Breaking News

ಭೀಕರ ಅಪಘಾತ; ಮೀನಿನ ಲಾರಿ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ

ಉತ್ತರ ಕನ್ನಡ: ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ಬಸ್ ಹಾಗೂ ಮೀನಿನ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಘಟನೆಯಿಂದಾಗಿ ಎರಡೂ ವಾಹನಗಳ ಚಾಲಕರಿಗೆ ಗಾಯಗಳಾಗಿವೆ. ಮೀನು ತುಂಬಿಕೊಂಡು ಸಾಗುತ್ತಿದ್ದ ಲಾರಿ ಹಾಗೂ ಅಂಕೋಲಾದಿಂದ ಕಾರವಾರ ಕಡೆಗೆ ಬರುತ್ತಿದ್ದ ಬಸ್​ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಚಾಲಕ ಲಾರಿಯಲ್ಲಿಯೇ ಸಿಲುಕಿಕೊಂಡಿದ್ದ.. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಚಾಲಕನನ್ನ ಹೊರಗೆ ತೆಗೆದಿದ್ದಾರೆ. ಅಂಕೋಲಾ ಪೊಲೀಸ್ ಠಾಣಾ …

Read More »

8 ತೊಲೆ ಬಂಗಾರವನ್ನು ಮರಳಿಸಿ ಮಹಿಳೆ ಪಾಲಿಗೆ ಬಂಗಾರದ ಮನುಷ್ಯನಾದ ಆಟೋ ಚಾಲಕ..!

ಗದಗ: ಹಣವೆಂದರೆ ಹೆಣ ಕೂಡ ಬಾಯಿ ಬಿಡುತ್ತದೆ ಅನ್ನುವ ಕಾಲಘಟ್ಟದಲ್ಲಿ ಮಾನವೀಯತೆಯು ಇನ್ನೂ ಮರೆಯಾಗಿಲ್ಲ ಎಂಬುದನ್ನು ಗದಗ ಜಿಲ್ಲೆಯಲ್ಲಿ ನಡೆದ ಘಟನೆಯೊಂದು ಸಾಬೀತು ಮಾಡಿದೆ. ಒಂದಲ್ಲ, ಎರಡಲ್ಲ ಬರೋಬ್ಬರಿ 8 ತೊಲೆ ಬಂಗಾರವನ್ನು ಕಳೆದುಕೊಂಡವರಿಗೆ ಹಿಂತಿರುಗಿಸಿದ ಆಟೋ ಚಾಲ ಪ್ರಾಮಾಣಿಕತೆ ಮೆರೆದಿದ್ದಾರೆ. ಆಟೋ ಚಾಲಕನ ಹೆಸರು ವೀರಣ್ಣ ಯಾವಗಲ್. ವೀಣಾ ಅವರು ಮರೆತು ಹೋಗಿದ್ದ ಬ್ಯಾಗ್​ನಲ್ಲಿದ್ದ 8 ತೊಲೆ ಬಂಗಾರವನ್ನು ವೀರಣ್ಣ ಹಿಂತಿರುಗಿಸಿ ಜನ ಮೆಚ್ಚುಗೆಯನ್ನು ಗಳಿಸಿದ್ದಾರೆ. ವಿವರಣೆಗೆ ಬರುವುದಾದರೆ, ಗದಗಿನ …

Read More »

ರಾಜ್ಯ ಸರ್ಕಾರದಿಂದ ಮಹಿಳಾ ಮಣಿಗಳಿಗೆ ಭರ್ಜರಿ ಸಿಹಿ ಸುದ್ದಿ : ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2021-22ನೇ ಸಾಲಿನ ಉದ್ಯೋಗಿನಿ,ಕಿರುಸಾಲ,ಸಮೃದ್ಧಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಅರ್ಜಿ ಹಾಗೂ ಹೆಚ್ಚಿನ ಮಾಹಿತಿ ಪಡೆಯಲು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು ಅಥವಾ ದೂ.ಸಂ:08392-2294127 ಮೊ.ಸಂ:9110653738 ಗೆ ಸಂಪರ್ಕಿಸಬಹುದು. ಸೆ.6ರೊಳಗಾಗಿ ಅರ್ಜಿ ಸಲ್ಲಿಸಬೇಕು.   ಉದ್ಯೋಗಿನಿ …

Read More »

ಕರ್ನಾಟಕ ಹೈಕೋರ್ಟ್- ಎರಡನೇ ವಿಭಾಗ ಸಹಾಯಕರ (ಎಸ್ಡಿಎ) ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಹೈಕೋರ್ಟ್‌ಗೆ 142 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ karnatakajudiciary.kar.nic ನಲ್ಲಿ ಪರಿಶೀಲಿಸಬಹುದು. ಅಭ್ಯರ್ಥಿಗಳು ಸೆಪ್ಟೆಂಬರ್ 24, 2021 ರೊಳಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ ನಡೆಯುತ್ತಿರುವ ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ 142. ಒಮ್ಮೆ ನೇಮಕಗೊಂಡ ನಂತರ, ಅಭ್ಯರ್ಥಿಗಳು ಎರಡು ವರ್ಷಗಳ ಕಾಲ ಪರೀಕ್ಷಾ ಅವಧಿಯಲ್ಲಿರುತ್ತಾರೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು ಮತ್ತು 35 ವರ್ಷ ಮೀರಿರಬಾರದು. …

Read More »

‘ನಾನು ಉದ್ಧವ್​ ಠಾಕ್ರೆ ಬಗ್ಗೆ ಹೇಳಿದ್ದರಲ್ಲಿ ಏನೂ ತಪ್ಪಿಲ್ಲ’

ಉದ್ಧವ್​ ಠಾಕ್ರೆ ಸ್ವಾತಂತ್ರ್ಯೋತ್ಸವದ ದಿನ ಭಾಷಣ ಮಾಡುವಾಗ, ಇದು ಎಷ್ಟನೇ ಸ್ವಾತಂತ್ರ್ಯೋತ್ಸವ ಎಂದು ಕೇಳಲು ಹಿಂದೆ ಬಾಗಿದ್ದರು. ಅದನ್ನು ಸಚಿವ ನಾರಾಯಣ್​ ರಾಣೆ ವ್ಯಂಗ್ಯ ಮಾಡಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕಪಾಳಕ್ಕೆ ಹೊಡೆಯುತ್ತಿದ್ದೆ ಎಂದು ಹೇಳಿ, ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಇದೀಗ ಜಾಮೀನು ಪಡೆದಿರುವ ನಾರಾಯಣ್​ ರಾಣೆ (Union Minister Narayan Rane) ಇಂದು ಸುದ್ದಿಗೋಷ್ಠಿ ನಡೆಸಿದರು. ನಾನು ಉದ್ಧವ್​ ಠಾಕ್ರೆ(Uddhav Thackeray) ಬಗ್ಗೆ ಮಾತನಾಡಿದ್ದು, ಅಸಂಸದೀಯ ಭಾಷೆಯಾಗಿರಬಹುದು. ಆದರೆ …

Read More »

ಯೋಗಿ ಆದಿತ್ಯನಾಥ್​ಗೆ ಚಪ್ಪಲಿಯಿಂದ ಹೊಡೆಯಬೇಕು’ ಎಂದಿದ್ದ ಸಿಎಂ ಉದ್ಧವ್ ಠಾಕ್ರೆ; ವಿಡಿಯೋ ವೈರಲ್​​

ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆರನ್ನು ಪೊಲೀಸರು ಬಂಧಿಸಿದ್ದರು. ಈ ಬೆನ್ನಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಉದ್ಧವ್​​​​ ಠಾಕ್ರೆ ನೀಡಿದ್ದ ಹಳೆ ಹೇಳಿಕೆಯೊಂದು ಸೋಷಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಿದೆ. ಯೋಗಿ ಆದಿತ್ಯನಾಥ್​​​​ ಒಬ್ಬ ಯೋಗಿ, ಹೇಗೆ ತಾನೇ ಸಿಎಂ ಆಗಲು ಸಾಧ್ಯ. ಇವರು ರಾಜಕೀಯ ತೊರೆದು ಗುಹೆಯಲ್ಲಿ ಕೂರಬೇಕು. ಶಿವಾಜಿಯ ಪಟ್ಟಾಭಿಷೇಕಕ್ಕೆ ಉತ್ತರ ಪ್ರದೇಶದಿಂದ …

Read More »

ಶಾಸಕ ಯತ್ನಾಳ್ ಕೊಠಡಿಗೆ ಭಿತ್ತಿಪತ್ರ ಅಂಟಿಸಿದ್ದ ಪ್ರಕರಣಕ್ಕೆ ತಿರುವು, ಇಬ್ಬರ ಬಂಧನ!

ಬೆಂಗಳೂರು, ಆ. 25: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬೆಂಗಳೂರಿನ ಶಾಸಕರ ಭವನದ ಕೊಠಡಿಗೆ ಭಿತ್ತಿಪತ್ರ ಹಚ್ಚಿದ್ದ ಪ್ರಕರಣ ತಿರುವು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಿಧಾನಸೌಧ ಪೊಲೀಸರು ಬಂಧಿಸಿ, ಶಾಸಕರ ಭವನಕ್ಕೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಇನ್ನಿಬ್ಬರು ಆರೋಪಿತರು ತಲೆ ಮರೆಸಿಕೊಂಡಿದ್ದು, ಅವರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಶಾಸಕರ ಭವನದಲ್ಲಿನ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕೊಠಡಿಗೆ ಪೋಸ್ಟರ್ ಹಚ್ಚುತ್ತಿದ್ದ ವೇಳೆಯಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು …

Read More »

ಎಲ್ಲಾ ಕುಡುಕರು ಸೇರಿ ನನಗೆ ಕುಡುಕನ ಪಟ್ಟ ಕಟ್ಟಿದ್ರು; ಸಿ.ಟಿ ರವಿ

ಮೈಸೂರು: ಎರಡು ವರ್ಷಗಳ ಹಿಂದೆ ಅಪಘಾತ ಪ್ರಕರಣವೊಂದರಲ್ಲಿ ಎಲ್ಲಾ ಕುಡುಕರು ಸೇರಿ ನನಗೆ ಕುಡುಕನ ಪಟ್ಟ ಕಟ್ಟಿದ್ದರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 8000 ಕೋಟಿ GST ಬಂದಿದೆ. ಕರ್ನಾಟಕದ ಪಾಲು ಕೇಂದ್ರ ಬಿಡುಗಡೆ ಮಾಡಿದೆ. ಕೆಲವರಿಗೆ ಸುಳ್ಳೇ ಮನೆ ದೇವರು, ಸುಳ್ಳನ್ನೇ ಸತ್ಯ ಎಂದು ಹೇಳುತ್ತಾರೆ. ನನಗೆ ಕುಡುಕನ ಪಟ್ಟ ಕಟ್ಟಿದ ಹಾಗೆಯೇ GST …

Read More »

ಬೆಟ್ಟದಲ್ಲಿ ಮಹಿಳೆಯ ಬೆತ್ತಲೆ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ

ತುಮಕೂರು: ಮಹಿಳೆಯೋರ್ವಳ ಶವ ಬೆತ್ತಲೆಯಾಗಿ ಪತ್ತೆಯಾಗಿರುವ ಘಟನೆ ತುಮಕೂರು ತಾಲೂಕಿನ ಹೀರೇಹಳ್ಳಿ ಸಮೀಪದ ಚೋಟಾಸಾಬರ ಪಾಳ್ಯದ ಬಳಿ ನಡೆದಿದೆ. 35 ವರ್ಷದ ಜಯಲಕ್ಷ್ಮಿ ಕೊಲೆಯಾಗಿರುವ ಮಹಿಳೆ. ನಿನ್ನೆ ಬೆಟ್ಟದ ಮೇಲೆ ಹಸು ಮೇಯಿಸಲು ಜಯಲಕ್ಷ್ಮೀ ಒಬ್ಬರೇ ಹೋಗಿದ್ದಾರೆ. ಸಂಜೆಯಾದರೂ ಮನೆಗೆ ವಾಪಸ್ ಬರದೇ ಇದ್ದದನ್ನು ನೋಡಿ ಪತಿ ಶಿವಕುಮಾರ್ ಹುಡುಕಾಟ ಶುರುಮಾಡಿದ್ದಾರೆ. ಆಗ ಬೆಟ್ಟದ ಮೇಲಿನ ಪೊದೆಯಲ್ಲಿ ಜಯಲಕ್ಷ್ಮೀಯ ಬೆತ್ತಲೆಯಾಗಿ ಬಿದ್ದಿದ್ದ ಮೃತದೇಹ ಕಂಡು ಬೆಚ್ಚಿಬಿದ್ದಿದಾರೆ. ಜೊತೆಗೆ ಮೃತ ದೇಹದ ಮೇಲೆ …

Read More »

ರೈತರ ಆದಾಯ ದ್ವಿಗುಣಕ್ಕೆ ಎರಡನೇ ಕೃಷಿ ನಿರ್ದೇಶನಾಲಯ ಆರಂಭ : ಸಿಎಂ

ಬೆಂಗಳೂರು ;ರಾಜ್ಯದ ರೈತರ ಆದಾಯ ದ್ವಿಗುಣಗೊಳಿಸಲು ರಾಜ್ಯಸರ್ಕಾರ ಹಲವಾರು ಕ್ರಮಗಳನ್ನು ಜಾರಿಗೊಳಿಸಲಿದ್ದು, ರೈತರ ಉತ್ಪನ್ನಗಳ ಮೌಲ್ಯ ಹೆಚ್ಚಿಸಲು 2ನೇ ಕೃಷಿ ನಿರ್ದೇಶನಾಲಯವನ್ನು ಅಸ್ಥಿತ್ವಕ್ಕೆ ತರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆ, ಪಶುಸಂಗೋಪನೆ, ಡೈರಿ, ಮೀನುಗಾರಿಕೆ ಒಳಗೊಂಡಂತೆ ಆಗ್ರೋ ಉತ್ಪನ್ನಗಳ ಸಂಸ್ಕರಣೆಗೆ ಒತ್ತು ನೀಡಿ ಉತ್ಪನ್ನಗಳ ಮೌಲ್ಯ ಹೆಚ್ಚಿಸಲು ವಿಶೇಷ ಕಾರ್ಯಪಡೆಯನ್ನು ರಚಿಸಲಾಗುವುದು. ಇದಕ್ಕೆ ಸೆಕೆಂಡರಿ ಅಗ್ರಿಕಲ್ಚರ್ ಡೈರೆಕ್ಟರೇಟ್ ಎಂದು ಹೆಸರಿಟ್ಟು ಕೃಷಿಯಲ್ಲಿ ದೊಡ್ಡ ಬದಲಾವಣೆ ಮಾಡುವ ಮೂಲಕ …

Read More »