Breaking News

ಶಾಲಾ ಮಕ್ಕಳು ನಿರ್ಮಿಸಿರುವ ಶಿವಾಜಿ ಮಹಾರಾಜರ ಕೋಟೆ

ಬೆಳಗಾವಿಯಟಳಕವಾಡಿಯ ಎಸ್‍ಕೆಇ ಸೊಸೈಟಿಯ ಹೈಸ್ಕೂಲ್ ವಿದ್ಯಾರ್ಥಿಗಳು ಅಖಂಡ ಹಿಂದೂ ಸಾಮ್ರಾಟ್ ಶಿವಾಜಿ ಮಹಾರಾಜರ ಜೀವನ ಹಾಗೂ ವೈಭವಯುತ ಆಡಳಿತವನ್ನು ಜನತೆಗೆ ತಿಳಿಸುವ ದೃಷ್ಟಿಯಿಂದ ಈ ಕಿಲ್ಲಾ ಮಾದರಿಗಳನ್ನು ತಮ್ಮದೇ ಆದ ಪರಿಕಲ್ಪನೆಯಲ್ಲಿ ನಿರ್ಮಾಣ ಮಾಡಿದ್ದಾರೆ. ವಿದ್ಯಾರ್ಥಿಗಳ ಪರಿಕಲ್ಪನೆಯಲ್ಲಿ ಮೂಡಿಬಂದ ಈ ಕಿಲ್ಲಾ ಮಾದರಿಗಳ ಉದ್ಘಾಟನೆಯನ್ನು ಲೋಕಮಾನ್ಯ ಸೊಸೈಟಿ ಹಾಗೂ ಭಗವೇವಾದಳ್ ಸಂಸ್ಥೆಯ ಪಧಾಧಿಕಾರಿಗಳು ನೆರವೇರಿಸಿ ವಿದ್ಯಾರ್ಥಿಗಳ ಕಾರ್ಯವನ್ನು ಪ್ರಶಂಶಿಸಿದರು. ಒಬ್ಬರಿಗಿಂತ ಒಬ್ಬರು ಶೂರ ಸೈನಿಕರು, ಒಂದಕ್ಕಿಂದ ಒಂದು ಅಭೇದ್ಯ ಕೋಟೆಗಳು, …

Read More »

ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕ್ರಮ

ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಹೇಳಿದರು. ಮಹಾನಗರ ಪಾಲಿಕೆ ಸಭಾಂಗಣದಲ್ಲಿಂದು ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಶಾಫಿಂಗ್ ಮಾಲ್, ಜಿಮ್, ಬಾರ್ ಆಂಡ್ ರೆಸ್ಟೋರೆಂಟ್, ಮಲ್ಟಿಪ್ಲೆಕ್ಸ್, ಸಿನಿಮಾ ಮಂದಿರಗಳ ಮಾಲೀಕರು ಹಾಗೂ ಧಾರ್ಮಿಕ ಮುಖಂಡರ ಜೊತೆ ಪ್ರತ್ಯೇಕ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಎಲ್ಲ ಸಮುದಾಯದ ಮುಖಂಡರ ಜೊತೆ ಕೋವಿಡ್ ಲಸಿಕೆ …

Read More »

ಪ್ರಥಮ ಪ್ರಾಶಸ್ತ್ಯದಿಂದ ಮತಗಳೊಂದಿಗೆ ಮಹಾಂತೇಶ ಕವಟಗಿಮಠ ಜಯಭೇರಿ: ಶ್ರೀಮಂತ ಪಾಟೀಲ್

ಭಾರತೀಯ ಜನತಾ ಪಕ್ಷದ ಪರಿಷತ್ ಅಭ್ಯರ್ಥಿಯಾದ ಮಹಾಂತೇಶ್ ಕವಟಗಿಮಠ ಪ್ರಥಮ ಮತಗಳಿಂದ ಜಯಭೇರಿ ಸಾಧಿಸಿಲಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಶ್ರೀಮಂತ ಪಾಟೀಲ್, ಬಿಜೆಪಿ ಪಕ್ಷದ ರಾಜ್ಯದ ಮುಖಂಡರು ಮಹಾಂತೇಶ್ ಕವಟಗಿಮಠ ಇವರಿಗೆ ಟಿಕೆಟ್ ನೀಡಿದ್ದು, ಪಕ್ಷದ ವತಿಯಿಂದ ಅವರ ಪರ ಮತಚಲಾಯಿಸಿ. ಪ್ರಥಮ ಪ್ರಾಶಸ್ತ್ಯದ ಮತಪಡೆದು ಆಯ್ಕೆಯಾಗಲಿದ್ದಾರೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಇದ್ದರೂ, ಮತ್ತೊಬ್ಬ …

Read More »

ಕೋವಿಡ್ ‘ರಿಪೋರ್ಟ್’ ಕೇಳಿದ ‘ಪೊಲೀಸ್’ ಮೇಲೆಯೇ ಹಲ್ಲೇ ಮಾಡಿದ ‘ಡಾಕ್ಟರ್’..!

ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೋಗನೊಳ್ಳಿ ಚಕ್ ಪೋಸ್ಟ್ ನಲ್ಲಿ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ ಹಿನ್ನಲೆ ವಾಹನ ತಡೆದು ತಪಾಸನೆಗೆ ಮುಂದಾದ ಪೊಲೀಸರ ಮೇಲೆ ಪ್ರಯಾಣಿಕನೋರ್ವ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಪೊಲೀಸ್ ರ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಯನ್ನು ಕೊಲ್ಲಾಪುರ ಮೂಲದ ಡಾ. ಸ್ವಾಮಿ ನಂದಿಮಠ ಎಂದು ತಿಳಿದು ಬಂದಿದೆ. ತಪಾಸಣೆ ನಡೆಯುತ್ತಿದೆ ವಾಹನ ಪಕ್ಕಕ್ಕೆ ಹಾಕಿ ಎಂದಿದ್ದಕ್ಕೆ ಪೊಲೀಸ್ ಸಿಬ್ಬಂದಿಗೆ ಅವಾಚ್ಚವಾಗಿ ಬೈದಿರುವ ಕಿರೀಕ್ …

Read More »

ಅತೀ ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ಮಹತ್ವದ ಬದಲಾವಣೆ ಉಂಟಾಗಲಿದೆ:ಠಾಕ್ರೆ ಸರ್ಕಾರದ ಪತನದ ಭವಿಷ್ಯ ನುಡಿದಿದ್ದಾರೆ.?

ಅತೀ ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ಮಹತ್ವದ ಬದಲಾವಣೆ ಉಂಟಾಗಲಿದೆ ಎಂದು ಹೇಳುವ ಮೂಲಕ ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ನಾರಾಯಣ ರಾಣೆ ಠಾಕ್ರೆ ಸರ್ಕಾರದ ಪತನದ ಭವಿಷ್ಯ ನುಡಿದಿದ್ದಾರೆ. ರಾಜಸ್ಥಾನದಲ್ಲಿ 2 ದಿನಗಳ ಪ್ರವಾಸದಲ್ಲಿರುವ ನಾರಾಯಣ ಠಾಕ್ರೆ, ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ಬದಲಾವಣೆಯನ್ನು ಕಾಣಲಿದ್ದೀರಿ. ಮಾರ್ಚ್​ ತಿಂಗಳಲ್ಲಿ ಈ ಬದಲಾವಣೆ ಕಾಣಲಿದೆ. ಸರ್ಕಾರವನ್ನು ರಚಿಸುವುದು ಹಾಗೂ ಸರ್ಕಾರವನ್ನು ಪತನಗೊಳಿಸುವುದು, ಕೆಲವೊಂದು ವಿಚಾರಗಳನ್ನು ರಹಸ್ಯವಾಗಿಯೇ ಇಡಬೇಕು ಎಂದು ಹೇಳಿದ್ದಾರೆ. ಉದ್ಧವ್ …

Read More »

ಆಸ್ಪತ್ರೆಯಿಂದಲೇ ‘ಬಿಗ್ ​ಬಾಸ್’​ ಕಾರ್ಯಕ್ರಮ ನಡೆಸಿಕೊಟ್ಟ ಕಮಲ್​ಹಾಸನ್.​..! ರಮ್ಯಾ ಕೃಷ್ಣನ್​ ಸಾಥ್​​

ಕೋವಿಡ್​ 19 ಸೋಂಕಿನಿಂದಾಗಿ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಮಲ್​ ಹಾಸನ್​ ಅನುಪಸ್ಥಿತಿಯಿಂದಾಗಿ ತಮಿಳಿನ ಪ್ರಸಿದ್ಧ ರಿಯಾಲಿಟಿ ಶೋ ಬಿಗ್​ ಬಾಸ್​​​ ಸೀಸನ್​​ 5ರ ನಿರೂಪಣೆಯನ್ನು ರಮ್ಯಾ ಕೃಷ್ಣ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದ ಆಯೋಜಕರು ಮುಂಬರುವ ಎಪಿಸೋಡ್​ನ ಪ್ರೋಮೋವನ್ನು ರಿಲೀಸ್​ ಮಾಡಿದ್ದು ಇದರಲ್ಲಿ ಕಮಲ್​ ಹಾಸನ್​​​ ಆಸ್ಪತ್ರೆಯಿಂದಲೇ ಮಾತನಾಡಿದ್ದಾರೆ. ನಟಿ ರಮ್ಯಾ ಕೃಷ್ಣನ್​​ರನ್ನು ಗೆಳತಿ ಎಂದು ಪರಿಚಯಿಸಿದ ಕಮಲ್​ ಹಾಸನ್​ ಕಾರ್ಯಕ್ರಮ ನಡೆಸಲು ತಮಗೆ ನೆರವಾಗುವಂತೆ ಕೇಳಿಕೊಂಡಿದ್ದಾರೆ. ರಮ್ಯಾ ಕೃಷ್ಣನ್​​ರನ್ನು …

Read More »

ಅಪರಿಚಿತ ವ್ಯಕ್ತಿಯ ಮೇಲೆ ವಾಹನಗಳು ಹರಿದ ಪರಿಣಾಮ ರಸ್ತೆಯಲ್ಲಿ ಕಿಲೋಮೀಟರ್ ಉದ್ದಕ್ಕೆ ಮೃತ ದೇಹದ ತುಂಡುಗಳು ಚೆಲ್ಲಾಪಿಲ್ಲಿಯಾಗಿವೆ. ಗುರುತು ಪತ್ತೆಯಾಗದಂತೆ ವ್ಯಕ್ತಿಯ ಶವ ನುಜ್ಜುಗುಜ್ಜಾಗಿದೆ.

ಬೆಂಗಳೂರು: ಅಪರಿಚಿತ ವ್ಯಕ್ತಿಯ ಮೇಲೆ ಹಲವು ವಾಹನಗಳು ಹರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ವಾಹನಗಳು ಹರಿದ ಹಿನ್ನೆಲೆ ವ್ಯಕ್ತಿ ದೇಹ ತುಂಡು ತುಂಡಾಗಿದೆ. ದೇಹದ ತುಂಡುಗಳು ರಸ್ತೆಗೆ ಅಂಟಿಕೊಂಡಿವೆ. ರಸ್ತೆಗೆ ಅಂಟಿಕೊಂಡ ಮಾಂಸದ ಚೂರುಗಳು ಸಂಗ್ರಹಿಸಿ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಅಪರಿಚಿತ ವ್ಯಕ್ತಿಯ ಮೇಲೆ ವಾಹನಗಳು ಹರಿದ ಪರಿಣಾಮ ರಸ್ತೆಯಲ್ಲಿ ಕಿಲೋಮೀಟರ್ ಉದ್ದಕ್ಕೆ ಮೃತ ದೇಹದ …

Read More »

ದಿಢೀರ್ ಕುಸಿತ ಕಂಡ ಟೊಮೇಟೊ ದರ!

ಕೋಲಾರ : ಟೊಮೇಟೊ ದರ ಇದೀಗ ಕುಸಿತ ಕಂಡಿದೆ. ಮೂರ್ನಾಲ್ಕು ದಿನಗಳಿಂದ ಕೋಲಾರ ಮಾರುಕಟ್ಟೆಯಲ್ಲಿ ದರ ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದೆ. ದರ ಏರಿಕೆಯಾಗುತ್ತಿದ್ದಂತೆ ಮಾರುಕಟ್ಟೆಗೆ ಟೊಮೇಟೊ ಆವಕ ಹೆಚ್ಚಾಗಿದೆ. ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಸ್ಥಳೀಯ ರೈತರು ಹೊಲದಲ್ಲಿದ್ದ ಟೊಮೇಟೊ ಕೊಯ್ಲು ಮಾಡಿ ಮಾರುಕಟ್ಟೆಗೆ ತರಲಾರಂಭಿಸಿದ್ದಾರೆ. ಇದರ ಜೊತೆಗೆ ನೆರೆಯ ಆಂಧ್ರಪ್ರದೇಶ, ತಮಿಳುನಾಡು ಮತ್ತು ನಾಸಿಕ್ನಿಂದಲೂ ರಾಜ್ಯದ ಮಾರುಕಟ್ಟೆಗೆ ಆವಕವಾಗುತ್ತಿದೆ. ಇದರಿಂದಾಗಿ ದರ ಕುಸಿತವಾಗುತ್ತಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಟೊಮೇಟೊ ಬೆಳೆಗೆ ತೀವ್ರ ಹಾನಿಯಾಗಿತ್ತು. …

Read More »

ಬೆಳ್ಳುಳ್ಳಿ ದರದಲ್ಲಿ ದಿಢೀರ್​ ಕುಸಿತ ಕಂಡಿದ್ದು, ಬೆಳೆಗಾರರು ಸಂಕಷ್ಟಕ್ಕೆ

ಹಾವೇರಿ: ಬೆಳ್ಳುಳ್ಳಿ ದರದಲ್ಲಿ ದಿಢೀರ್​ ಕುಸಿತ ಕಂಡಿದ್ದು, ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಣೆಬೆನ್ನೂರಿನ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಭಾನುವಾರ ಕುಸಿದಿದೆ. ಕೆಲ ದಿನಗಳ ಹಿಂದೆ 1 ಕ್ವಿಂಟಲ್​ ಬೆಳ್ಳುಳ್ಳಿ ದರ 4 ಸಾವಿರದಿಂದ 10 ಸಾವಿರ ರೂಪಾಯಿ ಇತ್ತು. ಭಾನುವಾರ 1 ಕ್ವಿಂಟಲ್​ ಬೆಳ್ಳುಳ್ಳಿ ಒಂದೂವರೆ ಸಾವಿರದಿಂದ 4 ಸಾವಿರ ರೂಪಾಯಿಗೆ ಮಾರಾಟ ಆಗಿದ್ದು, ರೈತರು ನಷ್ಟ ಅನುಭವಿಸಿದ್ದಾರೆ. ಧಾರಾಕಾರವಾಗಿ ಸುರಿದ ಮಳೆ, ಮೋಡಮುಸುಕಿದ ವಾತಾವರಣ ಇರುವ ಕಾರಣ ಬೆಳ್ಳುಳ್ಳಿಯನ್ನು ಒಣಗಿಸಲು …

Read More »

ರಾಜ್ಯದಲ್ಲಿ ಹೆಚ್ಚಾದ ಕರೊನಾ ಆತಂಕ; ಸಿಎಂ ಸಭೆಯಲ್ಲಿ ಹೊರಬಿತ್ತು ಹೊಸ ಗೈಡ್​​ಲೈನ್ಸ್​: ಇಲ್ಲಿದೆ ವಿವರ.

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿನ ಹೆಚ್ಚಳದ ಜತೆಗೆ ಕರೊನಾ ರೂಪಾಂತರಿ ಒಮಿಕ್ರೋನ್​ ಭೀತಿಯೂ ಉಂಟಾಗಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್​-19 ನಿಯಂತ್ರಣ ಸಂಬಂಧ ವಿಶೇಷ ಸಭೆ ನಡೆಸಲಾಗಿದೆ. ಕರೊನಾ ಪ್ರಕರಣಗಳ ನಿಯಂತ್ರಣ ಹಾಗೂ ಸೋಂಕು ತಡೆ ಸಲುವಾಗಿ ಸಭೆಯಲ್ಲಿ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದ್ದು, ಪ್ರಮುಖ ನಿರ್ಧಾರಗಳ ವಿವರ ಇಂತಿದೆ. ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವುದು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು. ಕೇರಳ …

Read More »