Breaking News

ಪಂಜಾಬ್‌ನಲ್ಲಿ ಹೀನಾಯವಾಗಿ ಸೋತ ನವಜೋತ್ ಸಿಂಗ್ ಸಿಧು

ಚಂಡೀಗಢ: ಪಂಜಾಬ್‍ನಲ್ಲಿ ಎಎಪಿ ಅಬ್ಬರದ ನಡುವೆ ಕಾಂಗ್ರೆಸ್‍ಗೆ ಹಿನ್ನಡೆಯಾಗಿದೆ. ಅಮೃತಸರ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್‍ನ ರಾಜ್ಯ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸೋಲು ಅನುಭವಿಸಿದ್ದಾರೆ. ಜೀವನ್ ಜೋತ್ ಕೌರ್ ಒಟ್ಟು 39,520 ಮತ ಪಡೆದು ಅಮೃತಸರ ಪೂರ್ವ ಕ್ಷೇತ್ರವನ್ನು ಗೆದ್ದುಕೊಂಡಿದ್ದಾರೆ. ಸಿಧು ವಿರುದ್ಧ ಎಎಪಿ ಅಭ್ಯರ್ಥಿ ಜೀವನ್ ಜೋತ್ ಕೌರ್ 6,713 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.ಉಳಿದಂತೆ ಈ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಸ್‍ಎಡಿ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ 25,112 …

Read More »

ಟ್ರೆಂಡ್‌ ಆಯ್ತು ಬುಲ್ಡೋಜರ್‌

ಲಕ್ನೋ: ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಬುಲ್ಡೋಜರ್‌ ಟ್ರೆಂಡ್‌ ಆಗಿದೆ. ಬುಲ್ಡೋಜರ್‌ ಟ್ರೆಂಡ್‌ ಆಗಲು ಕಾರಣವಿದೆ. ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಏರಿದ ಯೋಗಿ ಆದಿತ್ಯನಾಥ್ ಸರ್ಕಾರ ಅಕ್ರಮ ಕಟ್ಟಡಗಳೆಂದು ಬಹಳಷ್ಟು ಕಟ್ಟಡಗಳನ್ನು ಕೆಡವಿ ಹಾಕಿತ್ತು. ಯೋಗಿ ಈ ತೆರವು ಕ್ರಮಗಳನ್ನು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಟೀಕಿಸಿ ‘ಬುಲ್ಡೋಜರ್ ಬಾಬಾ’ ಎಂದು ವ್ಯಂಗ್ಯವಾಡಿದ್ದರು.ಯೋಗಿ ಆದಿತ್ಯನಾಥ್ ಬುಲ್ಡೋಜರ್‌ ಅನ್ನು ಅಭಿವೃದ್ಧಿ ಹಾಗೂ ಶಕ್ತಿಯ ಸಂಕೇತ ಎಂದು …

Read More »

ಉತ್ತರಾಖಂಡ್‌ನಲ್ಲಿ ಬಿಜೆಪಿ ಗೆದ್ದಿದ್ದು ಹೇಗೆ?ಕಾಂಗ್ರೆಸ್ ಸೋಲಿಗೆ ಕಾರಣಗಳು?

ಡೆಹ್ರಾಡೂನ್: ಉತ್ತರಾಖಂಡ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ನಿಚ್ಚಳವಾಗಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಅನೇಕ ಕಾರಣಗಳಿವೆ. ಬಿಜೆಪಿ ಗೆಲುವಿಗೆ ಕಾರಣಗಳೇನು? ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸು ಪ್ರಮುಖ ಕಾರಣವಾಗಿದೆ. ಮೂವರು ಸಿಎಂ ಬದಲಾವಣೆಯಿಂದ ಬಿಜೆಪಿಗೆ ಗೆಲುವು ಕಷ್ಟ ಎನ್ನಲಾಗಿತ್ತು. ಈ ವೇಳೆ ಕೇದಾರಾಬಾಬಾ ಎನ್ನುವ ಜನಪ್ರಿಯತೆ ಹೆಸರಿನ ಮೇಲೆ ಬಿಜೆಪಿ ಮತಯಾಚಿಸಿತ್ತು. ಗುಡ್ಡಗಾಡು ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ಪೂರೈಕೆ, …

Read More »

ಡೆತ್ ನೋಟ್ ಬರೆದಿಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಕೋಚಿಂಗ್ ಪಡೆಯುತ್ತಿದ್ದ ಯುವತಿ ಆತ್ಮಹತ್ಯೆ

ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ಸಪ್ತಾಪುರದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಯರಗಟ್ಟಿ ಗ್ರಾಮದ ವಿದ್ಯಾರ್ಥಿನಿ ಗೀತಾ ಹೆಗ್ಗನ್ನವರ (22) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿಯಾಗಿದ್ದು, ಸಪ್ತಾಪುರದಲ್ಲಿರುವ ಅಶ್ವಿನಿ ಪಿಜಿಯಲ್ಲಿ ವಾಸವಾಗಿದ್ದರು. ಕೋಚಿಂಗ್ ಸೆಂಟರ್​​ನಲ್ಲಿ ಕಳೆದ ಎರಡು ತಿಂಗಳಿಂದ ತರಬೇತಿ ಪಡೆಯುತ್ತಿದ್ದರು. ಒಂದೇ ರೂಮಿನಲ್ಲಿ ಮೂವರು ವಿದ್ಯಾರ್ಥಿನಿಯರು ತಂಗಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಉಪನಗರ ಪೋಲಿಸ್ ಠಾಣೆಯ …

Read More »

ನಾಲ್ಕು ಲಕ್ಷ ಮಹಿಳೆಯರಿಗೆ ಉದ್ಯೋಗದ ಯೋಜನೆ: ಸಿಎಂ

ಬೆಂಗಳೂರು: ನಾಲ್ಕು ಲಕ್ಷ ಮಹಿಳೆಯರಿಗೆ ಉದ್ಯೋಗ ನೀಡಲು ಯೋಜನೆ ರೂಪಿಸಲಾಗಿದ್ದು, ಈ ಬಗ್ಗೆ ಬಜೆಟ್ ನಲ್ಲಿ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದ ಮಹಾಲಕ್ಷ್ಮಿ ಲೇಔಟ್ ಶಂಕರಮಠ ಬಡಾವಣೆಯಲ್ಲಿ ಮಹಾಲಕ್ಷ್ಮೀ ಎಜುಕೇಷನಲ್ ಟ್ರಸ್ಟ್ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೆಣ್ಣಿಲ್ಲದೆ ಈ ಜಗತ್ತು ಇಲ್ಲ. ಇಂದು ಎಲ್ಲಾ ರಂಗದಲ್ಲಿ ಮಹಿಳೆಯರಿದ್ದಾರೆ. ಮುಂದಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲಿ ಮುಂಚೂಣಿಯಲ್ಲಿರಲಿದ್ದಾರೆ ಎಂದರು. ಮಹಿಳೆಯರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ …

Read More »

ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಸ.

ಬೆಂಗಳೂರು-ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನ ಸಭಾ ಚುನಾವಣೆಗಳಲ್ಲಿ ಪಂಜಾಬ್ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯು ನಿಚ್ಚಳ ಬಹುಮತದತ್ತ ಸಾಗುತ್ತಿದೆ. ಅಂತಿಮ ಫಲಿತಾಂಶ ನಮ್ಮ ಪಾರ್ಟಿಯದ್ದೆ. ಸ್ಪಷ್ಡ ಬಹುಮತ ಪಡೆಯಲಿದೆ. ದೇಶದ ಸಮಗ್ರ ಅಭಿವೃದ್ಧಿ …

Read More »

ಅಧಿಕಾರ ಇರುವ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ, ಜಂಬ ಪಡುವ ಅಗತ್ಯ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು: ಅಧಿಕಾರ ಇರುವ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ ಅಷ್ಟೇ. ಇದರಿಂದ ಬಹಳ ಜಂಬ ಪಡುವ ಹಾಗಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ವಿಧಾನಸೌಧದಲ್ಲಿ ಪಂಚ ರಾಜ್ಯ ಚುನಾವಣೆಯ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಇನ್ನೂ ಪೂರ್ಣ ಫಲಿತಾಂಶ ಪ್ರಕಟವಾಗಿಲ್ಲ. ಪಂಜಾಬ್​​​​ನಲ್ಲಿ ಮಾತ್ರ ನಾವು ಅಧಿಕಾರದಲ್ಲಿದ್ದೆವು. ಬೇರೆ ರಾಜ್ಯಗಳಲ್ಲಿ ನಾವು ಅಧಿಕಾರದಲ್ಲಿರಲಿಲ್ಲ. ಉತ್ತರಾಖಂಡ, ಗೋವಾದಲ್ಲಿ ಗೆಲುವಿನ ನಿರೀಕ್ಷೆ ಇತ್ತು. ನಮ್ಮ ತಪ್ಪಿನಿಂದ ಪಂಜಾಬ್​​ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ ಎಂದರು. ಈ ಚುನಾವಣೆಗಳಿಂದ ನಾನೇನು …

Read More »

A.A.P. ಸಿಎಂ ಅಭ್ಯರ್ಥಿ ಭಗವಂತ್ ಮಾನ್ ಗೆಲುವು

ಚಂಡೀಗಢ(ಪಂಜಾಬ್)​: ಆಮ್​ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಮತ್ತು ಧುರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಭಗವಂತ್ ಮಾನ್ ಗೆಲುವು ಸಾಧಿಸಿದ್ದು, ಇವರ ವಿರುದ್ಧ ಕಾಂಗ್ರೆಸ್ ಶಾಸಕ ದಲ್ಬೀರ್ ಗೋಲ್ಡಿ ಸ್ಪರ್ಧಿಸಿದ್ದರು. ಈ ಮೊದಲು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ಭಗವಂತ್ ಮಾನ್, ಈಗ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಈ ಹಿಂದೆ ಅವರು ದೇಶದಲ್ಲಿ ಆಪ್ ಪಕ್ಷದ ಪರವಾಗಿ ಸಂಸತ್ ಸ್ಥಾನವನ್ನು ಗೆದ್ದ ಏಕೈಕ ಸಂಸದರು ಎಂಬ ಕೀರ್ತಿಗೆ ಪಾತ್ರರಾಗಿದ್ದರು.ಈ …

Read More »

ಪಂಜಾಬ್​ನಲ್ಲೊಬ್ಬ ಸಿಧು, ರಾಜ್ಯದಲ್ಲೊಬ್ಬ ಸಿದ್ದು – ಇಲ್ಲೂ ಕಾಂಗ್ರೆಸ್ ಅವನತಿಯಾಗುತ್ತೆ: ಜಗದೀಶ್ ಶೆಟ್ಟರ್ ಲೇವಡಿ

ಬೆಂಗಳೂರು: ಪಂಜಾಬ್​ನಲ್ಲಿ ಒಬ್ಬ ಸಿದ್ದು, ರಾಜ್ಯದಲ್ಲಿ ಒಬ್ಬ ಸಿದ್ದು ಇದ್ದಾರೆ. ಪಂಜಾಬ್ ಸಿಧುರಿಂದ ಅಲ್ಲಿ ಕಾಂಗ್ರೆಸ್ ನಾಶವಾಗಿದೆ.‌ ಇಲ್ಲಿನ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್​ರಿಂದ ಕಾಂಗ್ರೆಸ್​ಗೆ ಇತಿಶ್ರೀ ಬೀಳಲಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಟಾಂಗ್ ನೀಡಿದರು. ವಿಧಾನಸೌಧದಲ್ಲಿ ಪಂಚ ರಾಜ್ಯಗಳ ಫಲಿತಾಂಶ ಬಗ್ಗೆ ಮಾತನಾಡಿದ ಅವರು, ನಾವು ನಿರೀಕ್ಷಿಸಿದಂತೆ ಫಲಿತಾಂಶ ಬಂದಿದೆ. ಚುನಾವಣಾ ಸಮೀಕ್ಷೆ ಕೂಡ ನಿಜವಾಗಿದೆ. ಉತ್ತರಾಖಂಡ್​ನಲ್ಲಿ ಅಭೂತಪೂರ್ವ ಫಲಿತಾಂಶ ಬಂದಿದೆ. 4 ರಾಜ್ಯಗಳ ಮತದಾರರಿಗೆ, …

Read More »

ಲಂವವನ್ನು ಪೇಟಿಯಮ್ ಮಾಡಿಸಿಕೊಂಡ ಇಬ್ಬರು ಎಸಿಬಿ ಬಲೆಗೆ

ಬೆಳಗಾವಿ: ಈಗ ಏನಿದ್ದರೂ ಡಿಜಿಟಲ್ ಪರ್ವ ಹೀಗಾಗಿ ಈಗ ಕ್ಯಾಶ್ ಲೆಸ್ ರೋಗ  ಬ್ರಷ್ಟಾಚಾರದ ಕ್ಷೇತ್ರಕ್ಕೂ ಹರಡಿದ್ದು ,ಲಂವವನ್ನು ಪೇಟಿಯಮ್ ಮಾಡಿಸಿಕೊಂಡ ಇಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಈ ಘಟನೆ ನಡೆದಿದ್ದು ಬೆಳಗಾವಿ ಜಿಲ್ಲೆಯಲ್ಲಿ ಅನ್ನೋದು ವಿಶೇಷ ಪಿತ್ರಾರ್ಜಿತ ಆಸ್ತಿ ಪರಭಾರೆಗೆ ಸಂಬಂಧಪಟ್ಟ ದಾಖಲಾತಿಗಳನ್ನು ನೀಡಲು ರೂ.4,000 ಲಂಚ ಕೇಳಿದ ಸವದತ್ತಿ ತಾಲೂಕು ಮುರಗೋಡದ ಸಬ್ ರಿಜಿಸ್ಟ್ರಾರ್ ಮತ್ತು ಸಬ್ ರಿಜಿಸ್ಟ್ರಾರ್ ಪರವಾಗಿ ಲಂಚವನ್ನು ಸ್ವೀಕರಿಸಿದ ಬಾಂಡ್ ರೈಟರ್ ಬುಧವಾರ …

Read More »