ಬೆಂಗಳೂರು: ಕೊರೊನಾ, ಒಮಿಕ್ರಾನ್ ಸೋಂಕು ಹಿನ್ನೆಲೆಯಲ್ಲಿ ಸಿನಿಮಾ ಥಿಯೇಟರ್ ಮೇಲೆ ಹೇರಲಾಗಿದ್ದ ನಿಯಮವನ್ನು ಸಡಿಲ ಗೊಳಿಸಿದ್ದು, ನಾಳೆಯಿಂದ ಥಿಯೇಟರ್ ಹೌಸ್ ಫುಲ್ಗೆ ಸರ್ಕಾರ ಅನುಮತಿ ನೀಡಿದೆ. ಕಾರಿನಲ್ಲಿ ಏಕಾಂಗಿಯಾಗಿ ಓಡಾಡುವಾಗ ಮಾಸ್ಕ್ ಅಗತ್ಯ ಇಲ್ಲ – ದೆಹಲಿಯಲ್ಲಿ ವಿನಾಯಿತಿ 3 seconds ago ಚೀನಾ ಕಾನೂನು ವಿರುದ್ಧ ಹೇಳಿಕೆ ನೀಡಿದರೆ ಮಾನ್ಯತೆ ರದ್ದು: ಅಥ್ಲೀಟ್ಗಳಿಗೆ ಎಚ್ಚರಿಕೆ 46 seconds ago ಸಿಎಂ ನೇತೃತ್ವದಲ್ಲಿ ಕೋವಿಡ್ ಸಂಬಂಧಿತ ಸಭೆ ನಡೆಸಿದ್ದಾರೆ. ಚಲನಚಿತ್ರ …
Read More »ರಮೇಶ್ ಜಾರಕಿಹೊಳಿ ಅವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ಕ್ಲೀನ್ ಚಿಟ್ ಕೊಟ್ಟಿದೆ.
ಬೆಂಗಳೂರು: ಅತ್ಯಾಚಾರದ ಆರೋಪ ಹೊತ್ತಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ಕ್ಲೀನ್ ಚಿಟ್ ಕೊಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ 1ನೇ ಎಸಿಎಂಎಂ ಕೋರ್ಟ್ಗೆ ಬಿ ರಿಪೋರ್ಟ್ ಪ್ರತಿ ಸಲ್ಲಿಸಿದೆ. 150 ಪುಟಗಳ ಬಿ ರಿಪೋರ್ಟ್ ಅನ್ನು 1ನೇ ಎಸಿಎಂಎಂ ಕೋರ್ಟ್ಗೆ ಸಲ್ಲಿಕೆ ಮಾಡಲಾಗಿದೆ. ಇದರಿಂದ ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿಗೆ ಎಸ್ಐಟಿ ಕ್ಲೀನ್ …
Read More »ದಾನ ನೀಡಿರುವುದು ಪೀಠಕ್ಕೆ ಹೊರತು ಸ್ವಾಮೀಜಿಗೆ ಅಲ್ಲ: ಮುರುಗೇಶ್ ನಿರಾಣಿ
ಮೈಸೂರು: ‘ದಾನ ನೀಡಿರುವುದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಹೊರತು ಅದರ ಸ್ವಾಮೀಜಿಗೆ ಅಲ್ಲ. ಪೀಠಕ್ಕೆ ನೀಡಿರುವ ಕಾಣಿಕೆಯನ್ನು ವಾಪಸ್ ಕೇಳುವಷ್ಟು ಸಣ್ಣವ ನಾನಲ್ಲ. ಅಂತಹ ಮನಸ್ಥಿತಿಯೂ ನನ್ನದ್ದಲ್ಲ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಇಲ್ಲಿ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು. ‘ನಾನು ವಾಪಸ್ಸು ಕೇಳಿದ್ದೇನೆ ಎಂಬುದು ಸುಳ್ಳು. ಸ್ವಾಮೀಜಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ. ದೂರವಾಣಿ ಮೂಲಕ ಸ್ವಾಮೀಜಿ ಜತೆ ಮಾತನಾಡಿಯಾದರೂ ಸ್ಪಷ್ಟನೆ …
Read More »ಅಟ್ಟಾಡಿಸಿ ಜೀಪ್ ಹರಿಸಿ ಕೊಲೆ
ವಿಜಯಪುರ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಮಹಿಳೆಯೊಬ್ಬಳ ಮೇಲೆ ಜೀಪ್ ಹರಿಸಿ ಕೊಲೆ ಮಾಡಿರುವ ಅಮಾನವೀಯ ಘಟನೆ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ನಡೆದಿದೆ. ಶೋಭಾ ಸೋಮನಿಂಗ ಮೊಗದರೆ (45) ಕೊಲೆಯಾದ ಮಹಿಳೆ. ಸಾಗರ ಖತಾರ ಮತ್ತು ಮಾರುತಿ ಥೋರತ ಕೊಲೆ ಮಾಡಿದ ಆರೋಪಿಗಳು. ಕಬ್ಬು ಕಟಾವು ಮಾಡಲು ಒಂದು ತಂಡವನ್ನು ಕರೆತರುತ್ತೇವೆ ಎಂದು ಕೊಲೆಯಾದ ಮಹಿಳೆಯ ಪತಿ ಸೋಮನಿಂಗನಿಂದ ಆರೋಪಿಗಳು 45 ಲಕ್ಷ ರೂ. ಹಣ ಪಡೆದಿದ್ದರು. ಆರೋಪಿ ಮಾರುತಿ …
Read More »ಯಾದಗಿರಿ | ಶೇಂಗಾ ಬೆಲೆ ಕುಸಿತ; ರೈತ ಕಂಗಾಲು
ಯಾದಗಿರಿ: ಜಿಲ್ಲೆಯ ಹಿಂಗಾರು ಹಂಗಾಮಿನ ಪ್ರಮುಖ ಬೆಳೆಯಾದ ಶೇಂಗಾ ದರ ಕುಸಿತ ಕಂಡಿದ್ದು, ರೈತರು ಕಂಗಾಲಾಗಿದ್ದಾರೆ. ಯಾದಗಿರಿ ಮತ್ತು ಗುರುಮಠಕಲ್ ತಾಲ್ಲೂಕಿನಲ್ಲಿ ಅತಿ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಮಾಡಲಾಗಿದ್ದು, ಈಗ ಉತ್ತಮ ಬೆಳೆ ಬಂದಿದೆ. ಆದರೆ, ಸೂಕ್ತ ಬೆಲೆ ಇಲ್ಲದೆ ರೈತರು ಕಡಿಮೆ ದರಕ್ಕೆ ಮಾರಾಟ ಮಾಡುತ್ತಿದ್ದಾರೆ. ಜಮೀನುಗಳಿಂದ ಆಟೊ, ಟಂಟಂ, ಟ್ರ್ಯಾಕ್ಟರ್ ಗಳ ಮೂಲಕ ಶೇಂಗಾ ಆವಕವನ್ನು ಯಾದಗಿರಿ ಎಪಿಎಂಸಿಗೆ ತರಲಾಗುತ್ತಿದೆ. ಆದರೆ, ಬೆಲೆ ಕುಸಿತದಿಂದ …
Read More »ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಎರಡು ದಿನ ಮುಂಚೆ ದುಡ್ಡು ಕೊಟ್ಟಿದ್ದರಿಂದ ನಮಗೆ ಸೋಲಾಯಿತು
ಮಂಡ್ಯ: ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಎರಡು ದಿನ ಮುಂಚೆ ದುಡ್ಡು ಕೊಟ್ಟಿದ್ದರಿಂದ ನಮಗೆ ಸೋಲಾಯಿತು ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ. ಬಿಜೆಪಿ ಸೋಲಿನ ಬಗ್ಗೆ ಗುರುವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪರಾಮರ್ಶೆ ನಡೆಸುತ್ತಿದ್ದ ಬಗ್ಗೆ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡುವಾಗ, ಬಿಜೆಪಿ ಅಭ್ಯರ್ಥಿ ಎರಡು ದಿನ ಮುಂಚೆ ದುಡ್ಡುಕೊಟ್ಟರು. ಇದರಿಂದ ನಮಗೆ ಸೋಲಾಯಿತು ಎಂದು ವಿಶ್ಲೇಷಿಸಿದರು. ತಕ್ಷಣ ಪಕ್ಕದಲ್ಲಿದ್ದ ಸಚಿವ ಕೆ.ಗೋಪಾಲಯ್ಯ …
Read More »ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ: ಇಬ್ಬರು ಮಹಿಳೆಯರು ಸೇರಿ ಮೂವರ ಬಂಧನ
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಓರ್ವ ಪುರುಷ, ಇಬ್ಬರು ಮಹಿಳೆಯರನ್ನು ಮಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಪಿಯುಸಿ ಓದುತ್ತಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು ನಾಲ್ವರನ್ನು ರಕ್ಷಿಸಲಾಗಿದೆ. ಇವರು ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿನಿಯರು. ಮಂಗಳೂರಿನ ಪೆಂಟ್ ಹೌಸ್ ಒಂದರಲ್ಲಿ ಈ ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿತ್ತು. ಬಂಧಿತರನ್ನು ಶಮೀನಾ, ಆಯಿಷಮ್ಮ ಮತ್ತು ಸಿದ್ಧಿಕ್ ಎಂದು ಗುರುತಿಸಲಾಗಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಿ ವಿಡಿಯೋ ರೆಕಾರ್ಡ್ ಮಾಡಿ ಯುವತಿಯರು ಮತ್ತು …
Read More »ಇಂದಿರಾ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಇಂದಿರಾ ಎಂದು ಭಾವಿಸುವುದನ್ನು ನಿಲ್ಲಿಸಬೇಕು”
ನವದೆಹಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಗುರುವಾರದಂದು ಕಾಂಗ್ರೆಸ್ ವಿರುದ್ಧ ಹರಿಹಾಯುತ್ತಾ ದೇಶದಲ್ಲಿ ಎರಡು ಭಾರತಗಳಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಲು ‘ಇಂದಿರಾ ಈಸ್ ಇಂಡಿಯಾ’ ನಂಬಿಕೆಯಿಂದ ಹೊರಬರಬೇಕು ಎಂದು ಹೇಳಿದರು. ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ಬಿಜೆಪಿ ಪರವಾಗಿ ಮಾತನಾಡಿದ ನಖ್ವಿ, ‘ಇಂದಿರಾ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಇಂದಿರಾ ಎನ್ನುವ ಭಾವನೆಯಿಂದ ಹೊರಬರಬೇಕು.ಕಾಂಗ್ರೆಸ್ ಎಂದರೆ ದೇಶ ಮತ್ತು ದೇಶ ಎಂದರೆ ಕಾಂಗ್ರೆಸ್ …
Read More »ಕ್ಯಾನ್ಸರ್ ತಡೆಗೆ ನೀಡುವ ಹೆಚ್ಪಿವಿ ಲಸಿಕೆ ಅಭಿಯಾನ ಕೋವಿಡ್ನಿಂದಾಗಿ ಸ್ಥಗಿತ..!
ಹೈದರಾಬಾದ್: ಜಗತ್ತಿನಲ್ಲಿ ಹೆಚ್ಚಿನ ಸಾವುಗಳ ಪ್ರಮುಖ ಕಾರಣಗಳಲ್ಲಿ ಕ್ಯಾನ್ಸರ್ ಕೂಡ ಒಂದು. ಇಂದು ವಿಶ್ವ ಕ್ಯಾನ್ಸರ್ ಜಾಗೃತಿ ದಿನವಾಗಿದ್ದು, ಈ ರೋಗದ ಬಗ್ಗೆ ಜಾಗೃತಿ ಮೂಡಿಸಲು ವಿಶ್ವಾದ್ಯಂತ ಕ್ಯಾನ್ಸರ್ ದಿನವನ್ನಾಗಿ ಆಚರಿಸಲಾಗುತ್ತದೆ. ಭಾರತದಲ್ಲಿ ಸ್ತನ ಕ್ಯಾನ್ಸರ್, ಗರ್ಭ ಕ್ಯಾನ್ಸರ್, ಶ್ವಾಸಕೋಶ, ತಲೆ ಹಾಗೂ ಕುತ್ತಿಗೆ ಕ್ಯಾನ್ಸರ್ ಪ್ರಕರಣಗಳು ಹೆಚ್ಚಿವೆ. ಕ್ಯಾನ್ಸರ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಜಗತ್ತನ್ನು ಒಟ್ಟುಗೂಡಿಸುವ ಜಾಗತಿಕ ಉಪಕ್ರಮವೇ ವಿಶ್ವ ಕ್ಯಾನ್ಸರ್ ದಿನವಾಗಿದ್ದು, ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ ಮೂಡಿಸುವ …
Read More »ಲವರ್ಗಳ ದಿನದಂದು ನನಗೆ ಯಾವ ಪಕ್ಷದ ಮೇಲೆ ಲವ್ ಅಂತ ಹೇಳುತ್ತೇನೆ
ಫೆಬ್ರವರಿ 14 ರಂದು (February) ಎಂಎಲ್ಸಿ (MLC) ಸ್ಥಾನಕ್ಕೆ ರಾಜೀನಾಮೆ ನೀಡಿ, ಅದೇ ದಿನ ಮುಂದಿನ ರಾಜಕೀಯ ನಿರ್ಧಾರವನ್ನು ನಾನು ಪ್ರಕಟಿಸುತ್ತೇನೆ, ಆದರೆ ಯಾವುದೇ ಕಾರಣಕ್ಕೂ ಹೊಸ ಪಕ್ಷ ಕಟ್ಟುವುದಿಲ್ಲ. ಮೊದಲು ಜನರ ಅಭಿಪ್ರಾಯವನ್ನು ಕೇಳಿಕೊಂಡು ನಂತರ ಯಾವ ಪಕ್ಷಕ್ಕೆ ಹೋಗಬೇಕು ಎಂದು ನಿರ್ಧರಿಸುತ್ತೇನೆ ಎಂದು ಮಾಜಿ ಕಾಂಗ್ರೆಸ್ ಮುಖಂಡ, ಎಂಎಲ್ಸಿ ಸಿ.ಎಂ.ಇಬ್ರಾಹಿಂ (C.M Ibrahim) ಹೇಳಿದ್ದಾರೆ. ಮೈಸೂರಿನಲ್ಲಿ (Mysuru) ಸುದ್ದಿಗಾರರ ಜೊತೆ ಮಾತನಾಡಿದ ಇಬ್ರಾಹಿಂ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ನ (Congress) ಅಧ್ಯಾಯ ಮುಗಿದು ಹೋಗಿದೆ. ಯಾರಿಗೆ ಏನು ಬೇಕೋ ಅದನ್ನು ತಗೊಂಡು ಹೋಗ್ತಿದ್ದಾರೆ. ಮಂಚ, ಬೆಡ್, ದಿಂಬು ಹೀಗೆ ಅವಶ್ಯಕತೆಗೆ ತಕ್ಕಂತೆ ತೆಗೆದುಕೊಂಡು ಹೋಗುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರೋದು ನಿಜಕ್ಕೂ ಕನಸಿನ ಮಾತು ಎಂದು ತಮ್ಮ ಹಳೆಯ ಪಕ್ಷದ ಬಗ್ಗೆ ವ್ಯಂಗ್ಯವಾಡಿದ್ದಾರೆ
Read More »
Laxmi News 24×7