Breaking News

ವಾರದಲ್ಲಿ ಒಂದು ದಿನ ತಾಲೂಕು ಆಫೀಸ್ ನಲ್ಲಿ ಜಿಲ್ಲಾಧಿಕಾರಿ ಕೆಲಸ,: ಆರ್. ಅಶೋಕ

ದಾವಣಗೆರೆ: ವಾರದಲ್ಲಿ ಒಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಗಳಲ್ಲಿ ಕೆಲಸ ಮಾಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ. ದಾವಣಗೆರೆಯಲ್ಲಿ ರಾಜ್ಯಮಟ್ಟದ ಗ್ರಾಮಲೆಕ್ಕಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ವಾರದಲ್ಲಿ ಒಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಯಲ್ಲಿ ಕೆಲಸ ಮಾಡುವ ಬಗ್ಗೆ ಒಂದು ವಾರದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.   ಗ್ರಾಮ ಲೆಕ್ಕಾಧಿಕಾರಿಗಳನ್ನು ಗ್ರಾಮ ಕಾರ್ಯನಿರ್ವಹಣಾಧಿಕಾರಿ ಎಂದು ಹುದ್ದೆಯ ಹೆಸರು ಬದಲಾವಣೆ ಮಾಡಲು ಬೇಡಿಕೆಯಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ …

Read More »

ಎರಡೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ‘ಸರ್ಕಾರು ವಾರಿ ಪಾಟ’; ಮಹೇಶ್​ ಬಾಬು ಸಿನಿಮಾ ದಾಖಲೆ

ಮೊದಲಾರ್ಧವನ್ನು ಇಷ್ಟಪಟ್ಟ ಫ್ಯಾನ್ಸ್​ ಸೆಕೆಂಡ್ ಹಾಫ್ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ ಅನೇಕ ಕಡೆಗಳಲ್ಲಿ ಸಿನಿಮಾ ಹೌಸ್​​ಫುಲ್ ಪ್ರದರ್ಶನ ಕಾಣುತ್ತಿದೆ. ಸದ್ಯಪ್ಯಾನ್ ಇಂಡಿಯಾಟ್ರೆಂಡ್ ಜೋರಾಗಿದೆ. ಆದರೆ, ಮಹೇಶ್ ಬಾಬು ಸಿನಿಮಾ ತೆಲುಗಿನಲ್ಲಿ ಮಾತ್ರ ತೆರೆಗೆ ಬಂದಿದೆ. ಆದಾಗ್ಯೂ ಈ ಚಿತ್ರ ದೊಡ್ಡ ಮಟ್ಟದ ಕಲೆಕ್ಷನ್ ಮಾಡುತ್ತಿದೆ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕ ಹೊರತಾಗಿಯೂ ಮಹೇಶ್ ಬಾಬು ಫ್ಯಾನ್ಸ್ ಮುಗಿಬಿದ್ದು ಸಿನಿಮಾ ವೀಕ್ಷಿಸುತ್ತಿದ್ದಾರೆ. ಹೀಗಾಗಿ ಈ ಚಿತ್ರ ಎರಡೇ ದಿನಕ್ಕೆ 100 …

Read More »

ಸಾರ್ವಜನಿಕರ ಎದುರಲ್ಲೇ ಮಹಿಳೆ ಅಂತಾ ನೋಡದೇ ವ್ಯಕ್ತಿಯೊಬ್ಬ ವಕೀಲೆಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ

ಬಾಗಲಕೋಟೆ: ಸಾರ್ವಜನಿಕರ ಎದುರಲ್ಲೇ ಮಹಿಳೆ ಅಂತಾ ನೋಡದೇ ವ್ಯಕ್ತಿಯೊಬ್ಬ ವಕೀಲೆಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬಾಗಲಕೋಟೆ ನಗರದ ವಿನಾಯಕ ನಗರದ ಕ್ರಾಸ್​ನಲ್ಲಿ ನಡೆದಿದೆ. ವಕೀಲೆ ಸಂಗೀತಾ ಶಿಕ್ಕೇರಿ ಹಾಗೂ ಆಕೆಯ ಪತಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ ನಡೆದಿದೆ. ವಿನಾಯಕ ನಗರದ ನಿವಾಸಿ ಮಹಾಂತೇಶ್ ಚೊಳಚಗುಡ್ಡ ಎಂಬಾತನ ವಿರುದ್ಧ ಮಾರಣಾಂತಿಕ‌ವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ನನಗೆ ಕಾಲು, ಎದೆಭಾಗ ಹಾಗೂ ತಲೆಗೆ ಪೆಟ್ಟಾಗಿದೆ ಮತ್ತು ನನ್ನ ಪತಿಗೆ ಕಿವಿ ಹಾಗೂ ತಲೆಗೆ …

Read More »

ಕೆಎಸ್‌ಆರ್ಟಿಸಿ ಬಸ್ – ಬೈಕ್ ನಡುವೆ ಡಿಕ್ಕಿ; ವ್ಯಕ್ತಿ ಸ್ಥಳದಲ್ಲೇ ಸಾವು

ವಿಜಯಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರದ ರಾಷ್ಟ್ರೀಯ ಹೆದ್ದಾರಿ 218ರ ಹೊರವಲಯದ ಗಾನಸಿರಿ ಸರ್ಕಲ್ ಬಳಿ ನಡೆದಿದೆ.   ವಿಜಯಪುರ ಜಿಲ್ಲೆಯ ಮನಗೋಳಿ ಗ್ರಾಮದ ರಾಮನಗೌಡ ಶಂಕ್ರಪ್ಪ ಆಲಗೊಂಡ್ (70) ಮೃತ ದುರ್ದೈವಿಯಾಗಿದ್ದಾನೆ. ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಲಾಡ್ಜ್ ನಲ್ಲಿ ದಾಖಲೆ ಇಲ್ಲದ ಅಪಾರ ಪ್ರಮಾಣದ ನಗದು ಇರುವ ಬ್ಯಾಗ್ ಪತ್ತೆ..!

ಹಾವೇರಿ : ಹಾವೇರಿನಗರದ ಶಿವಶಕ್ತಿ ಪ್ಯಾಲೆಸ್ ಲಾಡ್ಜ್ ‌ ನಲ್ಲಿ ದಾಖಲೆ ಇಲ್ಲದ 58 ಲಕ್ಷ ರೂ ಹಣ ಪತ್ತೆಯಾಗಿದೆ . ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ಮಾಡಿ ಪೊಲೀಸರು ದಾಖಲೆ ಇಲ್ಲದ ಹಣ ಇಟ್ಟುಕೊಂಡಿದ್ದ ನಾಲ್ವರನ್ನು ವಶಕ್ಕೆ ಪಡೆದು ತನಿಖೆಯನ್ನ ಆರಂಭಿಸಿದ್ದಾರೆ . ಯಾವುದೋ ಅಕ್ರಮ ಎಸಗುವ ಉದ್ದೇಶದಿಂದ ಆರೋಪಿಗಳು ಸೂಕ್ತ ದಾಖಲೆಗಳಿಲ್ಲದ ಹಣ ಇಟ್ಟುಕೊಂಡಿದ್ರು ಅಂತ ಪೊಲೀಸರು ಮಾಹಿತಿ ನೀಡಿದ್ದಾರೆ . ಬಂಧಿತ ಅರೋಪಿಗಳನ್ನ ರವಿ , …

Read More »

ಸೋಮವಾರ ಸಂಪುಟ ವಿಸ್ತರಣೆ ಸಾಧ್ಯತೆ

ಬೆಂಗಳೂರು, ಮೇ 14- ಎಲ್ಲವೂ ನಿರೀಕ್ಷೆಯಂತೆ ನಡೆದರೆ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ/ಪುನಾರಚನೆ ಸೋಮವಾರ ನಡೆಯುವ ಸಾಧ್ಯತೆಯಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮುಖರ ಜೊತೆ ಮಾತುಕತೆ ನಡೆಸಿದ್ದಾರೆ.   ರೇಸ್‍ಕೋರ್ಸ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವ ಗೋವಿಂದ ಕಾರಜೋಳ, ಮಾಜಿ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಮತ್ತಿತರರ ಜೊತೆ ಮಾತುಕತೆ ನಡೆಸಲಾಯಿತು. …

Read More »

ಇನ್ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 5 ಗಂಟೆಗೆ ಮಸೀದಿಗಳಲ್ಲಿ ‘ಆಜಾನ್’ ಕೂಗದಿರಲು ‘ಮುಸ್ಲೀಂ ಮುಖಂಡರ ಸಭೆ’ಯಲ್ಲಿ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಸೀದಿಗಳಲ್ಲಿ ಧ್ವನಿ ವರ್ಧಕ ಬಳಕೆಯ ಬಗ್ಗೆ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗಿದೆ. ಬೆಳಗಿನ ಜಾವದಲ್ಲಿ ಇಂತಿಷ್ಟೇ ಡೆಸಿಬಲ್ ಶಬ್ದವನ್ನು ಹೊರಸೂಸುವಂತೆ ಧ್ವನಿ ವರ್ಧಕ ಬಳಕೆಗೂ ಖಡಕ್ ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವಂತ ಮುಸ್ಲೀಂ ಮುಖಂಡರು, ಇನ್ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 5 ಗಂಟೆಯ ಆಜಾನ್ ಕೂಗೋದನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ.   ಈ ಕುರಿತಂತೆ ಮುಸ್ಲೀಂ ಮುಖಂಡರು ಸಭೆ ನಡೆಸಿದ ಬಳಿಕ, ಸುದ್ದಿಗಾರರಿಗೆ ಮಾಹಿತಿ ನೀಡಿದಂತ …

Read More »

ಮೇಲ್ಮನೆ ಚುನಾವಣೆ : ವಿಜಯೇಂದ್ರ ಕಣಕ್ಕೆ..?

ಬೆಂಗಳೂರು,ಮೇ14- ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಅಭ್ಯರ್ಥಿ ಮಾಡಬೇಕೆಂಬ ಅಭಿಪ್ರಾಯ ಕೋರ್ ಕಮಿಟಿ ಸಭೆಯಲ್ಲಿ ವ್ಯಕ್ತವಾಗಿದೆ.   ಮಲ್ಲೇಶ್ವರಂನ ಜಗನ್ನಾಥ ಭವನದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಮೇಲ್ಮನೆಗೆ ವಿಜಯೇಂದ್ರ ಕಣಕ್ಕಿಳಿಸುವ ಬಗ್ಗೆ ಸಭೆಯಲ್ಲಿ ಭಾಗವಹಿಸಿದ್ದ ನಾಯಕರು ಗಂಭೀರ ಚಿಂತನೆ ನಡೆಸಿದ್ದಾರೆ. ಅಂತಿಮವಾಗಿ ಅವರ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಬೇಕು. ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ದರಾಗಿರಬೇಕೆಂಬ ಒಂದು ಸಾಲಿನ …

Read More »

ವಲಸೆ ತಡೆಗೆ ‘ಕೈ’ಕಮಾಂಡ್‌ ಸೂಚನೆ; ಆತಂಕ ತಂದ ಕಮಲ ಪಕ್ಷದ ತಂತ್ರ

ಬೆಂಗಳೂರು: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ನಿಂದ ವಲಸೆ ಪರ್ವ ಆಗದಂತೆ ನೋಡಿಕೊಳ್ಳಲು ಹೈಕಮಾಂಡ್‌ ರಾಜ್ಯ ನಾಯಕರಿಗೆ ಸಂದೇಶ ರವಾನಿಸಿದೆ. ಬಿಜೆಪಿ ಹಳೇ ಮೈಸೂರು ಭಾಗದ ಕಾಂಗ್ರೆಸ್‌ ನಾಯಕರನ್ನು ಗುರಿಯಾಗಿರಿಸಿಕೊಂಡಿದ್ದು, ಮಾಜಿ ಸಂಸದ ಮುದ್ದಹನುಮೇಗೌಡ ಸೇರಿ ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು ಹಾಗೂ ಮೈಸೂರು ಭಾಗದವರನ್ನು ಸಂಪರ್ಕಿಸಿದೆ ಎಂಬ ಮಾಹಿತಿ ಪಡೆದಿರುವ ಹೈಕಮಾಂಡ್‌, ಸ್ವಸಾಮರ್ಥ್ಯ ಹಾಗೂ ಪ್ರಭಾವ ಇರುವವರು ಪಕ್ಷ ತ್ಯಜಿಸದಂತೆ ನೋಡಿಕೊಳ್ಳಲು ಸೂಚಿಸಿದೆ.   ಚುನಾವಣೆಗೆ ಇನ್ನೊಂದು ವರ್ಷ ಇರುವಾಗ …

Read More »

ಬಿಜೆಪಿ ನಿದ್ದೆ ಕೆಡಿಸಿದ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ

ಬೆಳಗಾವಿ: ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಬೆಳಗಾವಿ ಗಡಿ ಪ್ರದೇಶದಲ್ಲಿರುವ 7 ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಸಂಖ್ಯಾತ ಮರಾಠಿ ಮತದಾರರ ಮೇಲೆ ಹಿಡಿತ ಸಾಧಿಸಿ ಯಶಸ್ವಿಯಾಗಿದ್ದ ಬಿಜೆಪಿಗೆ ಇದೀಗ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ ಚಿಂತೆಗೀಡಾಗುವಂತೆ ಮಾಡಿದೆ.   2023ರ ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ಅಥಣಿ, ನಿಪಾಣಿ, ಕಾಗವಾಡ, ಖಾನಾಪುರ, ಬೆಳಗಾವಿ ಗ್ರಾಮಾಂತರ, ಬೆಳಗಾವಿ ದಕ್ಷಿಣ ಮತ್ತು ಬೆಳಗಾವಿ ಉತ್ತರ — ಅಂತರರಾಜ್ಯ ಗಡಿ ಭಾಗದ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ …

Read More »