Breaking News

ಹಸುಗೂಸಿನ ತಾಯನ್ನು ಕಸಿದ ಕರೊನಾ: 5 ತಿಂಗಳ ಬಾಣಂತಿ ಸಾವು

ಶಿವಮೊಗ್ಗ: ಕರೊನಾ ಸೋಂಕಿಗೆ ಒಳಗಾಗಿದ್ದ ಐದು ತಿಂಗಳ ಬಾಣಂತಿಯೊಬ್ಬರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಸುಗೂಸಿನಿಂದ ದೂರವಾಗಿದ್ದು ಬರೋಬ್ಬರಿ ಮೂರು ತಿಂಗಳು ಜೀವಕ್ಕಾಗಿ ಹೋರಾಡಿದ ಭದ್ರಾವತಿ ತಾಲೂಕಿನ ದಿಗ್ಗೇನಹಳ್ಳಿಯ ಸುಪ್ರಿಯಾ(35) ಮೃತರು. ಸುಪ್ರಿಯಾ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದ ಕಾರಣಕ್ಕೆ ಜೂನ್ 19 ರಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಸತತ ಮೂರು ತಿಂಗಳು ಆಸ್ಪತ್ರೆಯಲ್ಲೇ ಇಟ್ಟುಕೊಂಡು ಚಿಕಿತ್ಸೆ ನೀಡಲಾಗಿತ್ತು. ಕೆಲ ದಿನಗಳ ಹಿಂದೆ ಸೋಂಕು ಉಲ್ಬಣಗೊಂಡಾಗ ಅವರನ್ನು ಐಸಿಯುಗೆ …

Read More »

3 ತಿಂಗಳಲ್ಲಿ ಎಲ್ಲರ ಮನೆಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ : ಸಚಿವ ಸುಧಾಕರ್

ಬೆಂಗಳೂರು,ಸೆ.18- ಮುಂದಿನ ಮೂರು ತಿಂಗಳಲ್ಲಿ ಎಲ್ಲರ ಮನೆಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ ತಲುಪಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಒಂದೂವರೆ ಕೋಟಿ ಜನರಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ ನೀಡಲಾಗಿದ್ದು, ಆರೋಗ್ಯ ಇಲಾಖೆ ಮೂರು ತಿಂಗಳಲ್ಲಿ ಪ್ರತಿ ಕುಟುಂಬಕ್ಕೂ ಆರೋಗ್ಯ ಕಾರ್ಡ್ ನೀಡುವ ಗುರಿ ಹಮ್ಮಿಕೊಂಡಿದ್ದು, ಇನ್ನು ಎರಡೂವರೆ ಕೋಟಿ ಕಾರ್ಡ್‍ಗಳನ್ನು ನೀಡಲಾಗುವುದು ಎಂದರು. ಪ್ರಧಾನಿ ನರೇಂದ್ರಮೋದಿ …

Read More »

ಉಸಿರಾಟದ ತೊಂದರೆಯಿಂದ ಚಿಕ್ಕಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಕೆಮ್ಮು, ನೆಗಡಿ, ಕಫ ಮತ್ತು ಜ್ವರ ಬಂದರೆ ನಿಷ್ಕಾಳಜಿ ತೋರದಂತೆ ವೈದ್ಯರ ಸೂಚನೆ

ಹುಬ್ಬಳ್ಳಿ: ಕೊವಿಡ್ ಬಳಿಕ ಮಕ್ಕಳನ್ನು ನ್ಯುಮೋನಿಯಾ ಕಾಡುತ್ತಿದ್ದು, ಒಂದೇ ವಾರದಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 7 ಮಕ್ಕಳು ಸಾವನ್ನಪ್ಪಿದ್ದಾರೆ. ನ್ಯಮೋನಿಯಾದಿಂದ ಬಳಲುತ್ತಿರುವ 163 ಮಕ್ಕಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಿಲಾಗುತ್ತಿದೆ. ಸದ್ಯ ಕಿಮ್ಸ್‌ನ ಮಕ್ಕಳ ವಿಭಾಗದ ಬೆಡ್‌ಗಳು ಸಂಪೂರ್ಣ ಭರ್ತಿಯಾಗಿದ್ದು, 1 ವರ್ಷದ 95 ಮಕ್ಕಳಿಗೆ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ 23 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆಯಿಂದ ಚಿಕ್ಕಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಕೆಮ್ಮು, ನೆಗಡಿ, …

Read More »

ಮಕ್ಕಳಲ್ಲಿ ವೈರಲ್ ಸೋಂಕು: ಸಿಲಿಕಾನ್ ಸಿಟಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಹಾಗೂ ಐಸಿಯೂ ಬೆಡ್ ಭರ್ತಿ

ಬೆಂಗಳೂರು: ಕೊರೊನಾ ಮೂರನೇ ಅಲೆಗೂ ಮುನ್ನವೇ ಸಿಲಿಕಾನ್ ಸಿಟಿಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಹಾಗೂ ಐಸಿಯೂ ಬೆಡ್ಗಳು ಭರ್ತಿಯಾಗಿದ್ದು, ಕಳೆದ ಒಂದು ವಾರದಿಂದ ಮಕ್ಕಳಲ್ಲಿ ವೈರಲ್ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಸರ್ಕಾರಿ ಆಸ್ಪತ್ರೆಯ ಬೆಡ್ಗಳು ಬಹುತೇಕ ಭರ್ತಿಯಾಗಿದೆ. ಕೆಸಿ ಜನರಲ್, ವಿಕ್ಟೋರಿಯಾ, ಬೌರಿಂಗ್ ವಾಣಿ ವಿಲಾಸ್ ಸೇರದಂತೆ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದಾರೆ. ಇನ್ನು ಕೆಸಿ ಜನರಲ್ ಆಸ್ಪತ್ರೆಗೆ ನಿತ್ಯ 140-150 ಮಕ್ಕಳು ದಾಖಲಾಗುತ್ತಿದ್ದು, ಮಕ್ಕಳಿಗಾಗಿ 36 …

Read More »

ದೇಶದಲ್ಲಿ ಅತೀ ಹೆಚ್ಚು ಲಸಿಕೆ ನೀಡುವುದರಲ್ಲಿ ದ್ವಿತೀಯ ಸ್ಥಾನ‌ ಗಳಿಸಿದ ಹೆಮ್ಮೆ ಬೆಳಗಾವಿ ಜಿಲ್ಲೆಗೆ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ:  ಸೆಪ್ಟೆಂಬರ್​ 17 ರಂದು ನಡೆದ ಮೆಗಾ‌ ಲಸಿಕಾ ಮೇಳದಲ್ಲಿ ಇಡೀ ದೇಶದಲ್ಲಿಯೇ ಬೆಳಗಾವಿ ಜಿಲ್ಲೆಯು ಎರಡನೇ ಸ್ಥಾನ ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು 4,09,977 ಲಸಿಕೆ ನೀಡುವ ಮೂಲಕ ಪ್ರಥಮ ಸ್ಥಾನ ಪಡೆದಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸೆಪ್ಟೆಂಬರ್​ 17 ರಂದು‌‌ ಒಂದೇ ದಿನದಲ್ಲಿ 2,57,604 ಲಸಿಕೆ ನೀಡುವ ಮೂಲಕ ದ್ವಿತೀಯ ಸ್ಥಾನದಲ್ಲಿದೆ. ಬೆಳಗಾವಿ ಜಿಲ್ಲೆಯು …

Read More »

ನಾವು ಸತ್ರೂ ಲಸಿಕೆ ಹಾಕಿಸಿಕೊಳ್ಳಲ್ಲ; ವಿಡಿಯೋ ಫುಲ್ ವೈರಲ್

ಕೊಪ್ಪಳ: ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಇರುವ ಅಸ್ತ್ರವೆಂದರೆ ಅದು ಕೊರೊನಾ ಲಸಿಕೆ. ಆದರೆ ಕೊರೊನಾ ಲಸಿಕೆ ಪಡೆಯಲು ವ್ಯಕ್ತಿಯೊಬ್ಬರು ಹಿಂದೇಟು ಹಾಕಿರುವ ಘಟನೆ ಕೊಪ್ಪಳ ತಾಲೂಕಿನ ಇರಕಲ್ ಗಡ ಗ್ರಾಮದಲ್ಲಿ ನಡೆದಿದೆ. ಲಸಿಕೆ ಪಡೆಯುವುದರಿಂದ ಏನು ಪ್ರಯೋಜನ ಅಂತ ವ್ಯಕ್ತಿ ಪ್ರಶ್ನೆ ಮಾಡಿದ್ದಾರೆ. ಅಧಿಕಾರಿಗಳು ಎಷ್ಟೇ ಮನವೊಲಿಸಿದರೂ ಲಸಿಕೆ ಪಡೆಯಲು ವ್ಯಕ್ತಿ ನಿರಾಕರಣೆ ಮಾಡಿದ್ದು, ಗಲಾಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ನಾವು ಹೀಗೆ ಸಾಯಲಿ, ಲಸಿಕೆ ಹಾಕಿಸಿಕೊಳ್ಳುವುದಿಲ್ಲ …

Read More »

ಇಲ್ಲಿನ ಎಲ್ಲ ವಿದ್ಯಾರ್ಥಿಗಳು ದಿನನಿತ್ಯ ಎಲ್ಲಾ ವಿದ್ಯಾರ್ಥಿಗಳು 18 ಕಿ.ಮೀ. ದೂರ ಪ್ರಯಾಣ ಮಾಡಿದರಷ್ಟೇ ಶಾಲಾ ಕಾಲೇಜು ಗಳಿಗೆ ತಲುಪಲು ಸಾಧ್ಯ.

ಬಸ್ ಸೌಲಭ್ಯ ವಂಚಿತ ವಿದ್ಯಾರ್ಥಿಗಳು *ಇಲ್ಲಿನ ಎಲ್ಲ ವಿದ್ಯಾರ್ಥಿಗಳು ದ ಮೂಡಲಗಿ ತಾಲೂಕಿನ ಪಿಜಿ ಹುಣಶಾಳ ಗ್ರಾಮದಲ್ಲಿ: ಸಾರಿಗೆ ಸಂಸ್ಥೆ ಬಸ್‌ ಸಕಾಲಕ್ಕೆ ಆಗಮಿಸದೇ ಇರುವುದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗೆ ಸಮಯಕ್ಕೆ ಸರಿಯಾಗಿ ತಲುಪಲಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕೋವಿಡ್‌ ಮಾರ್ಗಸೂಚಿ ತೆರವಾದ ನಂತರ ಗ್ರಾಮೀಣ ಪ್ರದೇಶದಲ್ಲಿ ಬಸ್‌ಗಳ ಸೇವೆ ಅಪರೂಪವಾಗಿದೆ. ಮುಖ್ಯ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಕಡೆಯಲ್ಲೂ ಪೂರ್ಣ ಪ್ರಮಾಣದಲ್ಲಿ ಬಸ್‌ ಸೇವೆ ಆರಂಭಗೊಂಡಿಲ್ಲ. ಇದರಿಂದ …

Read More »

2 ವರ್ಷದ ಕಂದಮ್ಮನೊಂದಿಗೆ ಮನೆಬಿಟ್ಟಿದ್ದ ತಾಯಿ.. ಇಬ್ಬರ ಮೃತದೇಹ ಬಾವಿಯಲ್ಲಿ ಪತ್ತೆ

ಚಿಕ್ಕೋಡಿ: ತಾಯಿ ಹಾಗೂ ಮಗುವಿನ ಮೃತ ದೇಹ ತೆರೆದ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ದೇವಾಪೂರಹಟ್ಟಿ ಗ್ರಾಮದಲ್ಲಿ ನಡೆದಿದೆ. ದೇವಾಪೂರಹಟ್ಟಿ ಗ್ರಾಮದ ರುಕ್ಮವ್ವ ಹಳಿಂಗ (38) ಹಾಗೂ ಮಗಳು ಅನ್ವಿತಾ ಹಳಿಂಗ (2) ಸಾವನ್ನಪ್ಪಿದರ ದುರ್ದೈವಿಗಳಾಗಿದ್ದು, ದೇವನಕಟ್ಟಿ ಗ್ರಾಮದ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಗುರುವಾರ ಸಾಯಂಕಾಲ ಮನೆಯಿಂದ ಮಹಿಳೆ ರುಕ್ಮವ್ವ ತನ್ನ ಎರಡು ವರ್ಷದ ಮಗಳೊಂದಿಗೆ ಹೊರ ಬಂದಿದ್ದರು ಎನ್ನಲಾಗಿದೆ. ಆದರೆ ತಾಯಿ, ಮಗುವಿನ ಸಾವಿನ …

Read More »

ವಿಷ್ಣುವರ್ಧನ್ ಜನ್ಮದಿನ: ವಿಷ್ಣು ದಾದಾಗೆ​ ಸೆಲೆಬ್ರಿಟಿಗಳು ವಿಶ್​ ಮಾಡ್ತಿರೋದು ಹೀಗೆ..

ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ವಿಷ್ಣುವರ್ಧನ್​ ಜೊತೆ ತಾವಿರುವ ಫೋಟೋಗಳನ್ನು ಶೇರ್​ ಮಾಡಿಕೊಂಡು ಸಾಹಸ ಸಿಂಹನಿಗೆ ವಿಶ್​ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್​, ರಮೇಶ್​ ಅರವಿಂದ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಂದ ಸೋಶಿಯಲ್​ ಮೀಡಿಯಾದಲ್ಲಿ ಶುಭಾಶಯಗಳು ಹರಿದುಬರುತ್ತಿವೆ. ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದವರು ನಟ ವಿಷ್ಣುವರ್ಧನ್​. ಅಭಿಮಾನಿಗಳ ಪಾಲಿನ ‘ಸಾಹಸ ಸಿಂಹ’ನಾಗಿ ಅವರು ತೆರೆಮೇಲೆ ಮಿಂಚಿದರು. 200 ಸಿನಿಮಾಗಳಲ್ಲಿ ನಟಿಸಿ ಬಣ್ಣದ ಲೋಕದಲ್ಲಿ ಅಮರರಾದರು. ಇಂದು (ಸೆ.18) ವಿಷ್ಣುವರ್ಧನ್​ ಜನ್ಮದಿನ. ಅವರು ಭೌತಿಕವಾಗಿ ಬದುಕಿದಿದ್ದರೆ …

Read More »

ದರ್ಶನ್ ಮಾಲೀಕತ್ವದ ಫಾರ್ಮ್ ಹೌಸ್‌ನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ತಡವಾಗಿ ಬೆಳಕಿಗೆ

ಮೈಸೂರು: ನಟ ದರ್ಶನ್ ಮಾಲೀಕತ್ವದ ಫಾರ್ಮ್ ಹೌಸ್‌ನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಿ. ನರಸೀಪುರ ರಸ್ತೆಯಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಕೆಲಸ‌ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಕುಟುಂಬವೊಂದರ ಅಪ್ರಾಪ್ತೆ ಮೇಲೆ ಸೋಮವಾರ ರಾತ್ರಿ ಅದೇ ತೋಟದಲ್ಲಿ ಕುದುರೆಗೆ ಲಾಳ ಹೊಡೆಯುವ ಕೆಲಸ ಮಾಡಿಕೊಂಡಿದ್ದ ಕಾರ್ಮಿಕ ಅತ್ಯಾಚಾರ ಎಸಗಿದ್ದಾನೆ. ಘಟನೆ ಬಗ್ಗೆ ಬಾಲಕಿ ಪೋಷಕರಿಗೆ ಮೂರು ದಿನಗಳ ಬಳಿಕ ತಿಳಿಸಿದ್ದು, ಪೋಷಕರಿಗೆ ವಿಷಯ ತಿಳಿದ ಕೂಡಲೇ ಸ್ಥಳೀಯ …

Read More »