Breaking News

ಸದನದಲ್ಲಿ ಬೆಲೆ ಏರಿಕೆ ಗದ್ದಲ: ಬಿಜೆಪಿಯದ್ದು ಲೂಟಿ ಸರ್ಕಾರ ಎಂದ ‘ಸಿದ್ದು’; ‘ಭೂತದ ಬಾಯಲ್ಲಿ ಭಗವದ್ಗೀತೆ’ ಎಂದು ವಿಪಕ್ಷಗಳಿಗೆ ಸಿಎಂ ಬೊಮ್ಮಾಯಿ ‘ಗುದ್ದು’

ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಬೆಲೆ ಏರಿಕೆ ವಿಚಾರ ಮತ್ತೆ ಪ್ರತಿಧ್ವನಿಸಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ಪರಸ್ಪರ ವಾಕ್ಸಮರ, ವಾಗ್ದಾಳಿಗಳಿಗೆ ಕಾರಣವಾಗಿದೆ. ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಉತ್ತರಿಸಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದು ನಿಜ. ಅದನ್ನು ನಾವು ಒಪ್ಪಿಕೊಳ್ಳುತ್ತೇವೆ ಆದರೆ ಅದಕ್ಕೆ ಪೆಟ್ರೋಲ್, ಡಿಸೆಲ್ ಬೆಲೆ ಏರಿಕೆಯಾಗಿರುವುದು ಮಾತ್ರ ಕಾರಣವಲ್ಲ, ಬೇರೆ ಬೇರೆ ಕಾರಣಗಳಿಂದ ಬೆಲೆ …

Read More »

ನಾವೇನು ಕಾಫಿ-ಟೀ ಕುಡಿಯಲು ಇಲ್ಲಿಗೆ ಬರಬೇಕಾ’: ಶಿವಲಿಂಗೇಗೌಡ

ನಾವೇನು ಕಾಫಿ-ಟೀ ಕುಡಿಯಲು ಇಲ್ಲಿಗೆ ಬರಬೇಕಾ’ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸ್ಪೀಕರ್​ ಸ್ಥಾನದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಖಾರವಾಗಿ ಪ್ರಶ್ನಿಸಿದರು. ಬೆಂಗಳೂರು: ‘ನೀವು ಕೂತ್ಕೊ ಅಂದ್ರೆ ಕೈಮುಗಿದು ಕೂತು ಬಿಡ್ತೀನಿ. ನಮಗೂ ಮಾತಾಡೋಕೆ ಅವಕಾಶ ಕೊಡಿ. ನಾವೇನು ಕಾಫಿ-ಟೀ ಕುಡಿಯಲು ಇಲ್ಲಿಗೆ ಬರಬೇಕಾ’ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸ್ಪೀಕರ್​ ಸ್ಥಾನದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಖಾರವಾಗಿ ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಬೆಲೆ ಏರಿಕೆ ಬಗ್ಗೆ ನಡೆಯುತ್ತಿದದ ಚರ್ಚೆಗೆ ಉತ್ತರ …

Read More »

ನನ್ನ ಕ್ಷೇತ್ರದಲ್ಲಿ ಒಂದೇ ಒಂದು ಮನೆ ಕೊಡಿಸಲು ಸಾಧ್ಯವಾಗಿಲ್ಲ: ಸಿದ್ದರಾಮಯ್ಯ

ಬೆಂಗಳೂರು, ಸೆ. 20: `ಪ್ರತಿಪಕ್ಷ ನಾಯಕನಾಗಿ ನಾನು ಪ್ರತಿನಿಧಿಸುವ ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಮೂರು ವರ್ಷಗಳಿಂದ ವಸತಿ ರಹಿತರಿಗೆ ಒಂದೇ ಒಂದು ಮನೆ ಕೊಡಿಸಲು ಸಾಧ್ಯವಾಗಿಲ್ಲ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಪಕ್ಷೇತರ ಸದಸ್ಯ ಶರತ್ ಬಚ್ಚೇಗೌಡ ಕೇಳಿದ ಪ್ರಶ್ನೆಗೆ ವಸತಿ ಸಚಿವ ವಿ.ಸೋಮಣ್ಣ ನೀಡಿದ ಉತ್ತರದಿಂದ ಅಸಮಾಧಾನಗೊಂಡ ಅವರು, ನಾನು ಸಿಎಂ ಆಗಿದ್ದ 5 ವರ್ಷದ ಅವಧಿಯಲ್ಲಿ ಒಟ್ಟು 5ಲಕ್ಷ ಮನೆಗಳನ್ನು …

Read More »

ಕಲಬುರಗಿ ಪಾಲಿಕೆ; JDS ಜತೆ ಮೈತ್ರಿ ಮಾತುಕತೆಗೆ ಸಿದ್ದರಾಮಯ್ಯನೇ ಬರಲೀ ಎಂದು HDK ಪಟ್ಟು ಹಿಡಿದಿದ್ಯಾಕೆ?

ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಪೂರ್ಣ ಬಹುಮತ ಸಿಗದೆ ಅತಂತ್ರವಾಗಿದೆ. ಕಾಂಗ್ರೆಸ್, ಬಿಜೆಪಿ ಯಾರೇ ಅಧಿಕಾರಕ್ಕೆ ಬರಬೇಕಾದರೂ ಜೆಡಿಎಸ್ ಬೆಂಬಲ ಅತ್ಯಗತ್ಯ. ಆದರೆ, ಜೆಡಿಎಸ್ (JDS) ಮೇಯರ್ ಸ್ಥಾನವನ್ನು ಯಾರು ಬಿಟ್ಟುಕೊಡುತ್ತಾರೋ ಅವರಿಗೆ ನಮ್ಮ ಬೆಂಬಲ ಎಂದು ಪಟ್ಟು ಹಿಡಿದಿದೆ. ಇನ್ನು ಜೆಡಿಎಸ್ನೊಂದಿಗೆ ಯಾವುದೇ ಕಾರಣಕ್ಕೂ ಮೈತ್ರಿ ಬೇಡ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ಹಿಂದೆಯೂ ಕೆಲವು ಲೆಕ್ಕಾಚಾರ ಇರುವುದನ್ನು ಅಲ್ಲಗಳೆಯುವಂತಿಲ್ಲ. ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ …

Read More »

ಉತ್ತರದ ಮತ್ತೊಂದು ಜೆಡಿಎಸ್‌ ವಿಕೆಟ್‌ ಪತನ?

ಹುಬ್ಬಳ್ಳಿ: ಜಾತ್ಯತೀತ ಜನತಾದಳ(ಜೆಡಿಎಸ್‌)ದಲ್ಲಿ ನಾಯಕರ ನಿರ್ಗಮನ ಪರ್ವ ಮುಂದುವರಿದಿದ್ದು, ಉತ್ತರ ಕರ್ನಾಟಕದ ಜೆಡಿಎಸ್‌ ನಾಯಕ, ಮಾಜಿ ಶಾಸಕ ಎನ್‌.ಎಚ್‌. ಕೋನರಡ್ಡಿ ಅವರು ಜೆಡಿಎಸ್‌ನಿಂದ ಒಂದು ಕಾಲು ಹೊರಗಿಟ್ಟಿದ್ದಾರೆಯೇ? ಜೆಡಿಎಸ್‌ ವರಿಷ್ಠರ ಉದಾಸೀನತೆ, ಕ್ಷೇತ್ರದ ಜನತೆ ಆಶಯ, ಕೋನರಡ್ಡಿಯವರ ನಡೆ ಗಮನಿಸಿದರೆ ಅಂತಹ ಅನುಮಾನ ವ್ಯಕ್ತವಾಗುತ್ತಿದ್ದು, ಪಾಲಿಕೆ ಚುನಾವಣೆ ಸೋಲಿನ ನೆಪದಡಿ ಕೋನರಡ್ಡಿ ಅವರು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿರುವುದು ಈ ವಿದ್ಯಮಾನಕ್ಕೆ ಇಂಬು ನೀಡತೊಡಗಿದೆ. ಎನ್‌.ಎಚ್‌. …

Read More »

ಎರಡು ಬಾರಿ ರಾಜ್ಯ ಸಭಾ ಸ್ಥಾನವನ್ನು ತಿರಸ್ಕರಿಸಿದ್ದೇನೆ -ಸೋನು ಸೂದ್

ಬಹುಭಾಷಾ ನಟ ಸೋನು ಸೂದ್​ ತಾವು ಎರಡು ಬಾರಿ ರಾಜ್ಯ ಸಭಾ ಸ್ಥಾನವನ್ನು ತಿರಸ್ಕರ ಮಾಡಿದ್ದು, ರಾಜಕೀಯ ಪ್ರವೇಶಕ್ಕೆ ತಾವು ಇನ್ನು ಸಿದ್ಧರಾಗಿರಲ್ಲ ಎಂದು ಹೇಳಿದ್ದಾರೆ. ಐಟಿ ದಾಳಿ ನಡೆದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಸೋನು ಸೂದ್​, ರಾಜಕೀಯ ಸೇರ್ಪಡೆ ಕುರಿತು ಎರಡು ಪಕ್ಷಗಳಿಂದ ಆಫರ್ ಬಂದಿದೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿರೋ ಅವರು, ಮಾನಸಿಕವಾಗಿ ನಾನು ಇನ್ನು ರಾಜಕೀಯಕ್ಕೆ ಸಿದ್ಧವಾಗಿಲ್ಲ. ಈಗ ನಾನು ಮಾಡುತ್ತಿರೋ ಕೆಲಸದಲ್ಲೇ …

Read More »

ಮೊದಲು ರೊಟ್ಟಿ ಮಾಡೋದು ಕಲಿತುಕೋ, ಆಮೇಲೆ ಪ್ರತಿಭಟನೆ ಮಾಡುವಿಯಂತೆ;: ಬಾಗಲಕೋಟೆ D.C.

ಬಾಗಲಕೋಟೆ: ಪ್ರತಿಭಟನಾನಿರತ ವಿದ್ಯಾರ್ಥಿನಿಯೊಬ್ಬಳಿಗೆ ‘ಮೊದಲು ರೊಟ್ಟಿ ಮಾಡೋದು ಕಲಿತುಕೋ, ಆಮೇಲೆ ಪ್ರತಿಭಟನೆ ಮಾಡುವಿಯಂತೆ’ ಎಂದು ಜಿಲ್ಲಾಧಿಕಾರಿಯೊಬ್ಬರು ಮಾತಿನಲ್ಲೇ ಕುಟುಕಿದ ಪ್ರಸಂಗವೊಂದು ನಡೆದಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಕಾರ್ಯಕರ್ತರು ಮೈಸೂರಿನಲ್ಲಿನ ದೇಗುಲ ತೆರವು ಖಂಡಿಸಿ ಬಾಗಲಕೋಟೆಯಲ್ಲಿ ನಡೆಸಿದ್ದ ಪ್ರತಿಭಟನೆ ವೇಳೆ ಈ ಸನ್ನಿವೇಶ ಕಂಡುಬಂದಿದೆ. ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದವರು ಬಳಿಕ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲು ಹೋಗಿದ್ದಾರೆ. ಪ್ರತಿಭಟನಾಕಾರರು ಮನವಿ ಸಲ್ಲಿಸಿ ಮರಳುವ ಸಂದರ್ಭದಲ್ಲಿ …

Read More »

ನಾನು ಐದಾರು ಜನರ ತಲೆ ತೆಗಿಯಬೇಕಿದೆ. ಇದಕ್ಕೆ ಅನುಮತಿ ಕೊಡ್ಸಿ: ರಮೇಶ್‌ ಕುಮಾರ್‌

ಬೆಂಗಳೂರು: ನಾನು ಐದಾರು ಜನರ ತಲೆ ತೆಗಿಯಬೇಕಿದೆ. ಇದಕ್ಕೆ ಅನುಮತಿ ಕೊಡ್ಸಿ ಎಂದು ಸ್ಪೀಕರ್‌ಗೆ ಶ್ರಿನಿವಾಸಪುರ ಶಾಸಕ ರಮೇಶ್‌ ಕುಮಾರ್‌ ಮನವಿ ಮಾಡಿದರು. ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ಹಂಪ್ಸ್​ ಹಾಕಿರುವ ಬಗ್ಗೆ ಸೋಮವಾರ ವಿಧಾನಸಭೆ ಕಲಾಪದಲ್ಲಿ ಪ್ರಸ್ತಾಪಿಸಿದ ರಮೇಶ್​ ಕುಮಾರ್​, ನಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ 52 ಕಿಲೋ ಮೀಟರ್‌ಗೆ 47 ಸ್ಪೀಡ್‌ ಹಂಪ್ಸ್‌ ಹಾಕಲಾಗಿದೆ. ಈ ಬಗ್ಗೆ ಒಂದೇ ವರ್ಷದಲ್ಲಿ 2ನೇ ಬಾರಿ ಪ್ರಶ್ನೆ ಮಾಡುತ್ತಿದ್ದೇನೆ. ಈ ರೋಡ್‌ಗೆ ವಾರಸುದಾರರು ಯಾರು? …

Read More »

‘ಮೋದಿ ಅಲೆ ಭ್ರಮೆ’ ಬಗ್ಗೆ ಬಿಎಸ್‌ವೈ ಹೇಳಿಕೆಗೆ ಬಿಜೆಪಿ ನಾಯಕರು ಅಸಮಾಧಾನ

ಬೆಂಗಳೂರು, ಸೆಪ್ಟೆಂಬರ್‌ 20: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಲೆಯ ವಿಚಾರವಾಗಿ ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ನೀಡಿರುವ ಹೇಳಿಕೆಯು ಹಲವಾರು ಕರ್ನಾಟಕ ಬಿಜೆಪಿ ನಾಯಕರು ಹಾಗೂ ಕೇಂದ್ರ ಬಿಜೆಪಿ ನಾಯಕರು ಅಸಮಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ. ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ದಾವಣಗೆರೆಯಲ್ಲಿ ನಡೆದ ಎರಡು ದಿನಗಳ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ಯಾವ ರೀತಿಯಲ್ಲಿ ಗಟ್ಟಿಗೊಳಿಸುವುದು …

Read More »

ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಕಾಂಗ್ರೆಸ್ ರಿವರ್ಸ್ ಆಪರೇಷನ್​ನದ್ದೇ ಚರ್ಚೆ.. ಯಾಕೆ.?

ಕಾಂಗ್ರೆಸ್ ರಿವರ್ಸ್ ಆಪರೇಷನ್ ವಿಚಾರ ಸದ್ಯ BJP ನಾಯಕರ ಆತಂಕ ಹೆಚ್ಚಿಸಿದೆ. ಈ ಹಿನ್ನೆಲೆ ಸಾರ್ವತ್ರಿಕ ಚುನಾವಣೆಗೆ ಈಗಿನಿಂದಲೇ ಬಿಜೆಪಿ ಕಸರತ್ತು ಆರಂಭಿಸಿದೆ ಎನ್ನಲಾಗಿದೆ. ನೆನ್ನೆ ದಾವಣಗೆರೆಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ, ಪ್ರಮುಖ ರಾಜ್ಯ ನಾಯಕರು ಭಾಗಿಯಾಗಿದ್ದರು. ಕೋರ್ ಕಮಿಟಿ ಸಭೆಯಲ್ಲಿ ಆಪರೇಷನ್ ಹಸ್ತ ಸಿದ್ದತೆ ವಿಚಾರ ಸದ್ದು ಮಾಡಿದೆ. ಅಷ್ಟಕ್ಕೂ ರಾಜ್ಯ ಬಿಜೆಪಿ ನಾಯಕರಿಗೇಕೆ ರಿವರ್ಸ್ ಆಪರೇಷನ್ ಭೀತಿ ಅನ್ನೋದನ್ನ ನೋಡೋದಾದ್ರೆ.. ಆಡಳಿತ ಪಕ್ಷದ ಶಾಸಕರು ಪಕ್ಷಾಂತರ …

Read More »