ಮೈಸೂರು: ಕನ್ನಡ ಚಿತ್ರರಂಗದ ದಿಗ್ಗಜ ನಟ ಡಾ.ವಿಷ್ಣುವರ್ಧನ್ ಅವರು 12ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಅವರ ಹಳೆಯ ನೆನಪುಗಳನ್ನು ಖಾಸಗಿ ಹೋಟೆಲ್ ಸಿಬ್ಬಂದಿಯೊಬ್ಬರು ಮೆಲುಕು ಹಾಕಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ವಿಷ್ಣುವರ್ಧನ್ ಅವರು ಜೀವನದ ಕೊನೆಯ ದಿನಗಳನ್ನು ಕಳೆದಿದ್ದರು. ಈ ಬಗ್ಗೆ ದಿಗ್ವಿಜಯ ನ್ಯೂಸ್ ಜತೆ ಮಾತನಾಡಿರುವ ಹೋಟೆಲ್ ಮ್ಯಾನೇಜರ್ ಶ್ರೀನಿವಾಸ ಹಳೆಯ ಕ್ಷಣಗಳನ್ನು ಸ್ಮರಿಸಿದ್ದಾರೆ. 2009ರ ಡಿಸೆಂಬರ್ 10 ರಿಂದ ವಿಷ್ಣು ಅವರು ನಮ್ಮ ಹೋಟೆಲ್ನಲ್ಲೇ ಇದ್ದರು. ಕಾಲಿಗೆ ನೋವಾಗಿದ್ದರಿಂದ …
Read More »ಗಂಡನನ್ನ ಜೈಲಿನಿಂದ ಬಿಡಿಸಲು ಸಹಾಯ ಮಾಡೋ ನೆಪದಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್
ಉತ್ತರಪ್ರದೇಶ : ಮಹಿಳೆಯೊಬ್ಬಳಿಗೆ ಆಕೆಯ ಗಂಡನನ್ನ ಜೈಲಿನಿಂದ ಹೊರತರಲು ಸಹಾಯ ಮಾಡೋದಾಗಿ ವಕೀಲ ಹಾಗೂ ಆತನ ಸ್ನೇಹಿತರು ಸೇರಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಅಪರಾಧಗಳ ಆಗರ ಉತ್ತರ ಪ್ರದೇಶದಲ್ಲಿ ನಡೆದಿದೆ.. ಮಹೇಶ್ , ವಿಕಾಸ್ ಹಾಗೂ ದೇವೇಂದ್ರ ಎಂಬಾತ ಸೇರಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.. ಈ ಬಗ್ಗೆ ಮಹಿಳೆಯು, ವಕೀಲರು ಸಹಾಯ ಮಾಡುವ ನೆಪದಲ್ಲಿ ನನ್ನನ್ನು ನೋಯ್ಡಾದಲ್ಲಿರುವ ಕಚೇರಿಗೆ ಕರೆಸಿಕೊಂಡು ಅಲ್ಲಿ ಅವನು ಮತ್ತು …
Read More »ಕೊಪ್ಪಳದಲ್ಲಿ ಕಾಂಗ್ರೆಸ್ಗೆ ಬಲ, ಕಮಲಕ್ಕಿಲ್ಲ ಸ್ಪಷ್ಟ ಗರಿ: ಜೆಡಿಎಸ್- ಪಕ್ಷೇತರರೇ ನಿರ್ಣಾಯಕ
ಕೊಪ್ಪಳ: ಜಿಲ್ಲೆಯ 5 ನಗರ, ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಎರಡರಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಬಂದರೆ, ಉಳಿದ ಮೂರರಲ್ಲಿ ಜೆಡಿಎಸ್ ಹಾಗೂ ಪಕ್ಷೇತರರು ನಿರ್ಣಾಯಕರಾಗಲಿದ್ದಾರೆ.ಕಾರಟಗಿ ಪುರಸಭೆಯ 23 ಸ್ಥಾನಗಳಲ್ಲಿ ಬಿಜೆಪಿ -11, ಕಾಂಗ್ರೆಸ್-11, ಜೆಡಿಎಸ್-1 ಸ್ಥಾನ ಪಡೆದಿದೆ. ಕೈ-ಕಮಲ ಸಮಬಲ ಸಾಧಿಸಿದ್ದು, ಜೆಡಿಎಸ್ ನಿರ್ಣಾಯಕ ಪಾತ್ರವಹಿಸಲಿದೆ. ಭಾಗ್ಯನಗರ ಪಟ್ಟಣದ 19 ಸ್ಥಾನಗಳಲ್ಲಿ ಕಾಂಗ್ರೆಸ್-8, ಬಿಜೆಪಿ-9, ಇಬ್ಬರು ಪಕ್ಷೇತರರು ಗೆದ್ದಿದ್ದಾರೆ. ಬಿಜೆಪಿ ಹೆಚ್ಚು ಸ್ಥಾನ ಬಪಡೆದರೂ ಬಹುಮತಕ್ಕೆ …
Read More »ಅರಭಾವಿ, ಕಲ್ಲೊಳ್ಳಿ, ನಾಗನೂರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರ ಭರ್ಜರಿ ಜಯ. ಸಂಸದ ಈರಣ್ಣ ಕಡಾಡಿಯವರಿಗೆ ತೀವ್ರ ಮುಖಭಂಗ
ಮೂಡಲಗಿ : ಕಳೆದ ಸೋಮವಾರದಂದು ಜರುಗಿದ ತಾಲೂಕಿನ ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರೇ ಭರ್ಜರಿ ಜಯ ಸಾಧಿಸುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಭದ್ರಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿಗಳ ಕಮಾಲ, : ಮತ್ತೆ ಸಾಹುಕಾರರಿಗೆ ಜೈ ಎಂದ ಪಕ್ಷೇತರ ವಿಜಯ ಶಾಲಿ ಅಭ್ಯರ್ಥಿಗಳು.. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆಯಲ್ಲಿ 16 ಸ್ಥಾನಗಳ …
Read More »ಬೆಳಗಾವಿಯ ಪುರಸಭೆ ಹಾಗೂ ಪಟ್ಟಣ ಪಂಚಾಯತಿಯ ಫಲಿತಾಂಶ
ಬೆಳಗಾವಿ: 58 ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬೆಳಗಾವಿಯ 5 ಪುರಸಭೆ ಹಾಗೂ 11 ಪಟ್ಟಣ ಪಂಚಾಯತ್ ಚುನಾವಣೆಗಳ ಫಲಿತಾಂಶ ಈ ಕೆಳಗಿನಂತಿದೆ. 1.ಅಥಣಿ ಪುರಸಭೆ ಒಟ್ಟು ವಾರ್ಡ್ಗಳು – 27, ಕಾಂಗ್ರೆಸ್ – 15, ಬಿಜೆಪಿ – 9, ಜೆಡಿಎಸ್ -1, ಪಕ್ಷೇತರ – 3 2. ಹಾರೂಗೇರಿ ಪುರಸಭೆ ಒಟ್ಟು ವಾರ್ಡ್ಗಳು – 23, ಕಾಂಗ್ರೆಸ್ – 7, ಬಿಜೆಪಿ – 15, ಜೆಡಿಎಸ್ -00, …
Read More »ಸಿಎಂ ಬೊಮ್ಮಾಯಿಗೆ ಮುಖಭಂಗ; ಹುಬ್ಬಳ್ಳಿಯಲ್ಲಿ 14 ಸ್ಥಾನ ಪಕ್ಷೇತರರ ಪಾಲು!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ತವರಿನಲ್ಲೇ ಬಿಜೆಪಿ ಒಂದೂ ಸ್ಥಾನ ಗೆಲ್ಲದೇ ಆಘಾತಕ್ಕೆ ಒಳಗಾಗಿದ್ದರೆ, ಎಲ್ಲಾ 14 ಸ್ಥಾನಗಳಲ್ಲೂ ಪಕ್ಷೇತರ ಅಭ್ಯರ್ಥಿಗಳು ಜಯಭೇರಿ ಬಾರಿಸಿ ಹೊಸ ದಾಖಲೆ ಬರೆದಿದ್ದಾರೆ. ಎಂಕೆ ಹುಬ್ಬಳ್ಳಿಯ ಎಲ್ಲಾ 14 ಸ್ಥಾನಗಳೂ ಪಕ್ಷೇತರ ಅಭ್ಯರ್ಥಿಗಳು ಜಯಭೇರಿ ಬಾರಿಸಿ ರಾಜಕೀಯ ಪಕ್ಷಗಳನ್ನು ಮತದಾರ ಸಂಪೂರ್ಣವಾಗಿ ತಿರಸ್ಕರಿಸಿದ್ದಾನೆ. ಈ ಮೂಲಕ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದಾರೆ. ಉಳಿದಂತೆ ಹಾವೇರಿಯ ಬಂಕಾಪುರ ಮತ್ತು ಗುತ್ತಲ ಪಟ್ಟಣ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ …
Read More »ರಾಜ್ಯ ಸ್ಥಳೀಯ ಸಂಸ್ಥೆ ಚುನಾವಣೆ: ಕೈ ಮೇಲು, ಮುದುಡಿದ ಕಮಲ, ಜೆಡಿಎಸ್ ಪಾತಾಳ!
ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಆಡಳಿತ ಪಕ್ಷ ಬಿಜೆಪಿಗೆ ಹಿನ್ನಡೆ ಉಂಟಾದರೆ, ಪ್ರತಿಪಕ್ಷ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಜೆಡಿಎಸ್ ಪಾತಳಕ್ಕೆ ಕುಸಿದಿದೆ. ಗುರುವಾರ ನಡೆದ ಫಲಿತಾಂಶದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೆಚ್ಚಿಸಿಕೊಂಡರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಶಿಧರ ಜೊಲ್ಲೆ ಮತ್ತು ಶ್ರೀರಾಮುಲು ಮುಂತಾದ ಬಿಜೆಪಿ ನಾಯಕರಿಗೆ ತವರಿನಲ್ಲಿ ಸೋಲುಂಟಾಗಿದೆ. ಪಟ್ಟಣ ಪಂಚಾಯಿತಿಯ 577 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 236 ಸ್ಥಾನಗಳಲ್ಲಿ …
Read More »ರಾಜ್ಯ ಸರ್ಕಾರದ ‘ಸಚಿವ ಸಂಪುಟ ಬದಲಾವಣೆ’ ಬಗ್ಗೆ ಸ್ಪೋಟಕ ಬಾಂಬ್ ಸಿಡಿಸಿದ ‘ಬಿಜೆಪಿ ಶಾಸಕ’.!
ವಿಜಯಪುರ: ಒಂದೆಡೆ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ( Karnataka BJP Government ) ಸಿಎಂ ಬದಲಾವಣೆ ಇಲ್ಲ ಅಂತ ವರಿಷ್ಠರೇ ಹೇಳಿದ್ದಾರೆ. ಮತ್ತೊಂದೆಡೆ ಸಚಿವ ಸಂಪುಟ ವಿಸ್ತರಣೆ ( Karnataka Cabinet Expansion ) ಬಗ್ಗೆ ಯಾವುದೇ ಸುಳಿವು ಕೂಡ ಇಲ್ಲ. ಹೀಗೆ ಇರುವಾಗಲೇ ರಾಜ್ಯ ಸರ್ಕಾರದ ಸಚಿವ ಸಂಪುಟ ಬದಲಾವಣೆ ಬಗ್ಗೆ ಸ್ಪೋಟಕ ಬಾಂಬ್ ಅನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ( MLA Basanagouda Patil …
Read More »ಥಿಯೇಟರ್ ಗಳಿಗೆ ನೈಟ್ ಕರ್ಫ್ಯೂ ಬಿಸಿ; ಚಿತ್ರಮಂದಿರಗಳಲ್ಲಿ 4 ಶೋ ಮಾತ್ರ ಪ್ರದರ್ಶನ
ಬೆಂಗಳೂರು: ಹೆಚ್ಚುತ್ತಿರುವ ಒಮಿಕ್ರಾನ್ ಕಟ್ಟಿಹಾಕುವ ನಿಟ್ಟಿನಲ್ಲಿ ಇಂದಿನಿಂದ 10 ದಿನಗಳ ಕಾಲ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಿದ್ದು, ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಇರಲಿದೆ. ನೈಟ್ ಕರ್ಫ್ಯೂ ಇಫೆಕ್ಟ್ ಥಿಯೇಟರ್ ಗಳಿಗೂ ತಟ್ಟಿದ್ದು, ಇಂದಿನಿಂದ ಚಿತ್ರಮಂದಿರಗಳಲ್ಲಿ 4 ಶೋ ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ರಾಜ್ಯದ ಶೇ.80ರಷ್ಟು ಚಿತ್ರಮಂದಿರಗಳಲ್ಲಿ 7 ಗಂಟೆಯ ಶೋ ಲಾಸ್ಟ್ ಆಗಲಿದೆ. ನೈಟ್ ಕರ್ಫ್ಯೂ ಜಾರಿ ಇಂದಾಗಿ ನೈಟ್ ಶೋ ಸ್ಥಗಿತಗೊಂಡಿರುವುದರಿಂದ ಶೇ.30ರಷ್ಟು …
Read More »ಎಚ್ಚರಿಕೆ ನೀಡಿದ ಅರುಣ್ ಸಿಂಗ್; ಓಡಿದ ರೇಣುಕಾಚಾರ್ಯ
ಹುಬ್ಬಳ್ಳಿ: ಶಾಸಕ ರೇಣುಕಾಚಾರ್ಯ ಇಲ್ಲಿ ಮಾಧ್ಯಮಗಳ ಮುಂದೆ ಮಾತನಾಡುವ ವೇಳೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೂಕ್ಷ್ಮವಾಗಿ ಎಚ್ಚರಿಕೆ ನೀಡಿದರು. ಕ್ಯಾ ಚಲ್ ರಹಾ ಹೈ.. ರೇಣುಕಾಚಾರಿ ಎಂದು ಅರುಣ್ ಸಿಂಗ್ ಎನ್ನುತ್ತಿದ್ದಂತೆ ರೇಣುಕಾಚಾರ್ಯ ಮಾತನಾಡುವುದನ್ನು ಬಿಟ್ಟು ಅವರ ಹಿಂದೆ ಓಡಿಹೋದರು. ಅವರು ಹೋದ ಬಳಿಕ ಮತ್ತೆ ಮಾಧ್ಯಮದವರ ಜೊತೆ ಮಾತನಾಡಿದರು.
Read More »
Laxmi News 24×7