Breaking News

ರಾಜ್ಯದಲ್ಲಿ 10 ರಿಂದ 15 ಕಡೆ ನಿಂತುಕೊಳ್ಳಿ ಅಂತಾ ಕರೆಯುತ್ತಿದ್ದಾರೆ.

ಬಾಗಲಕೋಟೆ: ನನ್ನ ಪರವಾಗಿ ಬನ್ನಿ, ಘೋಷಣೆ ಕೂಗಿ ಅಂತಾ ಯಾರನ್ನೂ ಕರೆದಿಲ್ಲ. ಮುಂದೆಯೂ ಕರೆಯುವುದಿಲ್ಲ ಎಂದು ಬಾದಾಮಿ ಕ್ಷೇತ್ರದ ಶಾಸಕ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಶುಕ್ರವಾರ ವಿಶೇಷ ಹೆಲಿಕಾಪ್ಟರ್ ಮೂಲಕ ಬಾದಾಮಿಗೆ ಆಗಮಿಸಿದ್ದ ಅವರು, ನೇರವಾಗಿ ಪುರಸಭೆಯಲ್ಲಿರುವ ಮತಗಟ್ಟೆಗೆ ಭೇಟಿ ನೀಡಿ ತಮ್ಮ ಹಕ್ಕು ಚಲಾಯಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2023ರ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಕಾಲವಿದೆ. ಈಗಲೇ ಎಲ್ಲಿ ಸ್ಪರ್ಧೆ ಮಾಡಬೇಕು ಎಂದು …

Read More »

ಸುಮಾರು 5 ನೂರಕ್ಕೂ ಅಧಿಕ ರೈತರು ಚಳಿಗಾಲದ ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ

ಹಾವೇರಿ : ಪ್ರಮುಖ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರವು ವಾಪಸ್​ ಪಡೆಯುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಪೂಜಾರ್ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ಸುಮಾರು 500 ಅಧಿಕ ರೈತರು ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ರವಾನಿಸಿದರು. ಕೇಂದ್ರ ಸರ್ಕಾರ ವಾಪಸ್ ಪಡೆದಂತೆ ರಾಜ್ಯ ಸರ್ಕಾರ ಸಹ ರೈತ ವಿರೋಧಿ ಮಸೂದೆಗಳನ್ನು ವಾಪಸ್ ಪಡೆಯಬೇಕು. ವಾಪಸ್ …

Read More »

ಪ್ರಧಾನಿ ಮೋದಿ ಟ್ವಿಟರ್​ ಖಾತೆ ಹ್ಯಾಕ್​.. ಬಿಟ್​ಕಾಯಿನ್ ಮಾನ್ಯತೆ​ ಕುರಿತಾದ ಟ್ವೀಟ್​​​ ವೈರಲ್​

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಟ್ವಿಟರ್ ಖಾತೆ ಹ್ಯಾಕ್​ ಆಗಿದೆ. ಸ್ವಲ್ಪ ಸಮಯದ ನಂತರ ಖಾತೆ ಹ್ಯಾಕ್​ ಆಗಿರುವುದನ್ನು ಸರಿಪಡಿಸಿದಾಗ ಬಿಟ್​ಕಾಯಿನ್​ ಮಾನ್ಯತೆ ನೀಡಿರುವ ಬಗ್ಗೆ ಟ್ವೀಟ್​ವೊಂದನ್ನು ಹಂಚಿಕೊಂಡಿರುವುದು ಬೆಳಕಿಗೆ ಬಂದಿದ್ದು, ಬಳಿಕ ಅದನ್ನು ಖಾತೆಯಿಂದ ಡಿಲಿಟ್​ ಮಾಡಲಾಗಿದೆ.ಈ ಬಗ್ಗೆ ಟ್ವೀಟ್​ ಮಾಡಿರುವ PMO India, ‘Narendra Modi ಟ್ವಿಟರ್​​ ಖಾತೆಯಲ್ಲಿ ಉಂಟಾದ ಸಮಸ್ಯೆಯನ್ನು ಸರಿಪಡಿಸಲಾಗಿದೆ. ಬಗ್ಗೆ ಟ್ವಿಟರ್​​ಗೆ ಮಾಹಿತಿ ನೀಡಲಾಗಿದ್ದು, ತಕ್ಷಣ ಖಾತೆಯನ್ನು ಸುರಕ್ಷಿತಗೊಳಿಸಲಾಗಿದೆ. ಸಮಸ್ಯೆ ಉಂಟಾದ ಕೆಲ ಸಮಯದ …

Read More »

ಮೊಟ್ಟೆ ನೀಡುವ ವಿಚಾರದಲ್ಲಿ ವಿನಾಕಾರಣ ಗೊಂದಲ ಸೃಷ್ಟಿಯಾಗ್ತಿದೆ,:ಪ್ರಮೋದ್ ಮುತಾಲಿಕ್

ಮೊಟ್ಟೆ ನೀಡುವ ವಿಚಾರದಲ್ಲಿ ವಿನಾಕಾರಣ ಗೊಂದಲ ಸೃಷ್ಟಿಯಾಗ್ತಿದೆ, ಯಾರಿಗೆ ಬೇಕು ತಗೊಳ್ಳಿ. ಬೇಡವಾದವರಿಗೆ ಹಣ್ಣು ತಗೊಳ್ಳಿ ಆಯ್ತು ಎಂದಿದ್ದಾರೆ. ಈ ವಿಚಾರವನ್ನ ಆದಷ್ಟು ಬೇಗನೇ ಸರ್ಕಾರ ಬಗೆಹರಿಸಬೇಕು ಬಹಳ ದಿನ ಈ ಗೊಂದಲವನ್ನ ಸರ್ಕಾರ ಮುಂದುವರೆಸಬಾರದು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿವಿಮಾತು ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಮೋದ್ ಮುತಾಲಿಕ್ ಅವರು ಜಾತಿ, ಕೋಮು ವಿಚಾರದಲ್ಲಿ ಗೊಂದಲ ಸೃಷ್ಟಿಯಾಗುತ್ತೆ, ಶಿಕ್ಷಣ ಮಂತ್ರಿಗಳು ಬೇಗ ಡಿಶಿಜನ್ ತಗೊಬೇಕು …

Read More »

ಸಂತೆಯಲ್ಲಿ ಮೋಬೈಲ್ ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಸಂತೆಯೊಂದರಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಖದೀಮರನ್ನು ಸಾರ್ವಜನಿಕರೇ ಹಿಡಿದು ಪೆÇಲೀಸರಿಗೆ ಒಪ್ಪಿಸಿದ ಘಟನೆ ಕಾಗವಾಡ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾಗವಾಡ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಕಳ್ಳರ ಹಾವಳಿ ಹೆಚ್ಚಾಗಿದೆ. ಐನಾಪುರ ಪಟ್ಟಣದ ವಾರದ ಸಂತೆಯಲ್ಲಿ ಮೊಬೈಲ್ ಕಳ್ಳರು ತಮ್ಮ ಕೈಚಳಕ ತೋರುತ್ತಿದ್ದ ವೇಳೆ, ಸಾರ್ವಜನಿಕರು ಮೊಬೈಲ್ ಕಳ್ಳನನ್ನು ಹಿಡಿದು ಪೆÇಲೀಸರಿಗೆ ಒಪ್ಪಿಸಿದ್ದಾರೆ. ಶನಿವಾರರಂದು ವಾರದ ಸಂತೆಗಾಗಿ ಆಗಮಿಸಿರುವ ಸಾರ್ವಜನಿಕರು ತರಕಾರಿ ಖರಿದಿಯಲ್ಲಿ ತೊಡಗಿದ್ದಾಗ ಮುವರು ಯುವಕರು …

Read More »

ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ಇಂದು, ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ, – ಫ್ಲೈ ಓವರ್ – ಸಿಸಿ ರಸ್ತೆ ಅಭಿವೃದ್ಧಿ – ಸ್ಮಾರ್ಟ್ ಸಿಟಿ ಚರ್ಚಿಸಿ ಸಭೆ

ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ಇಂದು, ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, – ಫ್ಲೈ ಓವರ್ – ಸಿಸಿ ರಸ್ತೆ ಅಭಿವೃದ್ಧಿ – ಸ್ಮಾರ್ಟ್ ಸಿಟಿ – ಹುಬ್ಬಳ್ಳಿ ಧಾರವಾಡ ಬೈ ಪಾಸ್ ರಸ್ತೆ – – ರೈತರಿಗೆ ಬೆಳೆ ಪರಿಹಾರ – ಕೋವಿಡ್ ಪರಿಹಾರ ಹಾಗು ಇನ್ನಿತರ ಅಭಿವೃದ್ಧಿ ವಿಷಯಗಳ ಕುರಿತು ಚರ್ಚಿಸಿ ಸಭೆ ನಡೆಸಲಾಯಿತು. ಫ್ಲೈ ಓವರ್ ಕಾಮಗಾರಿ – ರಾಷ್ಟ್ರೀಯ ಹೆದ್ದಾರಿ ಇಲಾಖಾ ಅಧಿಕಾರಿಗಳಿಗೆ ವಾಣಿಜ್ಯ …

Read More »

ಕ್ರಿಸ್​ಮಸ್​, ಹೊಸ ವರ್ಷ ಅದ್ದೂರಿಯಾಗಿ ಆಚರಿಸಲು ಈ ಬಾರಿಯೂ ಅವಕಾಶವಿಲ್ಲ -ಗೌರವ್ ಗುಪ್ತಾ

ಬೆಂಗಳೂರು: ಒಮಿಕ್ರಾನ್​ ಆತಂಕ ಹಿನ್ನೆಲೆ ಸಿಲಿಕಾನ್​ ಸಿಟಿಯಲ್ಲಿ ಹೊಸ ವರ್ಷ ಮತ್ತು ಕ್ರಿಸ್​ಮಸ್​ಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ನಿರ್ಧಾರ ಆಗಲಿದೆ. ಈ ಬಾರಿಯೂ ಅದ್ದೂರಿಯಾಗಿ ಆಚರಿಸಲು ಅವಕಾಶ ಇಲ್ಲ ಎಂದು ಪಾಲಿಕೆ ಆಯುಕ್ತ ಗೌರವ್​ ಗುಪ್ತಾ ತಿಳಿಸಿದ್ದಾರೆ. ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್​ ರೂಪಾಂತರಿ ತಳಿಯ ಆತಂಕವಿದೆ. ಇದುವರೆಗೂ ಬಿಬಿಎಂಪಿಗೆ ಆಚರಣೆಗೆ ಅನುಮತಿ ಕೋರಿ ಯಾವುದೇ ಮನವಿಗಳು ಬಂದಿಲ್ಲ ಎಂದಿದ್ದಾರೆ. …

Read More »

ನಡು ರಸ್ತೆಯಲ್ಲೇ ಜೋಡು ಕುದುರೆ ರೇಸ್ ಆಯೋಜಿಸಿದವರ ಮೇಲೆ ಪೊಲೀಸರ ಲಘು ಲಾಠಿ ಚಾರ್ಜ್

ಬೆಳಗಾವಿ: ನಡು ರಸ್ತೆಯಲ್ಲೇ ಜೋಡು ಕುದುರೆ ರೇಸ್ ಆಯೋಜಿಸಿದವರ ಮೇಲೆ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟೂರ ಗ್ರಾಮದಲ್ಲಿ ನಡೆದಿದೆ.   ಗ್ರಾಮದ ಶ್ರೀ ಲಕ್ಷ್ಮಿದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಕುದುರೆ ರೇಸ್​ ಅನ್ನು ಬೆಳಗಾವಿ-ಚಿಕ್ಕೋಡಿ ರಾಜ್ಯ ಹೆದ್ದಾರಿ ತಡೆದು ರೇಸ್ ಆಯೋಜನೆ ಮಾಡಲಾಗಿತ್ತು. ಇದರಿಂದಾಗಿ ಕೆಲ ಗಂಟೆಗಳ ಕಾಲ ರಾಜ್ಯ ಹೆದ್ದಾರಿ ಬಂದ್​ ಆಗಿ ಪ್ರಯಾಣಿಕರು ಕಿರಿಕಿರಿ ಅನುಭವಿಸುವಂತಾಗಿದೆ. ವಿಷಯ ತಿಳಿಯುತ್ತಿದ್ದಂತೆ …

Read More »

ಚಳಿಗಾಲದ ಅಧಿವೇಶನದಲ್ಲಿ (Winter session) ಮತಾಂತರ ನಿಷೇಧ ವಿಧೇಯಕ ಮಂಡನೆಯಾಗುವ ಸಾಧ್ಯತೆ?

ಬೆಳಗಾವಿಯಲ್ಲಿ (Belagavi) ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ (Winter session) ಮತಾಂತರ ನಿಷೇಧ ವಿಧೇಯಕ ಮಂಡನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.   ರಾಜ್ಯದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡುವಂತೆ ಧಾರ್ಮಿಕ ಮುಖಂಡರು ಹಾಗೂ ಮಠಾಧೀಶರು ಒತ್ತಡ ತಂದಿದ್ದು, ಈ ಹಿನ್ನೆಲೆಯಲ್ಲಿ ಮತಾಂತರ ನಿಷೇಧ ವಿಧೇಯಕದ ಕರಡು ಸಿದ್ದಪಡಿಸಲಾಗಿದ್ದು, ಕಾನೂನು ಪರಾಮರ್ಶೆ ನಡೆಸಲಾಗುತ್ತಿದೆ ಎನ್ನಲಾಗಿದೆ.     ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲೇ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ರಾಜ್ಯ ಸರ್ಕಾರ …

Read More »

ಚುನಾವಣೆ ನಡೆದ 25 ಸ್ಥಾನಗಳ ಪೈಕಿ ಬಿಜೆಪಿಗೆ 13ರಿಂದ 15 ಸ್ಥಾನಗಳು ಬರಬಹುದು. ಕಾಂಗ್ರೆಸ್ 10ರಿಂದ 12 ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ. ಇನ್ನು ಜೆಡಿಎಸ್ ಒಂದೆರಡು ಸ್ಥಾನಗಳಿಗೆ ಸೀಮಿತ

ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಶುಕ್ರವಾರ (ಡಿ 10) ಚುನಾವಣೆ ನಡೆದಿದೆ. ಡಿಸೆಂಬರ್ ಹದಿನಾಲ್ಕರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಜೆಡಿಎಸ್ ಆರು ಸ್ಥಾನದಲ್ಲಿ ಸ್ಪರ್ಧಿಸಿದರೆ, ಎರಡು ರಾಷ್ಟ್ರೀಯ ಪಕ್ಷಗಳು ಎಲ್ಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿದೆ. ಬೆಳಗಾವಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಸ್ಪರ್ಧಿಸಿರುವುದರಿಂದ, ಇದರ ಇಂಪ್ಯಾಕ್ಟ್ ಯಾರ ಮೇಲೆ ಬೀಳಲಿದೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಬಸವರಾಜ ಬೊಮ್ಮಾಯಿ ಮತ್ತು ಯಡಿಯೂರಪ್ಪನವರಿಗೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ ಇನ್ನು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ …

Read More »