Breaking News

ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​​ನ್ನು ಇಂದು ಭೇಟಿಯಾಗಲಿದ್ದಾರೆ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ (Kamala Harris) ಅವರನ್ನು ಭೇಟಿ ಮಾಡಲಿದ್ದಾರೆ. ಉಭಯ ನಾಯಕರ ನಡುವಿನ ಮೊದಲ ವೈಯಕ್ತಿಕ ಭೇಟಿ ಇದಾಗಿದೆ.  ಕಮಲಾ  ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗಿ ಆಯ್ಕೆಯಾದ ಮೊದಲ ಭಾರತೀಯ ಮೂಲದ ವ್ಯಕ್ತಿ. ಈ ಹಿಂದೆ, ಇಬ್ಬರು ನಾಯಕರು ಕೊವಿಡ್ -19  (Covid -19) ಬಿಕ್ಕಟ್ಟಿನ ಸಂದರ್ಭದಲ್ಲಿ ದೂರವಾಣಿ ಮೂಲಕ ಮಾತನಾಡಿದ್ದರು.  ಪ್ರಧಾನಿ ಮೋದಿ ಬುಧವಾರ ಅಮೆರಿಕಕ್ಕೆ …

Read More »

ಭೋಜನ ಕೂಟದಲ್ಲೂ ಆಪರೇಷನ್ ಹಸ್ತದ ಬಗ್ಗೆ ಎಚ್ಚರಿಕೆ ನೀಡಿದ ಬಿಎಸ್‍ವೈ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ರೇಸ್ ವೀವ್ ಕಾಟೇಜ್ ನಿವಾಸದಲ್ಲಿ ನಿನ್ನೆ ರಾತ್ರಿ ಭೋಜನ ಕೂಟ ಏರ್ಪಡಿಸಲಾಗಿತ್ತು. ಈ ವೇಳೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಕಾಂಗ್ರೆಸ್ ನಮ್ಮ ಶಾಸಕರನ್ನು ಸೆಳೆಯಲು ಗಾಳ ಹಾಕಿದೆ ಎಚ್ಚರದಿಂದಿರಿ. ಯಾರೂ ಕಾಂಗ್ರೆಸ್ ಪ್ರಲೋಭನೆಗೆ ಒಳಗಾಗುವುದು ಬೇಡ ಎಂದು ಕಿವಿಮಾತು ನೀಡಿದ್ದಾರೆ. ಶಾಸಕರೊಂದಿಗೆ ಚರ್ಚಿಸಿದ ಬಿಎಸ್‍ವೈ, ಯಾರಾದರೂ ಕಾಂಗ್ರೆಸ್ ನಾಯಕರು ನಮ್ಮ ಶಾಸಕರ ಸಂಪರ್ಕಿಸಿದರೆ ನಾಯಕರ ಗಮನಕ್ಕೆ ತನ್ನಿ. ಶಾಸಕರ ಬೇಕು ಬೇಡಗಳನ್ನು ಈಡೇರಿಸಲು …

Read More »

ಬೆಚ್ಚಿಬಿದ್ದ ಕಲಬುರಗಿ: ಕಟ್ಟಿಗೆಯಿಂದ ಹೊಡೆದು ಪತ್ನಿ-ಮಗಳ ಕೊಂದ ಪಾಪಿ ಪತಿ..!

ಕಲಬುರಗಿ: ಕಟ್ಟಿಗೆಯಿಂದ ಹೊಡೆದು ಪತ್ನಿ ಮತ್ತು ಮಗಳನ್ನ ಕೊಲೆ ಮಾಡಿರುವ ಘಟನೆ ಸೇಡಂ ಪಟ್ಟಣದ ಈಶ್ವರ್ ನಗರದಲ್ಲಿ ನಡೆದಿದೆ. ದಿಗಂಬರ್ 46 ಅನ್ನೋ ವ್ಯಕ್ತಿಯಿಂದ ಪತ್ನಿ ಮತ್ತು ಮಗಳನ್ನ ಕಗ್ಗೊಲೆ ಮಾಡಿದ್ದಾನೆ. ಜಗದೀಶ್ವರಿ 45, ಪ್ರಿಯಾಂಕಾ 11 ಕೊಲೆಯಾದ ದುರ್ದೈವಿಗಳು. ಮಧ್ಯರಾತ್ರಿ ಮನೆಯಲ್ಲಿ ಜಗಳ ತೆಗೆದು ಕೊಲೆ ಮಾಡಿದ್ದಾರೆ. ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿರೋ ಶಂಕೆಯನ್ನ ಪೊಲೀಸರು ವ್ಯಕ್ತಪಡಿಸಿದ್ದಾರೆ. ಆರೋಪಿ ದಿಗಂಬರ್​ನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸೇಡಂ ಪೊಲೀಸ್ …

Read More »

ಕೇಂದ್ರದ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ಸೆ.26ರಂದು

ಬೆಳಗಾವಿ – ಕೇಂದ್ರದ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ಸೆ.26ರಂದು ನಡೆಯಲಿದೆ. ಅಂದು ಬೆಳಗ್ಗೆ 10.30ಕ್ಕೆ ಸುರೇಶ ಅಂಗಡಿ ಎಜುಕೇಶನ್ ಇನ್ ಸ್ಟಿಟ್ಯೂಟ್ ಆವರಣದಲ್ಲಿ ಪುತ್ಥಳಿ ಅನಾವರಣಗೊಳ್ಳಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ ಶೆಟ್ಟರ್ ಸೇರಿದಂತೆ ಹಲವಾರು ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ಸುರೇಶ ಅಂಗಡಿ ಕೇಂದ್ರದ ರೈಲ್ವೆ ಸಚಿವರಾಗಿ ಕೆಲಸ ಮಾಡುತ್ತಿರುವಾಗಲೇ, 2020ರ ಸೆಪ್ಟಂಬರ್ 23ರಂದು …

Read More »

‘ನಮ್ಮನೆ ಯುವರಾಣಿ’ ಅಂಕಿತಾಗೆ ಹೊಗಳಿಕೆಯೋ ಹೊಗಳಿಕೆ

ಎಸ್​.ಪಿ. ಬಾಲಸುಬ್ರಹ್ಮಣ್ಯಂ​ ಅವರು ಜಡ್ಜ್​​ ಆಗಿ ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಸಾಕಷ್ಟು ಟ್ಯಾಲೆಂಟ್​ಗಳಿಗೆ ಇದು ವೇದಿಕೆ ಆಗಿತ್ತು. ‘ನಮ್ಮನೆ ಯುವರಾಣಿ’ ಧಾರಾವಾಹಿ ಮೂಲಕ ಹೆಚ್ಚು ಮನೆ ಮಾತಾದವರು ಅಂಕಿತಾ. ಮೀರಾ ಪಾತ್ರದಲ್ಲಿ ನಟಿಸುವ ಮೂಲಕ ಹೆಚ್ಚು ಜನಪ್ರಿಯತೆ ಗಳಿಸಿಕೊಂಡರು. ಈಗ ಅವರನ್ನು ಅಭಿಮಾನಿಗಳು ಬಾಯ್ತುಂಬ ಹೊಗಳುತ್ತಿದ್ದಾರೆ. ಹಾಗಂತ ಇದು ನಟನೆ ವಿಚಾರಕ್ಕಲ್ಲ. ಹಾಗಾದರೆ ಮತ್ತಿನ್ನೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ಎಸ್​.ಪಿ. ಬಾಲಸುಬ್ರಹ್ಮಣ್ಯಂ​ …

Read More »

ದಲಿತ ಸಮುದಾಯದ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಂಡ ಕೇಸ್; ಐವರನ್ನ ಬಂಧಿಸಿದ ಪೊಲೀಸ್

ಕೊಪ್ಪಳ: ಮಕ್ಕಳು ದೇವರ ಸಮಾನ ಅಂತಾರೆ. ಆದ್ರೆ, ಇಲ್ಲೊಂದು ದಲಿತ ಸಮುದಾಯದ ಮಗು ತನ್ನ ಹುಟ್ಟು ಹಬ್ಬದ ಸಂತಸದಲ್ಲಿ ಗ್ರಾಮದ ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ಬಾಲಕನಿಗೆ ದಂಡವಿಧಿಸಿ ಅಮಾನವೀಯವಾಗಿ ನಡೆದಿಕೊಂಡಿದ್ದಾರೆ. ಗ್ರಾಮಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕೈಗೊಂಡಿದೆ. ಗ್ರಾಮದಲ್ಲಿ ಡಿಸಿ, ಎಸ್​ಪಿ, ಎಸಿ ಸಭೆ ನಡೆಸಿದ್ದು, ಅಸ್ಪೃಶ್ಯತೆ ಆಚರಿಸಿದ ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲಿಸಿ ಐದು ಜನರು ಬಂಧಿಸಿದ್ದಾರೆ.   ಸೆಪ್ಟೆಂಬರ್ 4 ರಂದು ಚಂದ್ರಶೇಖರ ಚೆನ್ನದಾಸರ ಅವರ ಪುತ್ರ …

Read More »

ದೇವರ ಮೂರ್ತಿ ಮೇಲೆ ಚಪ್ಪಲಿ ಧರಿಸಿ ಕಾಲಿಟ್ಟಿದ್ದ ಯುವಕನಿಗೆ ಥಳಿತ!

ತುಮಕೂರು: ದೇವರ ಮೂರ್ತಿ ಮೇಲೆ ಚಪ್ಪಲಿ ಧರಿಸಿ ಕಾಲಿಟ್ಟಿದ್ದ ಆರೋಪದಡಿ ಯುವಕನನ್ನು ಹಿಡಿದು ಗ್ರಾಮಸ್ಥರು ಥಳಿಸಿದ ಘಟನೆ ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಶ್ರೀಸ್ವಾಮಿ ಕೋಟೆ ಕಲ್ಲಪ್ಪನ ಮೂರ್ತಿ ಮೇಲೆ ಚಪ್ಪಲಿ ಧರಿಸಿ ಯುವಕ ಕಾಲಿಟ್ಟಿದ್ದ ವಿಡಿಯೊ ಸೋಷಿಯಲ್‍ ಮೀಡಿಯಾದಲ್ಲಿ ವೈರಲ್‍ ಆಗಿತ್ತು. ಯುವಕನ ವರ್ತನೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಯುವಕನ ವಿರುದ್ಧ ಮಧುಗಿರಿ ಠಾಣೆಗೆ ಗ್ರಾಮಸ್ಥರು ದೂರು ಸಲ್ಲಿಸಿದ್ದರು. …

Read More »

ಅಕ್ರಮ ಗಾಂಜಾ ಬೆಳೆ ಜಪ್ತಿ: ಓರ್ವನ ಬಂಧನ

ಬನಹಟ್ಟಿ : ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ತೇರದಾಳ ಪೊಲೀಸ್ ಠಾಣೆ ವ್ಯಾಪ್ತಿಯ ತೇರದಾಳ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ 13 ಗಾಂಜಾ ಗಿಡಗಳನ್ನು ಜಪ್ತಿ ಮಾಡಿಕೊಂಡಿರುವ ತೇರದಾಳ ಪೊಲೀಸರು ಓರ್ವ ಜಮೀನು ಸಾಗುವಳಿದಾರನನ್ನು ಬಂಧಿಸಿರುವ ಘಟನೆ ತೇರದಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜುಗಲಾಸಾರ, ಜಮಖಂಡಿ ಡಿವಾಯ್ ಎಸ್ ಪಿ ಎಂ. ಪಾಂಡುರಂಗಯ್ಯ ಅವರ ಮಾರ್ಗದರ್ಶನದಲ್ಲಿ ರಬಕವಿ-ಬನಹಟ್ಟಿ ತಹಶಿಲ್ದಾರರ ಸಂಜಯ ಇಂಗಳೆ …

Read More »

ಮಗುವನ್ನ ಶಾಲೆಗೆ ಸೇರಿಸಲು ಬಂದ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಹೆಡ್ ಮಾಸ್ಟರ್

ಬೆಂಗಳೂರು: ನಗರದ ಕೋದಂಡರಾಮಪುರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯ ಲೋಕೇಶಪ್ಪ ಎಂಬಾತ ಮಗುವಿನ ದಾಖಲಾತಿಗೆಂದು ಬಂದ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಘಟನೆ ನಡೆದಿದೆ. ಸದ್ಯ ಲೋಕೇಶಪ್ಪನನ್ನ ಸೇವೆಯಿಂದ ಅಮಾನತು ಮಾಡಲಾಗಿದೆ. ಕೋದಂಡರಾಮಪುರ ಪ್ರೌಢಶಾಲೆಗೆ ತಮ್ಮ ಮಗುವನ್ನ ದಾಖಲು ಮಾಡಲೆಂದು ಮಹಿಳೆಯೋರ್ವರು ಶಾಲೆಗೆ ಬಂದರೆ ಆ ಮಹಿಳೆಯಿಂದಲೇ ಹೆಡ್ ಮಾಸ್ಟರ್ ಲೋಕೇಶಪ್ಪ ಮಸಾಜ್ ಮಾಡಿಸಿಕೊಂಡಿದ್ದಾನೆ. ಈ ಸಂಬಂಧ ಸಿಸಿಟಿವಿ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವಿಚಾರವಾಗಿ ಪ್ರಶ್ನಿಸಿದಾಗ ತಾನು ಮಸಾಜ್ ಮಾಡಿಸಿಕೊಂಡಿದ್ದಾಗಿ …

Read More »

ಇನ್ಮುಂದೆ ಕ್ರಿಕೆಟ್​ನಲ್ಲಿ ‘ಬ್ಯಾಟ್ಸ್​ಮನ್’​ ಎನ್ನುವಂತಿಲ್ಲ: ಲಿಂಗ ಸಮಾನತೆಗಾಗಿ ‘ಬ್ಯಾಟರ್’ ಪದ ಬಳಕೆಗೆ ಆದೇಶ

ಕ್ರಿಕೆಟ್ ಆಟದಲ್ಲಿ ಇನ್ನು ಬ್ಯಾಟಿಂಗ್ ಮಾಡುವವರನ್ನು “ಬ್ಯಾಟ್ಸ್‌ಮನ್” (Batsman) ಎಂದು ಕರೆಯಲಾಗುವುದಿಲ್ಲ. ಕ್ರಿಕೆಟ್ ​ಅನ್ನು ಅಂತರ್ಗತ ಆಟವಾಗಿ ಬಲಪಡಿಸುವ ಪ್ರಯತ್ನವಾಗಿ ಬ್ಯಾಟ್ಸ್​ಮನ್​ ಎಂಬ ಪದದ ಬದಲು ಇನ್ನು ಮುಂದೆ ಲಿಂಗ ತಟಸ್ಥ ಪದ “ಬ್ಯಾಟರ್”​ (Batter) ಎಂಬ ಪದವನ್ನು ಕ್ರಿಕೆಟ್ ನಿಯಮಾವಳಿಯಲ್ಲಿ ಅಳವಡಿಸಲಾಗಿದೆ. ಇದಕ್ಕೆ ಸಂಬಂಧಿಸಿ ನಿಯಮ ರೂಪಿಸಲಾಗಿದ್ದು ಬದಲಾವಣೆ ತಕ್ಷಣದಿಂದ ಜಾರಿಯಾಗಿದೆ ಎಂದು ಮೆರಿಲ್‌ಬಾರ್ನ್‌ ಕ್ರಿಕೆಟ್ ಕ್ಲಬ್‌ (MCC) ತಿಳಿಸಿದೆ. ಎಂಸಿಸಿ ಕ್ರಿಕೆಟ್ ನಿಯಮಗಳ ರಕ್ಷಕನಾಗಿದ್ದು, ಐಸಿಸಿ (ICC) …

Read More »