Breaking News

ಮಾ.7; ಜಾಗತಿಕ ಕಚ್ಚಾತೈಲ ಬೆಲೆ ಭಾರೀ ಏರಿಕೆ; ಭಾರತದಲ್ಲಿ ಇಂಧನ ದರವೆಷ್ಟು?

ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ಏಳು ವರ್ಷಗಳ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 100 ಯುಎಸ್ ಡಾಲರ್ ಗಡಿ ದಾಟಿದೆ. ಇಂದು ಮತ್ತೆ ಸಾರ್ವಕಾಲಿಕ ಏರಿಕೆ ಕಂಡಿದೆ. ಈ ನಡುವೆ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂದು ಸೋಮವಾರ (ಮಾರ್ಚ್, 7) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ಇಂದು ಕೂಡ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ದೇಶದ …

Read More »

ಯಶಸ್ವಿನಿ ಯೋಜನೆ’ ಮರು ಜಾರಿ: ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದರಾ ಸಿಎಂ ಬೊಮ್ಮಾಯಿ?

ಬೆಂಗಳೂರು: ಮುಂಬರಲಿರುವ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನಪ್ರಿಯ ಕಾರ್ಯಕ್ರಮಗಳ ಮೊರೆ ಹೋಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ಯಶಸ್ವಿನಿ ಯೋಜನೆ’ ಮರು ಜಾರಿ ಮೂಲಕ ಜಾತಿ, ಧರ್ಮಗಳನ್ನು ಮೀರಿ ಅರ್ಧ ಕೋಟಿ ಜನರ ಮನ ತಲುಪಲು ಮುಂದಾಗಿದ್ದಾರೆ. ರಾಜ್ಯದಲ್ಲಿನ 30 ಜಿಲ್ಲೆಗಳಲ್ಲಿರುವ ಸಹಕಾರಿ ಸಂಘಗಳು, ಸೊಸೈಟಿಗಳು, ಪತ್ರಕರ್ತರ ಸಹಕಾರ ಸಂಘಗಳು, ಸಹಕಾರಿ ಬ್ಯಾಂಕ್‌, ಸ್ತ್ರೀ ಶಕ್ತಿ ಸಂಘ, ಸಾಂಸ್ಕೃತಿಕ ಸಹಕಾರ ಸೊಸೈಟಿಗಳ 43.42 ಲಕ್ಷ ಮಂದಿ ಯಶಸ್ವಿನಿ ಯೋಜನೆಯ ಫಲಾನುಭವಿಗಳಾಗಿದ್ದರು. …

Read More »

ಉಕ್ರೇನ್ ಶರಣಾಗುವವರೆಗೂ ರಷ್ಯಾ ದಾಳಿ ಮುಂದುವರೆಸಲಿದೆ – ನ್ಯಾಟೋ

ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಗೆ ಇಂದಿಗೆ 11ನೇ ದಿನ. ಕಳೆದ 10 ದಿನಗಳಲ್ಲಿ ರಷ್ಯಾ, ಉಕ್ರೇನ್ ಮೇಲೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳಿಂದ ದಾಳಿ ಮಾಡುವ ಮೂಲಕ ವಿಧ್ವಂಸಕ ಕೃತ್ಯ ಎಸಗಿದೆ. ಪುಟಿನ್ ಅವರ ಆಕ್ರಮಣವನ್ನು ಗಮನದಲ್ಲಿಟ್ಟುಕೊಂಡು, ಉಕ್ರೇನ್ ತಾವು ಶರಣಾಗುವವರೆಗೆ ಮುಂದಿನ ದಿನಗಳಲ್ಲಿ ರಷ್ಯಾ ಉಕ್ರೇನ್ ನಗರಗಳ ಮೇಲೆ ಬಾಂಬ್ ದಾಳಿಯನ್ನು ಮುಂದುವರೆಸಲಿದೆ ಎಂದು ನ್ಯಾಟೋ ಮತ್ತು ಯುಎಸ್‌ನಂತಹ ದೇಶಗಳು ಹೇಳಿಕೆ ನೀಡಿವೆ. ಉಕ್ರೇನ್ ಮೇಲಿನ ದಾಳಿಯ ನಂತರ, ವಿಶ್ವದ …

Read More »

ಕೋವಿಡ್ ತೀವ್ರತೆ ಇಳಿಕೆ: ಸೆರೋ ಸಮೀಕ್ಷೆ ನಡೆಸಲು ಆರೋಗ್ಯ ಇಲಾಖೆ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯು ಅಪ್ಪಳಿಸಿ ಇದೀಗ ಅದರ ತೀವ್ರತೆ ಗಣನೀಯವಾಗಿ ಕುಸಿದಿದೆ. ಇದರಿಂದ ರಾಜ್ಯದಲ್ಲಿ ಒಮಿಕ್ರಾನ್​ ದಾಳಿ ಬಳಿಕ ಎಷ್ಟು ಜನರಿಗೆ ಸೋಂಕು ವ್ಯಾಪಿಸಿದೆ ಎಂಬುದನ್ನು ತಿಳಿಯಲು ಸರ್ಕಾರ ಸೆರೋ ಸಮೀಕ್ಷೆ ನಡೆಸಲು ಮುಂದಾಗಿದೆ. ಹೊಸ ರೂಪಾಂತರಿ ಒಮಿಕ್ರಾನ್ ಸೋಂಕು ಉಲ್ಬಣಗೊಂಡು ಜನವರಿ ಮೊದಲ ವಾರದಲ್ಲಿ ಪಾಸಿಟಿವ್ ರೇಟ್​ ಶೇ.5ರಷ್ಟು ದಾಟಿತ್ತು.‌ ಅಲ್ಲಿಂದ ಹೆಚ್ಚುತ್ತಾ ಗರಿಷ್ಠ ಶೇ.32.95 ರಷ್ಟು ತಲುಪಿತ್ತು. ಇದಾದ ಬಳಿಕ ದಿನೇ ದಿನೆ ಇಳಿಕೆ ದಾರಿ …

Read More »

ಡಬಲ್‌ ಇಂಜಿನ್‌ ಸರ್ಕಾರ ಅಲ್ಲ, ಡಬ್ಬಾ ಸರ್ಕಾರ: ಮುನ್ನೋಟ ಇಲ್ಲದ ಬಜೆಟ್‌: ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಮಂಡಿಸಿರುವ 2022-23ನೇ ಸಾಲಿನ ಬಜೆಟ್‌ ಮೇಲಿನ ಚರ್ಚೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇಂದು ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್‌ ಪ್ರಶ್ನೋತ್ತರಕ್ಕೆ ಅವಕಾಶ ನೀಡಿದರು. ಇದಾದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಬಜೆಟ್‌ ಬಗ್ಗೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆ ನಿರೀಕ್ಷೆ ಹುಸಿಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಸರ್ಕಾರ ಏನೇನು ಮಾಡಿದೆ ಎಂಬುದನ್ನು ಎಲ್ಲೂ ಹೇಳಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದು ಪ್ರತಿ …

Read More »

ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವೆರಿ ಗುಡ್ ಎಂದ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವೆರಿ ಗುಡ್ ಹೇಳಿದ್ದಾರೆ. ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಪ್ರಶ್ನೋತ್ತರ ಕಲಾಪದ ಬಳಿಕ ಬಜೆಟ್ ಮೇಲಿನ ಚರ್ಚೆಗೆ ಅವಕಾಶ ಕೊಟ್ಟಿದ್ದೇನೆ ಎಂದು ತಿಳಿಸಿದರು. ಆಗ ಸಿದ್ದರಾಮಯ್ಯ ಅವರು, ಸ್ಪೀಕರ್‌ಗೆ ವೆರಿ ಗುಡ್.. ಗುಡ್ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್, ನನಗೆ ನೀವು ಗುಡ್ ಅನ್ನಲೇಬೇಕು ಅಲ್ಲವಾ ಎಂದು ತಮಾಷೆ ಮಾಡಿದರು. ಇದಕ್ಕೆ …

Read More »

ಒಂದು ಗ್ರಾಂ ಚಿನ್ನ ಆರು ಸಾವಿರ ರೂಪಾಯಿ ಏರಿಕೆಯಾಗುವ ಸಾಧ್ಯತೆ ಒಂದು ಗ್ರಾಂ ಚಿನ್ನ ಆರು ಸಾವಿರ ರೂಪಾಯಿ ಏರಿಕೆಯಾಗುವ ಸಾಧ್ಯತೆ

ನವದೆಹಲಿ: ರಷ್ಯಾ ಹಾಗೂ ಉಕ್ರೇನ್ ಯುದ್ಧದ ಪರಿಣಾಮ ಭಾರತದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಏರಿಕೆಯಾಗಿದೆ. ಇಂದಿನ ಮಾರುಕಟ್ಟೆಯ ಮಾಹಿತಿ ಪ್ರಕಾರ ಹತ್ತು ಗ್ರಾಂ ಚಿನ್ನಕ್ಕೆ ಒಂದೇ ದಿನದಲ್ಲಿ ಒಂದು ಸಾವಿರ ರೂಪಾಯಿ ಏರಿಕೆಯಾಗಿದೆ. ಅಲ್ಲದೇ ಬೆಳ್ಳಿ ಕೂಡ ಕೆಜಿಗೆ 1,800 ರೂಪಾಯಿ ಏರಿಕೆ ಕಂಡಿದೆ.  ಮುಂದಿನ ದಿನದಲ್ಲಿ ಚಿನ್ನ ಹಾಗೂ ಬೆಳ್ಳಿಯ ದರ ಇನ್ನಷ್ಟು ಏರಿಕೆಯಾಗಲಿದೆ. ಒಂದು ಗ್ರಾಂ ಚಿನ್ನ ಆರು ಸಾವಿರ ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದ್ದು, ಹತ್ತು …

Read More »

ನಾಲ್ಕು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದ ಬಿಎಸ್‍ಎಫ್ ಯೋಧ

ಚಿಕ್ಕೋಡಿ: ನಾಲ್ಕು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದ ಬಿಎಸ್‍ಎಫ್ ಯೋಧ ಮಾನಸಿಕ ಅಸ್ವಸ್ಥನಾಗಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆ ವಂಟಮೂರಿ ಗ್ರಾಮದ ಸತ್ಯಪ್ಪ ಸಿದ್ದಪ್ಪ ಯೋಧರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾನೆ. ಬಳಿಕ ತನ್ನ ಮೇಲೆಯೆ ಗುಂಡಿನ ದಾಳಿ ನಡೆಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಚಿಕ್ಕೋಡಿ: ನಾಲ್ಕು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದ ಬಿಎಸ್‍ಎಫ್ ಯೋಧ ಮಾನಸಿಕ ಅಸ್ವಸ್ಥನಾಗಿದ್ದ ವಿಚಾರ ಈಗ ಬೆಳಕಿಗೆ …

Read More »

ಪೊಲೀಸ್ ಸಿಬ್ಬಂದಿ ಜಿ, ಎನ್, ದೊಡಮನಿ, ಪಿ ಎಸ್ ಮಲಗೌಡರ ಹಾಗೂ ಗಿರಿಮಲ್ಲ ಆಜುರ ಅವರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಅಥಣಿ ಜನರಿಂದ ಪ್ರಶಂಸೆಯ ಹರಿದು ಬಂದಿದೆ.

ಬೆಳಗಾವಿ: ಸಾಮಾನ್ಯವಾಗಿ ಪೊಲೀಸರು ಎಂದರೇ ಬೈಯುವರೇ ಹೆಚ್ಚು, ಆದರೆ ಬೆಳಗಾವಿ ಜಿಲ್ಲೆಯ ಅಥಣಿ ಪೋಲಿಸರು ಮಾನವೀಯತೆ ಮೆರೆದು ಜನತೆಯಿಂದ ಬೇಶ್ ಅನಿಸಿಕೊಂಡಿದ್ದಾರೆ. ಸಂಕೇಶ್ವರ-ವಿಜಯಪುರ ರಾಜ್ಯ ಹೆದ್ದಾರಿಯ ಕರಿ ಮಸೂತಿ ಸಮೀಪದಲ್ಲಿ ಕಾರು ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಅಂಬುಲೆನ್ಸ್ ಬಾರದ ಕಾರಣ ಗಸ್ತು ತಿರುಗುತ್ತಿದ್ದ ಪೊಲೀಸರು ತಾವೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಿ ಮಾನವೀಯತೆ …

Read More »

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 4726 ಸರ್ಕಾರಿ ಹುದ್ದೆಗಳಿಗೆ ನೇಮಕಾತಿ

ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) ನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಯುವಕರಿಗೆ ಸುವರ್ಣಾವಕಾಶವಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ LDC, JSA, PA, SA ಮತ್ತು DEO ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 7. ಇನ್ನೂ ಅರ್ಜಿ ಸಲ್ಲಿಸದ ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.   ಇದರ ಹೊರತಾಗಿ, ಅಭ್ಯರ್ಥಿಗಳು https://ssc.nic.in/Portal/Apply ಈ ಲಿಂಕ್ …

Read More »