Breaking News

ಕದ್ರಿ ದೇವಳದ ಹುಂಡಿ ಹಣವನ್ನೇ ನುಂಗಿದ ಮಹಿಳಾ ಟ್ರಸ್ಟಿ!

ಮಂಗಳೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದವರು, ಅಲ್ಲಿನ ಅಭಿವೃದ್ಧಿ ವಿಚಾರ ನೋಡುವುದು, ಹಿತ ಕಾಪಾಡುವ ಕೆಲಸ ಮಾಡಬೇಕು. ರಾಜ್ಯದಲ್ಲೇ ಬಹುತೇಕ ಆಸ್ತಿಕರು ಭೇಟಿ ನೀಡುವ ತಾಣ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನ. ಇಲ್ಲಿನ ಮಹಿಳಾ ಟ್ರಸ್ಟಿಯೋರ್ವರು ಹುಂಡಿಯ ಹಣವನ್ನೇ ನುಂಗಿ ಹಾಕಿರುವುದು ಈಗ ಬಯಲಾಗಿದೆ. ಫೆಬ್ರವರಿಯಲ್ಲಿ ನಡೆದಿರುವ ಈ ಪ್ರಕರಣ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈಗ ವಿಚಾರ ಹಲವು ತಿರುವು ಪಡೆದುಕೊಂಡಿದೆ. ಸ್ಥಳೀಯರು ಹಾಗೂ ದೇಗುಲದ ಭಕ್ತರು ಈ ಪ್ರಕರಣದ ಕುರಿತು …

Read More »

ಜೇಮ್ಸ್​’ ಪ್ರದರ್ಶನ ತಡೆಗೆ ಬಿಜೆಪಿ ಯತ್ನ!

ಬೆಂಗಳೂರು: ರಾಜ್ಯದ ಅನೇಕ ಕಡೆ ಬಿಜೆಪಿ ಶಾಸಕರು ನಟ ಪುನೀತ್​ ರಾಜ್​ಕುಮಾರ್​ ಅಭಿನಯದ ಜೇಮ್ಸ್​ ಪ್ರದರ್ಶನ ನಿಲ್ಲಿಸಿ ‘ದಿ ಕಾಶ್ಮೀರ್​ ಫೈಲ್ಸ್’​ ಚಿತ್ರ ಪ್ರದರ್ಶನ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎಂಬ ದೂರುಗಳಿವೆ. ಸರ್ಕಾರ ಕೂಡಲೇ ಈ ದೌರ್ಜನ್ಯಕ್ಕೆ ತಡೆ ಹಾಕಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.   ಸೋಮವಾರ ಜೇಮ್ಸ್​ ಚಿತ್ರದ ನಿರ್ಮಾಪಕ ಕಿಶೋರ್ ಅವರು​ ನನ್ನನ್ನು ಭೇಟಿಯಾಗಿ, ಅನೇಕ ಕಡೆಗಳಲ್ಲಿ ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರು ಜೇಮ್ಸ್​ ಚಿತ್ರ ಪ್ರದರ್ಶನ …

Read More »

ಕಚ್ಚಾ ಬಾದಮ್​ ಹಾಡಿಗೆ ಪೊಲೀಸ್​ ಸಿಬ್ಬಂದಿ ಹಾಕಿದ ಸ್ಟೆಪ್ಸ್​:

ನವದೆಹಲಿ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಹಲ್​ಚಲ್​ ಎಬ್ಬಿಸಿರುವ ಹಾಡೆಂದರೆ ಅದು ಕಚ್ಚಾ ಬಾದಾಮ್. ಫೇಸ್​ಬುಕ್​, ಟ್ವಿಟರ್​, ಯೂಟ್ಯೂಬ್​ ಮತ್ತು ಇನ್​ಸ್ಟಾಗ್ರಾಂ ಎಲ್ಲಿ ನೋಡಿದರೂ ಬರೀ ಕಚ್ಚಾ ಬಾದಾಮ್​ ರೀಮಿಕ್ಸ್​ ಹಾಡೇ ಕಣ್ಣು ಮುಂದೆ ಬರುತ್ತಿದೆ. ಇನ್ನೂ ಕೂಡ ಅದರ ಪ್ರಭಾವ ಮಾತ್ರ ಕಡಿಮೆಯಾಗಿಲ್ಲ. ಅಲ್ಲದೆ, ಈ ಹಾಡಿಗೆ ಫಿದಾ ಆದ ಎಷ್ಟೋ ಮಂದಿ ಸೊಂಟ ಬಳಕಿಸುತ್ತಿದ್ದಾರೆ. ಇದೀಗ ಪೊಲೀಸ್​ ಸಿಬ್ಬಂದಿ ಇದೇ ಹಾಡಿಗೆ ಡಾನ್ಸ್​ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ …

Read More »

ಬಟ್ಟೆ ಬ್ಯಾಗ್​ನಿಂದ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಎದುರಾಯ್ತು ಸಂಕಷ್ಟ!

ಮೈಸೂರು: ಬಟ್ಟೆ ಬ್ಯಾಗ್ ಖರೀದಿ ಹಗರಣದ ತನಿಖೆಗೆ ಸರ್ಕಾರ ಆದೇಶ ಹೊರಡಿಸಿದ್ದು, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ಎದುರಾಗಿದೆ. ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ರೋಹಿಣಿ ಸಿಂಧೂರಿ ಅವರು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೂರ್ವಾನುಮತಿ ಇಲ್ಲದೆ 14.71 ಲಕ್ಷ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್‌ಗಳನ್ನು 14 ಕೋಟಿ ರೂ.ಗೆ ಖರೀದಿ ಮಾಡಿದ್ದರು. ಚಿಲ್ಲರೆ ಮಾರುಕಟ್ಟೆಯಲ್ಲಿ 10ರಿಂದ 13 ರೂ.ಗೆ ಸಿಗುವ ಪ್ರತಿ ಬ್ಯಾಗ್‌ಗೆ 52 ರೂ. ಕೊಡಲಾಗಿದೆ. ಸಾರ್ವಜನಿಕರ ತೆರಿಗೆ …

Read More »

ವೇಶ್ಯಾವಾಟಿಕೆ ದೋಖಾ: ರೇಟ್​ ಫಿಕ್ಸ್​ ಮಾಡಿ ಸ್ವರ್ಗ ತೋರಿಸ್ತೀವಿ ಅಂತಾರೆ. ಆಮೇಲೆ ಆಗೋದೇ ಬೇರೆ

 ಆನೇಕಲ್​ನ ಪ್ರತಿಷ್ಠಿತ ಬಡಾವಣೆಯಲ್ಲಿ ಆನ್​ಲೈನ್​ ವೇಶ್ಯಾವಾಟಿಕೆ ದೋಖಾ ಬಯಲಾಗಿದೆ. ಸೋಷಿಯಲ್​ ಮೀಡಿಯಾದಲ್ಲಿ ಚಂದದ ಫೋಟೋ ಹಾಕಿ ನೈಟ್​ಗೆ ಇಷ್ಟು, ಗಂಟೆಗೆ ಇಷ್ಟು ಅಂತ ರೇಟ್​ ಫಿಕ್ಸ್​ ಮಾಡಿ ಹಣ ವಸೂಲಿ ಮಾಡುತ್ತಿದ್ದರು. ಪ್ರತಿಷ್ಠಿತ ಕಾಲೇಜೊಂದರ ಕೆಲ ವಿದ್ಯಾರ್ಥಿಗಳು ಈ ಜಾಲದಲ್ಲಿ ಆಕ್ಟಿವ್ ಆಗಿದ್ದರು ಎಂಬ ಆಘಾತಕಾರಿ ವಿಷಯವೂ ಬಯಲಾಗಿದೆ. , ವರದಿ ಪ್ರಸಾರ ಆಗುತ್ತಿದ್ದಂತೆ ಭವ್ಯಶ್ರೀ ಹೆಸರಿನಲ್ಲಿದ್ದ ಫೇಸ್​ಬುಕ್ ಅಕೌಂಟ್ ಡಿಲೀಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಯುವಕರನ್ನು ಖೆಡ್ಡಕ್ಕೆ ಕೆಡವುತ್ತಿದ್ದ …

Read More »

ಕಾರ್ವಿುಕರಿಗೆ ಕನಿಷ್ಠ ವೇತನ ಭದ್ರತೆ; ತಿಂಗಳಿಗೆ 10,685 ರೂಪಾಯಿಗಿಂತ ಕಡಿಮೆ ಸಂಬಳ ಕೊಡುವಂತಿಲ್ಲ

ಭದ್ರತಾ ಏಜೆನ್ಸಿ ಹಾಗೂ ಆಟೋಮೊಬೈಲ್ ಇಂಡಸ್ಟ್ರಿಗಳಲ್ಲಿ ಕೆಲಸ ಮಾಡುವ ಕಾರ್ವಿುಕರಿಗೆ ‘ಕನಿಷ್ಠ ವೇತನ’ ನಿಗದಿಪಡಿಸಿ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿದೆ. ಕೆಲವೇ ದಿನಗಳಲ್ಲಿ ಹೊಸ ಕಾಯ್ದೆ ಜಾರಿಯಾಗಲಿದ್ದು, ತಿಂಗಳಿಗೆ ಕನಿಷ್ಠ ವೇತನ 10,685 ರೂ. (ತುಟ್ಟಿಭತ್ಯೆ ಹೊರತುಪಡಿಸಿ) ನಿಗದಿಪಡಿಸಿದೆ. ರಾಜ್ಯಾದ್ಯಂತ ಭದ್ರತಾ ಏಜೆನ್ಸಿಗಳಲ್ಲಿ ಕೆಲಸ ಮಾಡುವ, ಏಜೆನ್ಸಿಗಳ ಮೂಲಕ ನೇಮಕ ಮಾಡಿಕೊಳ್ಳುವ ಎಲ್ಲ ಸಿಬ್ಬಂದಿ ಹಾಗೂ ಆಟೋಮೊಬೈಲ್ ಇಂಜಿನಿಯರಿಂಗ್ ಕ್ಷೇತ್ರದ (ಉತ್ಪಾದನೆ, ಅಸೆಂಬ್ಲಿಂಗ್, ಬಾಡಿ …

Read More »

ಮೂರು ಮದ್ವೆ ಆದ್ರೂ ಮುಗಿಯದ ಚೆಲ್ಲಾಟ!

ಮೈಸೂರು: ಈಕೆಗೆ ಒಂದಲ್ಲ, ಎರಡಲ್ಲ, ಮೂರು ಮದುವೆ ಆಗಿದೆ. 3ನೇ ಗಂಡನ ಜತೆ ಸಂಸಾರ ನಡೆಸುತ್ತಿದ್ದರೂ ಮತ್ತೊಬ್ಬನ ಜತೆ ಲವ್ಬಿ ಡವ್ವಿ ಶುರುವಿಟ್ಟುಕೊಂಡು ರೆಡ್​ಹ್ಯಾಂಡ್​ ಆಗೇ ಸಿಕ್ಕಿಬಿದ್ದ ಘಟನೆ ರಾಜೀವ್ ನಗರದಲ್ಲಿ ಸಂಭವಿಸಿದೆ. ಉದಯಗಿರಿಯ ನಿಧಾಖಾನ್​ಗೆ ಈಗಾಗಲೇ 3 ಮದುವೆ ಆಗಿದೆ. ಮೊದಲ ಮತ್ತು 2ನೇ ಗಂಡನಿಂದ ದೂರವಾಗಿರುವ ಈಕೆಗೆ, ಟೆಂಡರ್ ಆಯಪ್ ಮೂಲಕ ರಾಜೀವ್ ನಗರದ ಅಜಾಮ್ ಖಾನ್​ನ ಪರಿಚಯವಾಗಿತ್ತು. ಮೊದಲ ಮದುವೆ ವಿಷ್ಯ ಮುಚ್ಚಿಟ್ಟ ನಿಧಾಖಾನ್​, 2ನೇ ಮದುವೆ …

Read More »

ಹೀರೋ ಮೋಟೋಕಾರ್ಪ್ ಅಧ್ಯಕ್ಷ, ಎಂಡಿ ನಿವಾಸ, ಕಚೇರಿ ಮೇಲೆ ಐಟಿ ದಾಳಿ

ನವದೆಹಲಿ: ಹೀರೋ ಮೋಟೋಕಾರ್ಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪವನ್ ಮುಂಜಾಲ್ ಅವರ ಗುರುಗ್ರಾಮ್ ಕಚೇರಿ ಮತ್ತು ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಮುಂಜಾನೆ ದಾಳಿ ನಡೆಸಿದೆ. ಆದಾಯ ತೆರಿಗೆ ಇಲಾಖೆಯು ಹೀರೋ ಮೋಟೋಕಾರ್ಪ್ ನ ಹಲವು ಪ್ರದೇಶಗಳಲ್ಲಿ ಶೋಧ ನಡೆಸುತ್ತಿದೆ. ಪ್ರವರ್ತಕ ಪವನ್ ಮುಂಜಾಲ್ ಅವರ ಕಚೇರಿ ಮತ್ತು ನಿವಾಸ ಮತ್ತು ಕಂಪನಿಯ ಉನ್ನತ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಿದ ಪ್ರದೇಶಗಳು ಈ ಹುಡುಕಾಟದಲ್ಲಿವೆ. ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ …

Read More »

60 ಕಿ.ಮೀ. ಪರಿಮಿತಿಗೆ ಒಂದೇ ಟೋಲ್ ಪ್ಲಾಜಾ: ನಿತಿನ್ ಗಡ್ಕರಿ

ನವದೆಹಲಿ: ‘ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿ 60 ಕಿ.ಮೀ ಮಿತಿಯಲ್ಲಿ ಒಂದು ಟೋಲ್‌ ಪ್ಲಾಜಾ ಕಾರ್ಯನಿರ್ವಹಿಸಲಿದೆ. ಹೆಚ್ಚುವರಿ ಇದ್ದಲ್ಲಿ ಮುಂದಿನ ಮೂರು ತಿಂಗಳಲ್ಲಿ ಅವುಗಳನ್ನು ತೆಗೆಯಲಾಗುವುದು’ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.   ಅವರು ಮಂಗಳವಾರ ಲೋಕಸಭೆಯಲ್ಲಿ ಈ ವಿಷಯ ತಿಳಿಸಿದರು. ‘ಗರಿಷ್ಠ 8 ಪ್ರಯಾಣಿಕರು ಇರುವ ವಾಹನನಗಳಲ್ಲಿ ಸುರಕ್ಷತೆಗೆ ಒತ್ತುನೀಡಲು, ಅಂಥ ವಾಹನಗಳಲ್ಲಿ ಕನಿಷ್ಠ 6 ಏರ್‌ಬ್ಯಾಗ್‌ ಇರುವುದನ್ನು ಕಡ್ಡಾಯಗೊಳಿಸಲಾಗಿದೆ’ ಎಂದು ತಿಳಿಸಿದರು. ‘ವಿದ್ಯುತ್‌ …

Read More »

ಮೂವರು ಹೆಂಡ್ತಿಯರ ಗಂಡನ ಕೊಲೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ಎ ರಡನೇ ಪತ್ನಿಯೇ ತನ್ನ ಪತಿಯನ್ನು ಕೊಲ್ಲಲು ಲಕ್ಷಗಟ್ಟಲೇ ಸುಪಾರಿ

ಬೆಳಗಾವಿ: ಬೆಳಗಾವಿಯ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣ ಭೇದಿಸುವಲ್ಲಿ ಗ್ರಾಮೀಣ ‌ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗಂಡನ ಬ್ಯುಸಿನೆಸ್ ಪಾರ್ಟ್ನರ್​ಗಳ ಜತೆಗೂಡಿ ಎರಡನೇ ಪತ್ನಿಯೇ ಹತ್ಯೆಗೆ ಸುಪಾರಿ ನೀಡಿರುವ ಸಂಗತಿ ಬೆಳಕಿಗೆ ಬಂದಿದೆ. ಕೊಲೆಯಾದವನ ಎರಡನೇ ಪತ್ನಿ ಸೇರಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಗಂಡನ ಕೊಲೆ : ಬೆಳಗಾವಿಯ ಭವಾನಿ ನಗರದ ಗಣಪತಿ ಮಂದಿರ ಬಳಿ ಮಾ.15 ರಂದು ರಿಯಲ್ ಎಸ್ಟೇಟ್ ಉದ್ಯಮಿ ರಾಜು ದೊಡ್ಡಬೊಮ್ಮನ್ನವರ್​ನ್ನು (46) ಬರ್ಬರವಾಗಿ ಕೊಲೆ ಮಾಡಲಾಗಿತ್ತು. ರಾಜು …

Read More »