Breaking News

ರಾಜ್ಯದಲ್ಲಿ ನಾಳೆಯಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೂರ್ಣ ಶಾಲೆಗಳು ಆರಂಭ

ಬೆಂಗಳೂರು : ರಾಜ್ಯದಲ್ಲಿ ನವೆಂಬರ್ 2 ರಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರಾಥಮಿಕ ಶಾಲೆಗಳು (Primary Schools) ಪೂರ್ಣ ಅವಧಿ ತರಗತಿಗಳು ಆರಂಭವಾಗಲಿವೆ. ರಾಜ್ಯಯ ಸರ್ಕಾರವು ಅ.25 ರಿಂದ 1 ರಿಂದ 5 ನೇ ತರಗತಿಗಳನ್ನು ಆರಂಭಿಸಿತ್ತು. ಆದರೆ ಅರ್ಧ ದಿನ ಮಾತ್ರ ತರಗತಿಗಳು ನಡೆಸಲು ಸೂಚಿಸಿತ್ತು. ನವೆಂಬರ್ 2 ರ ಮಂಗಳವಾರದಿಂದ ಪಾರ್ಥಮಿಕ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿವೆ. ಇದಕ್ಕೆ ಸಕಲ ಸಿದ್ಧತೆಯನ್ನು ಶಿಕ್ಷಣ ಇಲಾಖೆ ಮಾಡಿಕೊಂಡಿದೆ. ರಾಜ್ಯದಲ್ಲಿ …

Read More »

ಕಾಡಿನಲ್ಲಿ ಅಕ್ರಮವಾಗಿ ಮಾಂಸಕ್ಕಾಗಿ ದನವನ್ನು ಕಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶಿರಸಿ ಗ್ರಾಮೀಣ ಪೊಲೀಸ್ ಠಾಣಾವ್ಯಾಪ್ತಿಯ ಗೌಡಳ್ಳಿ ಗ್ರಾಮದ ಉರ್ದು ಶಾಲೆಯ ಹಿಂಭಾಗದ ಕಾಡಿನಲ್ಲಿ ಅಕ್ರಮವಾಗಿ ಮಾಂಸಕ್ಕಾಗಿ ದನವನ್ನು ಕಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಮುತ್ತಲಿಬ್ ತಂದೆ ಅಬ್ದುಲ್ ರೆಹಮಾನ್ ಸಾಕಿನ್ ಗೌಡಳ್ಳಿ ಈತನನ್ನು ಭಾನುವಾರ ಬೆಳಿಗ್ಗೆ ಬಂಧಿಸಿದ್ದು , ಈತನು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಅಪರಾಧ (ಕ್ರಮಾಂಕ 105/2021, ಕಲಂ 4,12(1) ಕರ್ನಾಟಕ ಜಾನುವಾರ ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧ್ಯಾದೇಶ 2020, ಕಲಂ 149 ಐಪಿಸಿ) …

Read More »

ಎಲ್ ಪಿಜಿ ಸಿಲಿಂಡರ್ ದರ 265 ರೂ.ಏರಿಕೆ

ದೀಪಾವಳಿ ಹಬ್ಬದ ಸಂಭ್ರಮದ ಬೆನ್ನಲ್ಲೇ ದೇಶದ ಜನರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಎಲ್ ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಏರಿಕೆ ಮಾಡಿದೆ. 19 ಕೆಜಿಯ ದೀಪಾವಳಿ ಹಬ್ಬದ ಸಂಭ್ರಮದ ಬೆನ್ನಲ್ಲೇ ದೇಶದ ಜನರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಎಲ್ ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಏರಿಕೆ ಮಾಡಿದೆ. 19 ಕೆಜಿಯ ಕಮರ್ಷಿಯಲ್ ಎಲ್ ಪಿಜಿ ಸಿಲಿಂಡರ್ ಗಳ ಬೆಲೆ ಬರೋಬ್ಬರಿ 265 ರೂಪಾಯಿ ಹೆಚ್ಚಳವಾಗಿದೆ. ಆದರೆ 14 …

Read More »

ಎಲ್ಲ ವರ್ಗದ ಜನರ ಕಲ್ಯಾಣಕ್ಕೆ ಸರಕಾರ ಬದ್ಧ : ಸಚಿವ ಗೋವಿಂದ ಕಾರಜೋಳ 66 ನೇ ಕರ್ನಾಟಕ ರಾಜ್ಯೋತ್ಸವ : ಕನ್ನಡ ಹೋರಾಟಗಾರರು, ಪತ್ರಕರ್ತರಿಗೆ ಸನ್ಮಾನ

ಬೆಳಗಾವಿ : ಕೋವಿಡ್ ಹಿನ್ನೆಲೆಯಲ್ಲಿ ೬೬ ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.   ಜಿಲ್ಲಾಡಳಿತ ವತಿಯಿಂದ ನಗರದ ಸಿಪಿಎಡ್ ಮೈದಾನದಲ್ಲಿ ಸೋಮವಾರ (ನ.೧) ರಾಜ್ಯೋತ್ಸವ ಸಮಾರಂಭ ಆಯೋಜಿಸಲಾಗಿತ್ತು.   ಜಿಲ್ಲಾ ಉಸ್ತುವಾರಿ ಸಚಿವರೂ ಅಗಿರುವ ಜಲಸಂಪನ್ಮೂಲ (ಬೃಹತ್ ಮತ್ತು ಮಧ್ಯಮ) ಇಲಾಖೆಯ ಸಚಿವರಾದ ಗೋವಿಂದ ಕಾರಜೋಳ ಅವರು‌ ರಾಷ್ಟ್ರಧ್ವಜಾರೊಃಣ ನೆರವೇರಿಸಿದರು.   ತಾಯಿ ಭುವನೇಶ್ವರಿದೇವಿಗೆ ಪೂಜೆ ಸಲ್ಲಿಸಿ ಕವಾಯತು ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು. …

Read More »

ಪುನೀತ್ ಕಣ್ಣುಗಳನ್ನು ಇಬ್ಬರಿಗೆ ಅಳವಡಿಸುವ ಮೂಲಕ ಬೆಂಗಳೂರಿನ ನಾರಾಯಾಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಪುನೀತ್ ರಾಜ್ ಕುಮಾರ್ ನೇತ್ರದಾನದ ಮೂಲಕ ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ಕಣ್ಣುಗಳನ್ನು ಇಬ್ಬರಿಗೆ ಅಳವಡಿಸುವ ಮೂಲಕ ಬೆಂಗಳೂರಿನ ನಾರಾಯಾಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ನಾರಾಯಣ ನೇತ್ರಾಲಯದ ವೈದ್ಯರು ನಿನ್ನೆ ಪುನೀತ್ ರಾಜ್ ಕುಮಾರ್ ಅವರ ಒಂದು ಕಣ್ಣನ್ನು ಒಬ್ಬರಿಗೆ ಅಳವಡಿಸಿದ್ದರು, ಇಂದು ಮತ್ತೊಬ್ಬರಿಗೆ ಒಂದು ಕಣ್ಣನ್ನು ಅಳವಡಿಸುವ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Read More »

ಇಂದಿರಾ ಗಾಂಧಿ ಪುಣ್ಯ ತಿಥಿ ಶ್ರದ್ಧಾಂಜಲಿ ಸಲ್ಲಿಸಿದ ಕಾಂಗ್ರೆಸ್‌ ನಾಯಕರು

ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರ 37ನೇ ಪುಣ್ಯತಿಥಿಯ ಅಂಗವಾಗಿ ಕಾಂಗ್ರೆಸ್‌ ನಾಯಕರು ಭಾನುವಾರ ಶ್ರದ್ಧಾಂಜಲಿ ಸಲ್ಲಿಸಿದೆ.ಇಂದಿರಾ ಗಾಂಧಿ ಅವರ ಸ್ಮಾರಕ ‘ಶಕ್ತಿ ಸ್ಥಳ’ ದಲ್ಲಿ ಪುಷ್ಪನಮನ ಸಲ್ಲಿಸಲಾಯಿತು.   ‘ಕೊನೆಯ ಗಳಿಗೆಯವರೆಗೂ ನನ್ನ ಅಜ್ಜಿ ದೇಶಕ್ಕೆ ನಿರ್ಭೀತಿಯಿಂದ ಸೇವೆ ಸಲ್ಲಿಸಿದ್ದಾರೆ. ಅವರ ಜೀವನವು ನಮಗೆ ಸ್ಪೂರ್ತಿಯ ಸೆಲೆಯಾಗಿದೆ’ ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದಾರೆ. ‘ಇಂದಿರಾ ಗಾಂಧಿ ಅವರು ಸಾಮರ್ಥ್ಯವನ್ನು ಪ್ರತಿನಿಧಿಸಿದರು, ತ್ಯಾಗವನ್ನು ಪ್ರತಿಫಲಿಸಿದರು, ಸೇವೆಯನ್ನು …

Read More »

ಗೋವಾದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ: ಸತೀಶ ಜಾರಕಿಹೊಳಿ ಸೇರಿ ಹಲವರು ಭಾಗಿ

ಗೋವಾದ ಜಾಗೊರ್‍ನಲ್ಲಿ ಇಂದು ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ರಾಹುಲ್ ಗಾಂಧಿ ಅವರು ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು. ಗೋವಾ ಕಾಂಗ್ರೆಸ್ ಉಸ್ತುವಾರಿಯಾದ ಮಾಜಿ ಸಚಿವ ದಿನೇಶ್ ಗುಂಡೂರಾವ್, ಗೋವಾ ಚುನಾವಣಾ ಉಸ್ತುವಾರಿ ಪಿ.ಚಿದಂಬರಂ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ …

Read More »

ಪವರ್ ಸ್ಟಾರ್ ಮಾರ್ಗದಲ್ಲೇ ಗುಮ್ಮಟನಗರಿ ಯುವಕರಿಂದ ನೇತ್ರದಾನ ವಾಗ್ದಾನ

  ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ನೆರವೇರಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ಮುಂಜಾನೆ 7.30ಕ್ಕೆ ಅಂತ್ಯ ಸಂಸ್ಕಾರ ಮಾಡಲಾಗಿದೆ. ರಾಜ್​ಕುಮಾರ್​ ಕುಟುಂಬದವರು ಈಡೀಗ ಸಂಪ್ರದಾಯದಂತೆ ಕಾರ್ಯ ನೆರವೇರಿಸಿದ್ದಾರೆ. ತಂದೆ ಡಾ. ರಾಜ್​ಕುಮಾರ್​, ತಾಯಿ ಪಾರ್ವತಮ್ಮ ಸಮಾಧಿಯ ಪಕ್ಕದಲ್ಲೇ ಪುನೀತ್​ ಪಾರ್ಥಿವ ಶರೀರವನ್ನು ಮಣ್ಣು ಮಾಡಲಾಗಿದೆ. ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಪುನೀತ ರಾಜಕುಮಾರ ತಮ್ಮ ಸಾವಿನ ಬಳಿಕ ಅಮರರಾಗಲಿದ್ದಾರೆ. ಪುನೀತ ತಮ್ಮ …

Read More »

ಹಿಂಬದಿಯಿಂದ ಟ್ಯಾಂಕರ್ ಕಬ್ಬಿನ ಟ್ರ್ಯಾಕ್ಟರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿ

ಹಿಂಬದಿಯಿಂದ ಟ್ಯಾಂಕರ್ ಕಬ್ಬಿನ ಟ್ರ್ಯಾಕ್ಟರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-4ರ ಹಲಗಾ ಬಳಿ ನಡೆದಿದೆ. ಹೌದು ಹಲಗಾ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಮಂಜುನಾಥ್ ರೈಸ್ ಮಿಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ಹಿಂಬದಿಯಿಂದ ಕಬ್ಬಿನ ಟ್ರ್ಯಾಕ್ಟರ್‍ಗೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಇದರಿಂದ ಟ್ರ್ಯಾಕ್ಟರ್ ಚಾಲನಿಗೆ ಗಾಯವಾಗಿದ್ದು. ಯಾವುದೇ ರೀತಿ ಪ್ರಾಣಹಾನಿ ಸಂಭವಿಸಿಲ್ಲ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More »

ಪುನೀತ್ ಹಠಾತ್ ನಿಧನದಿಂದ ರಾಜ್​ಕುಮಾರ್ ಹೆಸರಿನ ಹೋಟೆಲ್ ನಡೆಸುತ್ತಿದ್ದ ಅಭಿಮಾನಿ ಸಾವು!

ಮಂಡ್ಯ: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿಕೆ ಕೋಟ್ಯಾಂತರ ಅಭಿಮಾನಿಗಳಿಗೆ ನೋವು ತರಿಸಿದೆ. ಕನ್ನಡ ಚಿತ್ರರಂಗಕ್ಕೆ ಅಪ್ಪು ಮರಣ ತುಂಬಲಾರದ ನಷ್ಟ. ಇನ್ನು ಪುನೀತ್ ಹಠಾತ್ ನಿಧನದಿಂದ ಕೆಲ ಅಭಿಮಾನಿಗಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಂಡ್ಯದಲ್ಲಿ ಇದೀಗ ಮತ್ತೊಬ್ಬ ಅಭಿಮಾನಿ ಪುನೀತ್ ನಿಧನದ ಆಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದ ಕೆಎಂ ರಾಜೇಶ್ (50) ಎಂಬುವವರು ಸಾವನ್ನಪ್ಪಿದ್ದಾರೆ. ಅಭಿಮಾನಿ ರಾಜೇಶ್ ಪುನೀತ್ ನಿಧನದ ಬಳಿಕ ಸರಿಯಾಗಿ ಊಟ ಸೇವಿಸದೇ …

Read More »