ಧಾರವಾಡದಲ್ಲಿ ಬೆಳ್ಳಂಬೆಳಗ್ಗೆ ಪಾದಚಾರಿಗೆ ಚಿಗರಿ ಬಸ್ ಡಿಕ್ಕಿ: ತೀವ್ರವಾಗಿ ಗಾಯಗೊಂಡ ಪದಾಚಾರಿ.* ರಸ್ತೆ ದಾಟುತ್ತಿದ್ದ ಪಾದಚಾರಿಗೆ ಚಿಗರಿ ಬಸವೊಂದು ಡಿಕ್ಕಿ ಹೊಡೆದು ಪಾದಚಾರಿಗೆ ಗಂಭೀರ ಗಾಯವಾಗಿರುವ ಘಟನೆ ಧಾರವಾಡದ ಕೋರ್ಟ್ ವೃತದ ಬಳಿ ನಡೆದಿದೆ. ಬಾಗಲಕೋಟೆ ಮೂಲದ ಮಲ್ಲಣ್ಣ ಮೇಟಿ ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಇನ್ನೂ ಪದಾಚಾರಿ ಮಲ್ಲಣ್ಣ ಧಾರವಾಡ ಕೋರ್ಟ್ ವೃತದ ಬಳಿಯ ಸಾರ್ವಜನಿಕ ಸಂಚಾರ ನಡೆಸುವ ರಸ್ತೆ ಕ್ರಾಸ್ ಮಾಡಿದ್ದಾರೆ. ಬಳಿಕ ಮುಂದೆ ಇದ್ದ ಬಿಆರ್ಟಿಎಸ್ …
Read More »ಐಎಂಡಿಬಿ ಪಟ್ಟಿಯಲ್ಲಿ ‘ಶಾವ್ಶಾಂಕ್ ರಿಡೆಂಪ್ಶನ್’ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ‘ಜೈಭೀಮ್ ‘
ಚೆನ್ನೈ: ನಟ ಸೂರ್ಯ, ಲಿಜೋ ಮೋಲ್ ಜೋಸ್ ಮತ್ತು ಮಣಿಕಂದನ್ ಅವರನ್ನೊಳಗೊಂಡ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ‘ಜೈ ಭೀಮ್’ ಸಿನಿಮಾ ಹಾಲಿವುಡ್ ನ ಕಲ್ಟ್ ಕ್ಲಾಸಿಕ್ ದಿ ರಿಡೆಂಪ್ಶನ್’ ಅನ್ನು ಹಿಂದಿಕ್ಕಿದ್ದು, 250ಸಿನಿಮಾಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಜ್ಞಾನವೇಲ್ ನಿರ್ದೇಶನದ ಸೂರ್ಯ ಅವರ 2 ಡಿ ಎಂಟರ್ ಟೈನ್ ಮೆಂಟ್ ನಿರ್ಮಾಣದ ಜೈ ಭೀಮ್ ಚಿತ್ರ 9.6 ರೇಟಿಂಗ್ ನೆರವಿನೊಂದಿಗೆ ಅಗ್ರಸ್ಥಾನದಲ್ಲಿದೆ. ಶಾವ್ಶಾಂಕ್ ರಿಡೆಂಪ್ಶನ್’ 9.3 ರೇಟಿಂಗ್ ನೊಂದಿಗೆ …
Read More »ಸೋದರ ಲಖನ್ ಜಾರಕಿಹೊಳಿಗೆ ಬಿಜೆಪಿ ಟಿಕೆಟ್ ಗೆ ಬೇಡಿಕೆ ಇಟ್ಟ ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರಿಗೆ ಬಿಜೆಪಿಯಿಂದ ಸ್ಪರ್ಧೆಗೆ ಅವಕಾಶ ಮಾಡಿಕೊಡಬೇಕು ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಾತನಾಡಿದ ಅವರು, ಲಖನ್ ಜಾರಕಿಹೊಳಿ ಅವರಿಗೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಲ್ಲಿ ಬಿಜೆಪಿ 2 ಸ್ಥಾನಗಳಲ್ಲಿಯೂ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ …
Read More »ಬಿಜೆಪಿ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಗೆಲ್ಲಿಸಬೇಕು’: ಬಾಲಚಂದ್ರ ಜಾರಕಿಹೊಳಿ
ಗೋಕಾಕ: ‘ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಈಗಿರುವ ಮಾಹಿತಿಯಂತೆ ಬಿಜೆಪಿಯಿಂದ ಒಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡಬಹುದೆಂಬ ಲೆಕ್ಕಾಚಾರವಿದೆ. ಪಕ್ಷದ ಮುಖಂಡರು ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಿದ್ದಾರೆ’ ಎಂದು ಕೆಎಂಎಫ್ ಅಧ್ಯಕ್ಷರೂ ಅಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಹೊರವಲಯದಲ್ಲಿರುವ ಬಸವೇಶ್ವರ ಸಭಾಭವನದಲ್ಲಿ ಶುಕ್ರವಾರ ನಡೆದ ಅರಭಾವಿ ಮತಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿಗಳ ಸದಸ್ಯರು ಹಾಗೂ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ‘ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ …
Read More »ರಾಜ್ಕುಮಾರ್ ಕುಟುಂಬ ಹಾಗೂ ನಮ್ಮ ಕುಟುಂಬದ ನಡುವೆ ಅವಿನಾಭಾವ ಸಂಬಂಧ ಇದೆ.: ರಮೇಶ ಜಾರಕಿಹೊಳಿ
ಬೆಳಗಾವಿ: ಚಲನಚಿತ್ರ ನಟ ದಿವಂಗತ ಪುನೀತ್ ರಾಜ್ಕುಮಾರ್ ಸೂರ್ಯ- ಚಂದ್ರ ಇರುವವರೆಗೂ ಅಜರಾಮರವಾಗಿ ಇರಲಿದ್ದಾರೆ. ಅವರ ಸಾವು ಎಲ್ಲರನ್ನೂ ದುಃಖದಲ್ಲಿ ಮುಳುಗಿಸಿದೆ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಭಾವುಕರಾದರು. ತಾಲ್ಲೂಕಿನ ಹುದಲಿ ಗ್ರಾಮದಲ್ಲಿ ರಾಜ್ಕುಮಾರ್, ಶಿವರಾಜ್ಕುಮಾರ್ ಹಾಗೂ ಪುನೀತ್ ರಾಕ್ಕುಮಾರ್ ಅಭಿಮಾನಿಗಳ ಸಂಘದಿಂದ ಶನಿವಾರ ಹಮ್ಮಿಕೊಂಡಿದ್ದ ಅಪ್ಪುಗೆ ನುಡಿ-ಗೀತ ನಮನ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಪುನೀತ್ ಇಡೀ ರಾಜ್ಯದ ಜನರ ಮನಸ್ಸು ಗೆದ್ದಿದ್ದಾರೆ. ಅವರ ಎಲ್ಲ …
Read More »ಹುಬ್ಬಳ್ಳಿಯಲ್ಲಿ ಮದುವೆಗೆ ಮುಂಚೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ
ಹುಬ್ಬಳ್ಳಿ: ಯುವತಿಯೊಬ್ಬಳು ಮದುವೆಗೆ ಮುಂಚೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಂತೋಷ ನಗರದಲ್ಲಿ ಘಟನೆ ನಡೆದಿದ್ದು, ಇಷ್ಟೆಲ್ಲಕ್ಕೂ ಭಾವಿ ಪತಿರಾಯನ(fiancé) ಕಿರುಕುಳವೇ (Torture) ಕಾರಣ ಎಂದು ಮೃತ ಯುವತಿಯ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾವಿ ಪತಿಯ ಕಿರುಕುಳದಿಂದ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಎಂಗೇಜ್ಮೆಂಟ್ (Engagement) ಆದಾಗಿನಿಂದಲೂ ಯುವತಿಗೆ ಭಾವಿ ಪತಿ ಕಿರುಕುಳ ನೀಡುತ್ತಿದ್ದ ಎಂಬ …
Read More »ಬೋರ್ವೆಲ್ ಕೊರೆಯಿಸೇ ಇಲ್ಲ, ಜೆಸಿಬಿಯಲ್ಲಿ ಗುಂಡಿ ತೋಡಿ ಬಿಲ್ ಮಂಜೂರು ಆರೋಪ!
ತುಮಕೂರು: ಬೋರ್ವೆಲ್ ಕೊರೆಯದೇ ಹಣ ಮಂಜೂರು ಮಾಡಿರುವ ಆರೋಪ ಕೇಳಿಬಂದಿದ್ದು, ಜೆಸಿಬಿಯಲ್ಲಿ ಗುಂಡಿ ತೋಡಿ ಬಿಲ್ ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕೆ ಮೇಲನಹಳ್ಳಿ ಗ್ರಾಮದಲ್ಲಿ ಬೋರ್ವೆಲ್ ಕೊರೆಯದೇ ಹಣ ಮಂಜೂರು ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಗ್ರಾಮದ ಜಗದೀಶ್, ಲೋಕೇಶ್, ಸುನೀಲ್ ಬೀರಲಿಂಗಪ್ಪ, ಶಂಕರಲಿಂಗಪ್ಪ,ಅಭಿಷೇಕ್ ಸೇರಿದಂತೆ ಹಲವರು ಸೇರಿ ಗೋಲ್ಮಾಲ್ ಮಾಡಿದ್ದಾರೆ ಅಂತಾ ಕೆ ಮೇಲನಹಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮ ಪಂಂಚಾಯತ್ ಅಧಿಕಾರಿಗಳ ಜೊತೆ …
Read More »ಹುಂಡಿ ಹಣ ಎಗರಿಸುವ ಮುನ್ನ ದೇವರಿಗೆ ನಮಸ್ಕರಿಸಿದ
ದೇವರ ಫೋಟೋ ತೆಗೆದು, ಕಾಲಿಗೆ ನಮಸ್ಕರಿಸಿದ ಕಳ್ಳ ಮಹಾರಾಷ್ಟ್ರದ ಥಾಣೆಯ ಖೋಪಾಟ್ ಬಸ್ ಡಿಪೋ ಬಳಿಯಿರುವ ಆಂಜನೇಯ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿ ಯುವಕನೊಬ್ಬ ದೇಗುಲಕ್ಕೆ ಎಂಟ್ರಿಯಾಗುತ್ತಾನೆ. ಯಾರಿಗೂ ಅನುಮಾನ ಬರದಂತೆ ತನ್ನ ಮೊಬೈಲ್ ಕ್ಯಾಮರಾದಲ್ಲಿ ದೇವರ ಫೋಟೋಗಳನ್ನು ತೆಗೆಯುತ್ತಾನೆ. ಅತ್ತ ಇತ್ತ ನೋಡುತ್ತಾನೆ. ಯಾರೂ ಇಲ್ಲದ್ದನ್ನು ಖಚಿತಪಡಿಸಿಕೊಂಡ ನಂತರ ಆಂಜನೇಯನ ವಿಗ್ರಹದ ಬಳಿ ಬರುತ್ತಾನೆ. ನಂತರ ದೇವರ ಪಾದ ಮುಟ್ಟಿ ನಮಸ್ಕರ ಮಾಡುತ್ತಾನೆ. ಇದಾದ ಕೆಲವೇ ಕ್ಷಣಗಳಲ್ಲಿ …
Read More »ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಲಖನ್ ಜಾರಕಿಹೊಳಿ ಪರ ಬ್ಯಾಟ್ ಬ ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಂಡರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ …
Read More »ದೆಹಲಿಯಲ್ಲಿ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಿದ ಸಿಎಂ
ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ಹಿನ್ನಲೆಯಲ್ಲಿ ಸಿಎಂ ಅರವಿಂದ್ ಕ್ರೇಜಿವಾಲ್ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು ಸೋಮವಾರದಿಂದ ಒಂದು ವಾರದವರೆಗೆ, ಶಾಲೆಗಳು ಭೌತಿಕವಾಗಿ ಮುಚ್ಚಲ್ಪಡುತ್ತವೆ ಅಂತ ಅವರು ಹೇಳಿದರು. ಇದೇ ವೇಳೆ ಅವರು (coronavirus)ಸರ್ಕಾರಿ ಕಚೇರಿಗಳು ಒಂದು ವಾರದವರೆಗೆ 100% ಸಾಮರ್ಥ್ಯದಲ್ಲಿ ಮನೆಯಿಂದಲೇ (WFH) ಕಾರ್ಯನಿರ್ವಹಿಸುತ್ತವೆ. ಖಾಸಗಿ ಕಚೇರಿಗಳಿಗೆ ಸಾಧ್ಯವಾದಷ್ಟು WFH ಆಯ್ಕೆಗೆ ಹೋಗಲು ಸಲಹೆ ನೀಡಲಾಗುವುದು …
Read More »
Laxmi News 24×7