ಬೆಂಗಳೂರು: ಸಂಘದ ಶಾಖೆಗೆ ಬನ್ನಿ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅವರು ನೀಡಿದ ಆಹ್ವಾನಕ್ಕೆ ಸರಣಿ ಟ್ವೀಟ್ ಗಳ ಮೂಲಕ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಗಳು ”ಸಿ.ಟಿ.ರವಿ ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. ಆರ್ ಎಸ್ ಎಸ್ ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು …
Read More »ಯುಪಿಯಲ್ಲಿನ ರೈತರ ಹತ್ಯೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಹಾವೇರಿ: ಪ್ರಿಯಾಂಕಾ ಗಾಂಧಿ ಬಂಧನ ಹಾಗೂ ಯುಪಿಯಲ್ಲಿನ ರೈತರ ಹತ್ಯೆ ಖಂಡಿಸಿ ಹಾವೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಮೈಲಾರ ಮಹದೇವ ವೃತ್ತದಲ್ಲಿ ಕೇಂದ್ರದ ಬಿಜೆಪಿ ಹಾಗೂ ಉತ್ತರಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ ಸೇರಿದಂತೆ ಪ್ರಮುಖ ಮುಖಂಡರು …
Read More »ಅಕ್ಟೋಬರ್ 16 ರಿಂದ 14 ದಿನಗಳ ಕಾಲ ಪುಣೆ ವಿಮಾನ ನಿಲ್ದಾಣ ಬಂದ್
ಪುಣೆ: ವಾಯುಪಡೆಯು ರನ್ ವೇ ಕೆಲಸ ನಡೆಯುವುದರಿಂದ ಪುಣೆ ವಿಮಾನ ನಿಲ್ದಾಣವು (Pune airport) ಅಕ್ಟೋಬರ್ 16-30 ರಿಂದ 14 ದಿನಗಳವರೆಗೆ ಬಂದ್ ಆಗಿರುತ್ತದೆ. ಈ ಅವಧಿಯಲ್ಲಿ ಯಾವುದೇ ವಿಮಾನ ಹಾರಲು ಮತ್ತು ವಿಮಾನ ನಿಲ್ದಾಣದಲ್ಲಿ ಇಳಿಯಲು ಸಾಧ್ಯವಿಲ್ಲ. ವಿಮಾನಯಾನ ಸಂಸ್ಥೆಗಳು ಎಲ್ಲಾ ನಿಗದಿತ ಕಾರ್ಯಾಚರಣೆಗಳನ್ನು ರದ್ದುಗೊಳಿಸಬೇಕಾಗುತ್ತದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ‘ನಾವು ವಾಯುಪಡೆಯಿಂದ ಸೂಚನೆ NOTAM (Notice to Airmen) ಸ್ವೀಕರಿಸಿದ್ದೇವೆ. ರನ್ ವೇ ಅಕ್ಟೋಬರ್ …
Read More »ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಸಂಜಯ್ ಪಾಟೀಲ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು
ಬೆಳಗಾವಿ: ಮಾಜಿ ಶಾಸಕ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಸಂಜಯ್ ಪಾಟೀಲ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ್, ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಸಂಜಯ್ ಪಾಟೀಲ್ …
Read More »ಬೆಂಗಳೂರು ರೈಲ್ವೆ ನಿಲ್ದಾಣದ ಕಾವಲಿಗೆ ಅತ್ಯಾಧುನಿಕ ಕ್ಯಾಮರಾಗಳು.. ಕಳ್ಳರ ಎದೆಯಲ್ಲಿ ನಡುಕ ಶುರು..!
ಬೆಂಗಳೂರು: ಇನ್ಮುಂದೆ ಬೆಂಗಳೂರು ರೈಲ್ವೆ ಸ್ಟೇಷನ್ಗೆ ಹೋಗಬೇಕಾದ್ರೆ ಎಚ್ಚರವಾಗಿರಬೇಕು. ಆದ್ರೆ ಪ್ರಯಾಣಿಕರಲ್ಲ. ಖತರ್ನಾಕ್ ಆಟ ಆಡೋ ರೌಡಿಗಳು, ಕಳ್ಳರು. ಹೌದು.. ನಗರದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಇನ್ಮುಂದೆ ಚಾಲಾಕಿಗಳ ಆಟಕಕ್ಕೆ ಬ್ರೇಕ್ ಬೀಳುವ ಸಾಧ್ಯತೆಗಳು ದಟ್ಟವಾಗಿವೆ ಅದಕ್ಕೆ ಕಾರಣ ಏನು ಗೊತ್ತಾ? ರೈಲ್ವೆ ನಿಲ್ದಾಣದಲ್ಲಿ ಯಾವುದಾದ್ರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಎಸ್ಕೇಪ್ ಆಗ್ತೀನಿ ಅಂದ್ರೆ ಇನ್ಮುಂದೆ ಚಾನ್ಸೇ ಇಲ್ಲ. ರೈಲ್ವೆ ರಕ್ಷಣಾ ದಳ …
Read More »ಪಿಡಿಒನಿಂದ ರಾಷ್ಟ್ರಪತಿವರೆಗೆ RSS ಕಾರ್ಯಕರ್ತರೇ ಇರೋದು- ಹೆಚ್ಡಿಕೆಗೆ ಸುನೀಲ್ ಕುಮಾರ್ ತಿರುಗೇಟು
ಉಡುಪಿ: ದೇಶದ ನಾಗರಿಕ ಸೇವೆಯಾದ ಐಎಎಸ್ ಮತ್ತು ಐಪಿಎಸ್ ನಲ್ಲಿ 4,000 RSS ಕಾರ್ಯಕರ್ತರು ಇದ್ದಾರೆ. ದೇಶದಲ್ಲಿ ಅಧಿಕಾರ ನಡೆಸುತ್ತಿರುವುದು RSS ಎಂದಿರುವ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಇಂಧನ ಸಚಿವ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಬರೀ 4 ಸಾವಿರ ಅಲ್ಲ ಪಂಚಾಯತ್ ಪಿಡಿಒನಿಂದ ರಾಷ್ಟ್ರಪತಿ ತನಕ RSS ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ನೀವು ಹೇಳಿದ್ರಿ ಅಂತ ಈ ಕೆಲಸ ನಿಲ್ಲೋದಿಲ್ಲ, ಇನ್ನಷ್ಟು …
Read More »ಖಾನಾಪುರ ಗ್ರಾಮಸ್ಥರ ಪರ ಡಾ.ಸೋನಾಲಿ ಸರ್ನೋಬತ್ ಅಹವಾಲು ಸಲ್ಲಿಕೆ
ಬೆಳಗಾವಿ – ಖಾನಾಪುರ ತಾಲೂಕಿನ ವಿವಿಧ ಗ್ರಾಮಸ್ಥರ ಪರವಾಗಿ ಬಿಜೆಪಿ ಮಹಿಳಾ ಮೋರಾರ್ಚಾ ಉಪಾಧ್ಯಕ್ಷರೂ, ಖಾನಾಪುರ ತಾಲೂಕು ಉಸ್ತುವಾರಿಗಳೂ ಆಗಿರುವ ಡಾ. ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕಕ್ಕೇರಿಯ ಬಿಷ್ಠಾದೇವಿ ಜಾತ್ರೆಗೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಗೆ ಹಾಗೂ ಜಾತ್ರೆಗೆ ಸೂಕ್ತ ಬಂದೋಬಸ್ತ್ ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೆ ಮನವಿ ಸಲ್ಲಿಸಲಾಯಿತು. ಜಾತ್ರೆಯನ್ನು ಕೋವಿಡ್ ನಿಯಮ ಪಾಲಿಸಿ ನಡೆಸಲು …
Read More »ಅಡುಗೆ ಅನಿಲ ದರ ಮತ್ತಷ್ಟು ಏರಿಕೆ
ನವದೆಹಲಿ: ಪೆಟ್ರೋಲ್-ಡೀಸೆಲ್ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಇದೀಗ ಎಲ್ ಪಿಜಿ ಶಾಕ್ ನೀಡಿದೆ. ಅಡುಗೆ ಅನಿಲ ದರ ಮತ್ತಷ್ಟು ಏರಿಕೆಯಾಗಿದ್ದು ದೇಶಾದ್ಯಂತ ಹೊಸ ಪರಿಷ್ಕೃತ ಸಿಲಿಂಡಿರ್ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಇತ್ತೀಚೆಗಷ್ಟೇ ಅಡುಗೆ ಅನಿಲ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಗ್ರಾಹಕರಿಗೆ ಇದೀಗ ಮತ್ತೆ ಬೆಲೆ ಏರಿಕೆ ಬಿಸಿ ಕೈಸುಟ್ಟುಕೊಳ್ಳುವಂತಾಗಿದ್ದು, ಗ್ಯಾಸ್ ಸಿಲಿಂಡರ್ ದರ 15 ರೂಪಾಯಿ ಹೆಚ್ಚಳ ಮಾಡಲಾಗಿದೆ. ಬೆಲೆ ಏರಿಕೆ ಬಳಿಕ ಕರ್ನಾಟಕದಲ್ಲಿ …
Read More »ಆನ್ಲೈನ್ ಜೂಜಾಟವನ್ನು ನಿಷೇಧಿಸುವ ಕಾನೂನನ್ನು ಕರ್ನಾಟಕ ಅಧಿಸೂಚನೆ
ಬೆಂಗಳೂರು: ಆನ್ಲೈನ್ ಜೂಜು ಮತ್ತು ಬೆಟ್ಟಿಂಗ್ ನಿಷೇಧಿಸುವ ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ಮಂಗಳವಾರ ಸೂಚಿಸಿದೆ.ಇತ್ತೀಚೆಗೆ ಮುಕ್ತಾಯಗೊಂಡ ಮುಂಗಾರು ಅಧಿವೇಶನದಲ್ಲಿ ಕರ್ನಾಟಕ ಶಾಸಕಾಂಗದ ಉಭಯ ಸದನಗಳಲ್ಲಿ ಅಂಗೀಕರಿಸಲ್ಪಟ್ಟ ಕಾನೂನು, ಉಲ್ಲಂಘನೆಗಾಗಿ ಗರಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷದವರೆಗೆ ದಂಡವನ್ನು ಒದಗಿಸುತ್ತದೆ. ಈ ಕಾನೂನು ಗೇಮಿಂಗ್ ಉದ್ಯಮದಲ್ಲಿ ಗಂಭೀರ ಕಳವಳವನ್ನು ಹುಟ್ಟುಹಾಕಿದೆ, ಮತ್ತು ನ್ಯಾಯಾಲಯಗಳಲ್ಲಿ ಪ್ರಶ್ನಿಸುವ ಸಾಧ್ಯತೆಯಿದೆ, ಏಕೆಂದರೆ ನೆರೆಯ ತಮಿಳುನಾಡಿನಿಂದ ಕೂಡ ಇದೇ …
Read More »ರಾಜ್ಯ ಸರ್ಕಾರದಿಂದ ಫ್ಲ್ಯಾಟ್ ಖರೀದಿ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ : ಮುದ್ರಾಂಕ ಶುಲ್ಕ ಶೇ.5 ರಿಂದ 3ಕ್ಕೆ ಇಳಿಕೆರಾಜ್ಯ ಸರ್ಕಾರದಿಂದ ಫ್ಲ್ಯಾಟ್ ಖರೀದಿ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ : ಮುದ್ರಾಂಕ ಶುಲ್ಕ ಶೇ.5 ರಿಂದ 3ಕ್ಕೆ ಇಳಿಕೆ
ಬೆಂಗಳೂರು : ರಾಜ್ಯ ಸರ್ಕಾರವು (Karnataka Government) ಫ್ಲ್ಯಾಟ್ (Flat) ಖರೀದಿದಾರರಿಗೆ ಸಿಹಿಸುದ್ದಿ ನೀಡಿದ್ದು, 2020-21 ನೇ ಸಾಲಿನ ಬಜೆಟ್ ನಲ್ಲಿ ಘೋಷಿಸಿದ್ದಂತೆ 35 ಲಕ್ಷ ರೂ.ನಿಂದ 45 ಲಕ್ಷ ರೂ. ವರೆಗಿನ ಫ್ಲ್ಯಾಟ್ ಗಳ ಮೊದಲನೇ ನೋಂದಣಿಗೆ ಮುದ್ರಾಂಕ ಶುಲ್ಕವನ್ನು (Stamp fee) ಶೇ. 5 ರಿಂದ 3 ಕ್ಕೆ ಇಳಿಕೆ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು ನಗರ, ಬೆಂಗಳೂರು ಹೊರವಲಯ ಸೇರಿದಂತೆ ರಾಜ್ಯದ …
Read More »