ಬೆಳಗಾವಿ: ನ್ಯೂಯಾರ್ಕ್ನ ಭಾರತೀಯ ರಾಯಭಾರಿ ಕಚೇರಿಯಲ್ಲಿ ಮೇ 21ರಂದು ನಡೆದ ಸಮಾರಂಭದಲ್ಲಿ ಅಮೆರಿಕದ ಇಂಡೊ-ಅಮೆರಿಕನ್ ಪ್ರೆಸ್ ಕ್ಲಬ್ನಿಂದ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರಿಗೆ ‘ಜೀವಮಾನ ಸಾಧನೆ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಉತ್ತರ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಗ್ರಾಮೀಣ ಜನರಿಗೆ ಗುಣಮಟ್ಟದ ಶಿಕ್ಷಣ, ಆರೋಗ್ಯ ಸೇವೆ ಒದಗಿಸುತ್ತಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಭಾರತೀಯ ರಾಯಭಾರಿ ಕಚೇರಿಯ ಕನ್ಸೂಲ್ ಜನರಲ್ ರಣಧೀರ ಜೈಸ್ವಾಲ್ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಭಾರತೀಯ …
Read More »ದುಬಾರಿಯಾಗಲಿವೆ ಎಲ್ಲಾ ಮೊಬೈಲ್ ರೀಚಾರ್ಜ್ ಪ್ಲಾನ್ಗಳು
ನವದೆಹಲಿ, ಮೇ 24: ಕಳೆದ ವರ್ಷವಷ್ಟೇ ಶೇ. 25ರವರೆಗೂ ರೀಚಾರ್ಜ್ ಪ್ಲಾನ್ ದರಗಳನ್ನು ಏರಿಸಿದ್ದ ಟೆಲಿಕಾಂ ಆಪರೇಟರ್ಗಳು ಈಗ ಒಂದೇ ವರ್ಷದ ಅಂತರದಲ್ಲಿ ಮತ್ತೊಮ್ಮೆ ಭಾರೀ ಏರಿಕೆಗೆ ಮುಂದಾಗುತ್ತಿವೆ. ಮುಂದಿನ ದಿನಗಳಲ್ಲಿ ಮೊಬೈಲ್ ರೀಚಾರ್ಜ್ ಪ್ಲಾನ್ಗಳು ಶೇ. 10-12ರಷ್ಟು ದುಬಾರಿಯಾಗಲಿವೆ. ನವೆಂಬರ್ನಲ್ಲಿ ಬರಲಿರುವ ದೀಪಾವಳಿ ಹಬ್ಬದಷ್ಟರಲ್ಲಿ ತಮ್ಮ ಪ್ರೀಪೇಯ್ಡ್ ದರಗಳನ್ನು ಏರಿಸಲು ಭಾರ್ತಿ ಏರ್ಟೆಲ್, ರಿಲಾಯನ್ಸ್ ಜಿಯೋ ಮತ್ತು ವೊಡಫೋನ್ ಐಡಿಯಾ ಸಂಸ್ಥೆಗಳು ನಿರ್ಧರಿಸಿವೆ. 2021ರ ನವೆಂಬರ್ ತಿಂಗಳಲ್ಲೇ ಈ …
Read More »ಕಮಿಷನ್ ಆರೋಪ: ಮಂತ್ರಿಯನ್ನೇ ವಜಾಗೊಳಿಸಿದ ಪಂಜಾಬ್ ಸಿಎಂ! ದೇಶವೇ ಬೆರಗು
ಪಂಜಾಬ್ನಲ್ಲಿ ಒಂದು ಅಪರೂಪದ ಬೆಳವಣಿಗೆಯಾಗಿದೆ. ಕಮಿಷನ್ ತಗೆದುಕೊಂಡ ಆರೋಪದ ಮೇಲೆ ಅಲ್ಲಿನ ಸಚಿವರೊಬ್ಬರನ್ನ ವಜಾಗೊಳಿಸಲಾಗಿದೆ. ವಿಶೇಷ ಅಂದ್ರೆ ಖುದ್ದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮನ್ ಈ ಕ್ರಮ ಕೈಗೊಂಡಿದ್ದು ಆರೋಪಿ ಮಂತ್ರಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಂದ್ಹಾಗೆ ಈ ರೀತಿ ಕಮಿಷನ್ ಕೇಳಿ ತಮ್ಮ ಸರ್ಕಾರದಿಂದಲೇ ವಜಾಗೊಂಡವರು ಪಂಜಾಬ್ನ ಆರೋಗ್ಯ ಮಂತ್ರಿ ವಿಜಯ್ ಸಿಂಗ್ಲಾ. ಟೆಂಡರ್ನಲ್ಲಿ ಒಂದು ಪರ್ಸೆಂಟ್ ಕಮಿಷನ್ ಕೇಳಿದ್ರು ಅಂತ ಅಲ್ಲಿನ ಅಧಿಕಾರಿಗಳು ಹಿಂದಿನ ವಾರವಷ್ಟೇ ಸಿಎಂ …
Read More »ಯಡಿಯೂರಪ್ಪ ಮತ್ತು ಪಕ್ಷದ ನಡುವಿನ ಶೀತಲ ಸಮರ ಮತ್ತಷ್ಟು ಬಿಗಡಾಯಿಸುವಂತೆ ಮಾಡುವ ಸಾಧ್ಯತೆ.?
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ವಿಧಾನ ಪರಿಷತ್ ಟಿಕೆಟ್ ಕೈ ತಪ್ಪಿದ್ದು, ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವಿಜಯೇಂದ್ರಗೆ ಟಿಕೆಟ್ ನಿರಾಕರಣೆ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್ ಕುಟುಂಬ ರಾಜಕಾರಣಕ್ಕೆ ಬೆಂಬಲ ನೀಡುವುದಿಲ್ಲ ಎನ್ನುವ ತನ್ನ ನಿರ್ಧಾರವನ್ನು ಮತ್ತೆ ಪ್ರಕಟಿಸುವ ಕೆಲಸ ಮಾಡಿದೆ. ಹಲವು ರೀತಿ ವ್ಯಾಖ್ಯಾನ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಅಧಿಕೃತವಾಗಿ …
Read More »ಮೇ 25ಕ್ಕೆ ಭಾರತ್ ಬಂದ್: ಬಂದ್ಗೆ ಕರೆ !
ಅದೇ ವೇಳೆ ಚುನಾವಣಾ ಸಮಯದಲ್ಲಿ ಇವಿಎಂ ಬಳಕೆ ಮತ್ತು ಖಾಸಗಿ ವಲಯಗಳಲ್ಲಿ ಎಸ್ಸಿ/ಎಸ್ಟಿ/ಒಬಿಸಿಗೆ ಮೀಸಲಾತಿ ವಿಚಾರದ ವಿರುದ್ಧವೂ ಬಿಎಎಂಸಿಇಎಫ್ ಪ್ರತಿಭಟನೆ ನಡೆಸುತ್ತಿದೆ.ಅಖಿಲ ಭಾರತ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನೌಕರರ ಒಕ್ಕೂಟ (BAMCEF ) ಮೇ 25 ರಂದು ಭಾರತ್ ಬಂದ್ಗೆ ( Bharat Bandh ) ಕರೆ ನೀಡಿದೆ. ಇತರೆ ಹಿಂದುಳಿದ ವರ್ಗಗಳ (OBC) ಜಾತಿ ಆಧಾರಿತ ಜನಗಣತಿಯನ್ನು ಕೇಂದ್ರ ಸರ್ಕಾರ ನಡೆಸದಿರುವುದನ್ನು ವಿರೋಧಿಸಿ ಫೆಡರೇಶನ್ ಕ್ರಮಕ್ಕೆ ಒತ್ತಾಯಿಸಿದೆ. ಅದೇ ವೇಳೆ ಚುನಾವಣಾ …
Read More »ಮಕ್ಕಳ ಅಕ್ರಮ ಸಾಗಾಟ ಪ್ರಕರಣ: ಆರೋಪಿ ಸ್ಟಾಪ್ ನರ್ಸ್ ಅರೆಸ್ಟ್,
ವಿಜಯಪುರ: ಮಕ್ಕಳ ಅಕ್ರಮ ( Illegal ) ಸಾಗಾಟ ( Trafficking ) ಪ್ರಕರಣ ಪತ್ತೆ ಸಂಬಂಧ ಓರ್ವ ಮಹಿಳಾ ಆರೋಗ್ಯ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಡಚಣ ತಾಲೂಕಿನ ಜಿಗಜಿವಣಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ಟಾಪ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಜಯಮಾಲಾ ಬಂಧಿತ ಆರೋಪಿಯಾಗಿದ್ದಾಳೆ. ಈಕೆ ವಿಜಯಪುರ ನಗರದ ಅಥಣಿ ಗಲ್ಲಿ ವಾಸಿಯಾಗಿದ್ದಾಳೆ. ಐದುಮಕ್ಕಳ ಸಾಕಾಣಿಕೆಹಾಗೂ ಸಾಗಾಟ ಮಾಡಿದ್ದ ಆರೋಪದ ಮೇಲೆ ವಿಜಯಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಾಯಿಯಿಂದ ಪರಿತ್ಯಕವಾದ, …
Read More »ಪಂಜಾಬ್ ಆರೋಗ್ಯ ಸಚಿವ: ಸಂಪುಟದಿಂದ ವಜಾ, ಅರೆಸ್ಟ್!
ಭ್ರಷ್ಟಾಚಾರದ ಆರೋಪದ ಮೇಲೆ ಆರೋಗ್ಯ ಸಚಿವ ವಿಜಯ್ ಸಿಂಘ್ಲಾ ಅವರನ್ನು ಪಂಜಾಬ್ ಮುಖ್ಯಮಂತ್ರಿ ಭಗವತ್ ಮನ್ ವಜಾಗೊಳಿಸಿದ ಬೆನ್ನಲ್ಲೇ ಪೊಲೀಸರು ಬಂಧಿಸಿದ್ದಾರೆ. ಪಂಜಾಬ್ ನಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಆಮ್ ಆದ್ಮಿ ೨ ತಿಂಗಳು ಪೂರೈಸುವ ಮುನ್ನವೇ ಭ್ರಷ್ಟಾಚಾರ ಆರೋಪದಿಂದ ತತ್ತರಿಸಿದ್ದು, ೨ ತಿಂಗಳಲ್ಲೇ ಮೊದಲ ವಿಕೆಟ್ ಪತನಗೊಂಡಂತಾಗಿದೆ. ಗುತ್ತಿಗೆದಾರರಿಂದ ಶೇ.೧ರಷ್ಟು ಲಂಚ ಕೇಳಿದ್ದಾರೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಆರೋಗ್ಯ ಸಚಿವ ವಿಜಯ್ ಸಿಂಘ್ಲಾ ಅವರನ್ನು …
Read More »5 ರೂಪಾಯಿ ಡಾಕ್ಟರ್ ಎಂದೇ ಖ್ಯಾತರಾದ ಡಾ.ಶಂಕರೇಗೌಡರಿಗೆ ಹೃದಯಾಘಾತ!?
ಮಂಡ್ಯ: ಐದು ರೂಪಾಯಿ ಡಾಕ್ಟರ್ ಎಂದೇ ಖ್ಯಾತರಾಗಿರುವ ಡಾ.ಶಂಕರೇಗೌಡರಿಗೆ ಲಘು ಹೃದಯಾಘಾತವಾಗಿದೆ. ಸದ್ಯ ಅವರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇತ್ತೀಚಿಗಿನ ವರದಿ ಪ್ರಕಾರ ಶಂಕರೇಗೌಡರ ಆರೋಗ್ಯ ಸುಧಾರಿಸಿಕೊಳ್ಳುತ್ತಿದೆ. ಅಪೊಲೋದ ತಜ್ಞ ವೈದ್ಯರಿಂದ ಚಿಕಿತ್ಸೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ. ಒಂದು ವಾರದ ಬಳಿಕ ಬೈಪಾಸ್ ಸರ್ಜರಿ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಡಾ. ಶಂಕರೇಗೌಡ ಅವರು ಮಂಡ್ಯದ ಚರ್ಮ ರೋಗ ತಜ್ಞರಾಗಿದ್ದು, ಭಾರೀ ಜನಪ್ರಿಯತೆಯನ್ನ ಗಳಿಸಿದ್ದಾರೆ. ಮಂಡ್ಯದಲ್ಲಿರುವ …
Read More »ಮನೆ, ಕಟ್ಟಡ ನಿರ್ಮಿಸುವವರಿಗೆ ಇಲ್ಲಿದೆ ಸಿಹಿ ಸುದ್ದಿ
ಮನೆ ನಿರ್ಮಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ನಿರಂತರ ಬೆಲೆ ಏರಿಕೆಯಿಂದ ಮಾರುಕಟ್ಟೆಯಲ್ಲಿ ಹಣದುಬ್ಬರ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಕಬ್ಬಿಣ, ಪ್ಲಾಸ್ಟಿಕ್, ಉಕ್ಕು ವಸ್ತುಗಳ ಮೇಲೆ ಆಮದು ಸುಂಕವನ್ನು ಮನ್ನಾ ಮಾಡಿ, ರಫ್ತು ಸುಂಕ ಹೆಚ್ಚಿಸಿದೆ. ಇದರ ಬೆನ್ನಲ್ಲೇ ಕೆಲವು ರಾಜ್ಯ ಸರ್ಕಾರಗಳು ವ್ಯಾಟ್ ಕಡಿಮೆ ಮಾಡಿದ್ದು, ಇಂಧನ ದರ ಇಳಿಕೆಯಾಗಿದೆ. ಇದರೊಂದಿಗೆ ಕಚ್ಚಾ ವಸ್ತುಗಳ ದರವೂ ಕೂಡ ಸಹಜವಾಗಿ ಇಳಿಕೆಯಾಗುತ್ತಿದೆ. ಮನೆ ನಿರ್ಮಿಸುವ ಕಟ್ಟಡ ಸಾಮಗ್ರಿಗಳಾದ …
Read More »ನೇಮಕಾತಿಗೆ ಗ್ರಹಣ, ಅಭ್ಯರ್ಥಿಗಳು ಹೈರಾಣ
ಬೆಳಗಾವಿ: ‘ನೇಮಕ ಪ್ರಕ್ರಿಯೆ ಆರಂಭಗೊಂಡು ನಾಲ್ಕು ವರ್ಷ ಕಳೆದರೂ ಮುಗಿಯುವ ಸೂಚನೆಗಳಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ವಿಚಾರಿಸಿದರೆ ನಿಖರವಾಗಿ ಮಾಹಿತಿಯನ್ನೂ ನೀಡುತ್ತಿಲ್ಲ. ದಿಕ್ಕೇ ತೋಚದಂತಾಗಿದೆ…’ -ಇದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಲ್ಲಿ (ಕೆಎಸ್ಆರ್ಟಿಸಿ) ಖಾಲಿ ಇರುವ ತಾಂತ್ರಿಕ ಸಹಾಯಕರು ಹಾಗೂ ಭದ್ರತಾ ರಕ್ಷಕ ಹುದ್ದೆಗಳಿಗೆ ಪರೀಕ್ಷೆ ಬರೆದಿರುವ ಉದ್ಯೋಗ ಆಕಾಂಕ್ಷಿಗಳ ಅಳಲು. ಕೋವಿಡ್-19 ಸಂಕಷ್ಟದಿಂದಾಗಿ ಉಂಟಾಗಿರುವ ಆರ್ಥಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಈ ನೇಮಕಾತಿ ಪ್ರಕ್ರಿಯೆ ತಾತ್ಕಾಲಿಕವಾಗಿ …
Read More »
Laxmi News 24×7