Breaking News

ಬೆಳಗಾವಿ ಜಿಲ್ಲೆಯಲ್ಲೂ ಇಂದು45 ಮಂದಿಗೆ ಕೊರೊನಾ ಸೋಂಕು ದೃಢ

ಬೆಳಗಾವಿ ಜಿಲ್ಲೆಯಲ್ಲೂ ಇಂದು ಹೆಮ್ಮಾರಿ ಕೊರೊನಾ ಅಟ್ಟಹಾಸ ಮೆರೆದಿದ್ದು. ಇಂದು ಹೊಸದಾಗಿ ಜಿಲ್ಲೆಯಲ್ಲಿ 45 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. ಹೌದು ಬೆಳಗಾವಿ ನಗರ ಮತ್ತು ತಾಲೂಕಿನಲ್ಲಿಯೇ 36 ಕೇಸ್‍ಗಳು ಕಂಡು ಬಂದಿವೆ. ಅದೇ ರೀತಿ ಬೈಲಹೊಂಗಲ-04, ಚಿಕ್ಕೋಡಿ-02, ಹುಕ್ಕೇರಿ-01, ಖಾನಾಪುರ-01, ಸವದತ್ತಿ-01 ಕೊರೊನಾ ಪಾಸಿಟಿವ್ ಕೇಸ್‍ಗಳು ಕಾಣಿಸಿಕೊಂಡಿವೆ.

Read More »

ನೀ ಆ ಮನೇಲಿ ಏನೇನ್​ ಮಾಡ್ದೆ ಅಂತಾ ಗೊತ್ತು. ಬಿಜೆಪಿ ಶಾಸಕ-ಮಹಿಳಾ ಅಧಿಕಾರಿ ನಡುವಿನ ಸ್ಫೋಟಕ ಸಂಭಾಷಣೆ

ಕೊಪ್ಪಳ: ಕನಕಗಿರಿ ಶಾಸಕ ಬಸವರಾಜ ದಡೆಸುಗೂರ ಮತ್ತು ಕನಕಗಿರಿ ಸಿಡಿಪಿಒ ಮಹಿಳಾ ಅಧಿಕಾರಿ ಇಬ್ಬರೂ ಮದುವೆ ಆಗಿದ್ದಾರೆ ಎಂಬ ಸುದ್ದಿ ಜಿಲ್ಲಾದ್ಯಂತ ಹರಡಿ ಚರ್ಚೆಗೆ ಗ್ರಾಸವಾಗಿತ್ತು. ಈ ಸುದ್ದಿ ನಿಜವೇ ಅಥವಾ ಸುಳ್ಳೇ? ಎಂಬುದಕ್ಕೆ ಉತ್ತರವೇ ಸಿಕ್ಕಿಲ್ಲ. ಇದರ ಬೆನ್ನಲ್ಲೇ ಶಾಸಕರು ಮತ್ತು ಮಹಿಳಾ ಅಧಿಕಾರಿ ಇಬ್ಬರೂ ಫೋನಿನಲ್ಲಿ ಮಾತನಾಡಿದ್ದಾರೆ ಎನ್ನಲಾದ ಸಂಭಾಷಣೆ ವೈರಲ್​ ಆಗಿದ್ದು, ಭಾರೀ ಸಂಚಲನ ಮೂಡಿಸಿದೆ. ಶಾಸಕರ ಜತೆ ದೂರವಾಣಿ ಮೂಲಕ ಸುದೀರ್ಘ ವಾಗ್ವಾದ ನಡೆಸಿದ್ದ ಮಹಿಳಾ …

Read More »

ರಾಜ್ಯದಲ್ಲಿ ಮತ್ತೆ ‘ಶಾಲಾ-ಕಾಲೇಜು’ ಬಂದ್.? ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?

ಕಲಬುರ್ಗಿ: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ( Corona Case ) ಸಂಖ್ಯೆ ಹೆಚ್ಚಳ ಹಿನ್ನಲೆಯಲ್ಲಿ ಸೆಮಿ ಲಾಕ್ ಡೌನ್, ವೀಕೆಂಡ್ ಕರ್ಪ್ಯೂ ಜಾರಿಗೆ ಸರ್ಕಾರ ನಿರ್ಧಾರವನ್ನು ಕೈಗೊಳ್ಳಲಿದೆ ಎನ್ನಲಾಗುತ್ತಿದೆ. ಇಂದಿನ ತಾಂತ್ರಿಕ ಸಲಹಾ ಸಮಿತಿಯ ತಜ್ಞರ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಚರ್ಚಿಸಿ, ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ರಾಜ್ಯದಲ್ಲಿ ಮತ್ತೆ ಶಾಲಾ-ಕಾಲೇಜು ಬಂದ್ ( School and College Close ) …

Read More »

ರಾಜ್​ ಶೆಟ್ಟಿಗೆ ಶಿವಣ್ಣ ಸರ್ಪ್ರೈಸ್ ಫೋನ್ ಕಾಲ್; ಶಿವ- ಶಿವ ಮಾತುಕತೆಯಲ್ಲಿ ಹೊರಬಿತ್ತು ಸಂತಸದ ವಿಚಾರ!

ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ನಟ ರಾಜ್ ಬಿ ಶೆಟ್ಟಿಗೆ ಕರೆ ಮಾಡಿ ಸರ್ಪ್ರೈಸ್ ನೀಡಿದ್ದಾರೆ. ಈ ವೇಳೆ ಅಭಿಮಾನಿಗಳಿಗೆ ಸಂತಸದ ವಿಚಾರವೊಂದು ಹೊರಬಿದ್ದಿದೆ.Garuda Gamana Vrishabha Vahana: ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ನಟ ರಾಜ್ ಬಿ ಶೆಟ್ಟಿಗೆ ಸರ್ಪ್ರೈಸ್ ಕರೆ ಮಾಡಿದ್ದಾರೆ. ತಮ್ಮ ಗುರುತನ್ನು ಹೇಳಿಕೊಳ್ಳದ ಶಿವಣ್ಣ, ಮಾಸ್ ಸ್ಟೈಲ್​ನಲ್ಲೇ ರಾಜ್ ಶೆಟ್ಟಿ ಕಾಲೆಳೆದಿದ್ದಾರೆ. ಮಂಗಳಾದೇವಿ ಗುಂಗಲ್ಲಿರುವ ರಾಜ್ ಕೂಡ ತಮ್ಮನ್ನು ಬಿಟ್ಟುಕೊಡದೇ ಸರಿಯಾಗಿಯೇ ಉತ್ತರ ಕೊಟ್ಟಿದ್ದಾರೆ. ಇಷ್ಟಕ್ಕೂ ಈ …

Read More »

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಕೊರೊನಾ ಸೋಂಕು

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ (Delhi Chief Minister Arvind Kejriwal) ಕೊರೊನಾ ಸೋಂಕು (Corona infection) ದೃಢಪಟ್ಟಿದೆ.   ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಅರವಿಂದ ಕೇಜ್ರಿವಾಲ್, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಜೊತೆ …

Read More »

ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ; ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ…? ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಕಲ್ಲು ಬಂಡೆಗಳನ್ನು ನುಗ್ಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ಡಿಸೈನ್ ವೀರರಿಗೆ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಅಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ ಅಲ್ಲವೇ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಡಿ.ಕೆ.ಸಹೋದರರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.   ಕನಕಪುರ, ರಾಮನಗರ ಯಾರೊಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ …

Read More »

ಇಂದು ಸಂಜೆ Lockdown ಭವಿಷ್ಯ ನಿರ್ಧಾರ ಆಗುತ್ತಾ? ಕೋವಿಡ್ ನಿಯಂತ್ರಣಕ್ಕೆ ತಜ್ಞರ ಸಲಹೆಗಳೇನು?

ರಾಜ್ಯದಲ್ಲಿ ಕೊವೀಡ್-19 (COVID 19), ಓಮೈಕಾನ್ (Omicron Variant) ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಂಜೆ 6:30 ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ನೇತೃತ್ವದಲ್ಲಿ ತಜ್ಞರ ಮಹತ್ವದ ಸಭೆ ನಡೆಯಲಿದೆ. ರಾಜ್ಯದಲ್ಲಿ ಕೊವೀಡ್ ನಿಯಂತ್ರಣಕ್ಕೆ ಮುಖ್ಯಮಂತ್ರಿಗಳು ಶಿಫಾರಸು ‌ಕೇಳಿದ್ದಾರೆ. ತಜ್ಞರ ಸಮಿತಿ ಪರಿಸ್ಥಿತಿ, ‌ಜಾರಿಗೆ ತರಬೇಕಿರುವ ನಿಯಮಗಳ ಬಗ್ಗೆ ಸಿಎಂ ವರದಿ ಈಗಾಗಲೇ ಒಪ್ಪಿಸಲಾಗಿದೆ. ಸಭೆಯಲ್ಲಿ ಲಾಕ್ ಡೌನ್ (Lockdown) ಭವಿಷ್ಯ ನಿರ್ಧಾರವಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇಂದು …

Read More »

ಬೆಳಗಾವಿಯಲ್ಲಿ ಮತಾಂತರ ಶಂಕೆ: ಪ್ರಾರ್ಥನೆ ವೇಳೆ ಮನೆಗೆ ನುಗ್ಗಿ ಹಲ್ಲೆ ಆರೋಪ

ಬೆಳಗಾವಿ: ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ದಲಿತ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ನಡೆದಿದೆ. ಡಿಸೆಂಬರ್‌ 29 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಿಸಿ ಸಾಂಬಾರು ಎಸೆಯಲು ಯತ್ನ ಆರೋಪ ಪ್ರಾರ್ಥನೆ ಮಾಡುತ್ತಿದ್ದ ವೇಳೆ 7 ಮಂದಿ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದು, ಘಟಪ್ರಭ ಪೊಲೀಸ್ ಠಾಣೆಗೆ ಕವಿತಾ ಕರಗಣವಿ ಎಂಬವರು ದೂರು ನೀಡಿದ್ದಾರೆ. ಜನರನ್ನು …

Read More »

ಕೋವಿಡ್ ಟೆಸ್ಟ್ ಅನ್ನೋದು ಒಂದು ಹಗರಣ, ಇದರಿಂದ ನಾನು ಅಂತ್ಯಕ್ರಿಯೆಗೆ ಹೋಗೋದು ತಪ್ಪಿದೆ’

ಲಂಡನ್‌ನಿಂದ ಮಾವನ ಅಂತ್ಯಕ್ರಿಯೆಗಾಗಿ ಭಾರತಕ್ಕೆ ಬಂದ ವ್ಯಕ್ತಿ ಮತ್ತು ಆತನ ಪತ್ನಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದೆ. ಇದರಲ್ಲಿ ಪಾಸಿಟಿವ್ ರಿಸಲ್ಟ್ ಬಂದಿದ್ದು, ಇವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಹಾಗಾಗಿ ಈ ಜೋಡಿ ಅಂತ್ಯಕ್ರಿಯೆಗೆ ಹೋಗುವುದು ತಪ್ಪಿದೆ. ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿರುವ ವ್ಯಕ್ತಿ, ಕೋವಿಡ್ ಟೆಸ್ಟ್ ಅನ್ನೋದು ಹಗರಣವಾಗಿ ಬಿಟ್ಟಿದೆ ಎಂದು ಆರೋಪಿಸಿದ್ದಾರೆ. ಮನೋಜ್ ಲಾಡ್ವಾ ಎಂಬವರ ಪತ್ನಿಯ ತಂದೆಯ ಅಂತ್ಯಕ್ರಿಯೆಯ ಸಲುವಾಗಿ ಲಂಡನ್‌ನಿಂದ ಮುಂಬೈಗೆ ಬಂದಿದ್ದರು. …

Read More »

ಜ. 31ರವರೆಗೂ ಶಾಲೆಗಳಿಗೆ ರಜೆ; 1ರಿಂದ 9ರ ವರೆಗಿನ ತರಗತಿಗಳಿಗಷ್ಟೇ ಅನ್ವಯ: ಬಿಎಂಸಿ ಘೋಷಣೆ

ಮುಂಬೈ: ದೇಶಾದ್ಯಂತ ಕರೊನಾ ಭೀತಿ ಅತಿಯಾಗಿದ್ದು, ಸದ್ಯದಲ್ಲೇ ದಿನಕ್ಕೆ ಸುಮಾರು 60 ಸಾವಿರ ಮಂದಿ ಸೋಂಕಿತರಾಗಿ ಆಸ್ಪತ್ರೆಗೆ ಸೇರಲಿದ್ದಾರೆ ಎಂಬ ಅಧ್ಯಯನವೊಂದರ ಅಂಶ ಮತ್ತಷ್ಟು ಆತಂಕವನ್ನು ಮೂಡಿಸಿದೆ. ದೇಶದಲ್ಲಿ ಒಮಿಕ್ರಾನ್ ಅಲೆ ಗರಿಷ್ಠ ಮಟ್ಟ ತಲುಪುವ ವೇಳೆ ದೈನಿಕ ಸುಮಾರು 60,000 ಜನರು ಆಸ್ಪತ್ರೆಗಳಿಗೆ ದಾಖಲಾಗಬಹುದು. ಸದ್ಯ ದೇಶದಲ್ಲಿ ಒಮಿಕ್ರಾನ್ ಪ್ರಭೇದವೇ ಪ್ರಮುಖ ತಳಿಯಾಗಿದ್ದು ಶೀಘ್ರವೇ ಆರೋಗ್ಯ ಬಿಕ್ಕಟ್ಟು ಅಪ್ಪಳಿಸಬಹುದು ಎಂದು ಖಾಸಗಿ ಅಧ್ಯಯನವೊಂದು ಹೇಳಿದೆ. ಈ ನಡುವೆ ಮಹಾರಾಷ್ಟ್ರದಲ್ಲಿ ಈಗಾಗಲೇ …

Read More »