ಬೆಂಗಳೂರು: ತುಮಕೂರಿನಿಂದ ಬೆಂಗಳೂರಿಗೆ ಬಂದು ಸಾಲು ಸಾಲು ದ್ವಿಚಕ್ರ ವಾಹನಗಳನ್ನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ತುಮಕೂರಿನ ಗುಬ್ಬಿ ನಿವಾಸಿ ಶ್ರೀನಿವಾಸ್ ಬಂಧಿತ ಆರೋಪಿ. ಕಳೆದ ಕೆಲ ವರ್ಷಗಳ ಹಿಂದೆ ಶ್ರೀನಿವಾಸನನ್ನ ತೊರೆದು ಪತ್ನಿ ದೂರಾಗಿದ್ದಳು. ಖರ್ಚಿಗೆ ಹಣವಿಲ್ಲದೆ ಕಳ್ಳತನಕ್ಕಾಗಿ ತುಮಕೂರಿನಿಂದ ಬಸ್ ಹತ್ತಿ ಬೆಂಗಳೂರಿಗೆ ಬರುತ್ತಿದ್ದ ಆರೋಪಿ, ನೇರವಾಗಿ ಕಾಮಾಕ್ಷಿಪಾಳ್ಯಕ್ಕೆ ತೆರಳುತ್ತಿದ್ದ. ಗೇರ್ ವಾಹನಗಳನ್ನ ಓಡಿಸಲು ಬಾರದೇ ಇದ್ದಿದ್ರಿಂದ ಮೊಪೆಡ್, ಸ್ಕೂಟರ್ ಗಳನ್ನೇ …
Read More »ಹಿಂದೂಪರ ಸಂಘಟನೆ ಕಾರ್ಯರ್ತರಿಂದ ಮುಸ್ಲಿಂ ವ್ಯಾಪಾರಿಗಳ ಕಲ್ಲಂಗಡಿ ನಾಶ: ಭಯೋತ್ಪಾದಕರಿಗೂ, ಇವರಿಗೂ ವ್ಯತ್ಯಾಸವಿಲ್ಲ ಎಂದ ಎಚ್ ಡಿಕೆ
ಬೆಂಗಳೂರು: ಹಿಂದೂಪರ ಸಂಘಟನೆ ಕಾರ್ಯರ್ತರಿಂದ ಮುಸ್ಲಿಂ ವ್ಯಾಪಾರಿಗಳ ಕಲ್ಲಂಗಡಿ ನಾಶ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ಕಿಡಿಕಾರಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು, ಭಯೋತ್ಪಾದಕರಿಗೂ, ಇವರಿಗೂ ವ್ಯತ್ಯಾಸವಿಲ್ಲ ಎಂದು ಹೇಳಿದ್ದಾರೆ.ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನುಗ್ಗೆಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ರಾಮಭಕ್ತರ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮುಸ್ಲಿಮರ ಅಂಗಡಿಗಳನ್ನು ನಾಶಪಡಿಸಿ, ಅವರು ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು …
Read More »ಕಿಸಾನ್ ಸಮ್ಮಾನ್: ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್
ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವ ಅವಧಿಯನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಮೇ 22 ರವರೆಗೆ ರೈತರು ಕಿಸಾನ್ ಸಮ್ಮಾನ್ ಯೋಜನೆಗೆ ಇ -ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ. ಇದುವರೆಗೆ ಕಿಸಾನ್ ಸಮ್ಮಾನ್ ಪೋರ್ಟಲ್ ಮೂಲಕ ನಡೆಸಲಾಗುತ್ತಿದ್ದ ಇ -ಕೆವೈಸಿ ಪ್ರಕ್ರಿಯೆ ಸ್ಥಗಿತಗೊಂಡಿದೆ. ರೈತರು ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ತೆರಳಿ ಇ -ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಇ-ಕೆವೈಸಿ ಮಾಡಿಸದ ರೈತರ ಖಾತೆಗೆ ಕಿಸಾನ್ ಸಮ್ಮಾನ್ …
Read More »ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನೀಲ್ ಸಂಕ ಆಯ್ಕೆ, ಕಿರಣಗೆ ಕೈತಪ್ಪಿದ ಟಿಕೆಟ್
ಬೆಳಗಾವಿ: ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳನ್ನು ಒಳಗೊಂಡ ವಾಯವ್ಯ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿಲ್ಲೆಯ ಅಥಣಿಯ ಸುನೀಲ ಸಂಕ ಅವರಿಗೆ ಟಿಕೆಟ್ ನೀಡಲಾಗಿದೆ. ಅವರು ವಕೀಲರೂ ಹೌದು. ಪಕ್ಷದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದಾರೆ. ಕೆಎಲ್ಇ ನಿರ್ದೇಶಕ ಡಾ.ವಿ.ಎಸ್. ಸಾಧುನವರ ಅವರ ಪುತ್ರ ಕಿರಣ ಸಾಧುನವರ ಅವರು ಟಿಕೆಟ್ಗಾಗಿ ಪ್ರಯತ್ನಿಸಿದ್ದರು. ಕೆಲವು ತಿಂಗಳಿಂದ ಸಾಮಾಜಿಕ …
Read More »ನಮಗೆ ಸ್ವಂತ ಮನೆ, ರೇಷನ್ ಕಾರ್ಡ್, ಆಧಾರ್ ಕಾರ್ಡ್ ಯಾವುದೂ ಇಲ್ಲ: ಸಚಿವ ಕತ್ತಿ ಮುಂದೆ ಕಣ್ಣೀರಿಟ್ಟ ಮಹಿಳೆ
ಮಡಿಕೇರಿ(ಕೊಡಗು): ನಮಗೆ ಮನಗೆ ಸ್ವಂತ ಮನೆ ಇಲ್ಲ. ರೇಷನ್ ಕಾರ್ಡ್, ಆಧಾರ್ ಕಾರ್ಡ್ ಕೂಡ ಇಲ್ಲ. ಕೂಲಿ ಕೆಲಸ ಮಾಡಿ ನಮ್ಮನ್ನು ಸಾಕುತ್ತಿದ್ದ ಗಂಡ ಕೂಡ ಹುಲಿ ದಾಳಿಗೆ ಬಲಿಯಾಗಿದ್ದಾರೆ. ಇಬ್ಬರು ಮಕ್ಕಳಿದ್ದು ಮನೆಯಲ್ಲಿ ಊಟಕ್ಕೆ ಗತಿ ಇಲ್ಲ ಎಂದು ಕೊಡಗಿನಲ್ಲಿ ಹುಲಿ ದಾಳಿಗೆ ಬಲಿಯಾದ ವ್ಯಕ್ತಿಯ ಪತ್ನಿ, ಆರಣ್ಯ ಇಲಾಖೆ ಸಚಿವ ಉಮೇಶ್ ಕತ್ತಿ ಮುಂದೆ ಕಣ್ಣೀರಿಟ್ಟಿದ್ದಾರೆ. ಕೊಡಗು ಜಿಲ್ಲೆಯ ವೀರಾಜ್ಪೇಟೆ ತಾಲೂಕಿನ ರುದ್ರಗುಪ್ಪೆ ಗ್ರಾಮದಲ್ಲಿ ನರಭಕ್ಷಕ ಹುಲಿಯ …
Read More »ಬಿಜೆಪಿಯಲ್ಲಿ ಮುಖ್ಯಮಂತ್ರಿಯೂ ಟಿಕೆಟ್ ಕಳೆದುಕೊಳ್ಳುವ ಅಪಾಯ: ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು: ಕಾರ್ಯನಿರ್ವಹಣೆ, ಸುಧಾರಣೆ, ಬದಲಾವಣೆಗಳ ಮಾನದಂಡದ ಆಧಾರದಲ್ಲಿ ಹಾಲಿ ಸಚಿವರ ಟಿಕೆಟ್ ಅನ್ನು ಬಿಜೆಪಿ ತೀರ್ಮಾನಿಸಲಿದೆಯಂತೆ. ಈ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಸಚಿವರ ಜೊತೆಯಲ್ಲಿ ಮುಖ್ಯಮಂತ್ರಿಗಳೂ ಟಿಕೆಟ್ ಕಳೆದುಕೊಳ್ಳುವ ಅಪಾಯ ಇದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಈ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಸಚಿವರ ಜೊತೆಯಲ್ಲಿ ಮುಖ್ಯಮಂತ್ರಿಗಳೂ ಟಿಕೆಟ್ ಕಳೆದುಕೊಳ್ಳುವ ಅಪಾಯ ಇದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ ರಾಜ್ಯದಲ್ಲಿ ಮುಂದಿನ ವಿಧಾನಸಭಾ …
Read More »ರಾಜ್ಯರಾಜಧಾನಿಯಲ್ಲಿ ಮುಸ್ಲಿಂಮರಿಗೆ ಇನ್ನಿಲ್ಲದ ಸಂಕಷ್ಟ ಶುರು
ರಾಜ್ಯರಾಜಧಾನಿಯಲ್ಲಿ ಮುಸ್ಲಿಂಮರಿಗೆ ಇನ್ನಿಲ್ಲದ ಸಂಕಷ್ಟ ಶುರುವಾಗಿದೆ. ನಿತ್ಯ ಒಂದಲ್ಲ ಒಂದು ಸ್ವರೂಪ ಪಡೆಯುತ್ತಿರುವ ಧರ್ಮ ದಂಗಲ್ ನಿಂದ ಮುಸ್ಲಿಂರು ಹೈರಾಣಗಿ ಹೋಗಿದ್ದಾರೆ. ಈಗ ಶುರುವಾದ ವಿವಾದಗಳಿಂದ ಮುಸ್ಲಿಂ ಅಂಗಡಿಗಳಿಗೆ ಹಿಂದೂಗಳು ಹೋಗದಂತಾಗಿದೆ. ಹೀಗಾಗಿ ನಯಾಪೈಸೆ ವ್ಯಾಪಾರ ಇಲ್ಲದೇ ಮುಸ್ಲಿಂ ರು ಪಾರದಾಟ ನಡೆಸ್ತಿದ್ದಾರೆ.ಹಿಜಾಬ್ ವಿವಾದ ಶುರುವಾದಗಲಿಂದ ಮುಸ್ಲಿಂ ಸಮುದಾಯಕ್ಕೆ ತುಂಬ ಹೊಡೆತಬಿದ್ದಿದೆ. ಒಂದಾದ ನಂತರ ಮತ್ತೊಂದರಂತೆ ಶುರುವಾಗ್ತಿರುವ ವಿವಾದದಿಂದ ಮುಸ್ಲಿಂ ವ್ಯಾಪಾರಿಗಳು ಬೇಸೆತ್ತು ಹೋಗಿದ್ದಾರೆ. ಹಿಜಾಬ್ ಯಿಂದ ಶುರುವಾದ ವಿವಾದ …
Read More »ಐಪಿಎಲ್: ಬಿಸಿಸಿಐ ಹೊಸ ನಿಯಮ
ಮುಂಬಯಿ: ಈ ಬಾರಿಯ ಐಪಿಎಲ್ನಲ್ಲಿ ಬಿಸಿಸಿಐ ರೂಪಿಸಿರುವ ನಿಯಮವೊಂದು ತಡವಾಗಿ ತಿಳಿದು ಬಂದಿದೆ. ಪ್ರೇಕ್ಷಕರು ಬಾವುಟ ಗಳನ್ನು ಕೋಲಿನಲ್ಲಿ ಸಿಕ್ಕಿಸಿಕೊಂಡು ಸ್ಟೇಡಿಯಂಗೆ ಹೋಗುವಂತಿಲ್ಲ. ಈ ಕೋಲುಗಳನ್ನು ಉಪ ಯೋಗಿಸಿ ಪಂದ್ಯದ ವೇಳೆ ಅಭಿಮಾನಿಗಳು ಹೊಡೆದಾಡಿಕೊಳ್ಳಬಹುದು ಅಥವಾ ಮೈದಾನಕ್ಕೆ ಎಸೆಯಬಹುದು. ಇದರಿಂದ ಆಟಗಾರರಿಗೆ ಗಂಭೀರ ಗಾಯಗಳೂ ಆಗಬಹುದು. ಆದ್ದ ರಿಂದ ಕೋಲುಗಳನ್ನು ಒಯ್ಯಬೇಡಿ ಎಂದು ಬಿಸಿಸಿಐ ಹೇಳಿದೆ. ಇದರಿಂದ ಪಂದ್ಯದ ವೇಳೆ ಮೈದಾನದಲ್ಲಿ ಬಾವುಟಗಳನ್ನು ಹಾರಾಡಿಸುವ ಅಭಿಮಾನಿಗಳಿಗೆ ನಿರಾಶೆಯುಂಟಾಗಿದೆ. ಕೊರೊನಾ …
Read More »ಬೈಕ್ ವೀಲ್ಹಿಂಗ್ ಕ್ರೇಜ್ಗೆ ಆಸ್ಪತ್ರೆ ಸೇರಿದ ಪಾದಚಾರಿ
ಬೆಂಗಳೂರು: ಪುಂಡರ ವೀಲ್ಹಿಂಗ್ ಕ್ರೇಜ್ಗೆ ರಸ್ತೆಯಲ್ಲಿ ತಮ್ಮ ಪಾಡಿಗೆ ನಡದುಕೊಂಡು ಹೋಗುತ್ತಿದ್ದ ಮಹಿಳೆ ಆಸ್ಪತ್ರೆಗೆ ಸೇರಿರುವ ಘಟನೆ ಬೆಂಗಳೂರಿನ ಗೌರಿಪಾಳ್ಯದ ನರಸಿಂಹಸ್ವಾಮಿ ರಸ್ತೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಬುಧವಾರ ತಮ್ಮ ಪಾಡಿಗೆ ತಾವು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಬೈಕ್ ಸವಾರರಿಬ್ಬರು ವೀಲ್ಹಿಂಗ್ ಮಾಡುತ್ತ ಕಂಟ್ರೋಲ್ ಸಿಗದೇ ಗುದ್ದಿದ್ದಾರೆ. ಮಹಿಳೆಯ ಮೇಲೆ ಬೈಕ್ ಬಿದ್ದ ಪರಿಣಾಮವಾಗಿ ತಲೆ ಮತ್ತಿತರ ಭಾಗಗಳಿಗೆ ಪೆಟ್ಟು ಬಿದಿದ್ದೆ. ಸ್ಥಳೀಯರು ಸೇರುತ್ತಿದ್ದಂತೆ ಸ್ಥಳದಿಂದ …
Read More »ಕಾಂಗ್ರೆಸ್ ಮುಕ್ತ ಭಾರತ ಮಾಡೋಕೆ ಯಾರಪ್ಪನ ಕೈಯಲ್ಲೂ ಆಗುವುದಿಲ್ಲ
ವಿಜಯಪುರ: ಕಾಂಗ್ರೆಸ್ ಮುಕ್ತ ಭಾರತ ಮಾಡೋಕೆ ಯಾರಪ್ಪನ ಕೈಯಲ್ಲೂ ಆಗುವುದಿಲ್ಲ ಎಂದು ಯೂಥ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್ ತಿಳಿಸಿದರು. ಬೆಲೆ ಏರಿಕೆ ಖಂಡಿಸಿ ವಿಜಯಪುರದಲ್ಲಿ ಯುಥ್ ಕಾಂಗ್ರೆಸ್ನಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದೆ. ಕಾಂಗ್ರೆಸ್ ಪಕ್ಷದ ಇತಿಹಾಸ ಈ ದೇಶದ ಇತಿಹಾಸ. ಆ ಇತಿಹಾಸವನ್ನು ಯಾರ ಕೈಯಲ್ಲೂ ಬದಲಾಯಿಸೋಕೆ ಆಗಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಸ್ವಾತಂತ್ರ್ಯ ಹೋರಾಟ ಮಾಡುವಾಗ …
Read More »
Laxmi News 24×7