ಶಿವಮೊಗ್ಗ: ಹೋಮ್ ಮಿನಿಸ್ಟರ್ಗೆ ಹೇಳ್ತೀಯಾ ಹೇಳ್ಕೋ ಹೋಗು ಎಂದು ಲಾರಿ ಮಾಲೀಕರಿಗೆ ಬೆದರಿಕೆ ಹಾಕಿದ್ದರು ಎನ್ನಲಾದ ತೀರ್ಥಹಳ್ಳಿ ತಾಲೂಕು ಮಾಳೂರು ಠಾಣೆ ಪಿಎಸ್ಐ ಜಯಪ್ಪ ನಾಯ್ಕ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಜಯಪ್ಪ ನಾಯ್ಕ್ ವಿರುದ್ಧ ಇತ್ತೀಚಿಗೆ ಸಾಕಷ್ಟು ಆರೋಪಗಳು ಕೇಳಿಬಂದಿದ್ದವು. ತೀರ್ಥಹಳ್ಳಿ ತಾಲೂಕಲ್ಲಿ ಮರಳು ದಂಧೆ ಅತಿಹೆಚ್ಚಾಗಿ ನಡೆಯುತ್ತಿದ್ದು, ಕೆಲ ಲಾರಿ ಮಾಲೀಕರು ಮತ್ತು ಚಾಲಕರು ಮಾಳೂರು ಪಿಎಸ್ಐ ವಿರುದ್ಧ ಎಸ್ಪಿಗೆ ದೂರು ನೀಡಿದ್ದರು. ಇದರಿಂದ ಸಿಟ್ಟಿಗೆದ್ದಿದ್ದ ಪಿಎಸ್ಐ ಜಯಪ್ಪ ನಾಯ್ಕ, …
Read More »ಏಪ್ರಿಲ್ 1 ರಿಂದ ಬದಲಾಗಲಿವೆ ಈ 5 ನಿಯಮಗಳು: ತಪ್ಪದೇ ಈ ಮಾಹಿತಿ ತಿಳಿದುಕೊಳ್ಳಿ
ದೆಹಲಿ: ಹಣಕಾಸು ವರ್ಷವು ಮಾರ್ಚ್ 31 ರಂದು ಕೊನೆಗೊಳ್ಳಲಿದೆ. ಹಣಕಾಸು ವರ್ಷ ಏಪ್ರಿಲ್ 1 ರಿಂದ ಅನೇಕ ದೊಡ್ಡ ಬದಲಾವಣೆಗಳು ಸಂಭವಿಸಲಿವೆ. ಇದು ಸಾಮಾನ್ಯ ಜನರ ಜೇಬಿನ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಗಳಿವೆ. ಏಪ್ರಿಲ್ 1 ರಿಂದ ಟ್ರ್ಯಾಕ್ಗಳು, ಜಿಎಸ್ಟಿ, ಪ್ಯಾನ್-ಆಧಾರ್ ಲಿಂಕ್, ಎಫ್ಡಿ ಸೇರಿದಂತೆ ಬ್ಯಾಂಕ್ನ ನಿಯಮಗಳು ಬದಲಾಗುತ್ತವೆ. ಹೀಗಾಗಿ ಅಂತಹ ಬದಲಾವಣೆಗಳ ಬಗ್ಗೆ ಅರಿತುಕೊಳ್ಳುವುದು ತುಂಬಾ ಅತ್ಯಗತ್ಯ. ಅವುಗಳು ಯಾವುವು ಎಂದು ಎಲ್ಲರೂ ತಿಳಿದುಕೊಂಡರೆ ಮುಂದಾಗುವ …
Read More »ಬಿಜೆಪಿ ಗೆಲುವಿಗೆ ಶ್ರಮಿಸಿದ ಮುಸ್ಲಿಂ ಯುವಕನ ಕೊಂದ ಕಿರಾತಕರು: ಮೃತದೇಹಕ್ಕೆ ಹೆಗಲು ಕೊಟ್ಟ ಶಾಸಕ
(ಉತ್ತರಪ್ರದೇಶ) : ಜಿಲ್ಲೆಯ ರಾಮಕೋಲಾ ಪೊಲೀಸ್ ಠಾಣೆಯ ಕಥಘರ್ಹಿ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮುಸ್ಲಿಂ ಯುವಕನೊಬ್ಬ ಬಿಜೆಪಿ ಪರ ಪ್ರಚಾರ ಮಾಡಿ ಸರ್ಕಾರ ರಚನೆಯಾದ ವೇಳೆ ಸಿಹಿ ಹಂಚಿದ್ದಕ್ಕೆ ಪ್ರಾಣ ಕಳೆದುಕೊಂಡಿದ್ದಾನೆ. ಪ್ರಕರಣ ಹಿನ್ನೆಲೆ ಕುಟುಂಬಸ್ಥರು ಶವ ಸಂಸ್ಕಾರ ಮಾಡಲು ನಿರಾಕರಿಸಿದ್ದರು. ಮೃತ ಬಾಬರ್ನ ಸಂಬಂಧಿಕರ ಪ್ರಕಾರ, ಇತ್ತೀಚೆಗೆ ಬಾಬರ್ 2022 ರ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದನಂತೆ. ಇದರಿಂದ ಅಕ್ಕಪಕ್ಕದ ಜನರು ಸಿಟ್ಟಿಗೆದ್ದಿದ್ದರು …
Read More »ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ : ಜೂನ್ ಒಳಗೆ 8 ಲಕ್ಷ `BPL’ ಕಾರ್ಡ್ ವಿತರಣೆ
ಬೆಂಗಳೂರು : ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬರುವ ಜೂನ್ ಒಳಗಾಗಿ 8 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ಭರವಸೆ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಕೋವಿಡ್ ಲಾಕ್ ಡೌನ್ ಅವಧಿಯಲ್ಲಿ ಹೊಸ ಪಡಿತರ ಚೀಟಿ ಕೋರಿ ಸಲ್ಲಿಸಿರುವ ಅರ್ಜಿಗಳ ಸ್ಥಳ ಪರಿಶೀಲನೆ ಕಾರ್ಯ ನಿಧಾನವಾಗಿದೆ …
Read More »ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷತೆ ಎಂ.ಬಿ. ಪಾಟೀಲ್ ಅಧಿಕಾರ ಸ್ವೀಕಾರ
ಬೆಂಗಳೂರು: ಬಿಜೆಪಿ ಪಾಳಯದಲ್ಲಿ ಚುನಾವಣ ಸಿದ್ಧತೆ ಗರಿ ಗೆದರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಕೂಡ ಚುನಾವಣೆಗೆ ಕಹಳೆ ಮೊಳಗಿಸಿದೆ. ಪ್ರದೇಶ ಕಾಂಗ್ರೆಸ್ನ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎಂ.ಬಿ. ಪಾಟೀಲ್ ಸೋಮವಾರ ಜವಾಬ್ದಾರಿ ಸ್ವೀಕರಿಸಿದ್ದಾರೆ. ಸಮಾರಂಭವು ಕಾಂಗ್ರೆಸ್ನ ಚುನಾವಣ ಪ್ರಚಾರದ ಆರಂಭ ದಂತೆಯೇ ಇತ್ತು ಹಾಗೂ ರಾಜ್ಯ ಮುಖಂಡರ ಒಗ್ಗಟ್ಟು ಪ್ರದರ್ಶನಕ್ಕೂ ವೇದಿಕೆಯಾಯಿತು. ಎಂ.ಬಿ.ಪಾಟೀಲ್ ಮಾತನಾಡಿ, ಸಾಮಾಜಿಕ ನ್ಯಾಯಕ್ಕಾಗಿ ಕರ್ನಾ ಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿ ಕಾರಕ್ಕೆ ಬರಬೇಕಾಗಿದೆ. ಅನ್ನ, ಅಕ್ಷರ, …
Read More »ಮೊದಲ ದಿನವೇ ಎಸ್ಎಸ್ಎಲ್ಸಿ ʻ 6 ನಕಲಿ ವಿದ್ಯಾರ್ಥಿಗಳು ʼ ವಶಕ್ಕೆ
ಬೆಂಗಳೂರು : ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ( Karnataka SSLC Exam ) ಆರಂಭಗೊಂಡಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೊಡಿ ಪಟ್ಟಣದ ಆರ್.ಡಿ ಕಾಲೇಜಿನಲ್ಲಿ ಮೊದಲ ದಿನವೇ 6 ನಕಲಿ ವಿದ್ಯಾರ್ಥಿಗಳು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ ಐವರು ವಿದ್ಯಾರ್ಥಿಗಳು ಹಾಗೂ ಓರ್ವ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದ್ದು, ಶಿಕ್ಷಣ ಇಲಾಖೆ ಇಂದು ಹಿಜಾಬ್ ಸಂಘರ್ಷದ ನಡುವೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಿರುವುದು ಈಗ ಎಲ್ಲರ …
Read More »IPL 2022: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ.. ರಾಹುಲ್ ಪಡೆ ಫಸ್ಟ್ ಬ್ಯಾಟಿಂಗ್..
ಇಂದು ಮುಂಬೈ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರೋ 4ನೇ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿ ಆಗುತ್ತಿವೆ. ಮೊದಲು ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ದುಕೊಂಡಿದೆ. ಹೀಗಾಗಿ ಕೆ.ಎಲ್ ರಾಹುಲ್ ಪಡೆ ಬ್ಯಾಟಿಂಗ್ . ಗುಜರಾತ್ ಟೈಟಾನ್ಸ್ ತಂಡ ಶುಭ್ಮನ್ ಗಿಲ್, ಮ್ಯಾಥ್ಯೂ ವೇಡ್ (ಕೀಪರ್), ವಿಜಯ್ ಶಂಕರ್, ಅಭಿನವ್ ಮನೋಹರ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, …
Read More »ಪರೀಕ್ಷೆ ಬರೆಯುತ್ತಿದ್ದಾಗ ಹಠಾತ್ ಹೃದಯಾಘಾತ; SSLC ವಿದ್ಯಾರ್ಥಿನಿ ಸಾವು
ಮೈಸೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಅನುಶ್ರೀ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ವಿದ್ಯಾರ್ಥಿನಿ. ಪರೀಕ್ಷೆ ಬರೆಯುತ್ತಿದ್ದ ವೇಳೆ ಅನುಶ್ರೀ ಹಠಾತ್ ಕುಸಿದು ಬಿದ್ದಿದ್ದಾಳೆ. ಕೂಡಲೇ ಪರೀಕ್ಷಾ ಸಿಬ್ಬಂದಿ ಆಕೆಯನ್ನ ಟಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಅನ್ನೋ ಮಾಹಿತಿ ಲಭ್ಯವಾಗಿದೆ.
Read More »ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಹೂ ನೀಡಿ ಸ್ವಾಗತಿಸಿದ :ಶಾಸಕ ಅನಿಲ್ ಬೆನಕೆ!
ಬೆಳಗಾವಿ: ಶಾಲಾ- ಕಾಲೇಜುಗಳಲ್ಲಿ ‘ಧರ್ಮವಸ್ತ್ರ’ ಧರಿಸಿ ಬರಕೂಡದು ಎಂಬ ಹೈಕೋರ್ಟ್ ಆದೇಶದ ಮಧ್ಯೆಯೇ, ಇಂದಿನಿಂದ ಆರಂಭವಾದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ಶಾಲೆಯೊಂದರಲ್ಲಿ ಮಕ್ಕಳು ಹಿಜಾಬ್ ಧರಿಸಿ ಬಂದಿದ್ದು, ಬಿಜೆಪಿ ಶಾಸಕ ಅನಿಲ್ ಬೆನಕೆ ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿದ್ದಾರೆ. ನಗರದ ಸರ್ದಾರ್ ಹೈಸ್ಕೂಲ್ನಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಆಗಮಿಸಿದಾಗ, ಉಪಸ್ಥಿತರಿದ್ದ ಶಾಸಕ ಅನಿಲ ಬೆನಕೆ ಅವರು, ಮಕ್ಕಳಿಗೆ ಗುಲಾಬಿ ಹೂ ನೀಡಿ ಶುಭ ಕೋರಿದ್ದಾರೆ. ಇದೇ ವೇಳೆ ಹಿಜಾಬ್ ಧರಿಸಿ …
Read More »ದೇವೇಗೌಡರ ಪತ್ನಿ ಚನ್ನಮ್ಮಗೆ ಐಟಿ ನೋಟಿಸ್! ಕಬ್ಬಿನ ಗದ್ದೆಗೆ ಅಧಿಕಾರಿಗಳನ್ನ ಆಹ್ವಾನಿಸಿದ ರೇವಣ್ಣ
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರಿಗೆ ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಈ ಕುರಿತು ಹಾಸನದಲ್ಲಿ ಸೋಮವಾರ ಸುದ್ದಿಗಾರೊಂದಿಗೆ ಮಾತನಾಡಿದ ಮಾಜಿ ಸಚಿವ ಎಚ್.ಡಿ.ರೇವಣ್ಣ, ನಮ್ಮ ತಾಯಿಗೆ ಐಟಿ ಅಧಿಕಾರಿಗಳಿಂದ ನೋಟಿಸ್ ಬಂದಿದೆ. ಒಬ್ಬ ಮಾಜಿ ಪ್ರಧಾನಿ ಪತ್ನಿಗೆ ಹೀಗೆ ಮಾಡ್ತಾರಾ? ದೊಡ್ಡಪುರದ ಬಳಿ ನಮ್ಮ ತಾಯಿ ಹೆಸರಿನ ಜಮೀನಿನಲ್ಲಿ ಕಬ್ಬು ಬೆಳೆದಿದ್ದೀವಿ. ನಮ್ಮ ತಾಯಿಗೆ ಸೇರಿದ ಗದ್ದೆಯಲ್ಲಿ ಕಬ್ಬು ಬೆಳೆದಿದ್ದಕ್ಕೆ ಐಟಿ ನೋಟಿಸ್ ಜಾರಿ ಮಾಡಿದೆ. …
Read More »
Laxmi News 24×7