ಬೆಂಗಳೂರು: ಚಪ್ಪಲಿ ಏಟು ತಿನ್ನಬಹುದು. ಆದರೆ ದುಡ್ಡೇಟು ತಿನ್ನಲಿಕ್ಕೆ ಆಗಲ್ಲ. ನೂರು ಬಾರಿ ಚಪ್ಪಲಿಯಲ್ಲಿ ಪಟ ಪಟ ಪಟ ಅಂತ ಹೊಡೆದರೂ ತಿನ್ನಬಹುದು. ಆದರೆ ದುಡ್ಡಿನ ಏಟು ತಿನ್ನಲು ಆಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಇಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದಲ್ಲೂ ಕಾಂಗ್ರೆಸ್ ನಾಯಕರುಗಳು ವಿಭಿನ್ನವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ವಾಗ್ದಾಳಿ ನಡೆಸಿದ ಡಿಕೆಶಿ, ಬೆಲೆ …
Read More »ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ ಗುಡ್ ನ್ಯೂಸ್: ಇ – ಸ್ವತ್ತು ಮೂಲಕ ಫಲಾನುಭವಿಗೆ ಖಾತೆ
ಬೆಂಗಳೂರು: ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ ಇ -ಸ್ವತ್ತು ಮೂಲಕ ಖಾತೆ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿ, ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ 94c ಮತ್ತು 94cc ಅಡಿಯಲ್ಲಿ ನೀಡಿದ ಹಕ್ಕುಪತ್ರಗಳ ನೋಂದಣಿಯ ನಂತರ ಇ – ಸ್ವತ್ತು ಅಥವಾ ಇ -ಖಾತಾ ವ್ಯವಸ್ಥೆಯ ಮೂಲಕ ಖಾತೆ ಚೆಕ್ಕುಬಂದಿ ಮಾಡಿಕೊಡಲು …
Read More »ಉಚಿತ ಎಲ್ಪಿಜಿ ಸಿಲಿಂಡರ್ ನೀಡಲು ಹಣ ಮಂಜೂರು: ಪ್ರಮೋದ್ ಸಾವಂತ್
ಪಣಜಿ: ರಾಜ್ಯದ ಜನರಿಗೆ ಮೂರು ಎಲ್ಪಿಜಿ ಸಿಲಿಂಡರ್ಗಳನ್ನು ಉಚಿತವಾಗಿ ನೀಡಲು 40ಕೋಟಿ ರೂ. ಮೊತ್ತವನ್ನು ನೀಡುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಘೋಷಿಸಿದರು. ವಿಧಾನಸಭೆಯಲ್ಲಿ ಈ ಬಾರಿಯ ರಾಜ್ಯ ಬಜೆಟ್ನ್ನು ಮಂಡಿಸಿದ ಅವರು ರಾಜ್ಯದ ಮತ್ತು ಜನರ ಅಭಿವೃದ್ಧಿ ಹಾಗೂ ಸಮೃದ್ಧಿಗಾಗಿ ಈ ಬಜೆಟ್ ಆಗಿದೆ ಎಂದು ಹೇಳಿದರು.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂದು ಗೋವಾ ವಿಧಾನಸಭೆಯಲ್ಲಿ 2022-23ನೇ ಸಾಲಿನ ರಾಜ್ಯ ಬಜೆಟ್ನ್ನು ಮಂಡಿಸಿದ್ದಾರೆ. ಗೋವಾ ಜನತೆಗೆ, ರಾಜ್ಯದ …
Read More »10ನೇ ದಿನದಲ್ಲಿ 9ನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ನವದೆಹಲಿ: ಪೆಟ್ರೋಲ್, ಡೀಸೆಲ್ ದರವು ಕಳೆದ 10 ದಿನಗಳಲ್ಲಿ 9ನೇ ಬಾರಿ ಏರಿಕೆಯಾಗಿದ್ದು, ಗುರುವಾರವೂ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ಗೆ 80 ಪೈಸೆ ಏರಿಕೆಯಾಗಿದೆ. ಒಟ್ಟಾರೆಯಾಗಿ ಒಂದೇ ವಾರದಲ್ಲಿ ಲೀಟರ್ಗೆ 6.40ರೂ. ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 106.48 ರೂ. ಇದ್ದ ಪೆಟ್ರೋಲ್ ದರ 107.32 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್ಗೆ 90.50 ರೂ. ಇದ್ದ ಡೀಸೆಲ್ ದರ ರೂ. 91.29ಕ್ಕೆ ಏರಿಕೆಯಾಗಿದೆ.ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ರೂ. …
Read More »ಸಿಕ್ಸ್, ಫೋರ್ ಸಿಡಿಸಿ ಮ್ಯಾಚ್ ಫಿನಿಶ್ ಮಾಡಿದ ಕಾರ್ತಿಕ್
ಮುಂಬೈ: ಬೆಂಗಳೂರು ಮತ್ತು ಕೋಲ್ಕತ್ತಾ ನಡುವಿನ ಕೊನೆಯ ಓವರ್ ವರೆಗೂ ರೋಚಕವಾಗಿ ಕೂಡಿದ ಪಂದ್ಯದಲ್ಲಿ ಬ್ಯಾಟ್ಸ್ಮ್ಯಾನ್ ದಿನೇಶ್ ಕಾರ್ತಿಕ್ ಮ್ಯಾಚ್ ಫಿನಿಶ್ ಮಾಡುವ ಮೂಲಕ ಆರ್ಸಿಬಿಗೆ 3 ವಿಕೆಟ್ಗಳ ಗೆಲುವು ತಂದುಕೊಟ್ಟರು. ಆರ್ಸಿಬಿಗೆ ಗೆಲ್ಲಲು ಕೊನೆಯ 6 ಎಸೆತಗಳಲ್ಲಿ 7 ರನ್ಗಳ ಅವಶ್ಯಕತೆ ಇತ್ತು. ರಸೆಲ್ ಎಸೆದ ಮೊದಲ ಎಸೆತವನ್ನೆ ದಿನೇಶ್ ಕಾರ್ತಿಕ್ ಸಿಕ್ಸರ್ಗಟ್ಟಿದರೆ, ಎರಡನೇ ಎಸೆತವನ್ನು ಬೌಂಡರಿಗಟ್ಟಿ ಆರ್ಸಿಬಿ ತಂಡವನ್ನು ಗೆಲ್ಲಿಸಿದರು. ಅಲ್ಪ ಮೊತ್ತದ ಗುರಿ ಪಡೆದ ಆರ್ಸಿಬಿ ಕೂಡ …
Read More »ಬಿಜೆಪಿ ಶಾಸಕ ರೇಣುಕಾಚಾರ್ಯಗೆ ನಾಲ್ಕೈದು ದಿನಗಳಲ್ಲಿ ನಿನ್ನ ಮತ್ತು ನಿನ್ನ ಮಗನನ್ನು ಕೊಲೆ ಮಾಡುತ್ತೇವೆ ಬೆದರಿಕೆ ,
ಬೆಂಗಳೂರು: ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಅಪರಿಚಿತ ವ್ಯಕ್ತಿಯೊಬ್ಬ ಫೋನ್ ಕರೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇಂದು ಬೆಳಗ್ಗೆಯಿಂದ ಅಪರಿಚಿತ ನಂಬರ್ನಿಂದ ಪದೇ ಪದೇ ಕರೆ ಬರ್ತಿತ್ತು. ಸಂಜೆ ವೇಳೆಗೆ ಕಾಲ್ ರಿಸಿವ್ ಮಾಡಿದ ಶಾಸಕ ರೇಣುಕಾಚಾರ್ಯಗೆ ವ್ಯಕ್ತಿಯು ಏಕಾಏಕಿ ಅವಾಚ್ಯ ಪದಗಳಿಂದ ನಿಂದಿಸಲು ಶುರು ಮಾಡಿದ್ದಾನೆ. ನಾಲ್ಕೈದು ದಿನಗಳಲ್ಲಿ ನಿನ್ನ ಮತ್ತು ನಿನ್ನ ಮಗನನ್ನು ಕೊಲೆ ಮಾಡುತ್ತೇವೆ ಅಂತಾ ಬೆದರಿಕೆ ಹಾಕಿದ್ದಾನೆ. ಹಿಜಾಬ್, ಮುಸ್ಲಿಂ ವ್ಯಾಪಾರಿಗಳ ನಿಷೇಧ, …
Read More »ಏ.1 ರಂದು ನಡೆದಾಡೋ ದೇವರ ಜನ್ಮ ದಿನಾಚರಣೆ-
ತುಮಕೂರು: ಕಾಯಕಯೋಗಿ, ತ್ರಿವಿಧ ದಾಸೋಹಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾ ಸ್ವಾಮಿಗಳು ಲಿಂಗೈಕ್ಯರಾಗಿ ಮೂರು ವರ್ಷ ಕಳೆದಿವೆ. ಶ್ರೀಗಳ 115ನೇ ಜನ್ಮ ದಿನೋತ್ಸವಕ್ಕೆ ಸಿದ್ದಗಂಗಾ ಮಠದಲ್ಲಿ ಭರ್ಜರಿ ಸಿದ್ದತೆ ನಡೆಯುತ್ತಿದೆ. ತ್ರಿವಿಧ ದಾಸೋಹಿ, ನಡೆದಾಡುವ ದೇವರು ಲಿಂಗೈಕ್ಯರಾದಾಗ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯ ಯಾವೊಬ್ಬ ರಾಷ್ಟ್ರೀಯ ನಾಯಕರೂ ಶ್ರೀಗಳ ಅಂತಿಮ ದರ್ಶನ ಪಡೆದಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯಾಗಲಿ, ಗೃಹ ಸಚಿವ ಅಮಿತ್ ಶಾ ಆಗಲಿ ಯಾರೂ ಇತ್ತ …
Read More »ತರ ಹೆಸರಿಗೇ ಉಳುವ ಭೂಮಿ : ಸರ್ಕಾರದಿಂದ ಮಹತ್ವದ ನಿರ್ಧಾರ
ಬೆಂಗಳೂರು, ಮಾ.31- ಹಲವಾರು ವರ್ಷಗಳಿಂದ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರ ಹೆಸರಿಗೆ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ ಸದಸ್ಯ ಕೆ.ಹರೀಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ದಕ್ಷಿಣ ಕನ್ನಡ ಭಾಗದಲ್ಲಿ ಕುಮ್ಕಿ ಭಾಣಿ ಭೂಮಿಗಳಿವೆ, ಉತ್ತರ ಕನ್ನಡ ಜಿಲ್ಲಾಯಲ್ಲಿ ಬೆಟ್ಟ, ಹಾಡಿಗಳಿವೆ, ಮೈಸೂರು ಭಾಗದಲ್ಲಿ ಕಾನು ಮತ್ತು ಸೊಪ್ಪಿನ ಬೆಟ್ಟ ಭೂಮಿಗಳು, ಕೊಡಗಿನಲ್ಲಿ ಜಮ್ಮಾ ಮತ್ತು …
Read More »ಮೂರು ಪಿಡುಗುಗಳು ಕರ್ನಾಟಕದ ರಾಜಕೀಯ ವ್ಯವಸ್ಥೆಯನ್ನು ಹಾಳು ಮಾಡಿವೆ: ಯತ್ನಾಳ್
ಬೆಂಗಳೂರು: ಮೂರು ಪಿಡುಗುಗಳು ಕರ್ನಾಟಕದ ರಾಜಕೀಯ ವ್ಯವಸ್ಥೆಯನ್ನು ಹಾಳು ಮಾಡಿವೆ. ಒಂದು ಗಣಿಗಾರಿಕೆ, ಎರಡನೇಯದ್ದು ರಿಯಲ್ ಎಸ್ಟೇಟ್, ಮೂರನೇಯದ್ದು ಜಾತಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ವ್ಯಾಖ್ಯಾನಿಸಿದರು. ವಿಧಾನಸಭೆಯಲ್ಲಿ ಚುನಾವಣೆ ಸುಧಾರಣೆ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ರಾಜ್ಯದ ರಾಜಕೀಯ ವ್ಯವಸ್ಥೆ ಹಾಳಾಗಿರುವುದು ಗಣಿಗಾರಿಕೆಯಿಂದ. ಗಣಿ ಉದ್ಯಮಿಗಳು ಒಮ್ಮಿಂದೊಮ್ಮೆಲೆ ಎದ್ದು ಬಂದರು. ಸಾಮೂಹಿಕ ವಿವಾಹ ಕಾರ್ಯಕ್ರಮಗಳು, ಬಡ ವಿದ್ಯಾರ್ಥಿಗಳಿಗೆ ಪಾಸ್ ಹಂಚುವ ಕಾರ್ಯಕ್ರಮ ತರಲಾಯಿತು. ಇದರಿಂದಲೂ ರಾಜ್ಯದ ವ್ಯವಸ್ಥೆ ಹಾಳಾಯಿತು …
Read More »2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟ
ಬೆಂಗಳೂರು : 2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟವಾಗಿದ್ದು, ಇಲಾಖೆಯಲ್ಲಿ ದಕ್ಷತೆ, ಕಾರ್ಯಕ್ಷಮತೆ ಆಧಾರದಲ್ಲಿ 135 ವಿವಿಧ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಪದಕ ಪ್ರಕಟಿಸಿದೆ.ಬೆಂಗಳೂರು ಸಿಐಡಿ ಡಿವೈಎಸ್ಪಿ ವೀರೇಂದ್ರ ಕುಮಾರ್, ಉಡುಪಿ ಡಿಎಆರ್ ವಿಭಾಗದ ಡಿವೈಎಸ್ಪಿ ರಾಘವೇಂದ್ರ ಆರ್. ನಾಯಕ್, ಇನ್ಸ್ಪೆಕ್ಟರ್ಗಳಾದ ಪ್ರಕಾಶ್, ಮಂಜುನಾಥ್, ನಟರಾಜ್, ಶಿವಕುಮಾರ್, ರಾವ್ ಗಣೇಶ್ ಜನಾರ್ಧನ್ ಸೇರಿದಂತೆ ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಪುರಸ್ಕಾರ ಲಭ್ಯವಾಗಲಿದೆ. ಏಪ್ರಿಲ್ 2ರಂದು …
Read More »
Laxmi News 24×7