Breaking News

ಭೀಮನೊಳಗಣ ನೈಜ ರಾಷ್ಟ್ರಪ್ರೇಮವನ್ನು ಒರೆಗೆ ಹಚ್ಚುವ ಅವಶ್ಯಕತೆ ಇದೆ.

ಅಂಬೇಡ್ಕರರನ್ನು ಮತ್ತೊಂದು ಮಜಲಿನಲ್ಲಿ ದೃಷ್ಟಿಸುವ ಅನಿವಾರ್ಯತೆ ಈವರೆಗೂ ಕಾಣಿಸಿದಂತಿಲ್ಲ. ಅದು ಅವರೊಳಗಿನ ರಾಷ್ಟ್ರೀಯ ಪ್ರಜ್ಞೆ. ವಾಸ್ತವವಾಗಿ ಅವರೊಳಗೆ ಐಕ್ಯತೆ, ರಾಷ್ಟ್ರಪ್ರೇಮ ಜಾಗೃತಜ್ಯೋತಿ ಆಗಿತ್ತು. ಭೀಮನೊಳಗಣ ನೈಜ ರಾಷ್ಟ್ರಪ್ರೇಮವನ್ನು ಒರೆಗೆ ಹಚ್ಚುವ ಅವಶ್ಯಕತೆ ಇದೆ. ಸಂವಿಧಾನಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ಅವರು ನಿಧನ ಹೊಂದಿದ ದಿನವಾದ ಡಿ.6ನ್ನು ಮಹಾಪರಿನಿರ್ವಾಣ ದಿವಸವೆಂದು ಆಚರಿಸಲಾಗುತ್ತದೆ. ಬೌದ್ಧ ಧರ್ಮದಲ್ಲಿ ‘ಪರಿನಿರ್ವಾಣ’ ಎಂದರೆ ತೀರಿಹೋದ ನಂತರ ನಿರ್ವಾಣವಾಗುವುದು, ಜೀವಿತಾವಧಿಯಲ್ಲಿ ನಿರ್ವಾಣವನ್ನು ಪಡೆದವರು ಎಂದರ್ಥ. ಅಂದರೆ ಈ ಭೌತಿಕ ಜಗತ್ತಿನಿಂದ, …

Read More »

ಕಾಂಗ್ರೆಸ್ ಪಕ್ಷಕ್ಕೆ ಈಗ ವಯಸ್ಸಾಗಿದೆ: ಬಸವರಾಜ ಬೊಮ್ಮಾಯಿ

ಬೀದರ್ : ಕಾಂಗ್ರೆಸ್ ಪಕ್ಷಕ್ಕೆ ಈಗ ವಯಸ್ಸಾಗಿದೆ. ಸ್ವಾತಂತ್ರ್ಯ ಹೋರಾಟದ ನಂತರ ಕಾಂಗ್ರೆಸ್ ಪಕ್ಷ ವಿಸರ್ಜನೆ ಆಗಬೇಕೆಂಬುದು ಗಾಂಧೀಜಿ ಅವರ ಆಶಯವಾಗಿತ್ತು. ಆದರೆ, ಈಗ ದೇಶದ ಜನರೇ ಆ ಪಕ್ಷವನ್ನು ವಿಸರ್ಜನೆ ಮಾಡಲು ಸಿದ್ಧರಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ನಗರದಲ್ಲಿ ರವಿವಾರ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಗ್ರಾಮ ಪಂಚಾಯತ ಸದಸ್ಯರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ಮೂಲ ಪಕ್ಷವೇ ತೃಣಮೂಲ ಕಾಂಗ್ರೆಸ್. ಇಂದು ಆ ಪಕ್ಷದ ನಾಯಕತ್ವವನ್ನು …

Read More »

ಹಾಲು ವ್ಯಾಪಾರಿಯೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿ ಶವ ಬಿಸಾಡಿ ಪರಾರಿ!

ಚಿಕ್ಕೋಡಿ: ರಾಯಭಾಗ ತಾಲೂಕಿನಲ್ಲಿ ಎರಡು ದಿನಗಳ ಹಿಂದೆ ಹಾಲು ವ್ಯಾಪಾರಿಯೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿ ಶವ ಬಿಸಾಡಿ ಪರಾರಿಯಾಗಿದ್ದ ದುಷ್ಕರ್ಮಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಕೊಲೆಗೆ ಅಕ್ರಮ ಸಂಬಂಧವೇ ಕಾರಣ ಎಂದು ಆರೋಪಿಗಳು ಬಾಯ್ಬಿಟ್ಟಿದ್ದಾರೆ.   ಹಾಲು ವ್ಯಾಪಾರಿ ಅರ್ಜುನ್ ಮಾರುತಿ ಮೇಗಡೆ(30) ಕೊಲೆಯಾದವ. ಆರೋಪಿ ಭೀಮಪ್ಪ ದುಂಡಪ್ಪ ತಟ್ಟಿಮನಿ ಹಾಗೂ ಈತನ ಮತ್ತಿಬ್ಬರು ಸಹಚರರು ಬಂಧಿತರು. ತನ್ನ ಪತ್ನಿ ಜತೆ ಹಾಲು ವ್ಯಾಪಾರಿ ಅರ್ಜುನ್ ಅಕ್ರಮ ಸಂಬಂಧ ಹೊಂದಿದ್ದಾನೆ …

Read More »

ಇಂದು ಬೆಂಗಳೂರಿನ ಬೇಸ್ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಡಾ ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ ಯೂನಿವರ್ಸಿಟಿ ಅಥವಾ ಬೇಸ್ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ.ವಸತಿ ಇಲಾಖೆಯಿಂದ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ವಿಶ್ವವಿದ್ಯಾಲಯವನ್ನು ನಿರ್ಮಿಸಲಾಗಿದೆ.   ಪ್ರಧಾನಮಂತ್ರಿಯವರ ಭೇಟಿಗೆ ಮುಂಚಿತವಾಗಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ ಸಿಎನ್ ಅಶ್ವಥ ನಾರಾಯಣ ಅವರು ಉದ್ಘಾಟನಾ ಕಾರ್ಯಕ್ರಮದ ಸಿದ್ಧತೆಗಳನ್ನು ಮೇಲ್ವಿಚಾರಣೆ ಮಾಡಲು ಕಳೆದ …

Read More »

18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ 1000 ರೂ. ಮಾಶಾಸನ :ಅರವಿಂದ ಕೇಜ್ರಿವಾಲ್

ಪಣಜಿ: ಗೋವಾ ರಾಜ್ಯದ ಪ್ರತಿ ಮಹಿಳೆಗೆ ತಲಾ 1 ಸಾವಿರ ರೂಪಾಯಿ ಮಾಸಾಶನ ನೀಡಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ಭರವಸೆ ನೀಡಿದೆ. ನವೇಲಿಮ್ ನಲ್ಲಿ ಪಕ್ಷದ ರ್ಯಾಲಿಯಲ್ಲಿ ಮಾತನಾಡಿದ ಅವರು, ಪ್ರತಿ ಮಹಿಳೆಗೆ ಹಣಕಾಸು ನೆರವು ಒದಗಿಸುವ ಗುರಿಯೊಂದಿಗೆ 18 ವರ್ಷ ಮೇಲ್ಪಟ್ಟ ಪ್ರತಿ ಮಹಿಳೆಯರಿಗೆ ಮಾಸಿಕ 1 ಸಾವಿರ ರೂಪಾಯಿ ನೆರವು ನೀಡಲಾಗುತ್ತದೆ. ದೀರ್ಘಾವಧಿ ಯೋಜನೆಗಳನ್ನು ರೂಪಿಸಿ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ. ಪಕ್ಷದ ಮುಖ್ಯಸ್ಥರಾದ ದೆಹಲಿ ಸಿಎಂ …

Read More »

ಇಷ್ಟು ವರ್ಷದ ಜನರ ಪ್ರೀತಿ ಒಮ್ಮೆಲೆ ಕಣ್ಮುಂದೆ ಬಂದು ಕಣ್ಣೀರು ಹಾಕಿದೆ: B. S. Y

ಮೈಸೂರು: ರಾಜ್ಯದ ಮೂಲೆ ಮೂಲೆಯಲ್ಲೂ ಜನ ಪ್ರೀತಿ ನೀಡುತ್ತಿದ್ದಾರೆ, ನನಗೆ ರಾಜಕೀಯ ತೃಪ್ತಿ ಇದೆ, ಸಮಾಧಾನ ಇದೆ, ಮುಂಬರುವ ದಿನಗಳಲ್ಲಿ ದೊಡ್ಡ ಮಟ್ಟದ ಸಂಘಟನೆ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಶ್ರೀರಾಜೇಂದ್ರ ಭವನದಲ್ಲಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಪರ ಮತಯಾಚನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ …

Read More »

ದೇಶದಲ್ಲಿ ಸಾಲಮನ್ನಾ ಮಾಡಿದ್ದು ನರೇಂದ್ರ ಮೋದಿ ಎಂದು ತಪ್ಪಾಗಿ ಹೇಳಿದ ಸಿದ್ದರಾಮಯ್ಯ

ಬಾಯ್ತಪ್ಪಿ ಮೋದಿ ಹೆಸರು : ದೇಶದಲ್ಲಿ ಸಾಲಮನ್ನಾ ಮಾಡಿದ್ದು ನರೇಂದ್ರ ಮೋದಿ ಎಂದು ತಪ್ಪಾಗಿ ಹೇಳಿದ ಸಿದ್ದರಾಮಯ್ಯನವರು ಬಳಿಕ ಕ್ಷಮೆ ಕೋರಿ ಮನಮೋಹನ್ ಸಿಂಗ್ ಸಾಲಮನ್ನಾ ಮಾಡಿದರು. ಐದು ರಾಜ್ಯಗಳಲ್ಲಿ ಸೋತ ಬಳಿಕ ಕೃಷಿ ಕಾಯ್ದೆ ವಾಪಸ್ ಪಡೆದುಕೊಂಡಿದ್ದಾರೆ. 700 ಜನ ರೈತರು ಸಾವನ್ನಪ್ಪಿದಕ್ಕೆ ಮಿಸ್ಟರ್ ಮೋದಿಯೇ ಕಾರಣ. ರೈತರ ಬಗ್ಗೆ ಇವರಿಗೆ ಕಾಳಜಿ ಇಲ್ಲ. ರೈತರ ಬಗ್ಗೆ ಮಾತನಾಡಲು ಇವರಿಗೆ ಯಾವ ನೈತಿಕತೆ ಇದೆ. ಇವರಿಗೆ ಮೂರು ಕಾಸಿನ ಮಾನ …

Read More »

ರಮೇಶ್ ಜಾರಕಿಹೊಳಿ‌ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದರೂ ಆಶ್ಚರ್ಯವಿಲ್ಲ: ಸಿದ್ದರಾಮಯ್ಯ

ಬೆಳಗಾವಿ : ಕಳೆದ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ಸಿನಲ್ಲಿದ್ದುಕೊಂಡೇ ರಮೇಶ್ ಜಾರಕಿಹೊಳಿ‌ ನಮ್ಮಅಭ್ಯರ್ಥಿಯನ್ನು ಸೋಲಿಸಿದರು. ಇದೀಗ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದರೂ ಆಶ್ಚರ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದರು. ಜಿಲ್ಲೆಯ ರಾಮದುರ್ಗ ತಾಲೂಕಿನ ಕಲ್ಲೂರ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಬಿಜೆಪಿ ಒಬ್ಬರನ್ನೆ ಕಣಕ್ಕಿಳಿಸಬೇಕಿತ್ತು. ಆದರೆ, ಇಬ್ಬರನ್ನು ನಿಲ್ಲಿಸಿದ್ದಾರೆ. ಬಿಜೆಪಿಯವರಿಗೆ ಇಬ್ಬಂದಿ ರಾಜಕಾರಣ ಮಾಡಿ ಗೊತ್ತು. ಈ ಜಿಲ್ಲೆಯ ಲೀಡರ್ ರಮೇಶ್ ಜಾರಕಿಹೊಳಿ ಕಳೆದ …

Read More »

200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬಂದಿರುವ ಕಾರಣಕ್ಕೆ ನಟಿ ಜಾಕ್ವೆಲಿನ್​ ಫರ್ನಾಂಡಿಸ್‌ಗೆ ಸಂಕಷ್ಟ

ಮುಂಬೈ: ವಂಚಕ ಸುಕೇಶ್ ಚಂದ್ರಶೇಖರ್ ನಡೆಸಿದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬಂದಿರುವ ಕಾರಣಕ್ಕೆ ನಟಿ ಜಾಕ್ವೆಲಿನ್​ ಫರ್ನಾಂಡಿಸ್‌ಗೆ ಸಂಕಷ್ಟ ಎದುರಾಗಿದೆ. ಜಾರಿ ನಿರ್ದೇಶನಾಲಯ ಲುಕ್‌ ಔಟ್‌ ನೋಟಿಸ್‌​ ಹೊರಡಿಸಿದ್ದು ವಲಸೆ ವಿಭಾಗದ ಅಧಿಕಾರಿಗಳು ನಟಿಯನ್ನು ಭಾನುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನದಿಂದ ಕೆಳಗಿಳಿಸಿದರು. ಮೂಲಗಳ ಪ್ರಕಾರ, ನಟಿ ಮುಂಬೈ ವಿಮಾನ ನಿಲ್ದಾಣದ ಟರ್ಮಿನಲ್ 2ರಿಂದ ನಿರ್ಗಮನ ಗೇಟ್ ಸಂಖ್ಯೆ 3ರ ಮೂಲಕ ಸಂಜೆ 5:30ಕ್ಕೆ ಮಸ್ಕತ್​ಗೆ …

Read More »

ಮಹಾಂತೇಶ ಕವಟಗಿಮಠ ಪರ ಮತ ಯಾಚನೆ ಮಾಡಲಿದ್ದಾರೆ C.M.

ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ. ಮಂಗಳವಾರ ಬೆಳಗಾವಿಗೆ ಆಗಮಿಸಲಿರುವ ಅವರು ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಪರ ಮತ ಯಾಚನೆ ಮಾಡಲಿದ್ದಾರೆ. ಅಂದು ಮುಂಜಾನೆ 8.45ಕ್ಕೆ ವಿಮಾನದ ಮೂಲಕ ಆಗಮಿಸಲಿರುವ ಬೊಮ್ಮಾಯಿ, 9 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ನಗರದ ಖಾಸಗಿ ಹೊಟೆಲ್ ನಲ್ಲಿ ಪಂಚಾಯಿತಿ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಚುನಾವಣೆಗೆ ಕೇವಲ 4 …

Read More »