Breaking News

ಗಂಗಾವತಿ : ವೈಭವದಿಂದ ಜರುಗಿದ ಹೇಮಗುಡ್ಡದ ಅಂಬಾರಿ ಮೆರವಣಿಗೆ

ಗಂಗಾವತಿ :ನಾಡಹಬ್ಬ ದಸರಾ ಸಕಲ ಜೀವರಾಶಿಗಳಿಗೆ ಒಳಿತನ್ನು ಮಾಡಲಿ ಜಗತ್ತನ್ನು ಕಾಡುತ್ತಿರುವ ಕೊರೋನಾ ಮಹಾಮಾರಿ ಬೇಗನೆ ದೂರವಾಗಲಿ ದುರ್ಗಾಪರಮೇಶ್ವರಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಮಾಜಿ ಸಂಸದ ಎಚ್. ಜಿ .ರಾಮುಲು ಹೇಳಿದರು . ಅವರು ತಾಲ್ಲೂಕಿನ ಸುಕ್ಷೇತ್ರ ಹೇಮಗುಡ್ಡದಲ್ಲಿ ಶರನ್ನವರಾತ್ರಿ ನಿಮಿತ್ತ ದಸರಾ ಆನೆ ಮೇಲೆ ಅಂಬಾರಿ ಮೆರವಣಿಗೆಗೆ ಪೂಜೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು . ನಾಡಹಬ್ಬ ದಸರಾ ಆಚರಣೆ ಮಾಡಿದ್ದು ಮೊದಲು ಕುಮ್ಮಟ ದುರ್ಗದ …

Read More »

ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಹಬ್ಬದ ಶುಭಾಶಯ ಕೋರಿದ ಸಿಎಂ

ಬೆಂಗಳೂರು : ದೇಶಾದ್ಯಂತ ಇಂದು ದಸರಾ ಮತ್ತು ವಿಜಯದಶಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇದೇ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಬ್ಬದ ಶುಭಾಶಯ ಕೋರಿದ್ದಾರೆ. ಯಡಿಯೂರಪ್ಪ ಅವರ ನಿವಾಸ ಕಾವೇರಿಗೆ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಶಾಲು ಹೊದಿಸಿ ಸನ್ಮಾನ ಮಾಡುವ ಮೂಲಕ ಹಬ್ಬದ ಶುಭಾಶಯ ತಿಳಿಸಿದ್ದಾರೆ. ದಸರಾ ಮತ್ತು ವಿಜಯದಶಮಿ ಹಬ್ಬ ತಮಗೆ ಶುಭ ತರಲಿ …

Read More »

ಸಾಂಸ್ಕೃತಿಕ ಮೈಸೂರಿನಲ್ಲಿಂದು ವಿಜಯದಶಮಿ: ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ ಆರಂಭ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಸಂಭ್ರಮ ಮನೆಮಾಡಿದೆ. ವಿಜಯದಶಮಿ ದಿನವಾದ ಶುಕ್ರವಾರ ಜಂಬೂಸವಾರಿ ನಡೆಯಲಿದೆ. ಅಂಬಾರಿ ಹೊರಲಿರುವ ಆನೆ ಅಭಿಮನ್ಯುವಿನ ಎಡ ಹಾಗೂ ಬಲದಲ್ಲಿ ಕುಮ್ಕಿ ಆನೆಗಳಾದ ಕಾವೇರಿ ಹಾಗೂ ಚೈತ್ರಾ ಆನೆಗಳು ಹೆಜ್ಜೆ ಹಾಕಲಿವೆ. ಒಂದು ತಾಸಿನಲ್ಲಿ ಮೆರವಣಿಗೆ ಸಂಪನ್ನಗೊಳ್ಳಲಿದೆ. ಒಂದು ವಾರದಿಂದ ನಡೆದು ಬಂದಿದ್ದ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ತೆರೆ ಬೀಳಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಸತತ ಎರಡನೇ ವರ್ಷವೂ ದಸರಾ ಮೆರವಣಿಗೆಯನ್ನು ಅರಮನೆ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸದ್ದಿಲ್ಲದೇ ಕೆಲಸ ಶುರು ಮಾಡಿದ ಶ್ರದ್ಧಾ

ಬೆಳಗಾವಿ (ಅಕ್ಟೋಬರ್. 14): ಬೆಳಗಾವಿ ಜಿಲ್ಲೆ ರಾಜ್ಯದಲ್ಲಿ ಕುಟುಂಬ (Belagavi Family Politics) ರಾಜಕೀಯಕ್ಕೆ ಹೆಸರುವಾಸಿಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಜಾರಕಿಹೊಳಿ, ಕತ್ತಿ, ಕೌಜಲಗಿ ಹಾಗೂ ಜೊಲ್ಲೆ ಕುಟುಂಬ ಪಾರುಪತ್ಯ‌ ಸಾಧಿಸಿವೆ. ಈಗ ಈ ಪಟ್ಟಿಗೆ ಅಂಗಡಿ ಹಾಗೂ ಶೆಟ್ಟರ್​ ಕುಟುಂಬ ಸೇರ್ಪಡನೆಯಾಗುವ ಸಾಧ್ಯತೆ ಇದೆ. ಸುರೇಶ್​ ಅಂಗಡಿ (Late mp Suresh Angadi) ಕುಟುಂಬದ ಶ್ರದ್ಧಾ ಶೆಟ್ಟರ್ (shraddha shetter )ಸಹ ಸಕ್ರಿಯ ರಾಜಕೀಯದತ್ತ ಒಲವು ವ್ಯಕ್ತಪಡಿಸಿದ್ದಾರೆ. ಈ ಹಿಂದೆ …

Read More »

ಡಿ.ಕೆ ಶಿವಕುಮಾರ್ ಪರ ಮಾಜಿ ಸಿಎಂ ಕುಮಾರಸ್ವಾಮಿ ಬ್ಯಾಟಿಂಗ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪರ ಮಾಜಿ ಸಿಎಂ ಕುಮಾರಸ್ವಾಮಿ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಡಿ.ಕೆ. ಶಿವಕುಮಾರ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದ ಕುಮಾರಸ್ವಾಮಿ ದಿಢೀರ್ ಸಾಫ್ಟ್ ಆಗಿದ್ದಾರೆ ಎನ್ನಲಾಗಿದೆ. ಉಗ್ರಪ್ಪ, ಸಲೀಂ ಪಿಸುಮಾತು ವಿಡಿಯೋ ಪ್ರಸಾರವಾಗುತ್ತಿದ್ದಂತೆ ಡಿಕೆಎಸ್​ ಪರ ಸಾಫ್ಟ್ ಆಗಿರುವ ಕುಮಾರಸ್ವಾಮಿ ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಪಾಪ ಡಿ.ಕೆ ಶಿವಕುಮಾರ್ ಪಕ್ಷ ಕಟ್ಟುತ್ತಿದ್ದಾರೆ’.. ‘ಸಿದ್ದರಾಮಯ್ಯ ಪಟಾಲಂ ಡಿಕೆ …

Read More »

ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಂಭಾಷಣೆ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಡ್ಯಾಮೇಜ್

ಬೆಂಗಳೂರು: ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಮತ್ತು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ನಡುವಿನ ಡಿ.ಕೆ ಶಿವಕುಮಾರ್ ಬಗೆಗಿನ ಸಂಭಾಷಣೆ ಕೋಲಾಹಲವನ್ನೇ ಎಬ್ಬಿಸಿದೆ. ಈಗ ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಂಭಾಷಣೆ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಡ್ಯಾಮೇಜ್ ಮಾಡಿದ್ದಾರೆ. ಸದ್ಯ ಈ ಡ್ಯಾಮೇಜ್ ಕಂಟ್ರೋಲ್​ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹರಸಾಹಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಮುಂದೆ ಸಾಲು ಸಾಲು ಚುನಾವಣೆಗಳು ಎದುರಾಗಲಿವೆ. ಇದೇ ಹೊತ್ತಲ್ಲೇ ಕೆಪಿಸಿಸಿ ಸಾರಥಿ ಬಗ್ಗೆಯೇ …

Read More »

ಹುಬ್ಬಳ್ಳಿ: ಭೂಸ್ವಾಧೀನ ಕೈಬಿಡಲು ತೀರ್ಮಾನ

ಹುಬ್ಬಳ್ಳಿ: ನಿವೇಶನಕ್ಕಾಗಿ ಧಾರವಾಡ ಸಮೀಪದ ಸತ್ತೂರಿನಲ್ಲಿ 227 ಎಕರೆ ಜಾಗ ಭೂಸ್ವಾಧೀನ ಮಾಡಿಕೊಳ್ಳುವ ಯೋಜನೆಗೆ ರೈತರು ಪ್ರಬಲ ವಿರೋಧ ವ್ಯಕ್ತಪಡಿಸಿದ್ದರಿಂದ ಹುಬ್ಬಳ್ಳಿ-ಧಾರವಾಡ ಪ್ರಾಧಿಕಾರ ಈ ಯೋಜನೆ ಕೈಬಿಟ್ಟಿದೆ. ಪ್ರಾಧಿಕಾರದ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಸಿಕ ಸಭೆಯಲ್ಲಿ ಸರ್ವಸಮ್ಮತದಿಂದ ಈ ತೀರ್ಮಾನಕ್ಕೆ ಬರಲಾಯಿತು. ಸತ್ತೂರಿನಲ್ಲಿ ಭೂಮಿ ವಶಪಡಿಸಿಕೊಳ್ಳಲು ಹುಡಾ 2016ರಿಂದಲೇ ರೈತರ ಜೊತೆ ನಿರಂತರ ಮಾತುಕತೆಯಲ್ಲಿ ತೊಡಗಿತ್ತು. ಇದಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತ ಬಂದಿದ್ದರು. ಈ ವಿಷಯವನ್ನು ಸರ್ಕಾರದ ಗಮನಕ್ಕೆ ತಂದಾಗ …

Read More »

ಐಪಿಎಲ್ 2021: ಕೋಲ್ಕತ್ತಾ- ಚೆನ್ನೈ ನಡುವೆ ಫೈನಲ್ ಫೈಟ್

ದುಬೈ: ಶುಕ್ರವಾರ ಕೊಲ್ಕತ್ತಾ ಹಾಗೂ ಚೆನ್ನೈ ನಡುವೆ ಐಪಿಎಲ್ 14ನೇ ಆವೃತ್ತಿಯ ಫೈನಲ್ ಕಾದಾಟ ನಡೆಯಲಿದೆ. ಇಯಾನ್ ಮಾರ್ಗನ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಮೂರನೇ ಬಾರಿ ಮತ್ತು ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಶುಕ್ರವಾರ ನಾಲ್ಕನೇ ಬಾರಿ ಪ್ರಶಸ್ತಿ ಗೆಲ್ಲುವ ಉದ್ದೇಶದಿಂದ ಫೈನಲ್ ನಲ್ಲಿ ಸೆಣಸಾಡಲಿದೆ. ಇದು ಚೆನ್ನೈಯ 9 ನೇ ಫೈನಲ್ ಆಗಿದ್ದು, ಕೋಲ್ಕತಾ ತಂಡವು ಮೂರನೇ ಬಾರಿಗೆ ಫೈನಲ್ ಆಡಲಿದೆ. ಎರಡೂ …

Read More »

ಸ್ವಚ್ಛ ನಗರಿಯಾಗುವತ್ತ ಹುಬ್ಬಳ್ಳಿ…

ಹುಬ್ಬಳ್ಳಿ: ‘ಕಸದ ವಿಷ್ಯದಲ್ಲಿ ಈಗ ಬಾಳನೇ ಸುಧಾರಣೆ ಕಂಡುಬಂದೈತ್ರಿ. ಮೊದಲು ಎರಡು ಮೂರು ದಿವಸ ಮನೆಯಲ್ಲೇ ಕಸ ಇಟ್ಕೊಂಡು ಕುಂದ್ರಬೇಕಾಗ್ತಿತ್ತು. ಮನೆಯಿಡೀ ದುರ್ನಾತ ಬರ್ತಿತ್ತು. ವಿಧಿ ಇಲ್ದೆ ರಾತ್ರೊರಾತ್ರಿ ತಗೊಂಡು ಹೋಗಿ ಗಿಡದ ಕಂಟಿಗೊ, ರಸ್ತೆ ಬದಿಗೊ ಚೆಲ್ಲಿ ಬರ್ತಿದ್ವಿ. ಈಗ ಅಂತಹ ಸ್ಥಿತಿ ಇಲ್ರಿ. ಪೌರ ಕಾರ್ಮಿಕರು ಆಟೊ ಟಿಪ್ಪರ್‌ ಜೊತೆ ಮನೆ ಬಾಗಿಲಿಗೆ ಬಂದು ಕಸ ತಗೊಂಡು ಹೋಗ್ತಾರ್ರಿ…’       ವಾಣಿಜ್ಯ ನಗರಿ ಹುಬ್ಬಳ್ಳಿಯ …

Read More »

ಹುಬ್ಬಳ್ಳಿ: ನವರಾತ್ರಿ ಸಡಗರ, ಭಕ್ತರ ಸಂಭ್ರಮ

ಹುಬ್ಬಳ್ಳಿ: ನವರಾತ್ರಿಯ ಮೊದಲ ದಿನವಾದ ಗುರುವಾರ ನಗರದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ದೇವಿಯರ ದರ್ಶನ ಪಡೆದರು. ಹೊಸೂರಿನ ದುರ್ಗಾದೇವಿ ದೇವಸ್ಥಾನ, ದಾಜೀಬಾನಪೇಟೆಯ ತುಳಜಾಭವಾನಿ ದೇವಸ್ಥಾನ, ಬನಶಂಕರಿ ಬಡಾವಣೆಯ ಬನಶಂಕರಿದೇವಿ ದೇವಸ್ಥಾನ ಸೇರಿದಂತೆ ಹಲವೆಡೆ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಉಣಕಲ್‌ ಕೆರೆ ದಂಡೆಯ ಸಮೀಪ ಇರುವ ವೀರಭದ್ರೇಶ್ವರ ಕಾಲೊನಿಯ ಶಾಕ್ತ ಪೀಠದ ತುಳಜಾ ಭವಾನಿ, ಭವಾನಿಶಂಕರ ದೇವಸ್ಥಾನದಲ್ಲಿ ಗುರುವಾರ ಶರನ್ನವರಾತ್ರಿ ಮಹೋತ್ಸವ ಅಂಗವಾಗಿ …

Read More »