ಬೆಂಗಳೂರು : ಯುವತಿಯ ವಿಚಾರಕ್ಕೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂವರು ಆರೋಪಿಗಳಾದ ನಯೀಮ್, ಮೋಹಿನ್, ವಸೀಮ್ ಎಂಬಾತನನ್ನು ಘಟನೆ ನಡೆದ 8 ಗಂಟೆಯೊಳಗೆ ಹೆಚ್ಎಎಲ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಯಾದ ಲಿಖಿತ್ ಮತ್ತು ಅರೋಪಿಗಳು ಎಲ್ಲರೂ ಒಂದೇ ಏರಿಯಾದವರು. ಯುವಕರ ಗುಂಪುಗಳ ನಡುವೆ ಹಣ ಮತ್ತು ಯುವತಿಯ ವಿಚಾರವಾಗಿ ಗಲಾಟೆ ನೆಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. …
Read More »ಬಾಗಲಕೋಟೆ ದೋಣಿ ದುರಂತ; ಮೂವರ ಸಾವಿಗೆ ಹೊಣೆ ಯಾರು?
ಬಾಗಲಕೋಟೆ: ಓರ್ವ ವೃದ್ದನ ಸಾವು ಮೂವರ ಪ್ರಾಣ ಬಲಿ ಪಡೆದ ದುರ್ಘಟನೆ ಬಾಗಲಕೋಟೆ ಮತ್ತು ವಿಜಯನಗರ ಜಿಲ್ಲೆಗಳ ಜನರ ಮನಕಲುಕಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಧನ್ನೂರು ಗ್ರಾಮದ ಬಳಿ ನಾರಾಯಣಪುರ ಜಲಾಶಯ ಹಿನ್ನೀರಲ್ಲಿ ನಡೆದ ದುರಂತ ಎರಡು ಜಿಲ್ಲೆಗಳ ಜನರ ಮನಕಲುಕಿಸಿದೆ. ವಿಜಯಪುರ ಜಿಲ್ಲೆ ತಾಳಿಕೋಟಿ ತಾಲ್ಲೂಕಿನ ಹರನಾಳ ಗ್ರಾಮದ ಶಿವಪ್ಪ ಅಮಲೂರ ಅಕ್ಟೋಬರ್ 7 ರಂದು ಧನ್ನೂರ ಬಳಿ ನಾರಾಯಣಪುರ ಜಲಾಶಯದ ಹಿನ್ನೀರಲ್ಲಿ ಸಾವನ್ನಪ್ಪಿದ್ದ. ಆತನ ಶವ …
Read More »ಆಟವಾಡುತ್ತಾ ಕಾಲುವೆಗೆ ಬಿದ್ದ 4 ಮಕ್ಕಳು.. ಇಬ್ಬರು ಕಂದಮ್ಮಗಳ ದಾರುಣ ಸಾವು
ಚಿಕ್ಕೋಡಿ: ಆಟ ಆಡುತ್ತ ಹೋಗಿ ಕರಿಮಸೂತಿ ಏತ ನೀರಾವರಿಯ ಕಾಲುವೆಗೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ನಡೆದಿದೆ. ಆಟ ಆಡುತ್ತ ಸಂಜೆ ಕೆನಾಲ್ ಬಳಿ ಹೋಗಿದ್ದ ನಾಲ್ವರು ಮಕ್ಕಳ ಪೈಕಿ ಇಬ್ಬರು ಮಕ್ಕಳು ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಸಪ್ನಾ ವಿನಾಯಕ್ ಪುಂಡಿಪಲ್ಲೆ(11) ಮತ್ತು ಪ್ರಥಮ ವಿನಾಯಕ ಪುಂಡಿಪಲ್ಲೆ (7) ಮೃತ ಮಕ್ಕಳು. ಮಕ್ಕಳು ಕಾಲುವೆಗೆ ಬಿದ್ದ ತಕ್ಷಣ …
Read More »ಚಲಿಸುತ್ತಿದ್ದ ರೈಲಿನಲ್ಲಿ ಪತಿಯ ಎದುರೇ ಮಹಿಳೆಯ ಗ್ಯಾಂಗ್ ರೇಪ್
ಮುಂಬಯಿ : ಲಕ್ನೋ -ಮುಂಬೈ ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪತಿಯ ಎದುರೇ 20 ವರ್ಷದ ಮಹಿಳೆಯೊಬ್ಬಳ ಮೇಲೆ ಶುಕ್ರವಾರ ತಡ ರಾತ್ರಿ ಡಕಾಯಿತರು ಗ್ಯಾಂಗ್ ರೇಪ್ ಎಸಗಿದ ಕಳವಳಕಾರಿ ಘಟನೆ ವರದಿಯಾಗಿದೆ. ಸುಮಾರು 8 ಮಂದಿ ಡಕಾಯಿತರ ತಂಡ ಪ್ರಯಾಣಿಕರಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿದೆ. ಬಳಿಕ ಮಹಿಳೆಯನ್ನು ಎಳೆದಾಡಿ ಗ್ಯಾಂಗ್ ರೇಪ್ ಎಸಗಿದೆ. ಸಹ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿರುವುದಾಗಿ ರೈಲ್ವೆ ಪೊಲೀಸರು ತಿಳಿಸಿದ್ದಾರೆ …
Read More »ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರದ ಈ ಉದ್ಯೋಗಿಗಳಿಗೆ ಭರ್ಜರಿ ʼಬಂಪರ್ʼ ಕೊಡುಗೆ
ಅದಾಗಲೇ ಘೋಷಿಸಿರುವ ತುಟ್ಟಿ ಭತ್ಯೆ ಹೆಚ್ಚಳದೊಂದಿಗೆ ಕೇಂದ್ರ ಸರ್ಕಾರದ ಆಯ್ದ ನೌಕರರು ದೀಪಾವಳಿಗೆ ಬಂಪರ್ ಬೋನಸ್ ಪಡೆಯಲಿದ್ದಾರೆ. ಭಾರತೀಯ ರೈಲ್ವೇ ತನ್ನ ನೌಕರರಿಗೆ ಭರ್ಜರಿ ಬೋನಸ್ ನೀಡಲು ನಿರ್ಧರಿಸಿದೆ. ರೈಲ್ವೇ ನೌಕರರಿಗೆ ಹಬ್ಬದ ಬೋನಸ್ ಎಂದು 78 ದಿನಗಳ ವೇತನವನ್ನು ಬೋನಸ್ ರೂಪದಲ್ಲಿ ನೀಡುವುದಾಗಿ ಕೆಲ ದಿನಗಳ ಹಿಂದೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಂಸತ್ತಿನಲ್ಲಿ ಘೋಷಿಸಿದ್ದರು. ದಸರಾಗೂ ಮುನ್ನ ರೈಲ್ವೇಯ 11.56 ಲಕ್ಷಕ್ಕೂ ಹೆಚ್ಚಿನ ಗೆಜ಼ೆಟೇತರ ನೌಕರರ ಖಾತೆಗಳಿಗೆ …
Read More »ಕನ್ನಡದ ಹಿರಿಯ ನಟ ಸತ್ಯಜಿತ್ ಇನ್ನಿಲ್ಲ!
ಬೆಂಗಳೂರು: ಹಲವು ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಸತ್ಯಜಿತ್ ಅವರು ತಡರಾತ್ರಿ ಎರಡು ಗಂಟೆ ಸಮಯದಲ್ಲಿ ನಿಧನರಾಗಿದ್ದಾರೆ. ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸತ್ಯಜಿತ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದ ಸತ್ಯಜಿತ್ ಆ ಮೂಲಕ ಚಿತ್ರರಂಗದಲ್ಲಿ ಹೆಸರು ಮಾಡಿದ್ದರು. ಚಂದನವನದ ಹಲವಾರು ಸ್ಟಾರ್ ಕಲಾವಿದರ ಸಿನಿಮಾಗಳಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿತ್ತು. ಸತ್ಯಜಿತ್ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿ ಕಳೆದ ಸೋಮವಾರ …
Read More »ದ್ಯುತ್ ಉತ್ಪಾದನೆ ಘಟಕಗಳಲ್ಲಿ ಕಲ್ಲಿದ್ದಲು ಕೊರತೆಗೆ ಕಾರಣ ತೆರೆದಿಟ್ಟ ವಿದ್ಯುತ್ ಸಚಿವಾಲಯ
ಭಾರತದ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ ಬಿಕ್ಕಟ್ಟು ಉದ್ಭವಿಸಲು ಕಾರಣಗಳೇನು ಎಂಬ ಬಗ್ಗೆ ವಿದ್ಯುತ್ ಸಚಿವಾಲಯದಿಂದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆ ಬಗ್ಗೆ ವಿವರಗಳು ಇಲ್ಲಿವೆ. ಆರ್ಥಿಕತೆಯ ಚೇತರಿಕೆಯಿಂದಾಗಿ ವಿಪರೀತ ಹೆಚ್ಚಾದ ವಿದ್ಯುತ್ ಬೇಡಿಕೆ, ಸೆಪ್ಟೆಂಬರ್ ತಿಂಗಳಿನಲ್ಲಿ ಕಲ್ಲಿದ್ದಲು ಗಣಿ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಕಲ್ಲಿದ್ದಲು ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ. ಅಲ್ಲದೆ, ಆಮದು ಮಾಡಿಕೊಂಡ ಕಲ್ಲಿದ್ದಲು ಬೆಲೆಯಲ್ಲಿನ ಹೆಚ್ಚಳವು ಸಹ ದೇಶೀಯ ಕಲ್ಲಿದ್ದಲಿನ ಮೇಲೆ ಅವಲಂಬಿತವಾಗಿದೆ, ವಿದ್ಯುತ್ …
Read More »ಗೋವಾದಲ್ಲಿ ಚಾರ್ಟರ್ ವಿಮಾನಗಳು ಆರಂಭ: ಉತ್ತಮ ಪ್ರವಾಸಿ ಋತು ನಿರೀಕ್ಷೆ
ಪಣಜಿ: ಗೋವಾಕ್ಕೆ ಚಾರ್ಟರ್ ವಿಮಾನಗಳು ಆರಂಭಗೊಳ್ಳುವ ಮೂಲಕ ಗೋವಾ ಪ್ರಸಕ್ತ ವರ್ಷ ಉತ್ತಮ ಪ್ರವಾಸಿ ಋತುವನ್ನು ಹೊಂದಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ರಾಜ್ಯದಲ್ಲಿ ಎಲ್ಲಾ ಪ್ರವಾಸೋದ್ಯಮ ಸಂಬಂಧಿತ ವ್ಯವಹಾರಗಳ ಸುರಕ್ಷತೆಗಾಗಿ ಕೋವಿಡ್ ಸಂಬಂಧಿತ ಎಲ್ಲಾ ಪ್ರೊಟೊಕಾಲ್ಗಳನ್ನು ಅನುಸರಿಸಬೇಕು. ಬೀಚ್ಗಳಲ್ಲಿ ಬಾರ್ ಮತ್ತು ರೆಸ್ಟೊರೆಂಟ್ ಮಾಲೀಕರು ಸರಕಾರದ ಎಲ್ಲ ಮಾರ್ಗಸೂಚಿಗಳನ್ನು ಅನುಸರಿಸಬೇಕು ಮತ್ತು ಅವರು ತಮ್ಮ ವ್ಯಾಪಾರವನ್ನು ಪುನರಾರಂಭಿಸಬೇಕು ಎಂದು ಮುಖ್ಯಮಂತ್ರಿ ಸಾವಂತ್ …
Read More »ಪ್ರತಿಭೆಗಳ ಬಳಕೆಗೆ ಪೂರಕ ವಾತಾವರಣ ಸೃಷ್ಟಿಗೆ ಸರಕಾರ ಸಿದ್ದವಿದೆ: ಸಿಎಂ ಬಸವರಾಜ್ ಬೊಮ್ಮಾಯಿ
ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಪ್ರತಿಭೆ ಇದೆ, ಆದರೆ ಅವಕಾಶದ ಕೊರತೆ ಇದೆ. ಪ್ರತಿಭೆ ವಲಸೆ ತಡೆ, ಇದರ ಸಮರ್ಪಕ ಬಳಕೆಗೆ ಎಲ್ಲ ರೀತಿಯ ನೆರವು, ಪ್ರೋತ್ಸಾಹಕ್ಕೆ ಸರಕಾರ ಸಿದ್ದವಿದೆ. ಈ ನಿಟ್ಟಿನಲ್ಲಿ ಉದ್ಯಮ ವಲಯವೂ ಮುಂದೆ ಬರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬಿಯಾಂಡ್ ಬೆಂಗಳೂರು ಇನ್ನೋವೇಶನ್ ಮತ್ತು ಇಂಪ್ಯಾಕ್ಟ್ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಮಾತನಾಡಿದ ಅವರು, ಹುಬ್ಬಳ್ಳಿ ಸೇರಿದಂತೆ ಉತ್ತರ ಕರ್ನಾಟಕದ ಪ್ರತಿಭೆ ಬೇರೆ ಕಡೆ ವಲಸೆ ಹೋಗುತ್ತಿದೆ. …
Read More »ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದ ಸಿದ್ದರಾಮಯ್ಯ
ಮೈಸೂರು: ನಾನು ರಾಷ್ಟ್ರರಾಜಕಾರಣಕ್ಕೆ ಹೋಗದೆ ರಾಜ್ಯ ರಾಜಕಾರಣದಲ್ಲಿಯೇ ಉಳಿಯುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರು ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರರಾಜಕಾರಣಕ್ಕೆ ತೆರಳುತ್ತೇನೆ ಎನ್ನುವುದು ಉಹಾಪೋಹದ ಸುದ್ದಿಯಾಗಿದೆ. ಈ ವಿಚಾರದಲ್ಲಿ ಎಐಸಿಸಿ ನಾಯಕಿ ಸೋನಿಯಾಗಾಂಧಿಯವರೂ ನನ್ನ ಕರೆದಿಲ್ಲ. ಆ ಬಗ್ಗೆ ಚರ್ಚೆಯೂ ಆಗಿಲ್ಲ. ಸುಮ್ಮನೆ ಊಹಾಪೋಹದ ಚರ್ಚೆಗಳು ಬೇಡ. ನಾನು ಎಂದೂ ಆ ಯೋಚನೆ ಮಾಡಿಯೂ ಇಲ್ಲ. ರಾಜ್ಯ ರಾಜಕಾರಣದಲ್ಲೇ ಸಕ್ರಿಯನಾಗಿರುತ್ತೇನೆ. ಮುಂದೆಯೂ …
Read More »