Breaking News

ಬಿಎಸ್‌ವೈ ಮನೆಯಲ್ಲೇ ಭ್ರಷ್ಟಾಚಾರ , ನಾ ಖಾವೂಂಗ, ನಾ ಖಾನೆದೂಂಗ ಎಂದರೆ ಇದೇನಾ: ಸಿದ್ದರಾಮಯ್ಯ

ಬೆಂಗಳೂರು: ‘ಬಿಜೆಪಿಯವರು ಭ್ರಷ್ಟರು, ಭಂಡರು. ತಮ್ಮ ಹುಳುಕು ಗೊತ್ತಾಗುತ್ತದೆ ಎಂದು ಚರ್ಚೆಗೆ ಅವಕಾಶ ಕೊಡಲಿಲ್ಲ. ಪೊಲೀಸ್‌, ಸಾರಿಗೆ ಮತ್ತು ಆರೋಗ್ಯ ಇಲಾಖೆಗಳಲ್ಲಿನ ವ್ಯಾಪಕ ಭ್ರಷ್ಟಾಚಾರ ವರದಿಗಳು ಪ್ರಕಟ ಆಗಿವೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ವಿರೋಧ ಪಕ್ಷಗಳು ಸುಮ್ಮನಿರಬೇಕಾ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.   ವಿಧಾನಸಭೆಯ ಮೊಗಸಾಲೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ, ನೀರಾವರಿ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಇದನ್ನು ಪ್ರಸ್ತಾಪಿಸುವುದು ಬಿಜೆಪಿಯವರಿಗೆ …

Read More »

ತಂದೆ-ತಾಯಿಯನ್ನು ಬೀದಿಪಾಲು ಮಾಡಿದ ಮಕ್ಕಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ತಕ್ಕ ಪಾಠ ಕಲಿಸಿದ್ದಾರೆ.

ಹಾನಗಲ್​ಕುಟುಂಬದ ಆಸ್ತಿಯನ್ನೆಲ್ಲ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡು ಬೇರೆಯಾಗಿ ಉಳಿದು, ಜೀವನದ ಮುಸ್ಸಂಜೆಯಲ್ಲಿರುವ ತಂದೆ-ತಾಯಿಯನ್ನು ಬೀದಿಪಾಲು ಮಾಡಿದ ಮಕ್ಕಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ತಕ್ಕ ಪಾಠ ಕಲಿಸಿದ್ದಾರೆ.   ಹಾನಗಲ್ ತಾಲೂಕಿನ ಹಿರೇಬಾಸೂರ ಗ್ರಾಮದ 80 ವರ್ಷದ ವೃದ್ಧ ರುದ್ರಗೌಡ ಬಸನಗೌಡ ಪಾಟೀಲ ಹಾಗೂ ನೀಲಮ್ಮ ಪಾಟೀಲ ದಂಪತಿ ಹೆಸರಿನಲ್ಲಿದ್ದ ಎಲ್ಲ ಆಸ್ತಿಯನ್ನೂ ಮಕ್ಕಳು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದರು. ನಂತರ, ತಂದೆ ತಾಯಿಯನ್ನು ನೋಡಿಕೊಳ್ಳದೆ ಬೇರೆಯಾಗಿ ಉಳಿದಿದ್ದರು. ಅವರ ಈ ಧೋರಣೆಯಿಂದ …

Read More »

ಗೋಕಾಕ ಫಾಲ್ಸ್ | Gokak Falls : ‘ನಾನೊಬ್ಬ ದೇವದಾಸಿಯ ಮಗಳು.

Gokak Falls: ಮಾನ್ಯ ಉನ್ನತ ಶಿಕ್ಷಣ ಸಚಿವರೇ, ತೀರ್ಮಾನಕ್ಕೆ ಮೊದಲು ಇನ್ನೂ ಒಮ್ಮೆ ಯೋಚಿಸಿ ಬಡತನ, ಅವಮಾನ, ಸಂಕಟಗಳೆಲ್ಲ ನಮ್ಮ ಜೊತೆಗಾರರನ್ನಾಗಿಸಿಕೊಂಡು ಬೆಳೆದವಳು. ಚಿಕ್ಕಂದಿನಿಂದಲೂ ತುಂಬಾ ಓದಬೇಕು ಎಂಬ ಮಹದಾಸೆ ಇತ್ತು. ಡಿಗ್ರಿ ಮುಗಿದ ಮೇಲೆ ಉನ್ನತ ಶಿಕ್ಷಣಕ್ಕೆ ಹೋಗುವ ಅವಕಾಶವಿರದೆ ಅಲ್ಲಿಗೇ ಓದು ನಿಲ್ಲಿಸಿದ್ದೆ. ನಂತರ ಆರಂಭವಾದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ನನ್ನ ಪಾಲಿನ ದಾರಿದೀಪವಾಯಿತು. ಸ್ನಾತಕೋತ್ತರ ಪದವಿ ಮುಗಿಸಿ, ಸಂಶೋಧನೆ ಮುಗಿಸಿ ಇದೀಗ ಉನ್ನತ ಹುದ್ದೆಯಲ್ಲಿ ಇದ್ದೇನೆ. …

Read More »

ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ನಿಯೋಜಿಸುವ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಆಗಮಿಸಬೇಕು.: ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ

ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ನಿಯೋಜಿಸುವ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಆಗಮಿಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿ ಬೆಳಗಾವಿ ಜಿಲ್ಲೆಗೆ ರಾಜ್ಯದಲ್ಲೇ ಅತ್ಯುತ್ತಮ ಹೆಸರಿದ್ದು ಈ ಬಾರಿಯೂ ಉತ್ತಮ ಪರೀಕ್ಷೆ ನಡೆಯುವಂತಾಗಲು ಎಲ್ಲರೂ ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಸೂಚನೆ ನೀಡಿದರು. ಮಾರ್ಚ 28ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆ ಬುಧವಾರ ಬೆಳಗಾವಿಯ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಬೆಳಗಾವಿ …

Read More »

ಬೆಳಗಾವಿ ಮಹನಗರ ಪಾಲಿಕೆಯ 2022-23ನೇ ಸಾಲಿನ ಬಜೆಟ್‍ನ್ನು ಜಿಲ್ಲಾಧಿಕಾರಿಗಳಾದ ಎಂ.ಜಿ ಹಿರೇಮಠ ಮಂಡಿಸಿದರು.

ಬೆಳಗಾವಿ ಮಹನಗರ ಪಾಲಿಕೆಯ 2022-23ನೇ ಸಾಲಿನ ಬಜೆಟ್‍ನ್ನು ಜಿಲ್ಲಾಧಿಕಾರಿಗಳಾದ ಎಂ.ಜಿ ಹಿರೇಮಠ ಮಂಡಿಸಿದರು. 2022-23ನೇ ಸಾಲಿನಲ್ಲಿ 44,765.22 ಲಕ್ಷಗಳಷ್ಟು ಅಂದಾಜು ಆದಾಯವನ್ನು ನಿರೀಕ್ಷಿಸಲಾಗಿದ್ದು, 44,758.91 ಲಕ್ಷಗಳಷ್ಟು ಅಂದಾಜು ವೆಚ್ಚವನ್ನು ನಿರೀಕ್ಷೆ ಮಾಡಲಾಗಿದೆ. ಬೆಳಗಾವಿಯಲ್ಲಿ ಪಾಲಿಕೆ ಬಜೆಟ್‍ನ್ನು ಮಂಡಿಸಿದ ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ, ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾಹಿತಿಯನ್ನು ಹಂಚಿಕೊಂಡರು. ಬೀದಿ ದೀಪಗಳ ನಿರ್ವಹಣೆಗೆ 550ಲಕ್ಷ ರೂಪಾಯಿಗಳನ್ನು ವ್ಯಯ ಮಾಡಲು ನಿರ್ಧರಿಸಲಾಗಿದೆ. ಸ್ಮಾರ್ಟ್ ಸಿಟಿ ಸಹಯೋಗದೊಂದಿಗೆ ಎಲ್‍ಇಡಿ ಲೈಟ್ ಹಾಕಲು ಯೋಜಿಸದಲಾಗಿದೆ. ರಸ್ತೆ, …

Read More »

ಚರಂಡಿಗಿಳಿದು ಕೊಳಚೆ ಶುಚಿಗೊಳಿಸಿದ ಆಪ್ ಕೌನ್ಸಿಲರ್‌ಗೆ ಹಾಲಿನ ಸ್ನಾನ..!

ದೆಹಲಿ: ಇಲ್ಲಿನ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಹಸೀಬ್-ಉಲ್-ಹಸನ್ ಅವರು ಶಾಸ್ತ್ರಿ ಉದ್ಯಾನದಲ್ಲಿ ಕೊಳಚೆ ತುಂಬಿದ್ದ ಚರಂಡಿಗಿಳಿದು ನೀರನ್ನು ಸ್ವಚ್ಛಗೊಳಿಸಿದ ಪ್ರಸಂಗ ನಡೆದಿದೆ. ಇದಕ್ಕೆ ಪ್ರತಿಯಾಗಿ ಗೌರವ ಸಲ್ಲಿಸಿದ ಸಾರ್ವಜನಿಕರು, ಕೌನ್ಸಿಲರ್ ಅವರನ್ನು ಹಾಲಿನಲ್ಲೇ ಸ್ನಾನ ಮಾಡಿಸಿದ್ದಾರೆ. ಪೂರ್ವ ದೆಹಲಿಯ ಕೌನ್ಸಿಲರ್ ಆಗಿರುವ ಹಸನ್ ಬಿಳಿ ಕುರ್ತಾ ಧರಿಸಿ ಎದೆ ಮಟ್ಟದವರೆಗೆ ತುಂಬಿಕೊಂಡಿದ್ದ ಚರಂಡಿಗೆ ಇಳಿದು ಅಲ್ಲಿನ ಕೊಳಚೆಯನ್ನು ಶುಚಿಗೊಳಿಸಿದರು. ಚರಂಡಿಯಲ್ಲಿ ತೇಲುತ್ತಿದ್ದ ತ್ಯಾಜ್ಯ ವಸ್ತುಗಳನ್ನು ಹಸನ್ ತೆಗೆದು ಹಾಕಿದ್ದಾರೆ. …

Read More »

ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್‌ ವರ್ತಕರಿಗೆ ವ್ಯಾಪಾರ ನಿಷೇಧ ವಿಚಾರ: ಸಿಡಿದೆದ್ದ ಕರಾವಳಿ ಶಾಸಕರು

ಬೆಂಗಳೂರು: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್‌ ವರ್ತಕರಿಗೆ ವ್ಯಾಪಾರಕ್ಕೆ ನಿರ್ಬಂಧ ವಿಚಾರ ವಿಧಾನಸಭೆಯಲ್ಲಿ ಗದ್ದಲ ಸೃಷ್ಟಿ ಮಾಡಿತ್ತು. ಕಾಂಗ್ರೆಸ್ ಮುಸ್ಲಿಂ ಶಾಸಕರು ಮತ್ತು ಬಿಜೆಪಿಯ ಕರಾವಳಿ ಭಾಗದ ಶಾಸಕರ ನಡುವೆ ಮಾತಿನ ಚಕಮಕಿ ನಡೆಯಿತು. ವ್ಯಾಪಾರ ನಿರ್ಬಂಧದ ಭಿತ್ತಿಪತ್ರ ಹಾಕಿದವರು ಹೇಡಿಗಳು, ಕ್ರೂರಿಗಳ ಎಂದ ಖಾದರ್ ಹೇಳಿಕೆ ಗದ್ದಲವನ್ನು ಎಬ್ಬಿಸಿತು. ಶೂನ್ಯ ವೇಳೆಯಲ್ಲಿ ಶಾಸಕ ಯು.ಟಿ.ಖಾದರ್ ವಿಷಯ ಪ್ರಸ್ತಾಪಿಸಿ ರಾಜ್ಯದ ಕೆಲ ಕಡೆ ಧಾರ್ಮಿಕ ಕೇಂದ್ರಗಳಲ್ಲಿ ಕೆಲವು ಧರ್ಮದವರು ವ್ಯಾಪಾರ ಮಾಡಬಾರದು ಎಂದು …

Read More »

ಅದು ಜನರ‌ ಬೆವರ ಹಣವಾಗಿದೆ. ಅದರ ಬಗ್ಗೆ ವ್ಯಾಪಕ ಚರ್ಚೆ ಆಗಬೇಕು : ಸಿಎಂ ಬೊಮ್ಮಾಯಿ-ಸಿದ್ದರಾಮಯ್ಯ ಜಟಾಪಟಿ

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧದ ಶೇ.40ರಷ್ಟು ಕಮಿಷನ್ ಆರೋಪ ಕುರಿತ ನಿಲುವಳಿ ಸೂಚನೆ ನೋಟಿಸ್ ತಿರಸ್ಕಾರವಾದ ವಿಷಯವು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಆಡಳಿತ ಪಕ್ಷದ ನಡುವೆ ಜಟಾಪಟಿಗೆ ಕಾರಣವಾಯಿತು. ನಿಲುವಳಿ ನೋಟಿಸ್ ತಿರಸ್ಕಾರ ಮಾಡಿದ್ದ ಸ್ಪೀಕರ್ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಈಗ ನಿಲುವಳಿ ಪ್ರಸ್ತಾಪಕ್ಕೆ ಅವಕಾಶ ಕೊಡಿ ಎಂದು ಆಗ್ರಹಿಸಿದರು. ಕಮಿಷನ್​ ಆರೋಪದ ಬಗ್ಗೆ ಚರ್ಚೆ ನಡೆಸಲು ನಾನು ಬೆಳಗಾವಿ ಅಧಿವೇಶನದ ವೇಳೆ ನಿಲುವಳಿ ಸೂಚನೆ ಕೊಟ್ಟಿದ್ದೇನೆ. ಅದು …

Read More »

ರಾಜಕೀಯಕ್ಕಿಂತ ಕಾವೇರಿಯೇ ಮುಖ್ಯ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಒಗ್ಗಟ್ಟು ಪ್ರದರ್ಶನ

ಬೆಂಗಳೂರು: ಮೇಕೆದಾಟು ವಿಷಯದಲ್ಲಿ ರಾಜಕೀಯಕ್ಕಿಂತ ನಾಡಿನ ಜನರ ಹಿತ ಮುಖ್ಯ. ನಮ್ಮ ನೆಲ, ಜಲ, ಭಾಷೆ, ಗಡಿಗೆ ಸಂಬಂಧಿಸಿದ ವಿಷಯದಲ್ಲಿ ನಾವೆಲ್ಲ ಒಂದೇ ಎಂದು ನೆರೆ ರಾಜ್ಯಕ್ಕೆ ಸಂದೇಶ ಕಳುಹಿಸಿದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮುಖ್ಯ ನಾಯಕರು ಮಾತಿನ ಚಾಟಿ ಬೀಸಿ ವಿಧಾನಸಭೆಯಿಂದಲೇ ತಮಿಳುನಾಡಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಮಂಗಳವಾರ ಪ್ರಶ್ನೋತ್ತರ ಕಲಾಪದ ಬಳಿಕ ಶೂನ್ಯ ವೇಳೆಯಲ್ಲಿ ತಮಿಳುನಾಡು ವಿಧಾನಸಭೆ ನಿರ್ಣಯದ ವಿಷಯ ಪ್ರಸ್ತಾಪವಾಯಿತು. ಈ ವೇಳೆ, ತಮಿಳುನಾಡಿನ ಗದಾ ಪ್ರಹಾರ …

Read More »

ಗ್ರಾಹಕರಿಗೆ ಮತ್ತೆ ಶಾಕ್​: ಎರಡನೇ ದಿನವು ಪೆಟ್ರೋಲ್​-ಡೀಸೆಲ್​ ಬೆಲೆಯಲ್ಲಿ ಏರಿಕೆ,

ನವದೆಹಲಿ: ನಾಲ್ಕೂವರೆ ತಿಂಗಳ ಬಳಿಕ ನಿನ್ನೆ (ಮಾ.22) ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ 80 ಪೈಸೆಗಳಷ್ಟು ಏರಿಕೆಯಾಗಿತ್ತು. ಇಂದು (ಮಾ.23) ಮತ್ತೆ ಪೆಟ್ರೋಲ್​-ಡೀಸೆಲ್​ ಬೆಲೆಯಲ್ಲಿ 80 ಪೈಸೆ ಹೆಚ್ಚಳವಾಗಿದ್ದು, ಸಾಮಾನ್ಯ ಜನರಿಗೆ ಬ್ಯಾಕ್​ ಟು ಬ್ಯಾಕ್​ ಶಾಕ್​ ಎದುರಾಗುತ್ತಿದೆ. ಒಂದೆಡೆ ಯೂಕ್ರೇನ್​-ರಷ್ಯಾ ಯುದ್ಧದಿಂದ ಖಾದ್ಯ ತೈಲ ಮತ್ತು ಗೋಧಿ ಸೇರಿದಂತೆ ಕೆಲವೊಂದು ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಇದೀಗ ಇಂಧನ ದರ ಮತ್ತೊಮ್ಮೆ ಏರಿಕೆಯಾಗಿರುವು ಅಗತ್ಯ ವಸ್ತುಗಳ ಬೆಲೆ ಏರಿಕೆ ಕಾವು …

Read More »