Breaking News

‘ಮುರುಘಾ ಶರಣರ ಜನ್ಮದಿನ’ ‘ಸಮಾನತಾ ದಿನ’ವಾಗಿ ಆಚರಣೆ – ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ಮುರುಘಾ ಶರಣರ ಜನ್ಮದಿನವನ್ನು ಸಮಾನತಾ ದಿನವೆಂದು ಸರ್ಕಾರದ ವತಿಯಿಂದ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಸೋಮವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಿತ್ರದುರ್ಗದ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಜನ್ಮದಿನಾಚರಣೆ ಬದಲಾಗಿ ಹಮ್ಮಿಕೊಂಡಿದ್ದ ಸಮಾನತ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದರು. ಬಸವಣ್ಣನವರ ವೈಚಾರಿಕತೆ ತತ್ವ ಆದರ್ಶಗಳನ್ನು ಪುನ: ಬಿತ್ತುವಂಥ ಸಾಹಸಕ್ಕೆ ಕೈ ಹಾಕಿರುವ ಸೃಜನಶೀಲ ಚಿಂತಕರೂ ಆಗಿರುವ ಡಾ: …

Read More »

ದೆಹಲಿಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಮೂರು ಪಟ್ಟು ಹೆಚ್ಚಳ; ಶಾಲೆ ಬಂದ್

ಹೊಸದಿಲ್ಲಿ : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿದ್ದು, ದೆಹಲಿ ಎನ್‍ಸಿಆರ್ ಪ್ರದೇಶದ ಒಂದು ಶಾಲೆಯಲ್ಲಿ 18 ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಶಾಲೆಯನ್ನು ತಕ್ಷಣದಿಂದ ಮುಚ್ಚಲಾಗಿದೆ. ಹೊಸ ಪ್ರಬೇಧದ ಸೋಂಕು ಪತ್ತೆಯಾಗುವವರೆಗೆ ನಾಗರಿಕರು ಆತಂಕಪಡುವ ಅಗತ್ಯವಿಲ್ಲ ಎಂದು ದೆಹಲಿ ಸರ್ಕಾರ ಅಭಯ ನೀಡಿದೆ. ಕಳೆದ ಐದು ದಿನಗಳಿಂದ ದೆಹಲಿಯಲ್ಲಿ ಪಾಸಿಟಿವಿಟಿ ದರ ಹೆಚ್ಚುತ್ತಿದ್ದು, ಪ್ರತಿ ಶತ ಒಂದಕ್ಕಿಂತ ಅಧಿಕವಾಗಿರುವುದನ್ನು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ದೃಢಪಡಿಸಿದ್ದಾರೆ. …

Read More »

ಜಿಎಸ್‌ಟಿ, ಇಂಧನ ದರ ಏರಿಕೆಯ ಪರಿಣಾಮ: ಕಬ್ಬಿಣ, ಸಿಮೆಂಟ್‌ ಮತ್ತಷ್ಟು ದುಬಾರಿ

ಬೆಂಗಳೂರು: ಕಬ್ಬಿಣ, ಸಿಮೆಂಟ್, ಸ್ಯಾನಿಟರಿ, ಬಣ್ಣ, ಎಲೆಕ್ಟ್ರಿಕಲ್, ಅಲ್ಯುಮಿನಿಯಂ ಸೇರಿ ಎಲ್ಲ ವಸ್ತುಗಳ ಬೆಲೆ ನಿರ್ಮಾಣ ಕ್ಷೇತ್ರವೇ ಬೆರಗಾಗುವಷ್ಟು ಗಗನಮುಖಿಯಾಗಿದೆ. ಇದು ಸ್ವಂತ ಮನೆ ಕಟ್ಟಿಕೊಳ್ಳುವ ಜನರ ಕನಸಿಗೆ ನುಚ್ಚುನೂರು ಮಾಡಿದ್ದರೆ, ಸರ್ಕಾರಿ ಕಾಮಗಾರಿಗಳ ಮೇಲೂ ಪರಿಣಾಮ ಬೀರಿದೆ.   ಜಿಎಸ್‌ಟಿ ಮತ್ತು ಇಂಧನ ದರ ಏರಿಕೆಯಿಂದ ನಿರ್ಮಾಣ ಪರಿಕರಗಳ ಬೆಲೆಯೂ ಏರುಗತಿಯಲ್ಲೇ ಮುಂದುವರಿದಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಕಳೆದ ನವೆಂಬರ್ ವೇಳೆಗೆ ಶೇ 40ರಿಂದ ಶೇ 50ರಷ್ಟು ಹೆಚ್ಚಳವಾಗಿದ್ದ …

Read More »

ಕಾಂಗ್ರೆಸ್ ಬಣ ರಾಜಕೀಯಕ್ಕೆ ಹೈಕಮಾಂಡ್​ನಿಂದಲೇ ಮದ್ದು

ಬೆಂಗಳೂರು :ಬೇರೆ ಬೇರೆ ರಾಜ್ಯಗಳಲ್ಲಿ ಕಾಂಗ್ರೆಸ್ ಆಂತರಿಕ ಕಲಹದಿಂದ ಸರ್ಕಾರವನ್ನೂ ಕಳೆದುಕೊಂಡಿ ದ್ದಲ್ಲದೆ, ಪಕ್ಷಕ್ಕೂ ಅಪಾರ ಹಾನಿಯಾದುದ್ದನ್ನು ಅರಿತ ಹೈಕಮಾಂಡ್ ಕರ್ನಾಟಕವನ್ನು ಗಂಭೀರವಾಗಿ ಪರಿಗಣಿಸಿದೆ. ಚುನಾವಣೆ ಎದುರಿಗಿರುವಾಗ ರಾಜ್ಯ ಕಾಂಗ್ರೆಸ್​ನಲ್ಲಿ ಸಾಕಷ್ಟು ಭಿನ್ನಾಭಿಪ್ರಾಯ ಗ್ರಹಿಸಿರುವ ಹೈಕಮಾಂಡ್, ಇಡೀ ಸಂಘಟನೆಯ ಮೇಲೆ, ಅಷ್ಟೂ ಕ್ಷೇತ್ರದ ಪೂರ್ಣ ಹಿಡಿತ ತೆಗೆದುಕೊಳ್ಳಲು ಬಯಸಿದೆ. ಇದೇ ಕಾರಣಕ್ಕೆ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಚುನಾವಣೆವರೆಗೂ ಪ್ರತಿ ತಿಂಗಳಲ್ಲಿ 15 ದಿನವನ್ನು ಕರ್ನಾಟಕಕ್ಕೆ ಮೀಸಲಿಡಲಿದ್ದಾರೆ. ಹಾಗೆಯೇ …

Read More »

ಅಪ್ಪು ಮಗಳ ಶಾಲೆಯಲ್ಲಿ ಅಶ್ವಿನಿ ಪುನೀತ್ ಅವ್ರಿಗೆ ಸನ್ಮಾನ; ವಿಡಿಯೋ ವೈರಲ್

ಬೆಂಗಳೂರು : ಕನ್ನಡದ ಪವರ್‌ ಸ್ಟಾರ್ ನಟ ಪುನೀತ್ ರಾಜ್‌ಕುಮಾರ್ ಅವರು ತೀವ್ರ ಹೃದಯ ಸ್ತಂಭನದಿಂದ ಬಳಲಿದ ನಂತರ ನಿಧನರಾಗಿದ್ದರು . ಅವರ ನಿಧನವು ಅವರ ಅನೇಕ ಅಭಿಮಾನಿಗಳಿಗೆ ಇಂದಿಗೂ ನಂಬಲಾಗದ ಸತ್ಯವಾಗಿದೆ . ಇನ್ನು , ನಟ ಪುನೀತ್ ರಾಜ್​ಕುಮಾರ್ ಅವರು ನಿಧನರಾದ ಬಳಿಕ ಅವರಿಗೆ ಹಲವು ಗೌರವ ಪ್ರಶಸ್ತಿಗಳು ಲಭಿಸಿವೆ . ನಟ ಪುನೀತ್ ರಾಜ್​ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ನಟನಿಗೆ ಸಿಕ್ಕ ಹಲವು ಪ್ರಶಸ್ತಿಗಳನ್ನು …

Read More »

ಕಾರು ನಿಲ್ಲಿಸಿ ಹೋಗುತ್ತಿದ್ದೀರಾ, ಎಚ್ಚರ!; ಒಂದೇ ದಿನ ಒಂದೇ ಥರದ ಎರಡು ಪ್ರಕರಣ.

ವಿಜಯಪುರ: ರಾಜ್ಯದಲ್ಲೀಗ ಕಾರು ನಿಲ್ಲಿಸಿ ಹೋಗುವುದಕ್ಕೂ ಭಯ ಎನಿಸುವಂಥ ವಾತಾವರಣ ಉಂಟಾದಂತಿದೆ. ಅದರಲ್ಲೂ ಒಂದೇ ದಿನ ಒಂದೇ ಥರದ ಎರಡು ಪ್ರಕರಣಗಳು ನಡೆದಿರುವುದು ಕಾರುಗಳ ಮಾಲೀಕರಲ್ಲಿ ಆತಂಕ ಉಂಟುಮಾಡಿದ್ದು, ಎಚ್ಚರ ವಹಿಸಬೇಕಾದ ಸೂಚನೆಯನ್ನೂ ಪರೋಕ್ಷವಾಗಿ ನೀಡಿದೆ.   ಬೆಳಗಾವಿಯ ಗೋಕಾಕ್​ನ ಸಬ್​ ಜೈಲ್ ಮುಂದೆ ನಿಲ್ಲಿಸಿದ್ದ ಇನ್ನೋವಾ ಕಾರಿನ ಗಾಜು ಒಡೆದ ಕಳ್ಳರು, ಮುತ್ತುನಂದಿ ಎಂಬವರ 10 ಲಕ್ಷ ರೂ. ದೋಚಿಕೊಂಡು ಹೋದ ಬೆನ್ನಿಗೆ ರಾಜ್ಯದಲ್ಲಿ ಅಂಥದ್ದೇ ಮತ್ತೊಂದು ಪ್ರಕರಣ ನಡೆದಿದೆ. …

Read More »

ತೈಲ ತುಟ್ಟಿಗೆ ವಿರಾಮ?; ಬ್ಯಾರೆಲ್​ಗೆ 99 ಡಾಲರ್​ಗೆ ಇಳಿದ ಕಚ್ಚಾತೈಲ ದರ

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾತೈಲ ದರ 100 ಡಾಲರ್​ಗಿಂತ ಕೆಳಗಿಳಿದಿರುವ ಪರಿಣಾಮ ಪೆಟ್ರೋಲ್ ಹಾಗೂ ಡೀಸೆಲ್ ದರ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಕ್ಷೀಣಿಸಿದೆ. ಇದಕ್ಕೆ ಪುಷ್ಟಿಯೆಂಬಂತೆ, ಕಳೆದ ನಾಲ್ಕು ದಿನಗಳಿಂದ ತೈಲ ದರ ಪರಿಷ್ಕರಣೆ ಆಗಿಲ್ಲ.   ಸದ್ಯ ಬ್ಯಾರಲ್ ಕಚ್ಚಾತೈಲ ದರ 99 ಡಾಲರ್​ಗೆ ಇಳಿಕೆಯಾಗಿದೆ. ಇಷ್ಟಾದರೂ ಕರೆನ್ಸಿ ಮಾರುಕಟ್ಟೆಯಲ್ಲಿ ಅಮೆರಿಕ ಡಾಲರ್ ಮೌಲ್ಯ ಬಲಿಷ್ಠವಾಗುತ್ತ ಸಾಗುತ್ತಿದೆ. ಪರಿಣಾಮ ಯಾವುದನ್ನೂ ಊಹಿಸುವುದು ಸಾಧ್ಯವಾಗುತ್ತಿಲ್ಲ ಎಂದೂ ಪರಿಣತರು ಹೇಳುತ್ತಾರೆ. …

Read More »

ಬಿಜೆಪಿ ಸಂಘಟನಾ ಪ್ರವಾಸ ಇಂದಿನಿಂದ;

ಬೆಂಗಳೂರು: ಸಂಘಟನೆ ಬಲಿಷ್ಠವಾಗಿದೆ ಎಂದು ಆಡಳಿತರೂಢ ಬಿಜೆಪಿ ವಿರಮಿಸದೆ, ಪರಿಶ್ರಮ ಹಾಗೂ ಕ್ರಿಯಾಶೀಲತೆ ಕಾಯ್ದಿಟ್ಟುಕೊಳ್ಳಲೆಂದು ಸಂಘಟನೆ ಬಲರ್ವಧನೆ ಪ್ರವಾಸವನ್ನು ಮಂಗಳವಾರ ಆರಂಭಿಸಲಿದೆ. ಸಿಎಂ ಬಸವರಾಜ ಬೊಮ್ಮಾಯಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್, ಸಿ.ಟಿ.ರವಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ನೇತೃತ್ವದ ಮೂರು ಪ್ರತ್ಯೇಕ ತಂಡಗಳು ಸಜ್ಜಾಗಿವೆ. ಮೂರೂ ತಂಡಗಳು ವಿಭಾಗವಾರು ಸಭೆಗಳಿಗೆ ತಲಾ ಎರಡು ದಿನ ಮೀಸಲಿಟ್ಟಿವೆ. ಏ.24ರವರೆಗೆ ರಾಜ್ಯ ನಾಯಕರು ಸಂಚಾರ ಕೈಗೊಳ್ಳಲಿದ್ದು, ತಳಸ್ತರದ …

Read More »

ಗ್ರಾಮ ಸಹಾಯಕರ ಮಾಸಿಕ ಸಂಬಳ ಏರಿಕೆ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರ ಮಾಸಿಕ ಸಂಬಳವನ್ನು ಏರಿಕೆ ಮಾಡಲಾಗಿದೆ. ಮಾಸಿಕ ವೇತನವನ್ನು 12 ಸಾವಿರದಿಂದ 13 ಸಾವಿರಕ್ಕೆ ಹೆಚ್ಚಿಸಿ ಸರ್ಕಾರ ಆದೇಶ ಪ್ರಕಟಿಸಿದೆ. ಈ ವರ್ಷದ ಬಜೆಟ್‌ನಲ್ಲಿ ಘೋಷಣೆಯಾದಂತೆ ಏಪ್ರಿಲ್‌ 1 ರಿಂದಲೇ ಇದು ಜಾರಿಯಾಗಲಿದೆ.ಕರ್ನಾಟಕ ಗ್ರಾಮ ಕಚೇರಿಗಳ ರದ್ದತಿ ಕಾಯ್ದೆ 1961 ಜಾರಿಯಾದ ಬಳಿಕ 1963ರಿಂದ ಅನ್ವಯವಾಗುವಂತೆ ವಂಶಪಾರಂಪರ್ಯದ ಎಲ್ಲ ಗ್ರಾಮೀಣ ಹಂತದ ವಿಲೇಜ್‌ ಆಫೀಸರ್ಸ್‌ ಹುದ್ದೆಗಳು ರದ್ದಾಗಿದ್ದರಿಂದ ಕೆಳ ಹಂತದ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರನ್ನು …

Read More »

ಮದುವೆ ಸಂಭ್ರಮ ಕಸಿದುಕೊಂಡ ಅಕಾಲಿಕ ಮಳೆ – ತಂದೆ ಆಸ್ಪತ್ರೆಯಲ್ಲಿ, ಮಗಳು ಮನೆಯಲ್ಲಿ ಕಣ್ಣೀರು

ಬೆಳಗಾವಿ: ಕಳೆದ ಮೂರುನಾಲ್ಕು ದಿನಗಳಿಂದ ಕುಂದಾನಗರಿಯಲ್ಲಿ ಸುರಿಯುತ್ತಿರೋ ಅಕಾಲಿಕ ಮಳೆಯಿಂದಾಗಿ ಮಗಳ ಮದುವೆಯ ಸಂಭ್ರಮ ಕಸಿದುಕೊಂಡಿದೆ. ಬೆಳಗಾವಿ ತಾಲೂಕಿನ ಅಲಾರವಾಡ ಗ್ರಾಮದ ಆಶ್ರಯ ಕಾಲೋನಿಯಲ್ಲಿ ಸುರಿದ ಬಾರಿ ಮಳೆ, ಗಾಳಿಗೆ ಚಂದ್ರಶೇಖರ್ ಹುಡೇದ್ ಅವರ ಮನೆ ಸೇರಿ ಐದಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿ ಕುಸಿದಿವೆ. ಈ ಪರಿಣಾಮ, ಏಪ್ರಿಲ್ 15ಕ್ಕೆ ಅದ್ಧೂರಿಯಾಗಿ ಮಗಳ ಮದುವೆಯನ್ನು ನಿಶ್ಚಯ ಮಾಡಿಕೊಂಡಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಮದುವೆ ಸಂಭ್ರಮದಲ್ಲಿ ಇರಬೇಕಿದ್ದ ಮದುಮಗಳು ಕೂಡ …

Read More »