Breaking News

PSI ನೇಮಕಾತಿ ಅಕ್ರಮ; ಬ್ಲೂಟೂತ್ ಮೂಲಕ ಪರೀಕ್ಷಾರ್ಥಿಗಳಿಗೆ ಉತ್ತರ; ಅಕ್ರಮದ ಮತ್ತೊಂದು ವಿಡಿಯೋ ಸಾಕ್ಷ್ಯ ಬಟಾಬಯಲು

ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿರುವ 545 ಪಿಎಸ್‌ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸಾಕ್ಷ್ಯ ಬಟಾಬಯಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗಳಿಗೆ ಖತರ್ ನಾಕ್ ಗ್ಯಾಂಗ್ ಲಾಡ್ಜ್ ನ ರೂಮ್ ನಲ್ಲಿ ಕುಳಿತು ಬ್ಲೂಟೂತ್ ಮೂಲಕ ಉತ್ತರ ಹೇಳಿಕೊಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.   ಆರೋಪಿಗಳು ಬೆಂಗಳೂರಿನ ಲಾಡ್ಜ್ ನಲ್ಲಿ ಕುಳಿತು ಪಿಎಸ್‌ಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಜತೆಯಲ್ಲಿಟ್ಟುಕೊಂಡು ಪ್ರತಿಯೊಂದು ಪ್ರಶ್ನೆಗಳಿಗೂ ಉತ್ತರ ಹೇಳುತ್ತಿರುವ …

Read More »

ಮಕ್ಕಳಾಗದ ದಂಪತಿಗಳೇ ಈ ವಕೀಲೆ ಟಾರ್ಗೆಟ್ :ಈ ಕಿಲಾಡಿ ಲೇಡಿ ಮಾಡಿದ್ದೇನು ಗೊತ್ತಾ?

ಮಕ್ಕಳಾಗದ ದಂಪತಿಗಳನ್ನ ಟಾರ್ಗೆಟ್ ಮಾಡಿಕೊಂಡು ವಂಚಿಸುತ್ತಿದ್ದ ಆರೋಪಿಯನ್ನು ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಡಿಗೆ ತಾಯ್ತನದ ಹೆಸರಿನಲ್ಲಿ ಯಾರದ್ದೋ ಮಕ್ಕಳನ್ನ ನೀಡಿ ವಂಚಿಸುತ್ತಿದ್ದ ಭಾನುಮತಿಯನ್ನು ವಶಕ್ಕೆ ಪಡೆಯಲಾಗಿದೆ. ವೃತ್ತಿಯಲ್ಲಿ ವಕೀಲೆಯಾಗಿದ್ದ ಭಾನುಮತಿ, ಮಕ್ಕಳ ಕಳ್ಳತನ ಪ್ರಕರಣದ ಆರೋಪಿಗಳ ಜೊತೆ ಸಂಪರ್ಕ ಹೊಂದಿದ್ದಳು. ಪೋಷಕರನ್ನ ಪುಸಲಾಯಿಸಿ, ಕದ್ದು ಮಕ್ಕಳನ್ನ ತಂದು ಇತರ ಆರೋಪಿಗಳು ಭಾನುಮತಿಗೆ ನೀಡುತ್ತಿದ್ದರು. ಮಕ್ಕಳಿಲ್ಲದ ದಂಪತಿಗೆ ಬಾಡಿಗೆ ತಾಯ್ತನದ ಹೆಸರಿನಲ್ಲಿ ಯಾರದ್ದೋ ಮಕ್ಕಳನ್ನ ನೀಡಿ ವಂಚನೆ ಮಾಡುತ್ತಿದ್ದರು …

Read More »

ಪ್ರಿಯಕರನ ಜತೆ ಸೇರಿ ಪತಿಯ ಕೊಂದ ಪತ್ನಿ

ಚಿಂಚೋಳಿ: ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶ ವ್ಯಾಪ್ತಿಯ ಮೊಗದಂಪುರ ಅರಣ್ಯ ಪ್ರದೇಶದಲ್ಲಿ ಪತ್ತೆಯಾದ ಶವದ ರಹಸ್ಯ ಬಯಲಾಗಿದ್ದು, ಪ್ರಿಯಕರನ ಜತೆ ಸೇರಿಕೊಂಡು ಪತ್ನಿಯೇ ಪತಿಯನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ತೆಲಂಗಾಣ ರಾಜ್ಯದ ಘನಪುರ ಹತ್ತಿರದ ಮಲ್ಕಿಮೇನ ತಾಂಡಾದ ರವಿ ಪಿರ್ಯಾ ಪತ್ಲಾವತ್‌ (29) ಕೊಲೆಯಾದ ವ್ಯಕ್ತಿ.   ಮೃತನ ಪತ್ನಿ ಲಕ್ಷ್ಮೀ ಮತ್ತು ಆಕೆಯ ಪ್ರಿಯಕರ ಸುಮನ್‌ ಮಾನಯ್ಯ ತಲ್ಹಾರಿ ಮೊಗದಂಪುರ ಸೇರಿಕೊಂಡು ರವಿಯನ್ನು ದ್ವಿಚಕ್ರ ವಾಹನದಲ್ಲಿ ಕಾಡಿಗೆ ಕರೆದುಕೊಂಡು ಬಂದು …

Read More »

ಏ.24ರಿಂದ ಮೇ 21ರವರೆಗೆ ರಾಜ್ಯ ಹೈಕೋರ್ಟ್ ಗೆ ಬೇಸಿಗೆ ರಜೆ

ಏ.24ರಿಂದ ಮೇ 21ರವರೆಗೆ ರಾಜ್ಯ ಹೈಕೋರ್ಟ್ ಗೆ ಬೇಸಿಗೆ ರಜೆ ಇರಲಿದೆ. ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಹಾಗೂ ಕಲಬುರ್ಗಿ ಪೀಠಗಳಿಗೆ ಈ ಬೇಸಿಗೆ ರಜೆ ಅನ್ವಯವಾಗಲಿದೆ. ಈ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಗೆ ವಿವಿಧ ದಿನಾಂಕಗಳಂದು ಏಳು ದಿನ ರಜಾ ಕಾಲದ ನ್ಯಾಯಪೀಠಗಳು ಕಾರ್ಯನಿರ್ವಹಣೆ ಮಾಡಲಿದೆ.   ಬೇಸಿಗೆ ರಜೆಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮಮೂರ್ತಿಗಳ ಆದೇಶಾನುಸಾರ ಹೈಕೋರ್ಟ್‌ ರಿಜಿಸ್ಟ್ರಾರ್‌ ಕೆ.ಎಸ್‌. ಭರತ್‌ ಕುಮಾರ್‌ ಅಧಿಸೂಚನೆ ಹೊರಡಿಸಿದ್ದಾರೆ. ರಜಾ …

Read More »

ಆರಗ ಜ್ಞಾನೇಂದ್ರ ಗೃಹ ಸಚಿವ ಹುದ್ದೆಯಲ್ಲಿರಲು ನಾಲಾಯಕ್ :ಶಾಸಕ ಅಬ್ಬಯ್ಯ ಪ್ರಸಾದ್

ಮಾಹಿತಿ ಕೊರತೆಯಿರುವ ಆರಗ ಜ್ಞಾನೇಂದ್ರ ಹೋಮ್​​ ಮಿನಿಸ್ಟರ್ ಹುದ್ದೆಯಲ್ಲಿ ಇರಲು ನಾಲಾಯಕ್ , ಎಂದು ಹುಬ್ಬಳ್ಳಿ- ಧಾರವಾಡ ಪೂರ್ವ ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿ ಘಟನೆಯಲ್ಲಿ ಕಾಂಗ್ರೆಸ್ ಡಬಲ್ ಸ್ಯ್ಟಾಂಡ್ ಎಂದು ಆರಗ ಜ್ಞಾನೇಂದ್ರ ಆರೋಪ ಮಾಡಿದ್ದರು.   ಈ ವಿಚಾರವಾಗಿ ಇಂದು ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಹೋಮ್ ಮಿನಿಸ್ಟರ್​​ಗೆ ಮಾಹಿತಿ ಕೊರತೆಯಿದೆ. ಗದ್ದಲ ಗಲಾಟೆಯಿಂದಲೇ ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ತಂತ್ರ. ಎಸ್​​ಡಿಪಿಐ, ಪಿಎಫ್‌ಐ …

Read More »

ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರಿಗೆ ಸರ್ಕಾರದಿಂದ ಎಚ್ಚರಿಕೆ: ಮಾಹಿತಿ ಸಂಗ್ರಹಿಸಲು ಆದೇಶ

ರಾಜ್ಯದಿಂದ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರೋ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಲಾಗಿದೆ. ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಎಲ್ಲಾ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದು, ರಾಜ್ಯದ ಹಲವಾರು ಕಡೆ ಅನರ್ಹರು ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ಪಡೆದಿರೋ ಬಗ್ಗೆ ದಿನಾಂಕ 20-04-2022ರಂದು ನಡೆದ ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಪಂಗಡಗಳ ಕಲ್ಯಾಮ ಸಮಿತಿ ಸಭೆಯಲ್ಲಿ ಚರ್ಚೆಯಾಗಿರುತ್ತದೆ.   ಅಲ್ಲದೇ ಬೇಡ …

Read More »

ಪಿಎಸ್‍ಐ ನೇಮಕಾತಿಯ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಶಿಕ್ಷೆ ಖಚಿತ :ಸಿಎಂ ಬೊಮ್ಮಾಯಿ ಸ್ಪಷ್ಟನೆ

ಪಿಎಸ್‍ಐ ನೇಮಕಾತಿಯ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಕಾನೂನಿನ ಪ್ರಕಾರ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನರುಚ್ಚರಿಸಿದ್ದಾರೆ. ಇಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಇದನ್ನು ಈಗಾಗಲೇ ಇದನ್ನು ಸಿಐಡಿಗೆ ವಹಿಸಿದ್ದೇವೆ.   ತನಿಖಾ ತಂಡದವರು ಕೆಲವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ತಪ್ಪಿತಸ್ಥರು ಯಾರೇ ಇರಲಿ ರಕ್ಷಣೆ ಮಾಡುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಹಿಂದೆ ನಡೆದಿರುವ ನೇಮಕಾತಿ ಹಾಗೂ ಕಳೆದ ಫೆಬ್ರವರಿಯಲ್ಲಿ …

Read More »

ಸಿನಿಮೀಯ ಶೈಲಿಯಲ್ಲಿ ಹುಬ್ಬಳ್ಳಿ ಗಲಭೆಯ ಆರೋಪಿಗಳ ಬಂಧನ

ಹುಬ್ಬಳ್ಳಿ ಪೊಲೀಸರು ಇಬ್ಬರು ಗಲಭೆ ಆರೋಪಿಗಳನ್ನು ಬೆಂಗಳೂರಿನ ಕಾಟನ್​ಪೇಟೆ ಹೊಟೆಲ್​ನಲ್ಲಿ ಸಿನಿಮೀಯ ಶೈಲಿಯಲ್ಲಿ ಬಂಧಿಸಿದರು. ಇವರ ಚಲನವಲನ ಕಂಡು ಹಿಂಬಾಲಿಸಿದ್ದ ಹುಬ್ಬಳ್ಳಿ ಪೊಲೀಸರು ಸ್ಥಳೀಯ ಪೊಲೀಸರೊಂದಿಗೆ ಸುತ್ತುವರೆದಿದ್ದರು. ಆರೋಪಿಗಳು ಹಿಂದಕ್ಕೆ ತಿರುಗಿದಾಗ ಹೆಗಲ ಮೇಲೆ ಕೈ ಹಾಕಿ ಬಿಗಿಯಾಗಿ ಹಿಡಿದುಕೊಂಡರು. ಹುಬ್ಬಳ್ಳಿಯಿಂದ ತಪ್ಪಿಸಿಕೊಂಡು ಹೊರಟಿದ್ದ ನಾಲ್ವರು ಹಾವೇರಿಯ ಬಂಕಾಪುರ ಬಸ್​ಸ್ಟಾಪ್​ನಲ್ಲಿ ಇಳಿದು, ಅಲ್ಲಿಂದ ಬೇರೆಡೆಗೆ ಪರಾರಿಯಾಗಿದ್ದರು. ಇನ್ನಿಬ್ಬರು ಬೆಂಗಳೂರಿನತ್ತ ಪ್ರಯಾಣ ಮಾಡಿದ್ದರು. ರೌಡಿಶೀಟರ್ ಅಬ್ದುಲ್ ಮಲ್ಲಿಕ್ ಬೇಫಾರಿ ಹಾಗೂ ತುಫೇಲ್ …

Read More »

ಕನ್ನಡಿಗರ ಮನೆ-ಮನಗಳಲ್ಲಿ ರಾಜ್ ಎಂದಿಗೂ ಅಮರ.

ಡಾ.ರಾಜ್ (Dr. Raj) , ಕನ್ನಡಿಗರ ಎದೆಬಡಿತದ ಸದ್ದು, ಕನ್ನಡಿಗರ ಉಸಿರು, ಕನ್ನಡ (Kannada) ಕಲಾರಸಿಕರ ಹೃದಯ ಸಾಮ್ರಾಜ್ಯದ ಅಧಿಪತಿ. ರಾಜ್ ಕುಮಾರ್ (Rajkumar) ಅಂದ್ರೆ ಬರೀ ಹೆಸರಲ್ಲ, ಅದೊಂದು ಶಕ್ತಿ, ಅದು ಕನ್ನಡದ ಪ್ರತಿಧ್ವನಿ, ಕನ್ನಡಿಗರಿಗಾಗಿ, ಕನ್ನಡಿಗರಿಂದ, ಕನ್ನಡಕ್ಕಾಗಿ ಬಾಳಿ ಬದುಕಿದ ಮೇರುನಟ, ಹೆಮ್ಮೆಯ ಕನ್ನಡಿಗ, ಇಂದು ವರನಟ ಡಾ.ರಾಜಕುಮಾರ್ ಅವರ 93ನೇ ಹುಟ್ಟುಹಬ್ಬ (Dr Rajkumar Birthday) . ಕರುನಾಡಿಗೆ ಒಂದು ರೀತಿ ವಿಶೇಷ. ಸತತ ಎರಡು …

Read More »

ರೈತ ಸಮುದಾಯಕ್ಕೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬಾಗಲಕೋಟೆ: ಪಿಎಂ ಕಿಸಾನ್ ಫಲಾನುಭವಿಗಳಿಗೆ ಕಿಸಾನ್ ಕ್ರೇಡಿಟ್ ಕಾರ್ಡ ವಿತರಣೆಗೆ ಏಪ್ರೀಲ್ 24 ರಿಂದ ಮೇ 1 ವರೆಗೆ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿರುವ ಅವರು ನಬಾರ್ಡ ವತಿಯಿಂದ ಕಿಸಾನ್ ಭಾಗಿದಾರಿ ಪ್ರಾಥಮಿಕ್ತಾ ಹಮಾರಿ ಅಭಿಯಾನದ ಅಂಗವಾಗಿ ಕಿಸಾನ್ ಕ್ರೆಡಿಟ್ ಕಾರ್ಡ ವಿತರಣೆಗೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಆಂದೋಲದಲ್ಲಿ ಅರ್ಹ ಫಲಾನುಭವಿಗಳಿಗೆ ಇದರ ಪ್ರಯೋಜನವಾಗಲಿದೆ. ಜಿಲ್ಲೆಯಲ್ಲಿ ಒಟ್ಟು 220141 …

Read More »