Breaking News

ಆರ್​ಸಿಬಿ ಫೈನಲ್​ಗೇರಿದ ಖುಷಿಯಲ್ಲಿ ಪೆಟ್ರೋಲ್ ಚೀಲ ಸಿಡಿಸಿ ಸಂಭ್ರಮಾಚರಣೆ: ರಾಯಚೂರಿನಲ್ಲಿ 8 ಯುವಕರ ಬಂಧನ

ರಾಯಚೂರು, : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು (RCB) ಮೇ 29 ರಂದು ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಭರ್ಜರಿ ಗೆಲ್ಲುವು ದಾಖಲಿಸಿ ಐಪಿಎಲ್ ಫೈನಲ್ (IPL) ಪ್ರವೇಶಿಸಿತ್ತು. ಆರ್​ಸಿಬಿ ಅಭಿಮಾನಿಗಳು ರಾಜ್ಯದಾದ್ಯಂತ ಸಂಭ್ರಮಾಚರಣೆ ಮಾಡಿದ್ದರು. ಅನೇಕ ಕಡೆಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಗಿತ್ತು. ಗಡಿ ಜಿಲ್ಲೆ ರಾಯಚೂರಿನಲ್ಲಿ ಯುವಕರ ಗುಂಪೊಂದು ಪೆಟ್ರೋಲ್ ಬಾಂಬ್ ರೀತಿಯಲ್ಲಿ ಪೆಟ್ರೋಲ್ ಚೀಲಗಳನ್ನು ಸಿಡಿಸಿ ಸಂಭ್ರಮ ಆಚರಣೆ ಮಾಡಿದ್ದು, ಇದೀಗ ಜೈಲು ಪಾಲಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದ ಯುವಕರ ಗುಂಪು ಆರ್ಸಿಬಿ …

Read More »

ವಿಧಾನಸೌಧ ಪ್ರವಾಸ ಇಂದಿನಿಂದ ಆರಂಭ

ಬೆಂಗಳೂರು, ಜೂನ್​ 01: ರಾಜಕಾರಣಿಗಳು ಮತ್ತು ಅಧಿಕಾರಿಗಳಿಂದಲೇ ತುಂಬಿರುತ್ತಿದ್ದ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ (Vidhan Soudha) ಒಳಕ್ಕೆ ಇನ್ನು ಜನಸಾಮಾನ್ಯರು ಕೂಡ ಹೋಗಬಹುದಾಗಿದೆ. ದೂರದ ಊರಿನಿಂದ ಬೆಂಗಳೂರಿಗೆ (Bengaluru) ಬರುವ ಹಲವರಿಗೆ ವಿಧಾನಸೌಧ ನೋಡಬೇಕು ಎಂಬ ಆಸೆ ಇರುತ್ತದೆ. ಆದರೆ, ಇಷ್ಟು ದಿನಗಳ ಕಾಲ ಹೊರಗಿನಿಂದಲೇ ವಿಧಾನಸೌಧವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಈಗ ವಿಧಾನಸೌಧದ ಒಳಗೆ ಹೋಗಬಹುದು. ಅದರೊಳಗೆಲ್ಲ ಸುತ್ತಾಡಬಹುದು. ಆ ಭವ್ಯ ಕಟ್ಟಡವನ್ನು ಮುಟ್ಟಬಹುದು. ಹೌದು, ಭವ್ಯ ವಿಧಾನಸೌಧ ವೀಕ್ಷಣೆಗೆ ರಾಜ್ಯ …

Read More »

ಸರಿಯಾದ ಸಮಯಕ್ಕೆ ಬಾರದ ಆಂಬ್ಯುಲೆನ್ಸ್, ನಡುರಸ್ತೆಯಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ ನಾರಿಯರು

ಮಹಾರಾಷ್ಟ್ರ, ಜೂನ್ 1 : ಹೆರಿಗೆ (Childbirth) ಎನ್ನುವುದು ಹೆಣ್ಣಿಗೆ ಮರುಹುಟ್ಟು ಇದ್ದಂತೆ. ಮಗುವಿಗೆ ಜನ್ಮ ನೀಡುವುದು ಹೆಣ್ಣಿಗೆ ಹುಟ್ಟು ಸಾವಿನ ನಡುವಿನ ಹೋರಾಟ. ಹೀಗಾಗಿ ಈ ಸಮಯದಲ್ಲಿ ಆಕೆ ಅನುಭವಿಸುವ ನೋವನ್ನು ಹೇಳಲು ಅಸಾಧ್ಯ. ಹೆರಿಗೆ ನೋವು ಕಾಣಿಸಿಕೊಂಡಾಗ ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಗುತ್ತದೆ. ಕೆಲವೊಮ್ಮೆ ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್‌ ಬರುವುದೇ ಇಲ್ಲ. ಹೀಗಾಗಿ ಮಾರ್ಗ ಮಧ್ಯದಲ್ಲೇ ಹೆರಿಗೆ ಆಗುವುದಿದೆ. ಆದರೆ ಇದೀಗ ಆರೋಗ್ಯ ಸೌಲಭ್ಯದ ಕೊರತೆಯಿಂದ ಆದಿವಾಸಿ …

Read More »

ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ

ಪ್ರತಿ ತಿಂಗಳಿನಂತೆ ಇಂದೂ ಪೆಟ್ರೋಲಿಯಂ ಕಂಪನಿಗಳಿಂದ ಗ್ಯಾಸ್ ಸಿಲಿಂಡರ್ ದರ ಪರಿಷ್ಕರಣೆಗೊಂಡಿದ್ದು, ವಾಣಿಜ್ಯ ಸಿಲಿಂಡರ್ ಗಳ ದರವನ್ನು 24 ರೂ. ಕಡಿತಗೊಳಿಸಲಾಗಿದೆ.  ದೇಶಾದ್ಯಂತ ಈ ದರ ಇಂದಿನಿಂದಲೇ ಜಾರಿಗೆ ಬರಲಿದ್ದು, 19 ಕೆ.ಜಿ ವಾಣಿಜ್ಯ ಸಿಲಿಂಡ‌ರ್ ದರ ನವದೆಹಲಿಯಲ್ಲಿ 1723 ರೂ. ಆಗಿದೆ. ಗೃಹಬಳಕೆ ಸಿಲಿಂಡ‌ರ್ ದರ ಯಾವುದೇ ಪರಿಷ್ಕರಣೆಯಾಗಿಲ್ಲ. ಹೀಗಾಗಿ ಗೃಹಬಳಕೆ ಸಿಲಿಂಡರ್‌ ದರ ಯಥಾವತ್ತಾಗಿ ಮುಂದುವರೆಯಲಿದೆ. ಕೆಲವೇ ದಿನಗಳ ಹಿಂದಷ್ಟೇ ಹೋಟೆಲ್ ಗಳು ಸಿಲಿಂಡರ್‌ ಮತ್ತು ಹಾಲಿನ …

Read More »

ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಥೈಲ್ಯಾಂಡ್ ಮೂಲದ ಸುಂದರಿ ಈ ಬಾರಿಯ ಮಿಸ್ ವರ್ಲ್ಡ್-2025

ಹೈದರಾಬಾದ್‌ನಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಥೈಲ್ಯಾಂಡ್ ಮೂಲದ ಸುಂದರಿ ಈ ಬಾರಿಯ ಮಿಸ್ ವರ್ಲ್ಡ್-2025 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಗೆದ್ದ ವಿಶ್ವ ಸುಂದರಿಗೆ ಚಿನ್ನದಿಂದ ಮಾಡಿದ ವಜ್ರ ಖಚಿತ ಕೀರಿತವನ್ನು ತೊಡಿಸಲಾಗುತ್ತದೆ.ಈ ಪ್ರತಿಷ್ಠಿತ ಮಿಸ್ ವರ್ಲ್ಡ್ ಕಿರೀಟ ಹಿಂದಿನ ಯಾವುದೇ ಕಿರೀಟಕ್ಕಿಂತ ಭಿನ್ನವಾಗಿದೆ.175.49 ಕ್ಯಾರೆಟ್‌ಗಳ 1,770 ವಜ್ರಗಳಿಂದ ಮಾಡಿದ, 18 ಕ್ಯಾರೆಟ್ ಬಿಳಿ ಚಿನ್ನದಲ್ಲಿ ಹೊಂದಿಸಲಾಗಿದೆ. ಈ ಕಿರೀಟದ ಮೌಲ್ಯ ಸುಮಾರು ಮೂರು ಕೋಟಿ …

Read More »

ಬೆಳಗಾವಿಯಲ್ಲಿ ಮತ್ತೋರ್ವ ಬಾಲಕಿಯ ಸಾಮೂಹಿಕ ಅತ್ಯಾಚಾರ: ಇಬ್ಬರು ಅಪ್ರಾಪ್ತರು ಸೇರಿ ಐವರ ಬಂಧನ

ಬೆಳಗಾವಿ: 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಇಬ್ಬರು ಅಪ್ರಾಪ್ತರು ಸೇರಿ ಐವರನ್ನು ಇಲ್ಲಿನ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಒಂದೇ ತಿಂಗಳ ಅಂತರದಲ್ಲಿ ಬೆಳಗಾವಿಯಲ್ಲಿ ದಾಖಲಾದ ಎರಡನೇ ಅತ್ಯಾಚಾರ ಪ್ರಕರಣವಿದು. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ‌ ಮೊದಲ ಬಾರಿಗೆ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದ ಕಿರಾತಕರು, ಬಳಿಕ ಮತ್ತೆ ಜನವರಿಯಲ್ಲಿ ಅತ್ಯಾಚಾರ ಎಸಗಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಪೋಷಕರು ನಿನ್ನೆ ಬೆಳಗ್ಗೆ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದರು. ಪೋಕ್ಸೋ …

Read More »

ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಕೆಗೆ ಆಗ್ರಹ: ಜೂನ್​ 13ರಿಂದ ಪಾಠ ನಿಲ್ಲಿಸಿ ಹೋರಾಟದ ಎಚ್ಚರಿಕೆ –

ಮೈಸೂರು: ರಾಜ್ಯ ಸರ್ಕಾರ ಕಳೆದ ಹಲವು ವರ್ಷಗಳಿಂದ ಸತತವಾಗಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಕನಿಷ್ಠ ಸೌಲಭ್ಯವನ್ನೂ ನೀಡದೇ ವಂಚಿಸುತ್ತಿದೆ. ಹೀಗಾಗಿ ಜೂನ್​ 13ರಿಂದ ಅತಿಥಿ ಶಿಕ್ಷಕರು ಶಾಲೆ ತೊರೆದು ಪ್ರತಿಭಟಿಸಲಿದ್ದಾರೆ ಎಂದು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಖಜಾಂಚಿ ಹೆಚ್.ಎಸ್.ಸೌಮ್ಯ ಎಚ್ಚರಿಕೆ ನೀಡಿದರು. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಶಾಲಾ ಶಿಕ್ಷಣ ಮತ್ತು ಪ್ರಾಥಮಿಕ ಸಾಕ್ಷರತಾ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಇವರು ಅತಿಥಿ …

Read More »

ಕಾಲಿನ ಗಾಯಕ್ಕೆ ಚಿಕಿತ್ಸೆ ಪಡೆದ 7 ವರ್ಷದ ಬಾಲಕಿ ಸಾವು

ಮಂಡ್ಯ: ಮಂಡ್ಯದಲ್ಲಿ ಇತ್ತೀಚೆಗೆ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಬೈಕ್‌ನಿಂದ ಬಿದ್ದ ಕೂಡಲೇ ಕ್ಯಾಂಟರ್​ ಹರಿದು ಮಗು ಸಾವನ್ನಪ್ಪಿತ್ತು. ಈ ಘಟನೆ ಮಾಸುವ ಮುನ್ನವೇ ಮಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಕಾಲಿನ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ 7 ವರ್ಷದ ಬಾಲಕಿ ಮೃತಪಟ್ಟಿದ್ದು, ಪೋಷಕರು ಆಕ್ರೋಶ ವ್ಯಕ್ತಪಡಿಸಿದರು. ಬಾಲಕಿ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ, ಪೋಷಕರು ಸೇರಿದಂತೆ ವಿವಿಧ ಸಂಘಟನೆಗಳು ಆಸ್ಪತ್ರೆ ಎದುರು ಸೇರಿ ಪ್ರತಿಭಟನೆ ನಡೆಸಿದರು. ಮಳವಳ್ಳಿ …

Read More »

ರಾಜ್ಯದಲ್ಲಿ ನಿಯಂತ್ರಣಕ್ಕೆ ಬಾರದ ಬಾಲ್ಯ ವಿವಾಹ ಸಿಎಂ ತವರು ಜಿಲ್ಲೆ ಮೈಸೂರಲ್ಲಿ ಅತೀ ಹೆಚ್ಚು ದೂರು:

ಬೆಂಗಳೂರು: ಪ್ರಗತಿಶೀಲ ರಾಜ್ಯವಾದ ಕರ್ನಾಟಕದಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಅದೆಷ್ಟೇ ಜಾಗೃತಿ ಮೂಡಿಸಿ, ಕಠಿಣ ಕ್ರಮಗಳನ್ನು ಕೈಗೊಂಡರೂ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯರ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇದೆ. ಕರ್ನಾಟಕ ಶೈಕ್ಷಣಿಕ, ಸಾಮಾಜಿಕ, ತಂತ್ರಜ್ಞಾನಗಳಲ್ಲಿ ಆಧುನಿಕತೆಯನ್ನು ಮೈಗೂಡಿಸಿಕೊಂಡು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯ. ಆದರೂ ಕೂಡ ಬಾಲ್ಯ ವಿವಾಹದ ಪಿಡುಗು ಇನ್ನೂ ಮುಂದುವರೆದಿದೆ. ಅದರ ಜೊತೆಗೆ ಬಾಲ ಗರ್ಭಿಣಿಯರ ಸಂಖ್ಯೆಯೂ ಹೆಚ್ಚುತ್ತಿದೆ. ರಾಜ್ಯದ …

Read More »

ರಸ್ತೆ, ಬೀದಿಗಳಲ್ಲಿ ಉಗುಳಿದ್ರೆ ಬೀಳುತ್ತೆ 1000 ರೂ. ದಂಡ!

ಬೆಂಗಳೂರು: ಮೇ 31ಅನ್ನು ವಿಶ್ವ ತಂಬಾಕು ದಿನಾಚರಣೆಯಾಗಿ ಆಚರಿಸಲಾಯಿತು. ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವ ಜೊತೆಗೆ ರಾಜ್ಯ ಸರ್ಕಾರ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಸೇವನೆಗೂ ನಿಷೇಧ ವಿಧಿಸಿ ಅಧಿಸೂಚನೆ ಹೊರಡಿಸಿದೆ. ಇಲ್ಲಿಯವರೆಗೆ ಸಿಗರೇಟು, ಬೀಡಿ ಸೇರಿದಂತೆ ಹೊಗೆಯುಕ್ತ ತಂಬಾಕು ಉತ್ಪನ್ನಗಳ ಸೇವನೆಯನ್ನು ಸಾರ್ವಜನಿಕ ಸ್ಥಳಗಳಲ್ಲಿ ನಿರ್ಬಂಧಿಸಲಾಗಿತ್ತು. ಈಗ ಹೊಗೆರಹಿತ ತಂಬಾಕು ಉತ್ಪನ್ನಗಳ ಬಳಕೆಯನ್ನೂ …

Read More »