Breaking News

ಸಿದ್ದರಾಮಯ್ಯ ನನ್ನನ್ನು ಜೈಲಿಗೆ ಕಳುಹಿಸಲು ಯತ್ನಿಸಿದ್ದರು: ಎಚ್‌ಡಿ ಕುಮಾರಸ್ವಾಮಿ

ಮೈಸೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ತೀವ್ರಗೊಂಡಿದ್ದು, ಅಹಿಂದ ನಾಯಕರು ನನ್ನನ್ನು ಜೈಲಿಗೆ ಕಳುಹಿಸಿಲು ಪಿತೂರಿ ನಡೆಸಿದ್ದರು ಎಂದು ಗುರುವಾರ ಆರೋಪಿಸಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮುರಿದು ಬೀಳಲು ಸಿದ್ದರಾಮಯ್ಯ ಅವರೇ ಕಾರಣ’ ಎಂದು ಆರೋಪಿಸಿದ್ದಾರೆ. ಇದೇ ವೇಳೆ ಈಶ್ವರಪ್ಪ ಬದಲಿಗೆ ಕುಮಾರಸ್ವಾಮಿಯವರನ್ನು ಬಂಧಿಸಬೇಕೆಂಬ ಸಿದ್ದರಾಮಯ್ಯ ಅವರ ಹೇಳಿಕೆ ವಿರುದ್ಧ ಕಿಡಿಕಾರಿದ …

Read More »

ಕಾಡುತ್ತಿದೆ ಕಲ್ಲಿದ್ದಲು ಕೊರತೆ, ವಿದ್ಯುತ್ ಅಭಾವ ಭೀತಿ; 81 ಸ್ಥಾವರಗಳಲ್ಲಿ ನಿಶ್ಚಿತ ದಾಸ್ತಾನಿಲ್ಲ

ನವದೆಹಲಿ: ದೇಶಾದ್ಯಂತ ಬೇಸಿಗೆ ತಾಪ ಏರುತ್ತಿರುವ ಬೆನ್ನಲ್ಲೇ ವಿದ್ಯುತ್ ಬೇಡಿಕೆಯೂ ಹೆಚ್ಚಾಗಿದೆ. ಈ ನಡುವೆ, ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ದಾಸ್ತಾನು ಕೊರತೆ ಗೋಚರಿಸಿದೆ. ಹೀಗಾಗಿ ಕೆಲವು ರಾಜ್ಯಗಳಲ್ಲಿ ಪವರ್ ಕಟ್ ಶುರುವಾಗಿದೆ. ಸೆಂಟ್ರಲ್ ಇಲೆಕ್ಟ್ರಿಸಿಟಿ ಅಥಾರಿಟಿ ಆಫ್ ಇಂಡಿಯಾದ ಇತ್ತೀಚಿನ ಕಲ್ಲಿದ್ದಲು ದೈನಿಕ ವರದಿ ಪ್ರಕಾರ, ದೇಶದ 150 ಉಷ್ಣ ವಿದ್ಯುತ್ ಸ್ಥಾವರಗಳ ಪೈಕಿ ಸ್ಥಳೀಯ ಕಲ್ಲಿದ್ದಲು ಬಳಸುವ 81 ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ ಗಂಭೀರ ಸ್ಥಿತಿಯಲ್ಲಿದೆ. ಇದೇ ರೀತಿ, …

Read More »

ಜೆಡಿಎಸ್ ತ್ಯಜಿಸುವರೇ ಶಿವಲಿಂಗೇಗೌಡ?

ಹಾಸನ: ಸತತ ಮೂರು ಬಾರಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿರುವ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಜೆಡಿಎಸ್‌ ಪಕ್ಷ ತೊರೆಯುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಹಲವು ತಿಂಗಳಿಂದ ಗೌಡರು ಕಾಂಗ್ರೆಸ್ ಸೇರುತ್ತಾರೆ ಎಂಬ ಗುಸುಗುಸು ಹರಿದಾಡುತ್ತಿತ್ತು. ಅನೇಕ ಬಾರಿ ಸಿದ್ದರಾಮಯ್ಯ ಅವರ ಜೊತೆ ಕಾಣಿಸಿಕೊಂಡು, ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸಿ ಹೊಗಳುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ನಾಯಕರೊಂದಿಗೆ ಅಂತರ ಕಾಯ್ದುಕೊಂಡಿದ್ದ ಶಿವಲಿಂಗೇಗೌಡರು, ಜಿಲ್ಲೆಯಲ್ಲಿ ಜಲಧಾರೆಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೂ ಗೈರಾಗಿದ್ದರು. …

Read More »

ಸತತ 7 ಸೋಲು ಕಂಡಿರುವ ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಲು ಉಳಿದಿರೋದು ಇದೊಂದೇ ಮಾರ್ಗ!

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಂಬೈ ಇಂಡಿಯನ್ಸ್ ತಂಡದ ಪಾಲಿಗೆ ಅತಿ ಕೆಟ್ಟ ಆವೃತ್ತಿಯಾಗಿ ಪರಿಣಮಿಸಿದೆ. ಹೌದು, ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೊದಲನೇ ಪಂದ್ಯವನ್ನಾಡಿ ಸೋಲುವುದರ ಮೂಲಕ ತನ್ನ ಪಯಣವನ್ನು ಆರಂಭಿಸಿದ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳನ್ನಾಡಿದ್ದು, ಎಲ್ಲಾ ಪಂದ್ಯಗಳಲ್ಲಿಯೂ ಸೋತು ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ.   ಈ ಹಿಂದಿನ …

Read More »

ರೈತರಿಗೆ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ವಿತರಿಸಲು ಹಳ್ಳಿಗಳಲ್ಲಿ ಅಭಿಯಾನ

ಬೆಂಗಳೂರು: ರೈತರಿಗೆ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ವಿತರಿಸಲು ರಾಜ್ಯಾದ್ಯಂತ ಗ್ರಾಮೀಣ ಭಾಗದಲ್ಲಿ ಒಂದು ವಾರ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಏ.24ರಂದು ವಿಶೇಷ ಗ್ರಾಮ ಸಭೆ ನಡೆಯಲಿದೆ. ಪ್ರತಿ ವರ್ಷ ಏಪ್ರಿಲ್‌ 24ರಂದು ರಾಷ್ಟ್ರವ್ಯಾಪಿ “ಪಂಚಾಯತ್‌ರಾಜ್‌ ದಿವಸ್‌’ ಆಚರಿಸಲಾಗುತ್ತದೆ. ಈ ದಿನ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಶೇಷ ಕಾರ್ಯಕ್ರಮ ಹಾಗೂ ಗ್ರಾಮ ಸಭೆ ನಡೆಸಲಾಗುತ್ತದೆ. ಅದರಂತೆ, ಈ ಬಾರಿಯ ಪಂಚಾಯತ್‌ರಾಜ್‌ ದಿವಸ್‌ ಅಂಗವಾಗಿ ರೈತರಿಗೆ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ವಿತರಿಸಲು ವಿಶೇಷ ಅಭಿಯಾನ ನಡೆಸಲಾಗುತ್ತಿದೆ. …

Read More »

ಇಂದಿನಿಂದ ದ್ವಿತೀಯ PU ಪರೀಕ್ಷೆ; ಎಕ್ಸಾಂ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ‌ʼಆಲ್‌ ದಿ ಬೆಸ್ಟ್ʼ

ಇಂದಿನಿಂದ ರಾಜ್ಯದಾದ್ಯಂತ ಪಿಯು ಪರೀಕ್ಷೆ ಆರಂಭವಾಗಲಿದ್ದು, ಮೇ 18 ರ ವರೆಗೆ ನಡೆಲಿದೆ. ಪರೀಕ್ಷೆ ಸುಗಮವಾಗಿ ನಡೆಯಲು ಈಗಾಗಲೇ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಸಹಾಯವಾಣಿಯನ್ನೂ ಸಹ ಆರಂಭಿಸಲಾಗಿದ್ದು, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆಲ್‌ ದಿ ಬೆಸ್ಟ್.   ಬೆಳಿಗ್ಗೆ 10:15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದ್ದು, 6 ಲಕ್ಷದ 84 ಸಾವಿರದ 255 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರದ …

Read More »

ಜೆಡಿಎಸ್ ಟೀ ಶರ್ಟ್ ಹಾಕಿ ಬೈಕ್ ರ್ಯಾಲಿಗೆ ಬಂದವರಿಗೆ ಫುಲ್ ಟ್ಯಾಂಕ್ ಪೆಟ್ರೋಲ್

ಕೋಲಾರ: ಬೈಕ್​ ರ್ಯಾಲಿಯಲ್ಲಿ ಪಾಲ್ಗೊಂಡವರಿಗೆ ಉಚಿತ ಪೆಟ್ರೋಲ್​ ಎಂದಿದ್ದೇ ತಡ ಬೈಕ್​ ಸವಾರರು ಪೆಟ್ರೋಲ್​ ಬಂಕ್​ನಲ್ಲಿಯೇ ಮುಗಿಬಿದ್ದ ಪ್ರಸಂಗ ಕೋಲಾರದ ಮಾಲೂರಿನಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಜೆಡಿಎಸ್ ಪಕ್ಷದಿಂದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಪೆಟ್ರೋಲ್​ ಉಚಿತ ಎಂದು ಹೇಳಲಾಗಿತ್ತು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ ಸೇರಿದಂತೆ ಹಲವಾರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಇದಕ್ಕಾಗಿ ಮಾಲೂರು ಜೆಡಿಎಸ್ ಅಭ್ಯರ್ಥಿ ಜಿ.ಇ.ರಾಮೇಗೌಡ ಬೈಕ್​ ರ್ಯಾಲಿಯಲ್ಲಿ ಪಾಲ್ಗೊಳ್ಳುವವರಿಗೆ ಉಚಿತ …

Read More »

ಸರ್ಪ್ರೈಸ್​ ಕೊಡ್ತೀನಿ ಅಂತಾ ಕಣ್ಣು ಮುಚ್ಚಿ ಭಾವಿ ಪತಿಯ ಕತ್ತು ಸೀಳಿದ ಯುವತಿಯ ಭಯಾನಕ ಸಂಚು

ವಿಜಯವಾಡ: ಇಷ್ಟವಿಲ್ಲದ ಮದುವೆಯಿಂದ ತಪ್ಪಿಸಿಕೊಳ್ಳಲು ಸರ್ಪ್ರೈಸ್​ ಗಿಫ್ಟ್​​ ಕೊಡುವುದಾಗಿ ಕರೆದು ಭಾವಿ ಪತಿಯ ಕತ್ತು ಕೊಯ್ದಿದ್ದ ಯುವತಿಯೊಬ್ಬಳನ್ನು ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಆರೋಪಿ ಯುವತಿ ತಪ್ಪೊಪ್ಪಿಕೊಂಡಿದ್ದಾಳೆ.   ಆಂಧ್ರದ ಅನಕಪಲ್ಲಿ ಜಿಲ್ಲೆಯ ರವಿಕಾಮತಮ್​ ಮಂಡಲದ ಕೋಮಲಪುಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಜಿಲ್ಲೆಯಾದ್ಯಂತ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಆರೋಪಿಯ ಹೆಸರು ಪುಷ್ಪಾ. ಮದುವೆ ಇಷ್ಟವಿಲ್ಲದಿದ್ದಕ್ಕೆ ಈ ಕೃತ್ಯ ಎಸಗಿದೆ ಎಂದು ಪುಷ್ಪಾ ತಪ್ಪೊಪ್ಪಿಕೊಂಡಿದ್ದು, ಆಕೆಯ ವಿರುದ್ಧ …

Read More »

ಹೊಸ ಸಿನಿಮಾ ತೋರಿಸುವೆ ಕಾಯಿರಿ: ಸಿ.ಎಂ. ಇಬ್ರಾಹಿಂ

ಹಾಸನ: ‘ರಾಜ್ಯದಲ್ಲಿ ಬಿಜೆಪಿ- ಕಾಂಗ್ರೆಸ್ ಎಷ್ಟೇ ಕುಣಿದಾಡಿದರೂ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ತೊಲಗಬೇಕು. ಸರ್ವಧರ್ಮ ಸಮನ್ವಯ ಉಳಿಯಬೇಕು’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು. ಜೆಡಿಎಸ್‌ ಜಲಧಾರೆ ಸಮಾವೇಶದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಜೆಡಿಎಸ್ ಸಂಘಟನೆ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವುದು ಗೊತ್ತಿದೆ. ಶಿವಲಿಂಗೇಗೌಡ, ರಾಮಸ್ವಾಮಿ ಸೇರಿದಂತೆ ಯಾರೂ, ಎಲ್ಲೂ ಹೋಗಲ್ಲ. ಉತ್ತರ ಕರ್ನಾಟಕ ಹಲವರು ಪಕ್ಷಕ್ಕೆ ಬರುತ್ತಾರೆ. ಮುಂದೆ ಹೊಸ ಸಿನಿಮಾ ತೋರಿಸುವೆ, …

Read More »

ಗೋಕಾಕ ನಗರದ ಇಫ್ತಾರ್ ಕೂಟದಲ್ಲಿ ಸತೀಶ್ ಜಾರಕಿಹೊಳಿ ಅವರು ಭಾಗಿ!

ಗೋಕಾಕ: ನಗರದ ಗುರುವಾರ ಪೇಟೆಯ ಮೋಮಿನ ಗಲ್ಲಿಯಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಭಾಗಿಯಾಗಿದ್ದರು. ಇಸ್ಲಾಂ ಬಾಂಧವರು ಗುರುವಾರ ಪೇಟೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದರು.ಈ ಸಮಯದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ಕೋರಿದರು. ಮುಸ್ಲಿಂ ಬಾಂಧವರು ಸತೀಶ್ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿದರು. ಈ ಸಂದರ್ಭದಲ್ಲಿ ಮಲ್ಲಿಕ್ ಪೈಲ್ವಾನ್, ಇಲಾಹಿ ಖರಿದಿ, ವಿವೇಕ್ ಜತ್ತಿ, …

Read More »