Breaking News

ನಾನೇ ಮಾಡಿದ್ದು ಎಂದು ಬೀಗುವಾಗ ಹತ್ತು ಬಾರಿ ಯೋಚಿಸಿ ಎಂದು ಬಿಜೆಪಿ ಟ್ವೀಟ್

ಬೆಂಗಳೂರು: ಸಿದ್ದರಾಮಯ್ಯನವರೇ, ತಾನೊಬ್ಬ ಅಹಿಂದ ನಾಯಕ ಎಂದು ಅಧಿಕಾರಕ್ಕೆ ಬಂದ ಮೇಲೆ ದಲಿತ ಸಮುದಾಯದ ಪರವಾಗಿ ಕೆಲಸ ಮಾಡುವುದು ನಿಮ್ಮ ಕರ್ತವ್ಯ. ಅದರಲ್ಲಿ ಹೆಚ್ಚುಗಾರಿಕೆ ಮೆರೆಯುವ ಅಗತ್ಯವಿಲ್ಲ. ನಾನೇ ಮಾಡಿದ್ದು ಎಂದು ಬೀಗುವಾಗ ಹತ್ತು ಬಾರಿ ಯೋಚಿಸಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.   ದಲಿತ ವಿರೋಧಿ ಸಿದ್ದರಾಮಯ್ಯ ಹ್ಯಾಷ್ ಟ್ಯಾಗ್ ನಡಿ ಕರ್ನಾಟಕ ಬಿಜೆಪಿ ಸರಣಿ ಟ್ವೀಟ್ ಮಾಡಿದೆ. ಮಾನ್ಯ ಸಿದ್ದರಾಮಯ್ಯನವರೇ, ಎಷ್ಟು ಬಾರಿ ಹಳೆ ಕತೆ ಹೇಳುತ್ತೀರಿ …

Read More »

ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರು ಭಾರತದ ಪುರುಷರ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಕ

ಅಬುಧಾಬಿ: ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರು ಭಾರತದ ಪುರುಷರ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಕವಾಗಿದ್ದಾರೆ. ಬುಧವಾರ ಬಿಸಿಸಿಐ ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡಿದೆ. ಬುಧವಾರ ಅಫ್ಘಾನಿಸ್ಥಾನ ವಿರುದ್ಧದ ಪಂದ್ಯದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಪ ನಾಯಕ ರೋಹಿತ್ ಶರ್ಮಾ, ಆಟಗಾರರೆಲ್ಲಾ ರಾಹುಲ್ ದ್ರಾವಿಡ್ ಅವರೊಂದಿಗೆ ಕೆಲಸ ಮಾಡಲು ಉತ್ಸುಕರಾಗಿದ್ದಾರೆ ಎಂದು ಹೇಳಿದ್ದಾರೆ.   “ರಾಹುಲ್ ದ್ರಾವಿಡ್ ಒಬ್ಬ ದಿಗ್ಗಜ, ಭವಿಷ್ಯದಲ್ಲಿ ಅವರೊಂದಿಗೆ ಕೆಲಸ ಮಾಡಲು ಎದುರು …

Read More »

ರಜನಿಯ ‘ಅಣ್ಣಾಟ್ಟೆ’ ಚಿತ್ರ ರಿಲೀಸ್ : 1 ರೂ.ಗೆ ದೋಸೆ ಮಾರಿದ ಅಭಿಮಾನಿ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಅಣ್ಣಾಟ್ಟೆ’ ಚಿತ್ರ ಇಂದು ಗುರುವಾರ ದೀಪಾವಳಿಯ ಸುಸಂದರ್ಭದಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಿದೆ. ತಿರುಚ್ಚಿಯಲ್ಲಿ ರಜನಿಕಾಂತ್ ಕಟ್ಟಾ ಅಭಿಮಾನಿಯಾಗಿರುವ ಹೊಟೇಲ್ ಮಾಲೀಕ ಕರ್ಣನ್ ಎನ್ನುವವರು ಪ್ರಾರ್ಥನೆಯ ಸಂಕೇತವಾಗಿ 1 ರೂ.ಗೆ ದೋಸೆ ಮಾರುತ್ತಿದ್ದಾರೆ. “ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿ ಮತ್ತು ಚಲನಚಿತ್ರವು ದೊಡ್ಡ ಹಿಟ್ ಆಗಲಿ ಎಂದು ನಾನು ಬಯಸುತ್ತೇನೆ ಮತ್ತು ಪ್ರಾರ್ಥಿಸುತ್ತೇನೆ” ಎಂದು ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅಣ್ಣಾಟ್ಟೆ ತಮಿಳು ಭಾಷೆಯ ಆಕ್ಷನ್ ಡ್ರಾಮಾ …

Read More »

ಮೂರು ತಿಂಗಳ ಪುಟ್ಟ ಕಂದಮ್ಮಳನ್ನು ಹತ್ಯೆಗೈದು ಬಳಿಕ ದಂಪತಿ ಆತ್ಮಹತ್ಯೆ

ಗದಗ: ಮೂರು ತಿಂಗಳ ಪುಟ್ಟ ಕಂದಮ್ಮಳನ್ನು ಹತ್ಯೆಗೈದು ಬಳಿಕ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮಲ್ಲಪ್ಪ ಗಡಾದ (30) ಸುಧಾ (24). ಮೂರು ತಿಂಗಳ ಮಗು ರೂಪಶ್ರೀ ಮೃತ ದುರ್ದೈವಿಗಳು. ದಂಪತಿಗಳಿಬ್ಬರೂ ಹೆತ್ತ ಮಗುವನ್ನೇ ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯ ಹಾಲ್ ನಲ್ಲಿ ಮಲ್ಲಪ್ಪ ನೇಣಿಗೆ ಕೊರಳೊಡ್ಡಿದ್ದರೆ, ಪತ್ನಿ ಸುಧಾ ಹಾಗೂ ಮಗು ರೂಪಶ್ರೀ ಶವ …

Read More »

ದೇ ಕಾರಣಕ್ಕೆ ಎಲ್ಲಾ ಪ್ರಕರಣಗಳಲ್ಲೂ ಎಸ್‌ಸಿಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ಅನ್ವಯಿಸಬಾರದು ಎಂದ ಹೈಕೋರ್ಟ್

ಬೆಂಗಳೂರು: ಸಂತ್ರಸ್ತರು ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರಿದವರು ಎಂಬ ಒಂದೇ ಕಾರಣಕ್ಕೆ ಎಲ್ಲಾ ಪ್ರಕರಣಗಳಲ್ಲೂ ಎಸ್‌ಸಿಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ಅನ್ವಯಿಸಬಾರದು ಎಂದು ಹೈಕೋರ್ಟ್ ಹೇಳಿದೆ. ನಗರದ ವಿಶೇಷ ನ್ಯಾಯಾಲಯದಲ್ಲಿ ರಾಜಾಜಿನಗರದ ನಿವಾಸಿಯೊಬ್ಬರ ವಿರುದ್ಧ ನಡೆಯುತ್ತಿದ್ದ ವಿಚಾರಣೆ ರದ್ದುಗೊಳಿಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ್ ಅವರಿದ್ದ ಪೀಠ, ಈ ಅಭಿಪ್ರಾಯಪಟ್ಟಿತು.   ತುಮಕೂರಿನ ವ್ಯಕ್ತಿಯೊಬ್ಬರು ನೀಡಿದ್ದ ದೂರು ಆಧರಿಸಿ ಎಸ್‌ಸಿಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ(ಪಿಒಎ) ನಡೆಯುತ್ತಿದ್ದ ವಿಚಾರಣೆಯನ್ನು ಅವರು ಹೈಕೋರ್ಟ್‌ನಲ್ಲಿ …

Read More »

ಸುಂದರಿಯರ ಜತೆ ಪಾರ್ಟಿಗೆ ಹೋಗಿ ಎಲ್ಲವನ್ನೂ ಕಳೆದುಕೊಂಡ ಯುವಕರು! ಬಟ್ಟೆಯೂ ಸಿಗದೇ ಗೋಳಾಡಿದರು!

ಮೀರತ್: ಇದೀಗ ಎಲ್ಲೆಡೆ ಹುಡುಗಿಯರೇ ಮೋಸ ಹೋಗಬೇಕೆಂದೇನೂ ಇಲ್ಲ. ಇಂದು ಯುವತಿಯರು, ಮಹಿಳೆಯರು ಪುರುಷರನ್ನು ಮೋಸದ ಬಲೆಗೆ ಸಿಲುಕಿಸುವ ಮಹಾ ಜಾಲಗಳನ್ನು ಬಳಸಿ, ಅವರನ್ನು ಹಳ್ಳಕ್ಕೆ ಬೀಳಿಸುತ್ತಿದ್ದಾರೆ. ಇಂಥದ್ದೇ ಒಂದು ಜಾಲದಿಂದ ಯುವಕರು ಮೋಸ ಹೋಗಿದ್ದೂ ಅಲ್ಲದೇ ವಾಪಸ್‌ ಬರಲು ಬಟ್ಟೆಯೂ ಸಿಗದಂಥ ಪೇಚಿಗೆ ಸಿಲುಕಿದ ಘಟನೆ ಉತ್ತರ ಪ್ರದೇಶದ ಮೀರತ್‌ನ ಖರ್ಖೌಡಾ ಪ್ರದೇಶದಲ್ಲಿ ನಡೆದಿದೆ. ಕೆಲವು ಯುವತಿಯರು ಪಾರ್ಟಿಗೆ ಕರೆದರು ಎಂದು ಯುವಕರು ಅವರ ಹಿಂದೆ ಹೋಗಿದ್ದಾರೆ. ಆರಂಭದಲ್ಲಿ ಯುವಕರನ್ನು …

Read More »

ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಭಾರೀ ಇಳಿಕೆ

ಬೆಂಗಳೂರು: ಸಾಕಷ್ಟು ದಿನಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ.  ಅಬಕಾರಿ ಸುಂಕವನ್ನು ಕಡಿಮೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಧಾರ ಮಾಡಿದ್ದು, ಈ ಬಾರಿಯ ದೀಪಾವಳಿಗೆ ವಾಹನ ಸವಾರರಿಗೆ ಬಂಪರ್ ಗಿಫ್ಟ್​ ನೀಡಿದೆ.  ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 5 ರೂಪಾಯಿ ಮತ್ತು 10 ರೂಪಾಯಿ ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿತ್ತು. ಅಷ್ಟೇ ಅಲ್ಲದೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ …

Read More »

ನಾನು ದಲಿತರ ಬಗ್ಗೆ ಎಲ್ಲೂ ಹೇಳಿಲ್ಲ. ಕಾರಜೋಳ ಸೇರಿ ಕೆಲವರ ಬಗ್ಗೆ ಮಾತನಾಡಿದ್ದೆ. ಅದನ್ನೇ ತಿರುಚಿ ಎತ್ತಿಕಟ್ಟೋಕೆ ನೋಡ್ತಿದ್ದಾರೆ

ಬೆಂಗಳೂರು: ನಾನು ದಲಿತರ ಬಗ್ಗೆ ಎಲ್ಲಿಯೂ ಅವಹೇಳನಕಾರಿಯಾಗಿ ಮಾತನಾಡಿಲ್ಲ. ಬಿಜೆಪಿಯವರು ಈ ವಿಚಾರವನ್ನು ತಿರುಚುವ ಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.   ಬೆಂಗಳೂರಿನ ತಮ್ಮ ಸರ್ಕಾರಿ ನಿವಾಸದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಿಜೆಪಿಯವರು ಸಂವಿಧಾನ ಬದಲಾಯಿಸ್ತೇವೆ ಅಂತಾರೆ. ಸಂವಿಧಾನದಲ್ಲಿ ಸಮಸಮಾಜದ ಬಗ್ಗೆ ಹೇಳಿದೆ. ಅಂತಹ ಸಂವಿಧಾನವನ್ನು ಅವರು ತೆಗೆಯೋಕೆ ಹೊರಟಿದ್ದಾರೆ. ಅದಕ್ಕೆ ನಾನು ದಲಿತರು ಸ್ವಾರ್ಥಕ್ಕೆ ಅಲ್ಲಿಗೆ ಹೋಗಿದ್ದಾರೆ ಎಂದಿದ್ದೆ. ಸಿಂದಗಿ ಪ್ರಚಾರದ ವೇಳೆ …

Read More »

ಹಾನಗಲ್​​​ನಲ್ಲಿ ಸೋತಿದ್ದರೂ ಈ ಚುನಾವಣೆಯ ಫಲಿತಾಂಶ ಬಿಜೆಪಿ ಸರ್ಕಾರ ಹಾಗು ಮುಖ್ಯಮಂತ್ರಿ ನಾಯಕತ್ವದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ :ಕುಮಟಳ್ಳಿ

ಅಥಣಿ: ಸಿಂದಗಿ ಹಾಗು ಹಾನಗಲ್ ಉಪಚುನಾವಣೆ ಫಲಿತಾಂಶ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರದು ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿದರು. ಅಥಣಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್​​ ಅಲ್ಪಮತಗಳಿಂದ ಸೋತಿದ್ದಾರೆ. ಜನರ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದರು. ಅದೇ ರೀತಿ, ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಅವರು 30 ಸಾವಿರ ಅಧಿಕ ಮತಗಳ ಅಂತರದಿಂದ …

Read More »

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ

ಮುಚ್ಚಂಡಿ ಗ್ರಾಮದ ಸರ್ಕಾರಿ ಕನ್ನಡ ಹಾಗೂ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಎಲ್ಲಾ ಗ್ರಾಮಗಳ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಸರ್ಕಾರದ ಅನುದಾನದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದರು. 90 ಲಕ್ಷ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯ: ಗ್ರಾಮದ ಸರ್ಕಾರಿ ಕನ್ನಡ ಹಾಗೂ ಮರಾಠಿ ಶಾಲೆಯಲ್ಲಿ ಇಂದು 90 ಲಕ್ಷ ರೂ. ವೆಚ್ಚದಲ್ಲಿ …

Read More »