ಬೆಂಗಳೂರು : ವಾಣಿಜ್ಯ ಬಳಕೆಯ ಸಿಲಿಂಡರ್ ದರ ಏರಿಕೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ ಹೋಟೆಲ್ ಊಟ, ತಿಂಡಿಗಳು ದುಬಾರಿಯಾಗಲಿವೆ. ಇಂಧನ ಬೆಲೆ ಏರಿಕೆಯ ಹೊರೆಯನ್ನು ಗ್ರಾಹಕರ ಮೇಲೆ ಹಾಕಲು ಮುಂದಾಗಿರುವಂತ ಹೋಟೆಲ್ ಮಾಲೀಕರ ಸಂಘವು ಇಂದಿನಿಂದ ಹೋಟೆಲ್ ಖಾದ್ಯಗಳ ಬೆಲೆ ಏರಿಕೆಯನ್ನು ( Hotel Food Price Hike ) ಮಾಡೋದಕ್ಕೆ ಮುಂದಾಗಿದೆ. ಇದಕ್ಕೆ ಕಾರಣ ಒಂದೆಡೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆಯಾದ್ರೇ.. ಮತ್ತೊಂದೆಡೆ ದಿನಸಿ ಸಾಮಗ್ರಿಗಳ ಬೆಲೆ …
Read More »ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ರೇಸ್ನಿಂದ ಭಾರತ ಹೊರಬಿದ್ದಿದೆ.
ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ರೇಸ್ನಿಂದ ಭಾರತ ಹೊರಬಿದ್ದಿದೆ. ಭಾನುವಾರ ಸೂಪರ್-12 ಹಂತದ ಎರಡನೇ ಗುಂಪಿನ ಪಂದ್ಯದಲ್ಲಿ ಅಫ್ಗಾನಿಸ್ತಾನ ವಿರುದ್ಧ ನ್ಯೂಜಿಲೆಂಡ್ ಗೆಲುವು ದಾಖಲಿಸುವುದರೊಂದಿಗೆ ಭಾರತದ ವಿಶ್ವಕಪ್ ಕನಸು ಭಗ್ನಗೊಂಡಿದೆ. ವಿರಾಟ್ ಕೊಹ್ಲಿ ಮುಂದಾಳತ್ವದಲ್ಲಿ ಭಾರತ ಭಾಗವಹಿಸಿದ್ದ ಕೊನೆಯ ಟ್ವೆಂಟಿ-20 ವಿಶ್ವಕಪ್ ಟೂರ್ನಿ ಇದಾಗಿತ್ತು. ಈ ಹಿಂದೆಯೇ ವಿಶ್ವಕಪ್ ಬಳಿಕ ಟಿ20 ನಾಯಕತ್ವವನ್ನು ತೊರೆಯುವುದಾಗಿ ಕೊಹ್ಲಿ ಘೋಷಿಸಿದ್ದರು.
Read More »ಪುನೀತ್ ನುಡಿನಮನದ ಹೆಸರಲ್ಲಿ ಬೇಕಾಬಿಟ್ಟಿ ಚಂದಾ ವಸೂಲಿ: ಆರೋಪಕ್ಕೆ ಗುರಿಯಾದ ಫಿಲ್ಮ್ ಚೇಂಬರ್
ನವೆಂಬರ್ 16 ರಂದು ನಡೆಯಲಿರುವ ‘ಪುನೀತ ನಮನ’ ಕಾರ್ಯಕ್ರಮದ ಹೆಸರಲ್ಲಿ ಚಂದಾ ವಸೂಲಿ ಮಾಡುತ್ತಿದ್ದು, ಚೆಕ್ ಪಡೆದು, ವೈಯಕ್ತಿಕ ಅಕೌಂಟ್ಗೆ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ವಿಷಯ ಬೆಳಕಿಗೆ ಬಂದಿದೆ. ಮೇರು ನಟನಿಗೆ ನುಡಿನಮನ ಸಲ್ಲಿಸಲು ಫಿಲ್ಮ್ ಚೇಂಬರ್ ಬಳಿ ಹಣ ಇಲ್ವಾ? ಇಲ್ಲದಿದ್ದರೆ ಸದಸ್ಯರೇ ಸೇರಿ ಹಣ ಕೊಡುತ್ತೇವೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿನಿಮಾ ನಿರ್ದೇಶಕ ಜೆಜೆ ಶ್ರೀನಿವಾಸ್, ಕುಮಾರ್ …
Read More »ಎರಡು ಪ್ರದೇಶಗಳಲ್ಲಿ ಪೈಪುಗಳ ಸೋರಿಕೆ ಬೆಳಗಾವಿ ನಗರಕ್ಕೆ 2 ದಿನ ನೀರಿಲ್ಲ
ಬೆಳಗಾವಿ – ಹಿಡಕಲ್ ಜಿ.ಎಲ್.ಎಸ್.ಆರ್. ಚೆಕ್ ಪೊಸ್ಟ್ ಮತ್ತು ಕುಂದರಗಿ ಪಂಪ್ ಹೌಸ್ ಹತ್ತಿರ ಈ ಎರಡು ಪ್ರದೇಶಗಳಲ್ಲಿ 1200 ಎಮ್.ಎಮ್ ರೈಸಿಂಗ್ಮೇನ್ ಪೈಪುಗಳ ಸೋರಿಕೆ ಉಂಟಾಗಿದ್ದು ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ. ಸಿಮೆಂಟ್ ಪ್ಯಾಕಿಂಗ್ ಸೆಟ್ ಆಗವುದಕ್ಕೆ ಸಮಯ ಹಿಡಿಯುವುದರಿಂದ ದಿನಾಂಕ : 08 & 09.11.2021 ರಂದು ಎರಡು ದಿವಸ ಬೆಳಗಾವಿ ನಗರಕ್ಕೆ 24×7 ಪ್ರಾತ್ಯಕ್ಷಿಕ ವಲಯ ಸಹಿತ ನೀರು ಸರಬರಾಜು ಮಾಡುವಲ್ಲಿ ವ್ಯತ್ಯಯ ಉಂಟಾಗುತ್ತದೆ ಎಂದು ನಗರ …
Read More »ಬಿಟ್ ಕಾಯಿನ್ ಕೇಸ್ ವಿಚಾರಣೆ ವೇಳೆ ಪೊಲೀಸರಿಗೆ ಸಿಕ್ತು ಸ್ಪೋಟಕ ಮಾಹಿತಿ
ಬೆಂಗಳೂರು : ಬಿಟ್ ಕಾಯಿನ್ ಕೇಸ್ ನ ಆರೋಪಿ ಶ್ರೀಕಿ ಜೊತೆ ಕಿರಿಕ್ ಮಾಡಿಕೊಂಡು ಬಂಧನಕ್ಕೊಳಗಾಗಿದ್ದ ಭೀಮಾ ಜ್ಯುವೆಲ್ಲರ್ಸ್ ನ ಮಾಲೀಕರ ಮಗ ವಿಷ್ಣುಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ಮುಂದುವರೆಸಿದ್ದು, ಇದೀಗ ಸ್ಪೋಟಕ ಮಾಹಿತಿಯೊಂದು ಲಭ್ಯವಾಗಿದೆ. ಎನ್ ಡಿ ಪಿ ಎಸ್ ಕಾಯಿದೆ ಅಡಿ ಬಂಧನಕ್ಕೊಳಗಾದ ವಿಷ್ಣುಭಟ್ ವಿದೇಶಿ ಪ್ರಜೆ ಜೊತೆ ಪೆಡ್ಲಿಂಗ್ ನಡೆಸುತ್ತಿದ್ದನು ಎನ್ನಲಾಗಿದೆ. ಆದ್ದರಿಂದ ಆತನ ಮನೆ ಮೇಲೆ ದಾಳಿ ನಡೆಸಿದಾಗ ಗಾಂಜಾ ಹಾಗೂ …
Read More »ಮುನ್ಯಾಳದಲ್ಲಿ 22ಲಕ್ಷ ರೂ ವೆಚ್ಚದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮುನ್ಯಾಳದಲ್ಲಿ 22ಲಕ್ಷ ರೂ ವೆಚ್ಚದ ಶಾಲಾ ಕೊಠಡಿಗಳನ್ನು ಉದ್ಘಾಟ ಮೂಡಲಗಿ: ಏಳನೇ ತರಗತಿ ನಂತರ ವಿದ್ಯಾರ್ಥಿಗಳು ಪ್ರೌಢಶಾಲೆಯಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಅತೀ ಹೆಚ್ಚಿನ ಪ್ರೌಢ ಶಾಲೆಗಳನ್ನು ಮಂಜೂರು ಮಾಡಿಸಲಾಗಿದೆ, ಇದರಿಂದ ಗ್ರಾಮೀಣ ಪ್ರದೇಶದಲ್ಲಿನ ಅದರಲ್ಲೂ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಮುಂದಿನ ದಿನಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಹಕಾರಿಯಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು ಭಾನುವಾರ …
Read More »ರಾಜ್ಯದ ಗೃಹಸಚಿವರೊಬ್ಬರು ಮ್ಯಾಡ್ ಮ್ಯಾನ್: ಡಿಕೆ ಶಿವಕುಮಾರ್
ರಾಜ್ಯದ ಗೃಹಸಚಿವರೊಬ್ಬರು ಮ್ಯಾಡ್ ಮ್ಯಾನ್ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಅನಾವಶ್ಯಕವಾಗಿ ಕಾಂಗ್ರೆಸ್ ನಾಯಕರ ಹೆಸರನ್ನು ಮಧ್ಯ ತರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೃಹಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಮಗನ ಹೆಸರು ಕೇಳಿಬಂದಿದೆ ಎಂದು ಹೇಳಿಕೆ ನೀಡಿದ್ದರು. ಈ ಕುರಿತಂತೆ …
Read More »ನಟ ಅಪ್ಪು ನಿಧನ ಹಿನ್ನಲೆ ವಿಜಯಪುರ ಸಿನಿಮಾ ಮಂದಿರಗಳಲ್ಲಿ ಶೃದ್ದಾಂಜಲಿ ಕಾರ್ಯಕ್ರಮ ನಡೆಯಿತು.
ವಿಜಯಪುರ: ನಗರದ ಲಕ್ಷ್ಮೀ ಚಿತ್ರಮಂದಿರದಲ್ಲಿ ಶೃದ್ದಾಂಜಲಿ ಸಲ್ಲಿಸಲಾಯಿತು. ಅಪ್ಪು ಭಾವಚಿತ್ರಕ್ಕೆ ಪುಷ್ಪಾರ್ಚನೆ, ಮಾಡಿ ನಮನ ಸಲ್ಲಿಸಿದ ಅಭಿಮಾನಿಗಳು, ಸಿನಿಮಾ ಮಂದಿರ ಮಾಲಿಕರು, ಸಿಬ್ಬಂದಿ ವರ್ಗದವರು ಶ್ರದ್ಧಾಂಜಲಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಚಿತ್ರಪ್ರದರ್ಶಕ ಸಂಘದಿಂದ ಹಮ್ಮಿಕೊಳ್ಳಲಾಗಿರುವ ಶೃದ್ಧಾಂಜಲಿ ಕಾರ್ಯಕ್ರಮವು ನಗರದ ಲಕ್ಷ್ಮೀ ಚಿತ್ರಮಂದಿರದಲ್ಲಿ ಪುಷ್ಪಾಂಜಲಿ, ದೀಪಾಂಜಲಿ, ಗೀತಾಂಜಲಿ, ಭಾಷ್ಪಾಂಜಲಿ ನಮನ ಸಲ್ಲಿಸಿ ಕ್ಯಾಂಡಲ್ ಬೆಳಗಿ ಅಪ್ಪುವಿಗೆ ಅಭಿಮಾನಿಗಳು ಹಾಗೂ ಸಿಬ್ಬಂದಿ ಶ್ರದ್ಧಾಂಜಲಿ ಸಲ್ಲಿಸಿದರು. ಲಕ್ಷ್ಮೀ ಚಿತ್ರಮಂದಿರದಲ್ಲಿ ಭಜರಂಗಿ 2 ಚಿತ್ರ ವೀಕ್ಷಿಸಲು …
Read More »ಇದೇ 19ರಿಂದ ಬಿಜೆಪಿ ನಾಯಕರ ರಾಜ್ಯ ಪ್ರವಾಸ, ವಿಧಾನಸಭೆ ಚುನಾವಣೆಗೆ ತಯಾರಿ
ಬೆಂಗಳೂರು: ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಲು ಮುಂದಾಗಿರುವ ಬಿಜೆಪಿ ರಾಜ್ಯ ಘಟಕ ಇದೇ 19ರಿಂದ ನಾಲ್ವರು ನಾಯಕರ ನೇತೃತ್ವದಲ್ಲಿ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಲಿದೆ. ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಪ್ರವಾಸ ನಡೆಯಲಿದೆ. ಮಾಜಿ ಮುಖ್ಯಮಂತ್ರಿಗಳಾಗಿರುವ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ಡಿ.ವಿ. ಸದಾನಂದಗೌಡ ಹಾಗೂ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ನಾಲ್ಕು ತಂಡಗಳು ಪ್ರತ್ಯೇಕವಾಗಿ ಪ್ರವಾಸ ಮಾಡಲಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನಕ್ಕೆ …
Read More »ಜಪ್ತಿ ಮಾಡಿದ್ದ 31 ಬಿಟ್ ಕಾಯಿನ್ ಮಾಯ!
ಬೆಂಗಳೂರು : ಹಣ ವಿನಿಮಯ ಏಜೆನ್ಸಿಗಳ ಸರ್ವರ್ ಹಾಗೂ ಆನ್ಲೈನ್ ಗೇಮಿಂಗ್ ಜಾಲತಾಣಗಳನ್ನು ಹ್ಯಾಕ್ ಮಾಡಿ ಬಿಟ್ ಕಾಯಿನ್ ದೋಚುತ್ತಿದ್ದ ಎನ್ನಲಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು (26) ಬಂಧಿಸಿದ್ದ ಸಿಸಿಬಿ ಪೊಲೀಸರ ತನಿಖೆ ಮೇಲೆಯೇ ಸಂಶಯ ಶುರುವಾಗಿದೆ. ರಾಜ್ಯದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಬಿಟ್ ಕಾಯಿನ್ (ಬಿಟಿಸಿ) ಹಗರಣದ ಬಗ್ಗೆ ವಿದೇಶದ ಹಾಗೂ ಕೇಂದ್ರ ತನಿಖಾ ತಂಡಗಳು ಮಾಹಿತಿ ಕಲೆ ಹಾಕುತ್ತಿವೆ. ಶ್ರೀಕೃಷ್ಣನನ್ನು ಕಸ್ಟಡಿಗೆ ಪಡೆದಿದ್ದ ಸಿಸಿಬಿ ಪೊಲೀಸರು, ಯಾವ …
Read More »