Breaking News

ಬೆಳಗಾವಿ: ನಿರ್ಜನ ಪ್ರದೇಶದ ಪಾಳುಮನೆಯೊಂದರಲ್ಲಿ ತಲೆ ಛಿದ್ರಗೊಂಡಿದ್ದ ಶವ ಪತ್ತೆ

ಬೆಳಗಾವಿ: ನಿರ್ಜನ ಪ್ರದೇಶದ ಪಾಳುಮನೆಯೊಂದರಲ್ಲಿ ತಲೆ ಛಿದ್ರಗೊಂಡಿದ್ದ ಶವ ಪತ್ತೆಯಾಗಿದೆ. ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಪ್ರಕರಣ ಇದಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪಕ್ಕದ ನಿರ್ಜನ ಪ್ರದೇಶದಲ್ಲಿ ಇರುವ ಪಾಳು ಬಿದ್ದಿರುವ ಮನೆಯಲ್ಲಿ ಶವವೊಂದು ಪತ್ತೆಯಾಗಿದ್ದು, ತಲೆ ಬಹುತೇಕ ಛಿದ್ರಗೊಂಡಿದೆ. ಆಟೋ ಚಾಲಕ ನೂಹಾನ್​ ಧಾರವಾಡಕರ್​ (23) ಎಂಬಾತ ಕೊಲೆಗೀಡಾದವ ಎಂಬುದು ಪತ್ತೆಯಾಗಿದೆ. ಈತ ಕಳೆದ …

Read More »

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಅಂತ್ಯ : ಸಹಜ ಸ್ಥಿತಿಗೆ ಜನಜೀವನ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ 10 ಗಂಟೆಯಿಂದ ಆರಂಭವಾಗಿದ್ದ ವೀಕೆಂಡ್ ಕರ್ಪ್ಯೂ ಗೆ ಇಂದು ಬೆಳಗ್ಗೆ 5 ಗಂಟೆಗೆ ಅಂತ್ಯವಾಗಿದ್ದು, ಜನಜೀವನ, ವ್ಯಾಪಾರ, ವಹಿವಾಟು ಸಹಜಸ್ಥಿತಿಗೆ ಬರಲಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಆರಂಭವಾಗಿದ್ದ ವೀಕೆಂಡ್ ಕರ್ಪ್ಯೂ ಇಂದು ಮುಂಜಾನೆ 5 ಗಂಟೆಗೆ ಅಂತ್ಯವಾಗಿದ್ದು, ಇಂದಿನಿಂದ ಶುಕ್ರವಾರ ರಾತ್ರಿಯವರೆಗೆ ಜನಜೀವನ ಸಹಜ ಸ್ಥಿತಿಯಲ್ಲಿ ಇರುತ್ತದೆ. ಈ ಅವಧಿಯಲ್ಲಿ ನೈಟ್ ಕರ್ಪ್ಯೂ …

Read More »

ಕೊರೊನಾ ಸ್ಪೋಟ: ತಮಿಳುನಾಡಿನಲ್ಲಿ ಸಂಪೂರ್ಣ ಲಾಕ್​ಡೌನ್​ ಘೋಷಣೆ..!

ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಗಳು ಈಗ ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿವೆ. ರಾಜ್ಯ ಸರ್ಕಾರಗಳು ಸಹ ಹಲವಾರು ಹೊಸ ನಿಯಮಗಳನ್ನು ರೂಪಿಸಿವೆ ಮತ್ತು ಜಿಲ್ಲಾವಾರು ನಿರ್ಬಂಧಗಳನ್ನು ಹೇರಿವೆ. ತಮಿಳುನಾಡಿನಲ್ಲಿ, ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ನಡುವೆ ಚೆನ್ನೈನಲ್ಲಿ ಇಂದು ಸಂಪೂರ್ಣ ಲಾಕ್ ಡೌನ್ ಹೇರಲಾಗಿದೆ. ರಾತ್ರಿ ಕರ್ಫ್ಯೂ, ಶಾಲಾ ಕಾಲೇಜುಗಳನ್ನು ಮುಚ್ಚುವುದು, ಕೆಲಸದ ಸ್ಥಳವನ್ನು ಅರ್ಧದಷ್ಟು ಕಡಿಮೆ ಮಾಡುವುದು, ಸಾರ್ವಜನಿಕ ಸಾರಿಗೆಯಲ್ಲಿ ಸೀಮಿತ ಸಂಖ್ಯೆಯ ಪ್ರಯಾಣಿಕರಂತಹ ಹಲವಾರು ಕ್ರಮಗಳನ್ನು …

Read More »

ಫಿರೋಝ್‌ ಪುರ ಭದ್ರತಾ ವೈಫಲ್ಯ: ಎಫ್‌ಐಆರ್‌ ನಲ್ಲಿ ಪ್ರಧಾನಿ ಮೋದಿಯವರ ಉಲ್ಲೇಖವಿಲ್ಲ;

ಹೊಸದಿಲ್ಲಿ, ಜ.9: ಪ್ರಧಾನಿ ನರೇಂದ್ರ ಮೋದಿಯವರು ಜ.5ರಂದು ಪಂಜಾಬಿಗೆ ಭೇಟಿ ನೀಡಿದ್ದ ಸಂದರ್ಭ ಉಂಟಾಗಿತ್ತೆನ್ನಲಾದ ಭದ್ರತಾ ವೈಫಲ್ಯದ ಕುರಿತು ಫಿರೋಝ್ಪುರದ ಕುಲಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ನಲ್ಲಿ ಹಲವಾರು ಲೋಪಗಳಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ.   ಘಟನೆಯು ಜ.5ರಂದು ನಡೆದಿತ್ತಾದರೂ ಜನರಲ್ ಡೈರಿ ಉಲ್ಲೇಖವನ್ನು ಜ.6ರಂದಷ್ಟೇ ದಾಖಲಿಸಲಾಗಿತ್ತು. ನಂತರ ಇನ್ಸ್ಪೆಕ್ಟರ್ ಬಲಬೀರ್ ಸಿಂಗ್ ಅವರ ದೂರಿನ ಮೇರೆಗೆ ಎಫ್‌ಐಆರ್ ಸಲ್ಲಿಸಲಾಗಿತ್ತು. ಆದರೆ ಎಫ್‌ಐಆರ್ನಲ್ಲಿ ಪ್ರಧಾನಿಯವರ ಬೆಂಗಾವಲು ವಾಹನಗಳನ್ನು ಉಲ್ಲೇಖಿಸಲಾಗಿಲ್ಲ. ತಾನು …

Read More »

ಆಸ್ತಿ ಖರೀದಿ, ನೋಂದಣಿದಾರರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ..!

ಬೆಂಗಳೂರು: ರಾಜ್ಯ ಸರ್ಕಾರವು ಆಸ್ತಿ ಖರೀದಿದಾರರಿಗೆ ಮತ್ತು ನೋಂದಣಿದಾರರಿಗೆ ಇದೀಗ ಸಿಹಿಸುದ್ದಿ ನೀಡಿದ್ದು, ರೆವಿನ್ಯೂ ಮನೆಯ ಗೈಡೆನ್ಸ್‌ ವ್ಯಾಲ್ಯೂ ಶೆ.10ರಷ್ಟು ಕಡಿಮೆ ಮಾಡಿದೆ. ಜಮೀನು, ಸೈಟು, ಪ್ಲ್ಯಾಟ್‌ ಖರೀದಿಗೆ ರಿಜಿಸ್ಟ್ರೇಷನ್‌ ಶುಲ್ಕಶೇಕಡಾ 10ರಷ್ಟು ಕಡಿಮೆ ಮಾಡಲಾಗಿದೆ.   ಆಸ್ತಿ ವಹಿವಾಟು ಸಂಬಂಧಿಸಿದಂತೆ, ಯಾರು ಖರೀದಿ ಮಾಡ್ತಾರೆ ಅಂತವರಿಗೆ ರೆವಿನ್ಯೂ, ಸೈಟ್, ಫ್ಲಾಟ್ ಗೈಡೆನ್ಸ್ ವ್ಯಾಲ್ಯು 10% ಕಡಿಮೆ ಮಾಡಲಾಗುತ್ತೆ. ಅಗ್ರಿಮೆಂಟ್ ಮಾಡಿರೋ, ರಿಜಿಸ್ಟ್ರೇಷನ್ ಮಾಡಿಸುವರಿಗೆ ಇದು ಅನ್ವಯಸಲಾಗಿದೆ. ಆದ್ರೆ, ಮೂರು ತಿಂಗಳು …

Read More »

ಗೋಕಾಕ್​​​ ತಾಲೂಕಿನ ಘಟಪ್ರಭದಲ್ಲಿ ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ಎರಗಿರುವ ನಾಯಿ

ಬೆಳಗಾವಿ : ಮೂವರು ಮಕ್ಕಳು ಸೇರಿ ಐವರನ್ನು ಕಚ್ಚಿ ಗಾಯಗೊಳಿಸಿದ ಶ್ವಾನವನ್ನೇ ಸ್ಥಳೀಯರು ಹತ್ಯೆಗೈದಿರುವ ಘಟನೆ ಜಿಲ್ಲೆಯ ಗೋಕಾಕ್​​​ ತಾಲೂಕಿನ ಘಟಪ್ರಭದಲ್ಲಿ ನಡೆದಿದೆ. ಇಂದು ಬೆಳಗ್ಗೆ ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ಎರಗಿರುವ ನಾಯಿ ತಲೆ, ಕಣ್ಣಿಗೆ ಮನಬಂದಂತೆ ಕಚ್ಚಿದೆ. ಬಳಿಕ ಸ್ಥಳೀಯರ ಮೇಲೂ ನಾಯಿ ದಾಳಿ ಮಾಡಿದೆ. ಕಾಲು, ಕೈ ಗಂಭೀರವಾಗಿ ಕಚ್ಚಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಜಮಾವಣೆಗೊಂಡ ಸ್ಥಳೀಯರು ದೊಣ್ಣೆಯಿಂದ ಹೊಡೆದು ಕೊಲೆಗೈದಿದ್ದಾರೆ. ಗಾಯಗೊಂಡ ಮಕ್ಕಳು …

Read More »

ಜ.12ರಿಂದ ‘ನೀಟ್ ಪಿಜಿ ಕೌನ್ಸಿಲಿಂಗ್’ ಆರಂಭ – ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ ಘೋಷಣೆ | NEET-PG counselling

ನವದೆಹಲಿ: 2021-22ನೇ ಸಾಲಿನ ನೀಟ್ ಪಿಜಿ ಕೌನ್ಸಿಲಿಂಗ್ ( NEET-PG counselling ) ಅನ್ನು ಜನವರಿ 12ರಿಂದ ಆರಂಭಿಸುತ್ತಿರೋದಾಗಿ ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ ( Union health minister Mansukh Mandaviya ) ಘೋಷಿಸಿದ್ದಾರೆ.   ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಇಂದು ಮಾಹಿತಿ ನೀಡಿದಂತ ಅವರು, 2021-2022ರ ನೀಟ್-ಪಿಜಿ ಕೌನ್ಸಿಲಿಂಗ್ ಅನ್ನು ಜನವರಿ 12ರಿಂದ ಪ್ರಾರಂಭವಾಗಲಿದೆ ಎಂದು ಹೇಳಿದರು.   ಅಖಿಲ ಭಾರತ ಕೋಟಾ ಸ್ಥಾನಗಳಲ್ಲಿ …

Read More »

ಬೆಳಗಾವಿ ಗಡಿಭಾಗದ ಚೆಕ್ ಪೋಸ್ಟ್‌ಗಳಿಗೆ ಡಿಸಿ ಭೇಟಿ : ಕಟ್ಟುನಿಟ್ಟಿನ ತಪಾಸಣೆ ಮಾಡುವಂತೆ ಸೂಚನೆ

ಬೆಳಗಾವಿ : ಮಹಾರಾಷ್ಟ್ರ ರಾಜ್ಯಕ್ಕೆ ಹೊಂದಿಕೊಂಡಿರುವ ಕಾಗವಾಡ ತಾಲೂಕಿನ ಚೆಕ್ ಪೋಸ್ಟ್​​​ಗಳಿಗೆ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಭೇಟಿ ನೀಡಿ ಭದ್ರತಾ ಕ್ರಮಗಳ ಬಗ್ಗೆ ಪರಿಶೀಲಿಸಿದರು. ಈ ವೇಳೆ ಚೆಕ್ ಪೋಸ್ಟ್‌ನಲ್ಲಿರುವ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗೆ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ ಮಾಡುವಂತೆ ಸೂಚಿಸಿದರು.   ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೋವಿಡ್ ಹಾಗೂ ಒಮಿಕ್ರಾನ್ ಸೋಂಕಿತ ಪ್ರಕರಣ ಹೆಚ್ಚಳವಾಗುತ್ತಿವೆ‌. ಹೀಗಾಗಿ, ಮಹಾರಾಷ್ಟ್ರದಿಂದ ಆಗಮಿಸುವ ಜನರ ಅನವಶ್ಯಕ ಓಡಾಟಕ್ಕೆ …

Read More »

ಅಶ್ಲೀಲ ವಿಡಿಯೋ ಹರಿಬಿಡುವುದಾಗಿ ಸಚಿವ ಸೋಮಶೇಖರ್ ಪುತ್ರನಿಗೆ ಬ್ಲಾಕ್​ಮೇಲ್ : ಆರೋಪಿ ಬಂಧನ

ಬೆಂಗಳೂರು : ಅಶ್ಲೀಲ ವಿಡಿಯೋ ಬಿಡುಗಡೆ ಮಾಡುವುದಾಗಿ ಸಹಕಾರ ಸಚಿವ ಎಸ್.ಟಿ‌.ಸೋಮಶೇಖರ್ ಪುತ್ರನಿಗೆ ಕರೆ‌ ಮಾಡಿ ಬೆದರಿಸಿ ಹಣಕ್ಕಾಗಿ ಬೇಡಿಕೆ ಇಟ್ಟ ಆರೋಪದಡಿ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸೋಮಶೇಖರ್ ಪುತ್ರ ನಿಶಾಂತ್ ನೀಡಿದ ದೂರಿನ ಮೇರೆಗೆ ಜ್ಯೋತಿಷಿಯೊಬ್ಬರ ಪುತ್ರ ರಾಹುಲ್ ಭಟ್ ಎಂಬಾತನನ್ನು ಬಂಧಿಸಲಾಗಿದೆ. ಐದು ದಿನಗಳ ಕಾಲ ಪೊಲೀಸರು ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.   ಕಳೆದ ತಿಂಗಳು 25ರಂದು ನಿಶಾಂತ್ ಸೈಬರ್ ಕ್ರೈಂ ಪೊಲೀಸರಿಗೆ ದೂರು …

Read More »

ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಿಸಲು ಸಿಎಂ ಸೂಚನೆ

ಬೆಂಗಳೂರು,ಜ.9- ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪಾದಯಾತ್ರೆ ನಡೆಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಿಸಲು ರಾಮನಗರ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.ಇಂದಿನ ಪಾದಯಾತ್ರೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ ಅವರೆಲ್ಲರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ದೂರು ದಾಖಲಿಸುವಂತೆ ಜಿಲ್ಲಾಡಳಿತಕ್ಕೆ ಆದೇಶಿಸಿದ್ದಾರೆ. ನಾವು ಕಾಂಗ್ರೆಸ್‍ನವರ ಪಾದಯಾತ್ರೆಯನ್ನು ತಡೆಯುವುದಿಲ್ಲ. ಆದರೆ ನಿಯಮ ಉಲ್ಲಂಘಿಸಿದವರ ವಿರುದ್ಧ ದೂರು ದಾಖಲಿಸದೆ ಬಿಡುವುದಿಲ್ಲ. ಕಾನೂನು ಪ್ರಕಾರವಾಗಿ ಜಿಲ್ಲಾಡಳಿ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. ರೇಸ್‍ಕೋರ್ಸ್ ರಸ್ತೆಯ …

Read More »