Breaking News

ವಾದ ವಿವಾದದ ನಡುವೆಯೂ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಐದು ದಿನದಲ್ಲಿ ಬರೋಬ್ಬರಿ 60 ಕೋಟಿ ಬಾಚಿದೆ.

ವಾದ ವಿವಾದದ ನಡುವೆಯೂ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಐದು ದಿನದಲ್ಲಿ ಬರೋಬ್ಬರಿ 60 ಕೋಟಿ ಬಾಚಿದೆ. ಈ ಮಾದರಿಯ ಸಿನಿಮಾಗಳಲ್ಲೇ ಅತೀ ಕಡಿಮೆ ಸಮಯದಲ್ಲಿ ಇಷ್ಟೊಂದು ಗಳಿಕೆ ಮಾಡಿದ ಮೊದಲ ಚಿತ್ರ  ಎಂಬ ಹೆಗ್ಗಳಿಕೆಗೂ ಕಾರಣವಾಗಿದೆ. ಈ ಕುರಿತು ಬಾಲಿವುಡ್ ಖ್ಯಾತ ಟ್ರೇಡ್ ಅನಾಲಿಸಿಸ್ಟ್ ಟ್ವೀಟ್ ಕೂಡ ಮಾಡಿದ್ದು, ಆಯಾ ದಿನದ ಗಳಿಕೆಯ ಲೆಕ್ಕ ಕೊಟ್ಟಿದ್ದಾರೆ. ಮೊದಲ ದಿನ 3.55 ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ ಹರಿದು ಬಂದಿದ್ದರೆ, …

Read More »

ಬಲವಂತದ ಬಂದ್​ ಆಚರಣೆ ಸರಿಯಲ್ಲ – ರಸ್ತೆಗಿಳಿದರೆ ಕಾನೂನು ಕ್ರಮ: ಕಮಲ್ ಪಂತ್ ಎಚ್ಚರಿಕೆ!

ಬೆಂಗಳೂರು: ಹಿಜಾಬ್ ತೀರ್ಪು ವಿರೋಧಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಕರ್ನಾಟಕ ಬಂದ್ ಕರೆ ನೀಡಿರುವ ಹಿನ್ನೆಲೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ‌ ಕಮಲ್‌ ಪಂತ್ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಬುಧವಾರದಂದು ಸಭೆ ನಡೆಸಿದರು. ನಗರದಲ್ಲಿ 144 ಸೆಕ್ಷನ್ ಜಾರಿಯಿದ್ದರೂ ಬಂದ್ ಕರೆ ನೀಡಿರುವುದು ಸರಿಯಲ್ಲ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಲಿದೆ. ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸುವುದು, ರಸ್ತೆಯಲ್ಲಿ ಜನರನ್ನು ಗುಂಪು ಗೂಡಿಸುವುದು ಕಂಡು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು …

Read More »

ಹಾವೇರಿ: ಸಹಾಯಕ ಎಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ,30 ಎಲ್‌ಐಸಿ ಪಾಲಿಸಿಗಳು ಪತ್ತೆ

ಹಾವೇರಿ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸಹಾಯಕ ಎಂಜಿನಿಯರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣ ಕೇಶಪ್ಪ ಆರೇರ ಅವರ ಕಚೇರಿ ಮತ್ತು ಮನೆ ಸೇರಿದಂತೆ ಏಕಕಾಲದಲ್ಲಿ ನಾಲ್ಕು ಕಡೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.   ನಗರದ ಬಸವೇಶ್ವರ ನಗರ ಬಿ ಬ್ಲಾಕ್‌ನ 16ನೇ ಕ್ರಾಸ್‌ನಲ್ಲಿರುವ ಸ್ವಂತ ಮನೆ; ಹಾವೇರಿ ಎಪಿಎಂಸಿ ಕಚೇರಿ ಹಾಗೂ ಸ್ವಗ್ರಾಮ ಹಾನಗಲ್‌ ತಾಲ್ಲೂಕಿನ ಡೊಳ್ಳೇಶ್ವರದ ಸಹೋದರರ ಮನೆಗಳ ಮೇಲೆ ಒಟ್ಟು …

Read More »

ಮಣಿಪುರದಲ್ಲಿ ಬಿರೆನ್ ಸಿಂಗ್, ಗೋವಾದಲ್ಲಿ ಸಾವಂತ್ ಸಿಎಂ ಆಗಿ ಮುಂದುವರಿಕೆ ಸಾಧ್ಯತೆ

ನವದೆಹಲಿ: ಮಣಿಪುರದಲ್ಲಿ ಎನ್‌. ಬಿರೆನ್ ಸಿಂಗ್ ಹಾಗೂ ಗೋವಾದಲ್ಲಿ ಪ್ರಮೋದ್ ಸಾವಂತ್ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿದೆ. ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಗೋವಾದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು, ಹೊಸ ಸರ್ಕಾರ ರಚನೆಯ ಸಂಬಂಧ ಪ್ರಮೋದ್‌ ಸಾವಂತ್ …

Read More »

ಕ್ಷುಲ್ಲಕ ರಾಜಕಾರಣ ಮಾಡುವವರನ್ನು ಕ್ಷೇತ್ರದ ಜನತೆ ಸಹಿಸಲ್ಲ: ಹೆಬ್ಬಾಳ್ಕರ್ ಎಚ್ಚರಿಕೆ

ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಳೆದ 4 ವರ್ಷದಿಂದ ಆಗುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಕೆಲವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಅನಗತ್ಯವಾಗಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆಲ್ಲ ಕ್ಷೇತ್ರದ ಜನರು ಕಿವಿಗೊಡುವುದಿಲ್ಲ. ಜನರಿಗೆ ಅಭಿವೃದ್ಧಿ ಬೇಕಾಗಿದೆಯೇ ಹೊರತು ರಾಜಕೀಯವಲ್ಲ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಕ್ಷೇತ್ರದ ವಿವಿಧೆಡೆ ಮಂಗಳವಾರ ರಸ್ತೆ ಕಾಮಗಾರಿಗಳಿಗೆ ಪೂಜೆ ಸಲ್ಲಿಸಿ ಅವರು ಮಾತನಾಡುತ್ತಿದ್ದರು. ನಾನು ರಾಜಕಾರಣವನ್ನು ಚುನಾವಣೆಗಷ್ಟೇ …

Read More »

ಕಾಂಗ್ರೆಸ್ ಲೋಫರ್ ಪಾರ್ಟಿ: ಯತ್ನಾಳ್

ಕಾಂಗ್ರೆಸ್ ಲೋಫರ್ ಪಾರ್ಟಿ ಎಂದು ಕಾಂಗ್ರೆಸ್ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. ವಿಜಯಪುರ ನಗರದ ತೊರವಿ ಎಲ್.ಟಿ ನಂ 4ರಲ್ಲಿ ಮಾದ್ಯಮಗಳಿಗೆ ಯತ್ನಾಳ್ ಈ ರೀತಿ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಲೋಫರ್ ಪಾರ್ಟಿ ಎಂದು ಇತ್ತಿಚೆಗೆ ಬಿಜೆಪಿಗೆ ಬ್ರೋಕರ್ ಪಾರ್ಟಿ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಗೆ ಯತ್ನಾಳ್ ಟಾಂಗ್ ನೀಡಿದರು. ಬಿಜೆಪಿಗೆ ಬ್ರೋಕರ್ ಎಂದವರಿಗೆ ಕಾಂಗ್ರೆಸ್ ಲೋಫರ್ ಪಾರ್ಟಿ ಅನ್ನೋದು …

Read More »

ಹಾಪ್ ಪಿಚ್ ಕ್ರಿಕೆಟ್ ಪಂದ್ಯಾವಳಿ ಬ್ಯಾಟ್ ಹಿಡಿದು ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಹೆಬ್ಬಾಳಕರ್,

ಬೆಳಗಾವಿ  ಗ್ರಾಮೀಣ ಕ್ಷೇತ್ರದ ಚಂದನಹೊಸೂರ ಗ್ರಾಮದ ಪವರ್ ಸ್ಟಾರ್ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಹಾಪ್ ಪಿಚ್ ಕ್ರಿಕೆಟ್ ಪಂದ್ಯಾವಳಿಗಳನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮಂಗಳವಾರ ಸಂಜೆ ಉದ್ಘಾಟಸಿದರು. ಈ ಕ್ರಿಕೆಟ್ ಪಂದ್ಯಾವಳಿಯ ಪ್ರಥಮ ಬಹುಮಾನವನ್ನು ಲಕ್ಷ್ಮೀ ತಾಯಿ ಫೌಂಡೇಷನ್‌ ವತಿಯಿಂದ ನೀಡಲಾಗುತ್ತಿದೆ. ಬ್ಯಾಟ್ ಹಿಡಿದು ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಹೆಬ್ಬಾಳಕರ್, ರಾಜಕೀಯಕ್ಕಷ್ಟೇ ಅಲ್ಲ ಕ್ರೀಡೆಗೂ ಸೈ ಎಂದು ತೋರಿಸಿದರು. ಕಲಹೊತ್ತು ಕ್ರಿಕೆಟ್ ಆಡಿ ಕ್ರೀಡಾಪಟುಗಳನ್ನು …

Read More »

ಬೆಳಗಾವಿಯ ಆಟೋನಗರದಲ್ಲಿನ ಸ್ಟಾಕ್ ಯಾರ್ಡ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ

ಬೆಳಗಾವಿಯ ಆಟೋನಗರದಲ್ಲಿನ ಸ್ಟಾಕ್ ಯಾರ್ಡ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಲಕ್ಷಾಂತರ ರೂಪಾಯಿ ಮೌಲ್ಯದ ಕೈಗಾರಿಕಾ ವೇಸ್ಟೇಜ್ ಬೆಂಕಿಗಾಹುತಿಯಾಗದೆ. ಹೌದು ಇತ್ತೀವೆಗೆ ಬೆಳಗಾವಿ ನಗರದಲ್ಲಿ ಬೆಂಕಿ ಅವಘಡಗಳಿ ದಿನದಿಂದ ದಿನಕ್ಕೆ ಹೆಚಚಾಗುತ್ತಿವೆ. ಆಕಸ್ಮಿಕವಾಗಿ ಕಾಣಿಸಿಕೊಳ್ಳುವ ಬೆಂಕಿಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತಿಗಳು ಬೆಂಕಿಗೆ ಆಹುತಿಯಾಗುತ್ತಿವೆ. ಹಾಗೆಯೇ ಇಂದು ಆಟೋ ನಗರದಲ್ಲಿನ ವಿವಿಧ ಇಂಡಸ್ಟ್ರೀಸ್‍ಗಳ ವೇಸ್ಟೇಜ್ ಸ್ಟಾಕ್ ಮಾಡುವ ಸ್ಟಾಕ್ ಯಾರ್ಡ್‍ನಲ್ಲಿ ಇಂದಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ …

Read More »

ತುಕ್ಕಾನಟ್ಟಿ ಗ್ರಾಮದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅಂಗವಾಗಿ ಮಾ.17ರಂದು ಬೆಳಿಗ್ಗೆ ನೇತ್ರದಾನ

ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಗುರುನಾಥ್ ಉಪ್ಪಾರ್ ಅವರ ನೇತೃತ್ವ ಹಾಗೂ ಬೈಲಹೊಂಗಲನ ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅಂಗವಾಗಿ ಮಾ.17ರಂದು ಬೆಳಿಗ್ಗೆ ನೇತ್ರದಾನಕ್ಕೆ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯ ಕೆಎಲ್‍ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ನೇತ್ರ ಭಂಡಾರಕ್ಕೆ 50 ಜನರು ಸ್ವಯಂ ಪ್ರೇರಿತರಾಗಿ ನೇತ್ರದಾನ ಮಾಡಲು ನೋಂದಣಿ ಮಾಡಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬೆಳಗಾವಿಯ ಅಮ್ಮ ಪ್ರತಿμÁ್ಠನದ ಅಧ್ಯಕ್ಷ ಬಾಳಾಸಾಹೇಬ ಉದಗಟ್ಟಿ ಉಪಸ್ಥಿತಿ ಇರಲಿದ್ದಾರೆ …

Read More »

2022 | ಪೊಲೀಸ್ ಹುದ್ದೆಗೆ ಅರ್ಜಿ ಅಹ್ವಾನ

ಪೊಲೀಸ್ ಹುದ್ದೆಗೆ ಅರ್ಜಿ ಅಹ್ವಾನ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಅಧಿಸೂಚನೆ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ಭರ್ತಿ ಗೆ ಅಧಿಸೂಚನೆ ಬೆಂಗಳೂರು ನಗರ 593, ರೈಲ್ವೆ ಮತ್ತು ಬೆಂಗಳೂರು ಗ್ರಾ 35 ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರಬೇಕು ಬೆಂಗಳೂರು : ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಅಧಿಸೂಚನೆ ಹೊರಡಿಸಿದೆ.   ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 1500 ಸ್ಥಾನಗಳನ್ನು ಭರ್ತಿ …

Read More »