Breaking News

ಪೊಲೀಸರಿಗೆ ಸಿಎಂ ಬೊಮ್ಮಾಯಿ ಹಿಗ್ಗಾಮುಗ್ಗಾ ತರಾಟೆ

ಬೆಂಗಳೂರು,ಫೆ.16- ಮುಖ್ಯಮಂತ್ರಿಗಳನ್ನು ಭೇಟಿಯಾಗಲು ಬಂದಿದ್ದ ಸಾರ್ವಜನಿಕರಿಗೆ ಪ್ರವೇಶಿಸಲು ಅಡ್ಡಿಪಡಿಸಿದ ಪೊಲೀಸರನ್ನು ಸಿಎಂ ಬೊಮ್ಮಾಯಿ ಅವರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಪ್ರಸಂಗ ಇಂದು ಬೆಳಗ್ಗೆ ನಡೆದಿದೆ. ಬೆಂಗಳೂರಿನ ಆರ್.ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಬಳಿ ಕುಂದುಕೊರತೆಗಳನ್ನು ಹೇಳಿ ಪರಿಹಾರ ಪಡೆದುಕೊಳ್ಳಲು ಸಾರ್ವಜನಿಕರು ಆಗಮಿಸಿದ್ದರು. ಆದರೆ ಭದ್ರತಾ ಹಿತದೃಷ್ಟಿಯಿಂದ ಪೊಲೀಸರು ಸಾರ್ವಜನಿಕರಿಗೆ ಸಿಎಂ ಭೇಟಿ ಮಾಡಲು ಅವಕಾಶ ಕೊಡಲಿಲ್ಲ. ಇದರಿಂದ ಕುಪಿತರಾದ ಜನರು ಮುಖ್ಯಮಂತ್ರಿಗಳು ಬರುತ್ತಿದ್ದಂತೆ ಪೊಲೀಸರ ವಿರುದ್ಧ …

Read More »

ಖ್ಯಾತ ಸಂಗೀತ ನಿರ್ದೇಶಕ 69 ವರ್ಷದ ಬಪ್ಪಿ ಲಹರಿ ನಿಧನ

ಮುಂಬೈ: ಖ್ಯಾತ ಸಂಗೀತ ನಿರ್ದೇಶಕ 69 ವರ್ಷದ ಬಪ್ಪಿ ಲಹರಿ ಮುಂಬೈನ ಖಾಸಗಿ ಆಸ್ಪತ್ರೆಯಲಿ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಡಿಸ್ಕೋ ಹಾಡುಗಳಿಗೆ ಪ್ರಸಿದ್ಧಿಯಾಗಿದ್ದ ಇವರು ಕನ್ನಡದಲ್ಲೂ 2 ಸಿನಿಮಾಗಳಿಗೆ ಹಾಡಿದ್ದರು. ಬಪ್ಪಿ ಲಹರಿಯವರಿಗೆ ಈ ಹಿಂದೆ ಕೋವಿಡ್‌-೧೯ ದೃಢಪಟ್ಟಿತ್ತು, ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ಚೇತರಿಸಿಕೊಂಡಿದ್ದರು. ತಮಿಳು ತೆಲುಗು ಚಿತ್ರಲ್ಲೂ ಹಾಡಿದ್ದ ಬಪ್ಪಿ ಲಹರಿ ಅಗಾಧ ಅಭಿಮಾನಿಗಳನ್ನು, ಸಂಗೀತ ಪ್ರಿಯರನ್ನೂ ಅಗಲಿದ್ದಾರೆ. 80 ಮತ್ತು 90 ರ ದಶಕಗಳಲ್ಲಿ …

Read More »

ನಾಯಿಯ ನಿಷ್ಠೆ ಇಬ್ರಾಹಿಂಗೆ ಇದೆಯಾ? ಉಗ್ರಪ್ಪ ಕಿಡಿ

ಬೆಂಗಳೂರು : ನಾಯಿಗೆ ಇರುವ ನಿಷ್ಠೆ ಇಬ್ರಾಹಿಂಗೆ ಇದೆಯಾ ? ಇವರ ಭ್ರಷ್ಟಾಚಾರವನ್ನ ಬೆತ್ತಲುಗೊಳಿಸುತ್ತೇನೆ, ಎಲ್ಲೇ ಬೇಕಾದರೂ ಆಹ್ವಾನ ನೀಡಲಿ ಬಹಿರಂಗ ಚರ್ಚೆಗೆ ಸಿದ್ಧನಾಗಿದ್ದೇನೆ ಎಂದು ಮಾಜಿ ಸಂಸದ,ಕಾಂಗ್ರೆಸ್ ಹಿರಿಯ ನಾಯಕ ವಿ.ಎಸ್ ಉಗ್ರಪ್ಪ ಅವರು ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಮೇಲೆ ಬುಧವಾರ ಕಿಡಿ ಕಾರಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು ವಾಲ್ಮೀಕಿ ವಂಶದಲ್ಲಿ ಹುಟ್ಟಿದವನು. ನಾನು ಎಂದೂ ಸಂಸ್ಕಾರ ಹೀನಾನಾಗಿ ಮಾತನ್ನಾಡಿಲ್ಲಇಬ್ರಾಹಿಂ ಹಳೆಯ ಸ್ನೇಹಿತರು, ನನ್ನನ್ನ ಕಕ್ಷಿದಾರನೆಂದು ಒಪ್ಪಿಕೊಂಡಿದ್ದಾರೆ. …

Read More »

ರಾಜ್ಯದಲ್ಲಿ ಹೊಸ ನಿಗಮಗಳ ಸ್ಥಾಪನೆ ಇಲ್ಲ: ಸರಕಾರ

ಬೆಂಗಳೂರು : ಸರಕಾರದ ಮುಂದೆ ಹೊಸ ನಿಗಮ- ಮಂಡಳಿ ರಚನೆ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಸಚಿವ ಗೋವಿಂದ ಕಾರಜೋಳ ವಿಧಾನಸಭೆಗೆ ತಿಳಿಸಿದ್ದಾರೆ. ಗಾಣಿಗ ಸಮುದಾಯದ ಅಭಿವೃದ್ಧಿಗೆ ನಿಗಮ- ಮಂಡಳಿ ರಚಿಸುವಂತೆ ಶಾಸಕರಾದ ದಿನಕರ ಶೆಟ್ಟಿ, ಆನಂದ ನ್ಯಾಮಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಈ ವಿಷಯ ತಿಳಿಸಿದರು.   ರಾಜ್ಯದಲ್ಲಿ ಒಟ್ಟು ೧೨ ನಿಗಮಗಳಿವೆ. ಎಲ್ಲ ಹಿಂದುಳಿದ ವರ್ಗದ ಸಮಸ್ಯೆಗಳನ್ನು ಇವುಗಳ ಮೂಲಕ ನಿಭಾಯಿಸಲಾಗುತ್ತಿದೆ. ಇತ್ತೀಚೆಗೆ ಸರಕಾರ ಆರ್ಯ ವೈಶ್ಯ …

Read More »

ಭದ್ರತಾ ಲೋಪ: NSA ಅಜಿತ್ ದೋವಲ್ ನಿವಾಸ ಪ್ರವೇಶಿಸಲು ಯತ್ನ, ಬೆಂಗಳೂರಿನ ಯುವಕನ ವಿಚಾರಣೆ

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್ ಎಸ್ ಎ) ಅಜಿತ್ ದೋವಲ್ ನಿವಾಸದಲ್ಲಿ ಭದ್ರತಾ ಲೋಪ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ಬುಧವಾರ (ಫೆ.16) ದೋವಲ್ ನಿವಾಸದೊಳಕ್ಕೆ ಪ್ರವೇಶಿಸಲು ಯತ್ನಿಸಿರುವುದಾಗಿ ವರದಿ ತಿಳಿಸಿದೆ. ಮನೆ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯನ್ನು ಭದ್ರತಾ ಸಿಬಂದಿಗಳು ತಡೆದಿದ್ದು, ಈತನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿ ವಿವರಿಸಿದೆ. ಮೂಲಗಳ ಪ್ರಕಾರ, ದೋವಲ್ ನಿವಾಸದೊಳಕ್ಕೆ ಪ್ರವೇಶಿಸಿದ ವ್ಯಕ್ತಿ ತನ್ನ ದೇಹದೊಳಗೆ ಚಿಪ್ ಇದ್ದು, ಇದನ್ನು ಬಾಹ್ಯವಾಗಿ ನಿಯಂತ್ರಿಸಲಾಗುತ್ತಿದೆ ಎಂದು ಹೇಳಿದ್ದ. …

Read More »

ಬಾವಿಯಲ್ಲಿ ಬಿದ್ದು ವಿದ್ಯಾರ್ಥಿನಿ ಸಾವು – ತಾಯಿ ವಿರುದ್ಧವೇ ತಂದೆಯಿಂದ ಕೊಲೆ ಆರೋಪ

ಚಿಕ್ಕಬಳ್ಳಾಪುರ: ಬಾವಿಯಲ್ಲಿ ಬಿದ್ದು 4ನೇ ತರಗತಿಯ 10 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಶಾಮರಾವ್ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ. ರುಷ್ಮಿತಾ ಮೃತ ಮಗು. ನಿನ್ನೆ ಸಂಜೆ ಶಾಲೆಯಿಂದ ಬಂದ ರುಷ್ಮಿತಾ ಮನೆಯ ಪಕ್ಕದಲ್ಲೇ ಕೂಗಳತೆ ದೂರದ ಜಮೀನು ಬಳಿ ತೆರಳಿದ್ದು, ಜಮೀನಿನಲ್ಲಿರುವ ಬಾವಿಯಲ್ಲಿ ಬಿದ್ದಿದ್ದಾಳೆ. ರುಷ್ಮಿತಾ ಕಾಣಿಸುತ್ತಿಲ್ಲ ಎಂದು ಹುಡುಕಾಡಿದಾಗ ಬಾವಿಯ ಬಳಿ ಬಾಲಕಿಯ ಚಪ್ಪಲಿಯೊಂದು ಪತ್ತೆಯಾಗಿದ್ದು, ಬಾವಿಯಲ್ಲಿ ಶೋಧ ನಡೆಸಿದಾಗ ರುಷ್ಮಿತಾಳ ಮೃತದೇಹ ಪತ್ತೆಯಾಗಿದೆ.ಅಗ್ನಿಶಾಮಕ ದಳ …

Read More »

ಮುಸ್ಲಿಂ ಯುವತಿಯರಿಗೆ ಹಿಜಬ್ ಧರಿಸಲು ಮುಸ್ಲಿಂ ಸಂಘಟನೆ ದಾರುಲ್ ಉಲೂಮ್ ದಿಯೋಬಂದ್ ಪ್ರೇರಣೆ ನೀಡುತ್ತಿದೆ

ನವದೆಹಲಿ: ಮುಸ್ಲಿಂ ಯುವತಿಯರಿಗೆ ಹಿಜಬ್ ಧರಿಸಲು ಮುಸ್ಲಿಂ ಸಂಘಟನೆ ದಾರುಲ್ ಉಲೂಮ್ ದಿಯೋಬಂದ್ ಪ್ರೇರಣೆ ನೀಡುತ್ತಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ(ಎನ್‌ಸಿಪಿಸಿಆರ್)ದ ಅಧ್ಯಕ್ಷ ಪ್ರಿಯಾಂಕ್ ಕನುಂಗೋ ಹೇಳಿದ್ದಾರೆ. ಈ ಮೂಲಕ ಹಿಜಬ್ ಗಲಬೆ ಹೊಸ ತಿರುವು ಪಡೆದುಕೊಂಡಿದೆ. ಎನ್‌ಸಿಪಿಸಿಆರ್ ತಮ್ಮ ವೆಬ್‌ಸೈಟ್‌ನಲ್ಲಿ ಮಕ್ಕಳ ಹಕ್ಕನ್ನು ಉಲ್ಲಂಘಿಸುವ ಫತ್ವಾ ವಿಷಯನ್ನು ಉಲ್ಲೇಖಿಸಿದ್ದಕ್ಕೆ ನೋಟಿಸ್ ಕಳುಹಿಸಲಾಗಿದೆ ಎಂದು ಕನುಂಗೋ ತಿಳಿಸಿದ್ದಾರೆ. ಹಿಜಬ್ ಅನುಮತಿಸದ ಶಾಲೆಗಳಿಂದ ಮುಸ್ಲಿಂ ಹುಡುಗಿಯರನ್ನು ಹೊರ ಹಾಕಬೇಕು ಹಾಗೂ …

Read More »

ಇಂದು ಸಂಜೆಯಿಂದ ಲಘು ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್‌ ಮುಕ್ತ

ಬೆಂಗಳೂರು: ನಗರದಿಂದ ಹಲವು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಫ್ಲೈಓವರ್ ಕಾಮಗಾರಿ ಪೂರ್ಣಗೊಂಡಿದೆ. ಇಂದು ಸಂಜೆ 6 ಗಂಟೆಯಿಂದ ಲಘುವಾಹನಗಳ ಸಂಚಾರಕ್ಕೆ ಫ್ಲೈಓವರ್ ಮುಕ್ತಾವಾಗಲಿದೆ. ತಿಂಗಳ ಹಿಂದೆ ಕಾಮಗಾರಿಗಾಗಿ ಬಂದ್ ಮಾಡಲಾಗಿದ್ದ ಪೀಣ್ಯ ಫ್ಲೈಓವರ್ ಕಾಮಗಾರಿ ಪೂರ್ಣಗೊಂಡಿದ್ದು ಇಂದಿನಿಂದ ಕಾರು, ಬೈಕ್, ಆಟೋ ಸೇರಿದಂತೆ ಲೈಟ್ ವೇಟ್ ವಾಹನ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅನುಮತಿ ನೀಡಿದೆ.  ಇಂದು ಸಂಜೆಯಿಂದ ಸಂಚಾರಕ್ಕೆ ಅನುವು ಮಾಡಿಕೊಡುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಂಚಾರ ವಿಭಾಗದ …

Read More »

ಲಕ್ಷಾಂತರ ಜನರ ಮನಗೆದ್ದ ಕಡಲೆಕಾಯಿ ವ್ಯಾಪಾರಿಯ ಕಚ್ಚಾ ಬಾದಾಮ್ ಹಾಡು ವೈರಲ್ ಆಗಿದ್ದೇಗೆ?

ಪ್ರತಿಭೆಗಳು ಯಾವ ಸಂದರ್ಭದಲ್ಲಿಯೂ ಅನಾವರಣಗೊಳ್ಳಬಹುದು. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳು ಹೆಚ್ಚು, ಹೆಚ್ಚು ಪ್ರಚಲಿತವಾಗುತ್ತಿರುವ ನಡುವೆಯೇ ನಮಗೆ ರಾನು ಮಂಡಲ್, ಕೇರಳದ ಕೂಲಿ ಕಾರ್ಮಿಕ ಮಮ್ಮಿಕ್ಕಾನ್ ಹೀಗೆ ಹಲವಾರು ಮಂದಿ ಜನಪ್ರಿಯರಾಗಿದ್ದರು, ಇತ್ತೀಚೆಗೆ ಅದಕ್ಕೊಂದು ಹೊಸ ಸೇರ್ಪಡೆ ಕಚ್ಚಾ ಬಾದಾಮ್ ಹಾಡು.!   ಕಚ್ಛಾ ಬಾದಾಮ್ (ನೆಲಗಡಲೆ) ಹಾಡು ಹೇಗೆ ಏಕಾಏಕಿ ಲಕ್ಷಾಂತರ ಜನರ ಗಮನ ಸೆಳೆಯಿತು. ಈ ಹಾಡು ಇಷ್ಟೊಂದು ಕುತೂಹಲ ಹುಟ್ಟುಹಾಕಲು ಕಾರಣವೇನು? ಎಂಬ ಸಂಕ್ತಿಪ್ತ ನೋಟ ಇಲ್ಲಿದೆ. ನಿಮ್ಮ ಊಹೆಯಂತೆ …

Read More »

ಕೋರ್ಟ್ ತೀರ್ಪು ಬರುವರೆಗೂ ಕಾಯುತ್ತೇವೆ: ಉಡುಪಿಯಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು

ಉಡುಪಿ: ಕೆಲವು ಶಾಲಾ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಉಡಪಿಯಲ್ಲಿ ಇನ್ನೂ ಮುಂದುವರಿದಿದ್ದು, ಇಲ್ಲಿನ ಕಾಲೇಜೊಂದರಲ್ಲಿ ಕೋರ್ಟ್ ಮಧ್ಯಂತರ ಆದೇಶದ ಹೊರತಾಗಿಯೂ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಕಾಲೇಜಿಗೆ ಆಗಮಿಸಿದ್ದಾರೆ.   ‘ಕೋರ್ಟ್ ಆದೇಶದ ಪ್ರಕಾರ ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ಇರಲಿಲ್ಲ. ಇದನ್ನು ವಿದ್ಯಾರ್ಥಿನಿಗಳಿಗೆ ಮನವರಿಕೆ ಮಾಡಿದ್ದೇವೆ. ಕೋರ್ಟ್ ತೀರ್ಪು ಬರುವವರೆಗೆ ಕಾಯುತ್ತೇವೆಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ. ಒಟ್ಟು 2326 ವಿದ್ಯಾರ್ಥಿನಿಯರಿದ್ದು 196 ಮಂದಿ ಮುಸ್ಲಿಂರಿದ್ದಾರೆ. ಸದ್ಯ 40 ಮಂದಿ ಮಾತ್ರ …

Read More »