Breaking News

ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ  ಜಾರಿಯಾಗದಿದ್ದರೆ ಹೋರಾಟ : ಪ್ರಮೋದ್ ​​​​ ಮುತಾಲಿಕ್

ಮಂಗಳೂರು : ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಆಗಲಿ . ಕಾಯ್ದೆ ಜಾರಿಯಾಗದಿದ್ದರೆ ಹೋರಾಟ ಮಾಡುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ​​​​ ಮುತಾಲಿಕ್ ಹೇಳಿದ್ದಾರೆ.   ಮಂಗಳೂರಿನಲ್ಲಿ ಬಾಗಲಕೋಟೆ ಮೂಲದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೃತ ಕುಟುಂಬದ ಮನೆಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಆಗಲಿ. ಕಾಯ್ದೆ ಜಾರಿಯಾಗದಿದ್ದರೆ ಹೋರಾಟ ಮಾಡುತ್ತೇವೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಗಳು ತಪ್ಪುತ್ತಿಲ್ಲ. ಮತಾಂತರ, ಗೋಹತ್ಯೆ ವಿರುದ್ಧ ಸೂಕ್ತ …

Read More »

ರಾಜ್ಯದಲ್ಲಿ `APMC’ ತಿದ್ದುಪಡಿ ಕಾನೂನು ವಾಪಸಿಲ್ಲ : ಸಚಿವ ಎಸ್.ಟಿ.ಸೋಮಶೇಖರ್

ಬೆಳಗಾವಿ : ರಾಜ್ಯದಲ್ಲಿ ಎಪಿಎಂಸಿ (APMC) ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ (Minister ST Somshekar) ಈ ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ತಮ್ಮ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಬಹುದು. ಇದರಿಂದ ರೈತರಿಗೆ ಯಾವುದೇ ನಷ್ಟವಾಗುವುದಿಲ್ಲ. ಹೀಗಾಗಿ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯಲ್ಲ, ಲಾಭದಲ್ಲಿ ಇರುವ ಎಪಿಎಂಸಿಗಳನ್ನು ಯಾವ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ತಿಳಿಸಿದ್ದಾರೆ.   ತಾನು ಬೆಳೆದ ಬೆಳೆಯನ್ನು …

Read More »

ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಪ್ರತ್ಯೇಕವಾಗಿ ಎರಡು ದಿನ ಮೀಸಲಿಡುವ ಸಾಧ್ಯತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಪ್ರತ್ಯೇಕವಾಗಿ ಎರಡು ದಿನ ಮೀಸಲಿಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಕರ್ನಾಟಕ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಕಾಗೇರಿ, ಉತ್ತರ ಕರ್ನಾಟಕ ಭಾಗದ ನಿರ್ದಿಷ್ಟ ವಿಷಯಗಳನ್ನು ಚರ್ಚೆಗೆ ತೆಗೆದುಕೊಳ್ಳಲು ಹಲವು ಸದಸ್ಯರಿಂದ ಮನವಿಗಳು ಬಂದಿವೆ. ‘ನಾನು ಕಲಾಪ ಪ್ರಾರಂಭವಾಗುವ ಮೊದಲು ಬೆಳಿಗ್ಗೆ 10.30 ಕ್ಕೆ ನಿಗದಿಪಡಿಸಲಾದ ವ್ಯವಹಾರ ಸಲಹಾ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸುತ್ತೇನೆ ಮತ್ತು …

Read More »

ಸ್ಪೈಸ್‌ಜೆಟ್ (Spice jet)ಡಿಸೆಂಬರ್ 20 ರಿಂದ ವಾರಕ್ಕೆ ನಾಲ್ಕು ಬಾರಿ ಬೆಳಗಾವಿ-ದೆಹಲಿ ವಿಮಾನ ಸೇವೆಯನ್ನು ಒದಗಿಸಲಿದೆ.

ಬೆಳಗಾವಿ:ಸ್ಪೈಸ್‌ಜೆಟ್ (Spice jet)ಡಿಸೆಂಬರ್ 20 ರಿಂದ ವಾರಕ್ಕೆ ನಾಲ್ಕು ಬಾರಿ ಬೆಳಗಾವಿ-ದೆಹಲಿ ವಿಮಾನ ಸೇವೆಯನ್ನು ಒದಗಿಸಲಿದೆ.ಗುರುಗ್ರಾಮ್ ಮೂಲದ ವಿಮಾನಯಾನ ಸಂಸ್ಥೆಯು ವಾರಕ್ಕೆ ಮೂರು ಬಾರಿ ನಗರಗಳ ನಡುವೆ ವಿಮಾನ ಸೇವೆಯನ್ನು ಒದಗಿಸುತ್ತಿತ್ತು.   ಸೋಮವಾರ, ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಸ್ಪೈಸ್‌ಜೆಟ್ ದೆಹಲಿಗೆ ವಿಮಾನ ಸಂಪರ್ಕವನ್ನು ಒದಗಿಸಲಿದೆ ಎಂದು ಬೆಳಗಾವಿ ವಿಮಾನ ನಿಲ್ದಾಣವು ಟ್ವೀಟ್‌ನಲ್ಲಿ ತಿಳಿಸಿದೆ. ಕಡಿಮೆ ದರದ ವಿಮಾನಯಾನ ಸಂಸ್ಥೆಯು ಬೆಳಗಾವಿ-ದೆಹಲಿ ಮಾರ್ಗದಲ್ಲಿ ಆಗಸ್ಟ್ 13, 2021 ರಂದು …

Read More »

ಮೂರು ವರ್ಷಗಳ ನಂತರ ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಚಾಲನೆ ದೊರೆಯಲಿದೆ.

ಬಸವರಾಜ ಬೊಮ್ಮಾಯಿ ಸರ್ಕಾರವು ಮತಾಂತರ ವಿರೋಧಿ ಕಾಯ್ದೆಗೆ ಹೆಚ್ಚು ಕಠಿಣವಾದ ನಿಬಂಧನೆಗಳನ್ನು ಪರಿಚಯಿಸಲು ಯೋಜಿಸುತ್ತಿರುವುದರಿಂದ ಅಧಿವೇಶನದಲ್ಲಿ ಪ್ರಕ್ಷುಬ್ಧವಾದ ವಾತಾವರಣ ಸೃಷ್ಠಿ ಸಾಧ್ಯತೆ ಇದೆ.ಇದು ಈಗಾಗಲೇ ಅಲ್ಪಸಂಖ್ಯಾತ ಗುಂಪುಗಳಿಂದ ಪ್ರತಿಭಟನೆಯನ್ನು ಎದುರಿಸುತ್ತಿದೆ.ವಿಪಕ್ಷಗಳು ಬಿಟ್‌ಕಾಯಿನ್ ಹಗರಣದ ಆರೋಪ,ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬದ ಬಗ್ಗೆ, ಕಿಕ್‌ಬ್ಯಾಕ್‌ ಬಗ್ಗೆ ಪ್ರಧಾನ ಮಂತ್ರಿ ಕಚೇರಿಗೆ (ಪಿಎಂಒ) ಗುತ್ತಿಗೆದಾರರ ದೂರುಗಳ ಕುರಿತು ಸರ್ಕಾರವನ್ನು ಟೀಕಿಸಲು ನೋಡುತ್ತಿವೆ.   ವಿವಾದಾತ್ಮಕ ಕೃಷಿ ಕಾನೂನುಗಳನ್ನು ಕೇಂದ್ರವು ರದ್ದುಗೊಳಿಸಿದ ನಂತರ ಅವುಗಳನ್ನು …

Read More »

ಎಪಿಎಂಸಿಗಳನ್ನು ಯಾವ ಕಾರಣಕ್ಕೂ ಮುಚ್ಚುವುದಿಲ್ಲ: ಸಚಿವ ಎಸ್.ಟಿ.ಸೋಮಶೇಖರ್

ಎಪಿಎಂಸಿ ಒಳಗೆ ಮಾರಾಟ ಮಾಡಬೇಕು ಎಂಬ ಉದ್ದೇಶದಿಂದ ಕರ್ನಾಟಕದಲ್ಲಿ ಎಪಿಎಂಸಿ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಆದರೆ ಇದೀಗ ಕರ್ನಾಟಕದಲ್ಲಿ ಎಲ್ಲಿ ಬೇಕಾದ್ರು ರೈತರು ತಮ್ಮ ಬೆಳೆಗಳನ್ನು ಮಾರಾಟ ಮಾಡಬಹುದು ಎಂಬ ಉದ್ದೇಶದಿಂದ ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಮರ್ಥಿಸಿಕೊಂಡರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್ ಅವರು ಎಪಿಎಂಸಿ ಹೊರಗೆ ಮಾರಾಟ ಮಾಡಿದ್ರೆ ದಂಡ ವಿಧಿಸಲಾಗುತ್ತಿತ್ತು, ಅದೇ …

Read More »

ಚಳಿಗಾಲದ ಅಧಿವೇಶನಕ್ಕೆ ಕುಂದಾನಗರಿ ಬೆಳಗಾವಿ ಸಜ್ಜಾಗಿದೆ.

ನಾಳೆಯಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾಹಿತಿ ನೀಡಿದ್ದಾರೆ. ಚಳಿಗಾಲದ ಅಧಿವೇಶನಕ್ಕೆ ಕುಂದಾನಗರಿ ಬೆಳಗಾವಿ ಸಜ್ಜಾಗಿದೆ. ನಾಳೆಯಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು. ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಸ್ಪೀಕರ್ ಕಾಗೇರಿ ಅವರು ನಾಳೆ ಬೆಳಗ್ಗೆ 10.30ಕ್ಕೆ ಕಾರ್ಯಕಲಾಪಗಳ …

Read More »

ಹುಬ್ಬಳ್ಳಿಯಿಂದ ಕಾರ್ ಮೂಲಕ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿಯಿಂದ ಕಾರ್ ಮೂಲಕ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಲ್ಲಿಂದ ನೇರವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಇದೇ ವೇಳೆ ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ಆರಂಭವಾಗುತ್ತಿದೆ. ಅಧಿವೇಶನ ವೇಳೆ ಸುವರ್ಣಸೌಧಕ್ಕೆ ರೈತರು ಮುತ್ತಿಗೆ ಹಾಕುತ್ತಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಯಿಸಿದ ಸಿಎಂ ಬೊಮ್ಮಾಯಿ ಅವರು ಪ್ರತಿ ಭಾರಿ ಅಧಿವೇಶನ ನಡೆದಾಗ ರೈತರು ತಮ್ಮ ಸಮಸ್ಯೆ ಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮಾಡುತ್ತಾರೆ ಅವರ ಅಹವಾಲು ಏನೇ …

Read More »

ಭಾನುವಾರ ಸಂಜೆ ಬೆಳಗಾವಿಗೆ ಆಗಮಿಸಿದ ಸಿದ್ದರಾಮಯ್ಯ

ಬೆಳಗಾವಿ – ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳಲು ಭಾನುವಾರ ಸಂಜೆ ಬೆಳಗಾವಿಗೆ ಆಗಮಿಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಮಾನ ನಿಲ್ದಾಣದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಮಾಜಿ ಸಚಿವ ಎ.ಬಿ.ಪಾಟೀಲ, ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಮೊದಲಾದವರು ಸ್ವಾಗತಿಸಿದರು. ಬೆಳಗಾವಿ ಅಧಿವೇಶನದಲ್ಲಿ ಸರಕಾರದ ನೀತಿ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಪ್ರವಾಹ, ಉತ್ತರ ಕರ್ನಾಟಕದ ಸಮಸ್ಯೆಗಳು, ಮತಾಂತರ, ಮನೆಗಳನ್ನು ಕೊಡದಿರುವುದು, ಶೇ.40ರಷ್ಟು ಲಂಚ ಮೊದಲಾದವುಗಳ …

Read More »

ರಮೇಶ್ ಜಾರಕಿಹೊಳಿ ಏನು ಹೇಳಿದ್ದಾರೆ ಎಂಬುವುದು ಯಾರಿಗೂ ಅರ್ಥವಾಗಿಲ್ಲ

ಬೆಳಗಾವಿ:: ಮುಂದಿನ ಚುನಾವಣೆ ಗೋಕಾಕನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಡೋಣ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ. ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ರಮೇಶ್ ಜಾರಕಿಹೊಳಿ ಏನು ಹೇಳಿದ್ದಾರೆ ಎಂಬುವುದು ಯಾರಿಗೂ ಅರ್ಥವಾಗಿಲ್ಲ. ನಾವು ಯಾವುದೇ ಚುನಾವಣೆಯನ್ನು ಕೇಂದ್ರಿಕೃತ ಮಾಡಿಲ್ಲ, ಸ್ವತಂತ್ರವಾಗಿಯೇ ಮಾಡಿದ್ದೇವೆ. ಅವರು ಮಾತ್ರ ಅಧಿಕಾರವನ್ನು ಕೈಯಲ್ಲಿಯೇ ಹಿಡಿದುಕೊಂಡಿರುತ್ತಾರೆ ಎಂದು ತಿವಿದಿದ್ದಾರೆ. ಇನ್ನೂ ವಿಧಾನಪರಿಷತ್ ಫಲಿತಾಂಶಕ್ಕೆ ಸಂಬಂಧಿಸಿದಂತೆ …

Read More »