Breaking News

ಹೈವೇಯಲ್ಲಿ ದರೋಡೆಗಿಳಿದಿದ್ದ ಡಕಾಯಿತರಿಗೆ ಗೂಸಾ ನೀಡಿದ ಗ್ರಾಮಸ್ಥರು

ಬೆಂಗಳೂರು: ಕಾಡಿನಲ್ಲಿ ಟೆಂಟ್ ಹಾಕಿ ಹೆದ್ದಾರಿಯಲ್ಲಿ ಪ್ರಯಾಣಿಸುವ ಸವಾರರ ದರೋಡೆಗಿಳಿದಿದ್ದ ಡಕಾಯಿತರಿಗೆ ಗ್ರಾಮಸ್ಥರು ಗೂಸಾ ನೀಡಿದ ಘಟನೆ ನಗರದ ಹೊರವಲಯದ ಬೆಂಗಳೂರು-ಶಿವಮೊಗ್ಗ ಹೈವೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗಗಳಲ್ಲಿ ಹೋಗುವ ಪ್ರಯಾಣಿಕರನ್ನ ಟಾರ್ಗೆಟ್​ ಮಾಡ್ತಿದ್ದ ಗ್ಯಾಂಗ್ ವಾಹನಗಳನ್ನು ಅಡ್ಡಗಟ್ಟಿ ಕಾರಿನ ಗ್ಲಾಸ್ ಗಳನ್ನ ಒಡೆದು ದರೋಡೆ ಮಾಡುತ್ತಿದ್ದರೆಂಬ ಆರೋಪ ಕೇಳಿ ಬಂದಿದೆ. ಆರೋಪಿಗಳು ಮೊಬೈಲ್​ ಸೇರಿದಂತೆ ಹಲವು ವಸ್ತುಗಳನ್ನು ದೋಚಿ ಪರಾರಿಯಾಗುತ್ತಿದ್ದರು ಎನ್ನಲಾಗಿದೆ. ಕಳ್ಳರು ಗುಬ್ಬಿ ಫಾರೆಸ್ಟ್ ನಲ್ಲಿ ಟೆಂಟ್ …

Read More »

ತುಳಿತಕೊಳ್ಳಪಟ್ಟ ದಲಿತ ಸಮುದಾಯದ ಸ್ವಾಭಿಮಾನದ ಬದುಕಿಗಾಗಿ ಕಾರ್ಯ ನಿರ್ವಹಿಸುವ ಮಹದಾಸೆ ನಿರೀಕ್ಷಿಸಲು ಸಾಧ್ಯ: ಅಶೋಕ ಪೂಜಾರಿ

ಗೋಕಾಕ : 3, ಸ್ವಾತಂತ್ರ್ಯ ಭಾರತದ ಸಂವಿಧಾನ ಶಿಲ್ಪಿ ಡಾ,ಬಾಬಾಸಾಹೇಬ ಅಂಬೇಡ್ಕರ್ ಅವರ ಪರ್ವ ಕಾಲದಲ್ಲಿ ನಾವಿದ್ದೇವೆ. ಸ್ವಾತಂತ್ರ್ಯ ಮತ್ತು ಸಮಾನತೆ ಬದುಕು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾದ ನ್ಯಾಯ ಸಮ್ಮತ ಆಡಳಿತ ವ್ಯವಸ್ಥೆ, ಸ್ತ್ರೀ ಸ್ವಾತಂತ್ರ್ಯ ಸಮಗ್ರ ಶಿಕ್ಷಣ, ಎಲ್ಲರಿಗೂ ಸಮ ಬಾಳು ಮತ್ತು ಸಮಪಾಲು ಮುಂತಾದ ಉದಾತ್ತ ದ್ಧ್ಯೆಯಗಳೊಂದಿಗೆ ಸಾಂದರ್ಭಿಕ ತಿದ್ದುಪಡಿಗಳ ಅವಕಾಶಗಳೊಂದಿಗೆ ರಚಿಸಲ್ಪಟ್ಟಿರುವ ದೇಶದ ಸಂವಿಧಾನ ಭಾರತೀಯರ ಧರ್ಮ ಗ್ರಂಥವಗಬೇಕೆಂದು ಪ್ರೋ ಎ. ವಾಯ. ಪಂಗಣ್ಣವರ …

Read More »

ಶ್ವಾನದ ತಲೆಗೆ ಸಿಲುಕಿದ ಪ್ಲಾಸ್ಟಿಕ್‌ ಬಾಟಲಿ ; ಅಗ್ನಿಶಾಮಕ ಸಿಬಂದಿಯಿಂದ ರಕ್ಷಣೆ

ತೆಕ್ಕಟ್ಟೆ : ಕಳೆದ ಮೂರು ದಿನಗಳಿಂದ ಶ್ವಾನದ ತಲೆಗೆ ಆಕಸ್ಮಿಕವಾಗಿ ಪ್ಲಾಸ್ಟಿಕ್‌ ಬಾಟಲಿ ಸಿಲುಕಿ ಪರದಾಡುತ್ತಿದ್ದು, ಕುಂದಾಪುರ ಅಗ್ನಿಶಾಮಕ ದಳದ ಸಿಬಂದಿಗಳ ಸಮಯ ಪ್ರಜ್ಞೆಯಿಂದಾಗಿ ರಕ್ಷಿಸಿದ ಘಟನೆ ಅ.2 ರಂದು ಸಂಭವಿಸಿದೆ. ಘಟನೆ : ಹಿರಿಯ ಪರಿಸರವಾದಿ ಕೊರ್ಗಿ ವಿಠಲ್‌ ಶೆಟ್ಟಿ ಅವರು ಅ.2 ರಂದು ತಮ್ಮ 76ನೇ ಹುಟ್ಟು ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಕೋಣಿ ಮಾನಸ ಜ್ಯೋತಿಯ ವಿಶೇಷ ಚೇತನ ಮಕ್ಕಳಿಗಾಗಿ ಹಣ್ಣು ಹಂಪಲು ವಿತರಣೆಗೆಂದು ತೆರಳಿದ ಸಂದರ್ಭದಲ್ಲಿ …

Read More »

ವಿದ್ಯುತ್​​​ ಅವಘಡ​​​: ಅಜ್ಜಿಯನ್ನು ರಕ್ಷಣೆ ಮಾಡಲು ಹೋದ ಮೊಮ್ಮಗ ಕೂಡ ಸಾವು

ಚಿಕ್ಕೋಡಿ: ವಿದ್ಯುತ್​ ಶಾಕ್​​​ಗೆ ಒಳಗಾಗಿದ್ದ ಅಜ್ಜಿಯನ್ನು ರಕ್ಷಣೆ ಮಾಡಲು ಹೋಗಿದ್ದ ಮೊಮ್ಮಗ ಕೂಡ ಶಾಕ್​ ತಗುಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಮಡ್ಡಿ ಗಲ್ಲಿಯಲ್ಲಿ ನಡೆದಿದೆ. ಅಜ್ಜಿ ಶಾಂತವ್ವಾ ಬಸ್ತವಾಡೆ, ಮೊಮ್ಮಗ ಸಿದ್ದಾರ್ಥ ಬಸ್ತವಾಡೆ (24) ಸ್ಥಳದಲ್ಲೇ ಸಾವನ್ನಪ್ಪಿದ ಮೃತ ದುರ್ದೈವಿಗಳು. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರೆ ಮತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.   ನಿನ್ನೆ ರಾತ್ರಿ ಮಳೆ ಸುರಿದ ಹಿನ್ನಲೆ ಹಿತ್ತಲಿನಲ್ಲಿ ಬಟ್ಟೆ ಹಾಕುವ ತಂತಿಗೆ …

Read More »

ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಬಿಡುಗಡೆಯಲ್ಲಿ ಏರುಪೇರು

ಕೊರೋನಾ ಆರಂಭವಾದಾಗಿನಿಂದ ನೌಕರರ ವೇತನ ಬಿಡುಗಡೆಯಲ್ಲಿ ಏರುಪೇರಾಗುತ್ತಿದೆ. ಕಳೆದ ಒಂದು ವರ್ಷದಿಂದ ನಿಗದಿತ ದಿನಕ್ಕೆ ವೇತನ ಸಿಗುತ್ತಿಲ್ಲ. ಜುಲೈ ತಿಂಗಳ ವೇತನವನ್ನು ಆಗಸ್ಟ್‌ ಕೊನೆಯ ವಾರದಲ್ಲಿ ಪಾವತಿಸಲಾಗಿತ್ತು. ಆಗಸ್ಟ್‌ ತಿಂಗಳ ಶೇ.50ರಷ್ಟು ವೇತನವನ್ನು ಗೌರಿ-ಗಣೇಶ ಹಬ್ಬಕ್ಕೂ ಮುನ್ನ ಬಿಡುಗಡೆಗೊಳಿಸಲಾಗಿತ್ತು. ಈಗ ಅಕ್ಟೋಬರ್‌ ಬಂದರೂ ಆಗಸ್ಟ್‌ ತಿಂಗಳ ಬಾಕಿ ಶೇ.50ರಷ್ಟುವೇತನ ನೀಡಿಲ್ಲ. ಇದೀಗ ಮಹಾಲಯ ಅಮಾವಾಸ್ಯೆ, ದಸರಾ ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ನೌಕರರಿಗೆ ಹಣದ ಅಗತ್ಯವಿದೆ.

Read More »

ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಮಯೋಪಿಯ ಸಮಸ್ಯೆ

ಹೆಚ್ಚಾಗಿ 8- 16 ವರ್ಷದೊಳಗಿನ ಮಕ್ಕಳು ಈ ಕಣ್ಣಿನ ಸಮಸ್ಯೆಗೆ ತುತ್ತಾಗುತ್ತಿರುವುದಾಗಿ ಸಂಶೋಧನೆಯಿಂದ ತಿಳಿದುಬಂದಿದೆ. ಈ ಹಿಂದೆ 10- 15 ಪ್ರತಿಶತ ಮಕ್ಕಳು ಕಣ್ಣಿನ ಸಮಸ್ಯೆ ಹೇಳಿಕೊಂಡು ವೈದ್ಯರ ಬಳಿಗೆ ಬರುತ್ತಿದ್ದರು. ಈಗ ಆ ಸಂಖ್ಯೆ ಶೇ. 30- 40 ಪ್ರತಿಶತಕ್ಕೆ ಏರಿಕೆಯಾಗಿದೆ. ದೀರ್ಘ ಕಾಲ ಡಿಜಿಟಲ್ ಪರದೆಯನ್ನು ದಿಟ್ಟಿಸುವುದರಿಂದ ಕಣ್ನಲ್ಲಿನ ನೀರಿನಂಶ ಬೇಗನೆ ಒಣಗಿ ಹೋಗುತ್ತದೆ. ಇದರಿಂದ ತುರಿಕೆ ಕಂಡುಬರುತ್ತದೆ. ಆಗ ಮಕ್ಕಳು ಕಣ್ಣನ್ನು ಪದೇ ಪದೇ ಉಜ್ಜಿಕೊಳ್ಳುತ್ತಾರೆ. …

Read More »

ಟಾಪ್​​ 10 ಸುದ್ದಿಗಳ ಕ್ವಿಕ್​ರೌಂಡಪ್​ ATM ಕೇಂದ್ರದಲ್ಲಿ ಯುವತಿಯ ಭರ್ಜರಿ ಡ್ಯಾನ್ಸ್​​

1. ದೀದಿ ಭವಿಷ್ಯ ನಿರ್ಧಾರಕ್ಕೆ ಕ್ಷಣಗಣನೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭವಿಷ್ಯ ಕೆಲವೇ ಕ್ಷಣಗಳಲ್ಲಿ ನಿರ್ಧಾರವಾಗಲಿದೆ. ಭವಾನಿಪುರ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದೆ. ಭವಾನಿಪುರ ಕ್ಷೇತ್ರದಲ್ಲಿ ಕಳೆದ ಗುರುವಾರ ಮತದಾನ ನಡೆದು, ಶೇಕಡಾ 57ರಷ್ಟು ಮತದಾನವಾಗಿತ್ತು. ‌ ಅದರಂತೆ ಇಂದು ಬೆಳಿಗ್ಗೆ 8 ಗಂಟೆಗೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಮಧ್ಯಾಹ್ನದ ವೇಳೆಗೆ ಫಲಿತಾಂಶಗಳು ಟ್ರೆಂಡ್ ಆಧಾರದ ಮೇಲೆ ಸ್ಪಷ್ಟವಾಗುತ್ತವೆ. ಇನ್ನು ಭವಾನಿಪುರ …

Read More »

ಆಗಸ್ಟ್‌ನಲ್ಲಿ 20 ಲಕ್ಷ ಭಾರತೀಯರ ಖಾತೆಗಳನ್ನು ನಿಷೇಧಿಸಿದ್ದ ವಾಟ್ಸಾಪ್

ನವದೆಹಲಿ, ಅಕ್ಟೋಬರ್ 02: ಒಂದೇ ತಿಂಗಳಲ್ಲಿ 20 ಲಕ್ಷ ಖಾತೆಗಳನ್ನು ವಾಟ್ಸಾಪ್ ನಿಷೇಧಿಸಿರುವ ಮಾಹಿತಿ ಲಭ್ಯವಾಗಿದೆ. ಆಗಸ್ಟ್‌ನಲ್ಲಿ ತಿಂಗಳಲ್ಲಿ ವಾಟ್ಸ್​​ಆಯಪ್​ ಕುರಿತಾಗಿ ಖಾತೆ ಬೆಂಬಲ (105), ನಿಷೇಧ ಮನವಿ (222), ಇತರ ಬೆಂಬಲ (34), ಉತ್ಪನ್ನ ಬೆಂಬಲ (42) ಮತ್ತು ಸುರಕ್ಷತೆ (17) ಗಳ ವಿಚಾರವಾಗಿ 420 ಬಳಕೆದಾರರ ವರದಿಗಳನ್ನು ಸ್ವೀಕರಿಸಲಾಗಿದೆ ಎಂದು ವಾಟ್ಸಾಪ್ ಅನುಸರಣೆ ಡೇಟಾ ತೋರಿಸಿದೆ. ಆದಾಗ್ಯೂ, 421 ವರದಿಗಳ ಪೈಕಿ, ವಾಟ್ಸಾಪ್ 41 ಖಾತೆಗಳ ವಿರುದ್ಧ …

Read More »

. 140_ಅಡಿ ಆಳಕ್ಕೆ ಬಿದ್ದ ಯುವಕನೊಬ್ಬ ಬದುಕುಳಿದಿದ್ದು ಪವಾಡವೇ ಸರಿ…

ಗೋಕಾಕ್ ಫಾಲ್ಸ್ ನಲ್ಲಿ ಮಧ್ಯರಾತ್ರಿ ಅಚ್ಚರಿಯ ಘಟನೆ ನಡೆದಿದೆ. 140_ಅಡಿ ಆಳಕ್ಕೆ ಬಿದ್ದ ಯುವಕನೊಬ್ಬ ಬದುಕುಳಿದಿದ್ದು ಅಗ್ನಿ ಶಾಮಕ ದಳದ ಸಿಬ್ಬಂಧಿ ಯುವಕನನ್ನು ರಕ್ಷಣೆ ಮಾಡಿದ್ದಾರೆ. https://youtu.be/GAPJHEFf7mM ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಈ ಯುವಕ ಸೆಲ್ಫೀ ತೆಗೆಯಲು ಹೋಗಿ ಗೋಕಾಕ್ ಫಾಲ್ಸ್ ನಲ್ಲಿ ಜಾರಿ ಬಿದ್ದಿದ್ದ,ರಾತ್ರಿಹೊತ್ತು ಅಗ್ನಿ ಶಾಮಕದಳದ ಸಿಬ್ಬಂಧಿ ಮತ್ತು ಪೋಲೀಸರು ಯುವಕನ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸಿದರೂ ಯುವಕ ಪತ್ತೆ ಆಗಿರಲಿಲ್ಲ, ಮದ್ಯರಾತ್ರಿ 3 …

Read More »

ದೀದಿ ಭವಿಷ್ಯ ಇಂದೇ ನಿರ್ಧಾರ : ಭವಾನಿಪುರ ಉಪಚುನಾವಣೆ ಮತ ಎಣಿಕೆ ಆರಂಭ

ಕೋಲ್ಕತ್ತಾ: ಭವಾನಿಪುರದಲ್ಲಿ ದೀದಿ ಭವಿಷ್ಯ ಇಂದು ನಿರ್ಧಾರವಾಗಲಿದೆ. ಭವಾನಿಪುರ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಭಾನುವಾರ ಬೆಳಗ್ಗೆಯಿಂದ ಆರಂಭವಾಗಿದೆ. ಕಳೆದ ಗುರುವಾರ ಮತದಾನ ನಡೆದಿದ್ದು, ಮತದಾನ ಶೇ 57ರಷ್ಟು ಮಾತ್ರ ನಡೆದಿದೆ. ಬೆಳಗ್ಗೆ 8 ಗಂಟೆಗೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ. ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯಿಂದ ವಕೀಲೆ, ಬಿಜೆಪಿ ಯೂತ್​​ ವಿಂಗ್​​​ ಅಧ್ಯಕ್ಷೆಯಾಗಿದ್ದ ಪ್ರಿಯಾಂಕಾ ತಿಬ್ರೆವಾಲಾ ಕಣದಲ್ಲಿದ್ದಾರೆ. …

Read More »