ಶಿವಮೊಗ್ಗ: ಹರ್ಷ ಹಾಗೂ ಖಾಸಿಫ್ ನಡುವೆ ಈ ಹಿಂದೆಯೂ ಹಲವು ಬಾರಿ ತಿಕ್ಕಾಟ ನಡೆದಿತ್ತು. ಈ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತ ಹರ್ಷನ ಮೇಲೆ 2016 ಮತ್ತು 2017ರಿಂದಲೇ ಕಣ್ಣಿಟ್ಟಿದ್ದರು ಎಂಬುದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಧಾರ್ಮಿಕ ಭಾವನೆಗೆ ಧಕ್ಕೆ ತಂದು ಕೋಮು ಸೌಹಾರ್ದವನ್ನು ಹಾಳು ಮಾಡಲಾಗುತ್ತಿದೆ ಎಂಬ ಕೇಸ್ ಆದಾಗಿಂದ ಹರ್ಷ ವಿರುದ್ಧ ಖಾಸಿಫ್ ದ್ವೇಷ ಸಾಧಿಸುತ್ತಿದ್ದರು. ಆಗ ಹರ್ಷ ವಿರುದ್ಧ ಎರಡು ಕೇಸ್ಗಳನ್ನು ಸಹ ಪೊಲೀಸರು ಹಾಕಿದ್ದರು. ಈ ನಡುವೆ …
Read More »ಹಿಜಾಬ್ ವಿವಾದ : ಮತ್ತೆ ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ
ಹಿಜಾಬ್ ವಿವಾದ ಕುರಿತು 8ನೇ ದಿನವಾದ ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ತ್ರಿಸದಸ್ಯ ಪೀಠ , ಮತ್ತೆ ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ. ತ್ರಿಸದಸ್ಯ ಪೂರ್ಣ ಪೀಠದ ಮುಂದೆ ಇಂದು ಕೂಡ ಅಡ್ವಕೇಟ್ ಜನರಲ್ ಸರ್ಕಾರದ ಪರ ವಾದವನ್ನು ಮಂಡಿಸಿದರು. ಈ ಬಳಿಕ ಮಧ್ಯಂತರ ಆದೇಶದ ಸ್ಪಷ್ಟೀಕರಣಗಳನ್ನು ಕೋರುವ ಅರ್ಜಿಗಳನ್ನು ನಾಳೆ ತೆಗೆದುಕೊಳ್ಳುವುದಾಗಿ ಪೀಠ ಹೇಳಿತು. ಈ ಮೂಲಕ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ.
Read More »ಹಿಜಾಬ್ ವಿವಾದ ಕಾರಣಕ್ಕೆ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಗೈರಾದರೆ ಮರುಪರೀಕ್ಷೆ ಇಲ್ಲ: ಸಚಿವ ಬಿ.ಸಿ. ನಾಗೇಶ್
ಬೆಂಗಳೂರು: “ಹಿಜಾಬ್ ವಿವಾದದ ಕಾರಣಕ್ಕೆ ವಿದ್ಯಾರ್ಥಿಗಳು ಪಿಯು ಪರೀಕ್ಷೆಗಳಿಗೆ ಗೈರುಹಾಜರಾದರೆ ಅವರಿಗೆ ಮರುಪರೀಕ್ಷೆ ಇರುವುದಿಲ್ಲ. ಯಾರೂ ಕೂಡ ಹಠ ಮಾಡಿ ಶೈಕ್ಷಣಿಕ ಜೀವನ ಹಾಳು ಮಾಡಿಕೊಳ್ಳಬಾರದು,” ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನವಿ ಮಾಡಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ತೆಗೆದು ಪರೀಕ್ಷಾ ಕೇಂದ್ರಕ್ಕೆ ಬರಬೇಕು. “ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಕೆಲವರು ವಿರೋಧಿಸಿದ್ದಾರೆ. ಅಂತಹವರ ಪರವಾಗಿ ಕಾಂಗ್ರೆಸ್ನವರು ಮಾತನಾಡುವುದು ಸರಿಯಲ್ಲ. …
Read More »ಮಾ.4 ರಂದು ಬೊಮ್ಮಾಯಿ ಸರ್ಕಾರದ ಚೊಚ್ಚಲ ಬಜೆಟ್
ಬೆಂಗಳೂರು: ಮಾರ್ಚ್ 4ರಂದು ತಮ್ಮ ಸರಕಾರದ ಚೊಚ್ಚಲ ಬಜೆಟ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಲಿದ್ದಾರೆ. ಬಸವರಾಜ ಬೊಮ್ಮಾಯಿ ಅವರೇ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾರ್ಚ್ 4ರಂದು ತಾವು ಬಜೆಟ್ ಮಂಡನೆ ಮಾಡುವುದಾಗಿ ಹೇಳಿದರು.ಬಸವರಾಜ ಬೊಮ್ಮಾಯಿ ಅವರು ಹಣಕಾಸು ಖಾತೆಯನ್ನೂ ಸಹ ಹೊಂದಿದ್ದು, ಹೀಗಾಗಿ ಅವರೇ ಬಜೆಟ್ ಮಂಡನೆ ಮಾಡಲಿದ್ದಾರೆ. ಇದರ ಮಧ್ಯೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಮಂಡಲ …
Read More »ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,553 ಜನರಲ್ಲಿ ಸೋಂಕು ಪತ್ತೆ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,553 ಜನರಲ್ಲಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 278 ಜನ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,12,622 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 1,64,522 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 31,377 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,21,89,887 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 33,84,744 ಜನರಿಗೆ …
Read More »ಅಕ್ಷೇಪಾರ್ಹ ಟ್ವೀಟ್ ಆರೋಪ : ನಟ ಚೇತನ್ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ನ್ಯಾಯಾಂಗ ನಿಂದನೆ ಬರಹ ಪ್ರಕಟಿಸಿ ಜನರನ್ನು ಪ್ರಚೋದಿಸಿದ ಆರೋಪದಡಿ ಸ್ಯಾಂಡಲ್ವುಡ್ ನಟ ಚೇತನ್ ನನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚೇತನ್ ಕುಮಾರ್ ಹೈಕೋರ್ಟ್ ನ್ಯಾಯಮೂರ್ತಿಗಳ ಬಗ್ಗೆ ಪದೇ ಪದೇ ಟ್ವೀಟ್ ಮಾಡಿದ ನಂತರ ಸುಮೋಟೋ ಪ್ರಕರಣ ದಾಖಲಿಸಲಾಗಿದೆ ಎಂದು ಶೇಷಾದ್ರಿಪುರಂ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ವಿಚಾರಣೆ ನಡೆಸಿದ 8 ನೇ ಎಸಿಎಂಎಂ ಕೋರ್ಟ್ ನಟ ಚೇತನ್ …
Read More »ಪ್ರಧಾನಿ ಕಾರ್ಯಾಲಯದಿಂದ ವಿಜಯ್ ಕಿರಗಂದೂರ್ಗೆ ಪತ್ರ..? ಬೆಸ್ತು ಬಿದ್ದ ಹೊಂಬಾಳೆ ಟೀಂ!
ಭಾರತದ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾ ‘ಕೆಜಿಎಫ್ 2’ ಬಿಡುಗಡೆಗೆ ಯಶ್ ಫ್ಯಾನ್ಸ್ ಎದುರು ನೋಡುತ್ತಿದ್ದಾರೆ. ಈಗಾಗಲೇ ಸಿನಿಮಾ ಏಪ್ರಿಲ್ 14ರಂದು ಬಿಡುಗಡೆ ಎಂದು ಟೀಮ್ ಅನೌನ್ಸ್ ಮಾಡಿದೆ. ಆದರೆ, ಇನ್ನೂ ಅಭಿಮಾನಿಗಳಿಗೆ ನಂಬಿಕೆಯೇ ಬರುತ್ತಿಲ್ಲ. ಮತ್ತೆ ‘ಕೆಜಿಎಫ್ 2’ ಪೋಸ್ಟ್ ಪೋನ್ ಆಗುತ್ತಾ? ಅನ್ನುವ ಗೊಂದಲದಲ್ಲಿ ಇದ್ದಾರೆ. ಇದಕ್ಕೆ ಕಾರಣ ಇನ್ನೂ ಚಿತ್ರತಂಡ ಒಂದೇ ಒಂದು ಅಪ್ಡೇಟ್ ಕೊಟ್ಟಿ,ಲ್ಲ. ‘ಕೆಜಿಎಫ್ 2’ ಟೀಸರ್ ಬಿಟ್ಟರೆ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದು …
Read More »ಹರ್ಷನ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸುವ ಮೊದಲು ಆತನ ಸಹಚರನನ್ನು ಪೊಲೀಸರು ವಶಕ್ಕೆ ಪಡೆದಿದ್ದ ಸಿಸಿಟಿವಿ ದೃಶ್ಯಾವಳಿ ಸಿಕ್ಕಿದೆ.
ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣ ಸಂಬಂಧ ಈವರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, 12 ಮಂದಿಯನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಮೂವರಲ್ಲಿ ಓರ್ವ ಆರೋಪಿಯನ್ನು ಬಂಧಿಸಲು ಪೊಲೀಸರು ಸ್ಕೆಚ್ ಹಾಕಿದ್ದ ಸಿಸಿಟಿವಿ ವಿಡಿಯೋ ಇದೀಗ ವೈರಲ್ ಆಗಿದೆ. ಮೊದಲು ಆರೋಪಿಯ ಸಹಚರನನ್ನು ಆತನ ಮನೆಯ ಬಳಿಯೇ ವಶಕ್ಕೆ ಪಡೆದಿದ್ದ ಪೊಲೀಸರು, ಈತನ ಮೂಲಕವೇ ಕೊಲೆ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದರು. ಸಹಚರನನ್ನು ಪೊಲೀಸರು ವಶಕ್ಕೆ ಪಡೆದ ದೃಶ್ಯದ …
Read More »ರಾಜ್ಯ ಬಜೆಟ್’ ಮಂಡನೆಗೆ ಮುಹೂರ್ತ ಫಿಕ್ಸ್: ‘ಮಾ.4ಕ್ಕೆ ಬಜೆಟ್ ಮಂಡನೆ’ : ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದಂತ ರಾಜ್ಯ ಬಜೆಟ್ ಮಂಡನೆಗೆ ( Karnataka Budget 2022 ) ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಕಾಂಗ್ರೆಸ್ ಗದ್ದಲದ ನಡುವೆಯೂ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಮಾರ್ಚ್ 4ಕ್ಕೆ ರಾಜ್ಯ ಬಜೆಟ್ ಮಂಡಿಸೋದಾಗಿ ಘೋಷಣೆ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತನ ಹತ್ಯೆ ಪ್ರಕರಣ ಸಂಬಂಧ ಕಾಂಗ್ರೆಸ್ ಕೈವಾಡವಿದೆ ಎಂಬುದಾಗಿ ಆರೋಪಿಸಿದಂತ ಬಿಜೆಪಿ ನಾಯಕರ ವಿರುದ್ಧ ಸದನದಲ್ಲಿ ಭಾವಿಗಿಳಿದು ಕಾಂಗ್ರೆಸ್ …
Read More »ಜಗದೀಶ್ ಅವರನ್ನು ಜೈಲಿನಲ್ಲಿಡುವುದರಿಂದ ಭ್ರಷ್ಟಾಚಾರ ವಿರುದ್ಧದ ಹೋರಾಟಕ್ಕೆ ಹಿನ್ನಡೆ: ವಕೀಲ ಹರೀಶ್ ಪ್ರಭು
ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ವಕೀಲ ಕೆ ಎನ್ ಜಗದೀಶ್ ಕುಮಾರ್ ಅಲಿಯಾಸ್ ಜಗದೀಶ್ ಮಹದೇವ್ ಅವರು ಸಮಾಜದಲ್ಲಿನ ಭ್ರಷ್ಟಚಾರ ಆರೋಪಗಳನ್ನು ಹೊತ್ತಿರುವವ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಜಗದೀಶ್ ಅವರನ್ನು ಬಂಧನದಲ್ಲಿ ಇಡುವುದರಿಂದ ಭ್ರಷ್ಟಾಚಾರ ವಿರುದ್ಧದ ಹೋರಾಟಕ್ಕೆ ಹಿನ್ನಡೆಯಾಗುತ್ತದೆ. ಹೀಗಾಗಿ ಅವರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಮಂಗಳವಾರ ಜಗದೀಶ್ ಪರ ವಕೀಲರು ಬೆಂಗಳೂರು ಸಿಟಿ ಸಿವಿಲ್ ಮತ್ತು ಸತ್ರ …
Read More »
Laxmi News 24×7