ಗೋಕಾಕ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸ್ವತ್ತಿನ ಪ್ರಕರಣಗಳ ಪತ್ತೆಗಾಗಿ ಶ್ರೀ ಲಕ್ಷ್ಮಣ ನಾನು ಶ್ಲಾಘಿಸಿರುತ್ತೇನೆ. ನಿಂಬರಗಿ ಎಸ್.ಪಿ. ಸಾಹೇಬರು ಹಾಗೂ ಶ್ರೀ ಮಹಾನಿಂಗ ನಂದಗಾವಿ ಹೆಚ್ಚುವರಿ ಎಸ್ ಪಿ ಸಾಹೇಬರು ಬೆಳಗಾವಿ ರವರು ಮತ್ತು ಶ್ರೀ ಮನೋಜಕುಮಾರ ನಾಯಿಕ ಡಿಎಸ್ಪಿ ಗೋಕಾಕ ರವರ ಮಾರ್ಗದರ್ಶನದಲ್ಲಿ ಗೋಕಾಕ ವೃತ್ತದ ಸಿಪಿಐ ಶ್ರೀ ಗೋಪಾಲ ಆರ್ ರಾಠೋಡ ರವರ ನೇತೃತ್ವದಲ್ಲಿ ತಂಡ ರಚಿಸಿದ್ದು, ತಂಡದಲ್ಲಿ ಗೋಕಾಕ ಶಹರ ಠಾಣೆಯ ಪಿ.ಎಸ್.ಐ ಶ್ರೀ …
Read More »ಬೆಳಗಾವಿ ತಾಲೂಕಿನ ಶಿಂಧೋಳಿಯಲ್ಲಿ ರಸ್ತೆ ಕಾಮಗಾರಿ ಅರ್ಧಗೊಂಡು ಕೊನೆಯ ಸಬ್ ವೇ ಕೂಡಾ ರಸ್ತೆ ಇಲ್ಲ
ಬೆಳಗಾವಿ ತಾಲೂಕಿನ ಶಿಂಧೋಳಿಯಲ್ಲಿ ಶ್ರೀರಾಮನಗರ 19ನೇ ಕ್ರಾಸ್ ಬಳಿಯ ಅಡ್ಡರಸ್ತೆ ಹಾಳಾಗಿದ್ದು, ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಹಾಗಾಗಿ ಅಲ್ಲಿ ಸಿಸಿ ರಸ್ತೆಯನ್ನು ನಿರ್ಮಾಣ ಮಾಡಿಕೊಡಬೇಕೆಂದು ಶ್ರೀರಾಮನಗರ ನಿವಾಸಿಗಳು ಪಿಡಿಒ ರವರಿಗೆ ಮನವಿ ಮಾಡಿದ್ದಾರೆ. ಶ್ರೀರಾಮನಗರ 19ನೇ ಅಡ್ಡ ರಸ್ತೆಯ ನಿವಾಸಿಗಳು ಶಿಂಧೋಳಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ರಸ್ತೆ ನಿರ್ಮಾಣ ಮಾಡಿಸಿಕೊಡುವಂತೆ ಮನವಿ ಮಾಡಿದ್ದಾರೆ. 19ನೇ ಅಡ್ಡ ರಸ್ತೆಯ ಮುಖ್ಯರಸ್ತೆ ಕಾಮಗಾರಿ ಅರ್ಧಗೊಂಡು ಕೊನೆಯ ಸಬ್ ವೇ ಕೂಡಾ ರಸ್ತೆ …
Read More »ಜಿಲ್ಲಾಧಿಕಾರಿಗಳು ಎಂಇಎಸ್ ಮನವಿ ಕಸದ ಬುಟ್ಟಿಗೆ ಚೆಲ್ಲಬೇಕು:
ಚುನಾವಣೆ ಸಮೀಪ ಬರುತ್ತಿದ್ದಂತೆಯೇ ಎಂಇಎಸ್ ನಾಯಕರಿಗೆ ಭಾಷಾ ಪ್ರೇಮ ಹೆಚ್ಚಾಗುತ್ತದೆ. ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ ರಾಜಕೀಯ ಮಾಡುತ್ತಲೇ ಬಂದಿರುವ ಎಂಇಎಸ್ ಎಲ್ಲ ರಂಗಗಳಲ್ಲಿ ಅಧಿಕಾರ ಕಳೆದುಕೊಂಡು ಕಂಗಾಲಾಗಿದ್ದು, ಮರಾಠಿ ಫಲಕ, ಮರಾಠಿ ಕಾಗದಪತ್ರ ಎಂದು ಮತ್ತೆ ಕಾಲು ಕೆದರಿ ಜಗಳಕ್ಕೆ ನಿಂತಿರುವ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಭಾಷಾ ಅಲ್ಪ …
Read More »ಅಕ್ರಮ ಮರಳು ದಂಧೆ ವಿರುದ್ಧ ಧ್ವನಿ ಎತ್ತಿದ್ದ ಯುವಕನಿಗೆ ಚಿತ್ರಹಿಂಸೆ ಕೊಟ್ಟಿರುವ ಪೊಲೀಸರು
ತಮ್ಮ ಗ್ರಾಮದಲ್ಲಿ ಅಕ್ರಮ ಮರಳು ದಂಧೆ ವಿರುದ್ಧ ಈ ಯುವಕ ಧ್ವನಿ ಎತ್ತಿದ್ದೆ ತಪ್ಪಾಯ್ತಾ..? ಈ ಯುವಕನಿಗೆ ಪೊಲೀಸರು ಕೊಡಬಾರದ ಚಿತ್ರಹಿಂಸೆ ಕೊಟ್ಟಿರುವ ಘಟನೆ ಸವದತ್ತಿ ತಾಲೂಕಿನಲ್ಲಿ ನಡೆದಿದೆ. ಹೌದು ಹೀಗೆ ನೀವು ನೋಡುತ್ತಿರುವ ಯುವಕನ ಹೆಸರು ಸಿದ್ದಪ್ಪ ಲಕ್ಷ್ಮಣ ಹಿರೂರ ಅಂತಾ, ಸವದತ್ತಿ ತಾಲೂಕಿನ ತೆಗ್ಗಿಹಾಳ ಗ್ರಾಮದ ಯುವಕ ಈತ. ಈತ ತಮ್ಮ ಗ್ರಾಮದಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ, ಅದನ್ನು ತಡೆಗಟ್ಟಿ ಎಂದು ಸವದತ್ತಿ ತಹಶೀಲ್ದಾರ್ಗೆ ಫೋನ್ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಮಲೇರಿಯಾ ಮಾಸಾಚರಣೆ &ಆರೋಗ್ಯ ತಪಾಸಣಾ ಶಿಬಿರ
ಗೋಕಾಕ: ಗೋಕಾಕ ಹಿರೆನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ತಾಲೂಕ ವೈದ್ಯ ಅಧಿಕಾರಿಗಳ ಆಶ್ರಯದಲ್ಲಿ ಸಂತೋಷ್ ಜಾರಕಿಹೊಳಿ ಅವರ ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು. ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಲೇರಿಯಾ ಮಾಸಾಚರಣೆ ಹಾಗೂ ವಿವಿಧ ರೀತಿಯ ತಪಾಸಣೆ ಗಳನ್ನ ಮಾಡಲಾಯಿತು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ ಅವರು ಹಾಗೂ ಆರೋಗ್ಯ ಅಧಿಕಾರಿಗಳು ಸಸಿಗೆ ನೀರುಣಿಸುವ ಮೂಲಕ ಕಾರ್ಯ ಕ್ರಮಕ್ಕೆ …
Read More »ಮಹಾವಿಕಾಸ ಅಘಾಡಿ ಪತನ ಖಚಿತ..?
ನವದೆಹಲಿ, ಜೂ.28- ಶಿವಸೇನೆಯ ಮುಖಂಡರು ಶತಾಯ ಗತಾಯ ಸರ್ಕಾರ ಉಳಿಸಿಕೊಳ್ಳುತ್ತೇವೆ ಎಂದು ಹೇಳುತ್ತಿರುವುದಕ್ಕೆ ವ್ಯತಿರಿಕ್ತವಾಗಿ ರಾಜಕೀಯ ಬೆಳವಣಿಗೆಗಳಾಗುತ್ತಿದ್ದು, ಮಹಾರಾಷ್ಟ್ರದ ಮೂರು ಪಕ್ಷಗಳ ಮೈತ್ರಿಯ ಮಹಾವಿಕಾಸ ಅಘಾಡಿ ಸರ್ಕಾರ ಪತನವಾಗುವುದು ದಿನೇ ದಿನೇ ಖಚಿತವಾಗುತ್ತಿದೆ. ಅಸ್ಸಾಂನ ಗುವಾಹಟಿಯಲ್ಲಿ ಠಿಕಾಣಿ ಹೂಡಿರುವ ಶಿವಸೇನೆಯ 39 ಶಾಸಕರು, ಪ್ರಹಾರ್ ಜನಶಕ್ತಿ ಪಕ್ಷದ ಇಬ್ಬರು ಹಾಗೂ ಇತರ 11 ಮಂದಿ ಸೇರಿ 50 ಮಂದಿ ಶಾಸಕರು ಉದ್ದವ್ ಠಾಕ್ರೆ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ …
Read More »ನನಗೆ ಮೋದಿ ಇನ್ನೂ ಅಡಗಿ ಗ್ಯಾಸ್ ಕೊಟ್ಟಿಲ್ಲೆಪ್ಪ: ಹಿಂಡಲಗಾ ಗ್ರಾಮದ ಅಜ್ಜಿ ಬಾಯವ್ವ
ಬೆಳಗಾವಿ: ‘ನನಗೆ ಮೋದಿ ಇನ್ನೂ ಅಡಗಿ ಗ್ಯಾಸ್ ಕೊಟ್ಟಿಲ್ಲೆಪ್ಪ. ಇವತ್ತು ಮನೆಗೆ ಮಂತ್ರಿ ಬರಾತಾನ್ ಅಂದ್ರು. ಕಟಗಿ ಒಲಿ ಮ್ಯಾಲೆ ಅಡಗಿ ಮಾಡಿ ನೀಡೇನಿ…’ ತಾಲ್ಲೂಕಿನ ಹಿಂಡಲಗಾ ಗ್ರಾಮದ ಅಜ್ಜಿ ಬಾಯವ್ವ ವಸಂತ ಮಾಸ್ತೆ ಅವರ ಮಾತುಗಳಿವು. ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ರಾಜ್ಯ ಖಾತೆ ಸಚಿವ ಸೋಮ ಪ್ರಕಾಶ್ ಅವರು ಮಂಗಳವಾರ ಮಧ್ಯಾಹ್ನ, ಪರಿಶಿಷ್ಟ ಜಾತಿಯ ಈ ಅಜ್ಜಿ ಮನೆಯಲ್ಲೇ ಊಟ ಮಾಡಿದರು. 87 ವರ್ಷ ವಯಸ್ಸಿನ ಈ …
Read More »ನೂಪುರ್ ಶರ್ಮಾ ಬೆಂಬಲಿಗನ ಭೀಕರ ಕೊಲೆ;ಹಿಂದು ಸಂಘಟನೆಗಳಿಂದ ದೇಶಾದ್ಯಂತ ಅಭಿಯಾನ..
ಧಾರವಾಡ: ನೂಪುರ್ ಶರ್ಮಾ ಬೆಂಬಲಿಗ, ಟೈಲರ್ ಕನ್ನಯ್ಯ ಲಾಲ್ ಕೊಲೆಯನ್ನು ಖಂಡಿಸಿ ನಾಳೆ ದೇಶಾದ್ಯಂತ ಹಿಂದು ಸಂಘಟನೆಗಳು ಅಭಿಯಾನ ಆರಂಭಿಸಲಿದ್ದಾರೆ. ಈ ಕುರಿತು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿಷಯ ಬಹಿರಂಗಪಡಿಸಿದ್ದಾರೆ. ಕನ್ನಯ್ಯ ಲಾಲ್ ಕೊಲೆಯನ್ನು ಖಂಡಿಸಿ ಧಾರವಾಡದಲ್ಲಿ ಮಾತನಾಡಿರುವ ಮುತಾಲಿಕ್, ನಾಳೆ ಶ್ರೀರಾಮ ಸೇನೆ, ಯುವ ಬ್ರಿಗೇಡ್, ಹಿಂದೂ ಜನಜಾಗೃತಿ ಸೇರಿ ಇತರೆ ಸಂಘಟನೆಗಳಿಂದ ಅಭಿಯಾನ ಆರಂಭವಾಗಲಿದೆ. ‘ನಾನು ಕನ್ನಯ್ಯ ಲಾಲ್’, ‘ನಾನು ನೂಪುರ್ ಶರ್ಮಾ ಬೆಂಬಲಿಗ’ ಎಂಬ …
Read More »ತೆರಿಗೆ ವಿನಾಯಿತಿ ರದ್ದು: ದುಬಾರಿಯಾಗಲಿವೆ ಹೋಟೆಲ್ ರೂಮ್, ಆಸ್ಪತ್ರೆ ವಾರ್ಡ್ ಶುಲ್ಕ.
ನವದೆಹಲಿ: ಕೆಲವು ಸರಕುಗಳ ಮೇಲಿನ ತೆರಿಗೆ ವಿನಾಯಿತಿಯನ್ನು ತೆಗೆದು ಹಾಕಬೇಕೆಂಬ ಪ್ರಸ್ತಾವನೆಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಂಡಳಿ ಅನುಮೋದನೆ ನೀಡಿದೆ. ಕೆಲ ವಸ್ತುಗಳ ತೆರಿಗೆ ಏರಿಕೆ ಬಗ್ಗೆ ಬುಧವಾರ ನಿರ್ಧಾರವಾಗುವ ಸಾಧ್ಯತೆ ಇದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಚಂಡೀಗಢದಲ್ಲಿ ಮಂಗಳವಾರ ಆರಂಭವಾದ ಮಂಡಳಿಯ 47ನೇ ಸಭೆಯು ಕೆಲವು ಜಿಎಸ್ಟಿ ದರಗಳಲ್ಲಿ ಬದಲಾವಣೆಗೆ ಒಪ್ಪಿಗೆ ನೀಡಿದೆ. ಚಿನ್ನ ಮತ್ತು ಅಮೂಲ್ಯ ಹರಳುಗಳ ಅಂತಾರಾಜ್ಯ ಸಾಗಾಟಕ್ಕೆ …
Read More »ಈ ಕಾರು ಕಾಣಿಸಿದ್ರೆ ಕೂಡಲೇ ತಿಳಿಸಿ; ವಂಚಕರ ಪತ್ತೆಗಿಳಿದ ಪೊಲೀಸರು..
ಸಿಲಿಕಾನ್ ಸಿಟಿಯಲ್ಲಿ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡು ವಾಹನ ಚಲಾಯಿಸುವರ ಹಾವಳಿ ಹೆಚ್ಚಾಗಿಯೇ ಇದೆ. ಅದು ರಸ್ತೆ ತೆರಿಗೆಯಿಂದ ಪಾರಾಗಲು ಅಥವಾ ಕದ್ದ ವಾಹನಗಳಿಗೆ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು ಬಳಸುತ್ತಿದ್ದಾರೆ. ಇಂತಹ ವಾಹನಗಳನ್ನು ಪತ್ತೆ ಮಾಡಲು ಸಂಚಾರ ಪೊಲೀಸರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಒಳಗೊಂಡಿರುವ ಸಿಸಿ ಕ್ಯಾಮರಾಗಳನ್ನು ಪ್ರಮುಖ ಜಂಕ್ಷನ್ಗಳಲ್ಲಿ ಅಳವಡಿಸಿದ್ದಾರೆ. ಶಂಕಾಸ್ಪದ ವಾಹನಗಳು ಈ ಕ್ಯಾಮರಾದಲ್ಲಿ ಸೆರೆಯಾದರೆ ಕೂಡಲೇ ಟ್ರಾಫಿಕ್ ಪೊಲೀಸರಿಗೆ ಮಾಹಿತಿ ಹೋಗಲಿದೆ. ಇಂತಹ ತಂತ್ರಜ್ಞಾನ …
Read More »
Laxmi News 24×7