಮುಗಿದಿರುವುದರಿಂದ ಕಡತಗಳನ್ನು ಮುಖ್ಯಮಂತ್ರಿಗಳ ಅನುಮೋದನೆಗೆ ಸಲ್ಲಿಸಲಾಗುತ್ತಿದೆ (Chief Minister for approval.). …
Read More »ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ಗೆ ಚುನಾವಣೆ ನಡೆಸಲು ಸಂಘಗಳ ಜಿಲ್ಲಾ ನೊಂದಣಾಧಿಕಾರಿ ಆದೇಶ
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ( karnataka chalanachitra vanijya mandali ) ಚುನಾವಣೆಯನ್ನು ( Election ) ಕೂಡಲೇ ನಡೆಸುವಂತೆ, ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ಆದೇಶಿಸಿದ್ದಾರೆ. ‘ ಈ ಕುರಿತಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿರುವಂತ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಂಸ್ಥೆಯ ಸಮಿತಿಗೆ ಅವಧಿ ಮುಗಿದು ಈಗಾಗಲೇ ವರ್ಷಗಟ್ಟಲೇ ಗತಿಸಿದರೂ ಸಹ ಚುನಾವಣೆಗೆ ಸಂಸ್ಥೆಯಿಂದ ಕ್ರಮವಿಟ್ಟಿರುವುದಿಲ್ಲ. ಚುನಾವಣೆಯನ್ನು ಇಲಾಖೆಯ …
Read More »ಮಗಳನ್ನು ಕಾಡಿನ ಸಮೀಪ ಕರೆದೊಯ್ದ ತಂದೆ ಅಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ
ನವದೆಹಲಿ: ನಾಗರಿಕ ಪ್ರಪಂಚವೇ ತಲೆ ತಗ್ಗಿಸುವಂತ ಘೋರ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕೋಪಗೊಂಡಿದ್ದ ತಂದೆಯೊಬ್ಬ ಮಗಳ ಮೇಲೆಯೇ ಅತ್ಯಾಚಾರವೆಸಗಿರುವ ಹೇಯ ಘಟನೆ ನಡೆದಿದೆ. ಮಗಳ 8 ತಿಂಗಳ ಮಗು ಅನಾರೋಗ್ಯದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಮಗುವಿನ ಅಂತ್ಯಕ್ರಿಯೆಗೆಂದು ಮಗಳನ್ನು ಕಾಡಿನ ಸಮೀಪ ಕರೆದೊಯ್ದ ತಂದೆ ಅಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ನಡೆಸಿ ಬಳಿಕ ಮಗಳನ್ನು ಹತ್ಯೆ ಮಾಡಿದ್ದಾನೆ. ಈ ಕುರಿತು ರಾಟಿಬಾದ್ ಠಾಣೆ ಅಧಿಕಾರಿ ಸುದೇಶ್ ತಿವಾರಿ …
Read More »