Breaking News

ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ

ನವದೆಹಲಿ: ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 102.50 ರೂಪಾಯಿ ಹೆಚ್ಚಳ ಮಾಡಿದ್ದು, 2,355.50ರೂ. ಏರಿಕೆ ಕಂಡಿದೆ. ಆದರೆ ಗೃಹ ಉಪಯೋಗಿ ಸಿಲಿಂಡರ್ ಮೇಲೆ ಯಾವುದೇ ದರ ಏರಿಕೆ ಆಗಿಲ್ಲ. ಒಂದು ತಿಂಗಳ ಹಿಂದೆ ವಾಣಿಜ್ಯ ಹಾಗೂ ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಪರಿಷ್ಕರಿಸಿತ್ತು. ಏಪ್ರಿಲ್ 1ರಂದು ಎಲ್‍ಪಿಜಿ ಬೆಲೆಯು 250ರೂ. ಏರಿಕೆಯಾಗಿ 2,253ರೂ. ಹೆಚ್ಚಳವಾಗಿತ್ತು. ಎಲ್‍ಪಿಜಿ ಬೆಲೆಯನ್ನು ಪ್ರತಿ ತಿಂಗಳ ಮೊದಲ ದಿನ ಪರಿಷ್ಕರಿಸುವ ಶಿಷ್ಟಾಚಾರವನ್ನು ಅನುಸರಿಸಲಾಗುತ್ತಿದೆ. ಸದ್ಯ …

Read More »

ನಾಳೆಯಿಂದ ‘ರಾಜ್ಯ ಸರ್ಕಾರಿ ನೌಕರ’ರ ವರ್ಗಾವಣೆ ಆರಂಭ:

ಬೆಂಗಳೂರು: ಶೇ.6ರಷ್ಟು ಮೀರದಂತೆ ರಾಜ್ಯದ ಸರ್ಕಾರಿ ನೌಕರರ ವರ್ಗಾವಣೆಗೆ ( Karnataka Government Employees ) ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇದರ ಜೊತೆ ಜೊತೆಗೆ ವರ್ಗಾವಣೆಯ ಹೊಣೆಗಾರಿಕೆಯನ್ನು ಆಯಾ ಇಲಾಖಾ ಸಚಿವರಿಗೆ ನೀಡಿ ಆದೇಶಿಸಿದೆ.   ಈ ಬಗ್ಗೆ ರಾಜ್ಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಸರ್ಕಾರಿ ನೌಕರರ ವರ್ಗಾವಣೆ ( Transfer of Government Employees ) ಕುರಿತಂತೆ …

Read More »

ಸರ್ಕಾರಿ ನೌಕರನ 2ನೇ ಪತ್ನಿ ಮಕ್ಕಳಿಗೂ `ಅನುಕಂಪ ನೌಕರಿ’ : ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು : ಸರ್ಕಾರಿ ನೌಕರನ 2 ನೇ ಪತ್ನಿ ಅಥವಾ ನಂತರದ ಪತ್ನಿಯಿಂದ ಜನಿಸಿದ ಮಕ್ಕಳನ್ನು ಸಹ ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಪರಿಗಣಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996 ಅನ್ವಯ ಸರ್ಕಾರಿ ನೌಕರರು ಸೇವೆಯಲ್ಲಿ ಇರುವಾಗ ಮೃತಪಟ್ಟಲ್ಲಿ ಅವರ ಅವಲಂಬಿತರಲ್ಲಿ ಅರ್ಹರಾದ ಒಬ್ಬರಿಗೆ ನಿಯಮಗಳಲ್ಲಿ ನಿಗದಿಪಡಿಸಿರುವ ಷರತ್ತು ಮತ್ತು ನಿಬಂಧನೆಗಳನ್ನು ಪೂರೈಸುವ ಷರತ್ತಿಗೆ ಒಳಪಟ್ಟು ಅನುಕಂಪದ …

Read More »

ಇಂದಿನಿಂದ ಜೂ.15ರ ವರೆಗೆ ಸರಕಾರಿ ನೌಕರರ ವರ್ಗಾವಣೆ

ಬೆಂಗಳೂರು: 2022-23ನೇ ಸಾಲಿನಲ್ಲಿ ಮಾಡಲಾಗುವ ಸರಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಿಸಿ ಮಾರ್ಗಸೂಚಿಗಳನ್ನು ಹೊರಡಿಸಿರುವ ಸರಕಾರ, ಆಯಾ ಇಲಾಖಾ ಸಚಿವರಿಗೆ ವರ್ಗಾವಣೆ ಅಧಿಕಾರ ನೀಡಿದೆ. ಮಾರ್ಗಸೂಚಿ ಪ್ರಕಾರ, ಪ್ರತಿ ವರ್ಷ ಮೇ ಮತ್ತು ಜೂನ್‌ ತಿಂಗಳಲ್ಲಿ ಮಾತ್ರ ವರ್ಗಾವಣೆಗಳನ್ನು ಮಾಡಬಹುದು.   ಈ ಹಿನ್ನೆಲೆಯಲ್ಲಿ 2022-23ನೇ ಸಾಲಿಗೆ ಎ, ಬಿ, ಸಿ ಮತ್ತು ಡಿ ಗ್ರೂಪ್‌ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜ್ಯೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ 2022ರ …

Read More »

ಈ ಕಾರಣಕ್ಕೆ ಮತ್ತೊಮ್ಮೆ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ‘ರಾಕಿಂಗ್ ಸ್ಟಾರ್’ ಯಶ್

ರಾಕಿಂಗ್ ಸ್ಟಾರ್ ಯಶ್ ಚಿತ್ರರಂಗದಲ್ಲಿ ಮಾತ್ರವಲ್ಲ ತಮ್ಮ ಸಾಮಾಜಿಕ ಕಾರ್ಯಗಳಿಂದಾಗಿಯೂ ಅಪಾರ ಜನಮನ್ನಣೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಬರಗಾಲ ಬಂದ ಸಂದರ್ಭದಲ್ಲಿ ಬರಪೀಡಿತ ಪ್ರದೇಶಗಳಿಗೆ ನೀರು ಪೂರೈಕೆ ಮಾಡಿದ್ದ ಯಶ್ ಅವರು ಆ ಬಳಿಕವೂ ತಮ್ಮ ಸಾಮಾಜಿಕ ಕಾರ್ಯವನ್ನು ಮುಂದುವರಿಸಿದ್ದಾರೆ. ನೆರವು ಬೇಡಿ ಬಂದವರಿಗೆ ಎಂದಿಗೂ ಸಹಾಯ ಹಸ್ತ ಚಾಚುವ ರಾಕಿಂಗ್ ಸ್ಟಾರ್ ಯಶ್, ಈಗ ಮತ್ತೊಂದು ಕಾರಣಕ್ಕೆ ಮತ್ತೊಮ್ಮೆ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರ …

Read More »

ಮಸೀದಿ ಒಳ ನುಗ್ಗಿ ಅತ್ಯಾಚಾರಕ್ಕೆ ಯತ್ನ: ಮರ್ಮಾಂಗ ತೋರಿಸಿ ಅಸಭ್ಯ ವರ್ತನೆ, ಉಳ್ಳಾಲ ಪೊಲೀಸರಿಂದ ಆರೋಪಿ ಬಂಧನ

11 ಹುಡುಗಿಯರ ಜೊತೆ ಅಶ್ಲೀಲ ಸೆಲ್ಫಿ ತೆಗೆದು 2018ರಲ್ಲಿ ಹೋಮ್ ಗಾರ್ಡ್ ಕೆಲಸದಿಂದ ಅಮಾನತ್ತಾಗಿದ್ದ. ಲಾಡ್ಜ್ ಸೇರಿದಂತೆ ವಿವಿಧ ಕಡೆ ಸೆಲ್ಫಿ ತೆಗೆದು ವೈರಲ್ ಮಾಡಿದ್ದ. ಹಾಗಾಗಿ ಅಂದು ಸಸ್ಪೆಂಡ್ ಮಾಡಲಾಗಿತ್ತು.ಮಂಗಳೂರು: ಮಸೀದಿ ಒಳಗೆ ನುಗ್ಗಿ ಅತ್ಯಚಾರಕ್ಕೆ(Rape)ಯತ್ನಿಸಿದ್ದ ಆರೋಪಿಯನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ನಿಟ್ಟೆ ನಿವಾಸಿ ಸುಜಿತ್ ಶೆಟ್ಟಿ(26) ಬಂಧಿತ ಆರೋಪಿ. ಏ.29ರಂದು ಬೆಳಗಿನ ಜಾವ 2 ಗಂಟೆಗೆ ಮಸೀದಿಗೆ ನುಗ್ಗಿದ್ದು, ಮಹಿಳೆಯರು ನಮಾಜ್ ಮಾಡುತ್ತಿದ್ದ ಕೊಠಡಿಗೆ ನುಗ್ಗಿ …

Read More »

ಜೆಡಿಎಸ್ ಶಾಸಕ ಸಾರಾ ಮಹೇಶ್ ಮೇಲೆ ಎಫ್ ಐಆರ್ ದಾಖಲು ಆರೋಪ : ರಾತ್ರೋರಾತ್ರಿ ಠಾಣೆ ಎದುರು ಧರಣಿ

ಮೈಸೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಮೇಲೆ ಎಫ್ ಐಆರ್ ದಾಖಲಾಗಿದೆ ಎನ್ನಲಾಗಿದ್ದು, ಈ ಹಿನ್ನೆಲೆಯ ಸ್ವತಃ ಶಾಸಕ ಸಾ.ರಾ.ಮಹೇಶ್ ಅವರೇ ಠಾಣೆಗೆ ಆಗಮಿಸಿ ತಮ್ಮನ್ನು ಬಂಧಿಸುವಂತೆ ಪ್ರತಿಭಟಿಸುತ್ತಿರುವ ಘಟನೆ ನಡೆಯುತ್ತಿದೆ.   ಆರ್ ಟಿಐ ಕಾರ್ಯಕರ್ತ ಗಂಗರಾಜು ಎಂಬುವವರು ನೀಡಿದ ದೂರಿನ ಮೇರೆಗೆ ಶಾಸಕ ಸಾ.ರಾ.ಮಹೇಶ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಸಾ.ರಾ.ಮಹೇಶ್ ಸ್ವತಃ ಠಾಣೆಗೆ ಆಗಮಿಸಿದ್ದು, ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡರ …

Read More »

ಮೇ.2ರಂದು ‘ರಂಜಾನ್ ಆಚರಣೆ’ಗೆ ನಿರ್ಧಾರ: ರಾಜ್ಯ ಸರ್ಕಾರದಿಂದ ‘ಸಾರ್ವತ್ರಿಕ ರಜೆ’ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ರಂಜಾನ್ ರಜೆಯನ್ನು ದಿನಾಂಕ 03-05-2022ರಂದು ನಿಗದಿ ಪಡಿಸಿ ಘೋಷಣೆ ಮಾಡಿತ್ತು. ಆದ್ರೇ.. ಮೂನ್ ಕಮಿಟಿ ತೀರ್ಮಾನದಿಂದಾಗಿ ಇದೀಗ ದಿನಾಂಕ 02-05-2022ರಂದು ಬದಲಾವಣೆ ಮಾಡಿ ಮರು ನಿಗದಿಪಡಿಸಿ, ಸಾರ್ವತ್ರಿಕ ರಜೆಯಾಗಿ ಘೋಷಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, 2022ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ದಿನಾಂಕ 03-05-2022ರಂದು ಖುತುಬ್ ಎ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆ …

Read More »

ಬಿಡುಗಡೆಯಾದ ಮೊದಲ ದಿನವೇ ಮಕಾಡೆ ಮಲಗಿದ ಅಜಯ್‌ ದೇವಗನ್‌ ರ ʼರನ್ ವೇ 34ʼ

ಹಿಂದಿ ರಾಷ್ಟ್ರ ಭಾಷೆ ಎಂದು ವರಾತ ತೆಗೆದು ದೇಶಾದ್ಯಂತ ತೀವ್ರ ಟೀಕೆಗೆ ಗುರಿಯಾಗಿದ್ದ ಬಾಲಿವುಡ್ ನಟ ಅಜಯ್ ದೇವಗನ್ ಅವರ ಬಹುನಿರೀಕ್ಷಿತ ಚಿತ್ರ ʼರನ್ ವೇ 34ʼ ಬಾಕ್ಸಾಫೀಸ್ ನಲ್ಲಿ ಮುಗ್ಗರಿಸಿ ಬಿದ್ದಿದೆ. ಸ್ವತಃ ಅಜಯ್ ದೇವಗನ್ ನಿರ್ಮಿಸಿ, ನಿರ್ದೇಶಿಸಿ, ಬಿಗ್ ಬಿ ಅಮಿತಾಭ್ ಬಚ್ಚನ್ ಜತೆ ನಟಿಸಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳಿದ್ದವು.   ಆದರೆ, ಚಿತ್ರ ಬಿಡುಗಡೆಗೆ ಎರಡು ಮೂರು ದಿನಗಳಿರುವಾಗ ದೇವಗನ್ ಭಾಷೆ ವಿಚಾರದಲ್ಲಿ …

Read More »

ಹುಬ್ಬಳ್ಳಿ ಘಟನೆ: ಗಲಭೆಕೋರರಿಗೆ ಕಾಂಗ್ರೆಸ್ ನೆರವು ನೀಡಿದೆ ಎಂದ ಸಿಎಂ

ನವದೆಹಲಿ ಏಪ್ರಿಲ್ 30: ಹುಬ್ಬಳ್ಳಿ ಗಲಭೆ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹರಿಹಾಯದಿದ್ದಾರೆ. ‘ಹುಬ್ಬಳ್ಳಿ ಗಲಭೆ ಪ್ರಕಾರದಲ್ಲಿ ಬಂಧಿತರ ನೆರವಿಗೆ ಧಾವಿಸಿರುವುದು ಶಾಸಕ ಜಮೀರ್ ಅಹಮದ್ ಹಾಗೂ ಅವರ ಪಕ್ಷದ ನಿಲುವು ಆಗಿದೆ. ಗಲಭೆ ಮಾಡಿದವ ಜೊತೆ ನಿಲ್ಲುವ ಕೆಲಸವನ್ನು ಮೊದಲಿನಿಂದಲೂ ಮಾಡಿಕೊಂಡೇ ಬಂದಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಗೆ ಆಗಮಿಸಿ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹುಬ್ಬಳ್ಳಿ ಪ್ರಕರಣದಲ್ಲಿ ಶಾಸಕ ಜಮೀರ್ …

Read More »