ಬೆಳಗಾವಿ; ಮಾಜಿ ಶಾಸಕ, ಬಿಜೆಪಿ ನಾಯಕ ಸಂಜಯ್ ಪಾಟೀಲ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ನೀಡಿರುವ ಅವಹೆಳನಕಾರಿ ಹೇಳಿಕೆಯನ್ನು ಇಡೀ ಪಂಚಮಸಾಲಿ ಸಮಾಜ ಖಂಡಿಸುತ್ತದೆ, ತಕ್ಷಣ ಸಂಜಯ್ ಪಾಟೀಲ್ ಕ್ಷಮೆಯಾಚಿಸಬೇಕು ಎಂದು ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಆರ್.ಕೆ.ಪಾಟೀಲ್ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಂಜಯ್ ಪಾಟೀಲ್ ಅವಹೇಳಕಾರಿ, ಅಸಹನೀಯ ಶಬ್ದ ಬಳಸಿ ಅವಮಾನಿಸಿರುವುದನ್ನು ಇಡೀ ಸಮುದಾಯ ತೀವ್ರವಾಗಿ ಖಂಡಿಸುತ್ತದೆ. ಇಂತಹ ಹೇಳಿಕೆ ಪುನರಾವರ್ತನೆಯಾದರೆ …
Read More »ಮಮತಾಗೆ ಭರ್ಜರಿ ಜಯ – 2024ರಲ್ಲಿ ದೆಹಲಿಯಲ್ಲಿ ನಮ್ಮದೇ ಸರ್ಕಾರ ಎಂದ ಟಿಎಂಸಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ ಮಮತಾ ಬ್ಯಾನರ್ಜಿ 84,709 ಮತಗಳನ್ನು ಪಡೆದಿದ್ದರೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರಿಯಾಂಕಾ ತಿಬ್ರೇವಾಲ್ 26,320, ಸಿಪಿಎಂನ ಶ್ರೀಜಿಬ್ ಬಿಸ್ವಾಸ್ 4,201 ಮತಗಳನ್ನು ಪಡೆದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಸುವೇಂಧು ಅಧಿಕಾರಿಯ ವಿರುದ್ಧ ಸೋತಿದ್ದರು. ಮಂತ್ರಿಸ್ಥಾನವನ್ನು ಪಡೆದವರು 6 ತಿಂಗಳ ಒಳಗಡೆ ಚುನಾಯಿತರಾಗಬೇಕು. ಹೀಗಾಗಿ ಉಪಚುನಾವಣೆಯಲ್ಲಿ ಮಮತಾ …
Read More »ವಿಜಯನಗರ: ಕಲುಷಿತ ನೀರು ಸೇವನೆ ಪ್ರಕರಣ, ಐದಕ್ಕೇರಿದ ಸಾವಿನ ಸಂಖ್ಯೆ
ವಿಜಯನಗರ: ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಇತ್ತೀಚಿಗೆ ಕಲುಷಿತ ನೀರು ಕುಡಿದು ಓರ್ವ ಸಾವನ್ನಪ್ಪಿದ ಬೆನ್ನಲ್ಲೆ ಮತ್ತೇ ಮೂರು ಜನ ಮೃತಪಟ್ಟಿದ್ದು ಸಾವಿನ ಸಂಖ್ಯೆ 5 ಕ್ಕೇರಿದೆ. ಕಲುಷಿತ ನೀರು ಸೇವಿಸಿದ ಪರಿಣಾಮ ವಾಂತಿ ಬೇಧಿ ಚಿಕಿತ್ಸೆಗಾಗಿ ಬಳ್ಳಾರಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಹಾವನೂರು ಬಸಮ್ಮ, ಲಕ್ಷ್ಮಮ್ಮ, ಅಂಗೂರುಗಟ್ಟಿ ಗೋಣೆಪ್ಪ ಎಂಬಾತರು ಅಸುನೀಗಿದ್ದಾರೆ. ಜೊತೆಗೆ ಮೊನ್ನೆ ಬಂಧುಗಳ ಮನೆಗೆ ಭೇಟಿ ನೀಡಿದ ಮಹಾದೇವಪ್ಪ ಹೆಳ್ಳಪ್ಪ ಎಂಬುವವರು ಕೂಡ …
Read More »ಹೈವೇಯಲ್ಲಿ ದರೋಡೆಗಿಳಿದಿದ್ದ ಡಕಾಯಿತರಿಗೆ ಗೂಸಾ ನೀಡಿದ ಗ್ರಾಮಸ್ಥರು
ಬೆಂಗಳೂರು: ಕಾಡಿನಲ್ಲಿ ಟೆಂಟ್ ಹಾಕಿ ಹೆದ್ದಾರಿಯಲ್ಲಿ ಪ್ರಯಾಣಿಸುವ ಸವಾರರ ದರೋಡೆಗಿಳಿದಿದ್ದ ಡಕಾಯಿತರಿಗೆ ಗ್ರಾಮಸ್ಥರು ಗೂಸಾ ನೀಡಿದ ಘಟನೆ ನಗರದ ಹೊರವಲಯದ ಬೆಂಗಳೂರು-ಶಿವಮೊಗ್ಗ ಹೈವೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗಗಳಲ್ಲಿ ಹೋಗುವ ಪ್ರಯಾಣಿಕರನ್ನ ಟಾರ್ಗೆಟ್ ಮಾಡ್ತಿದ್ದ ಗ್ಯಾಂಗ್ ವಾಹನಗಳನ್ನು ಅಡ್ಡಗಟ್ಟಿ ಕಾರಿನ ಗ್ಲಾಸ್ ಗಳನ್ನ ಒಡೆದು ದರೋಡೆ ಮಾಡುತ್ತಿದ್ದರೆಂಬ ಆರೋಪ ಕೇಳಿ ಬಂದಿದೆ. ಆರೋಪಿಗಳು ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನು ದೋಚಿ ಪರಾರಿಯಾಗುತ್ತಿದ್ದರು ಎನ್ನಲಾಗಿದೆ. ಕಳ್ಳರು ಗುಬ್ಬಿ ಫಾರೆಸ್ಟ್ ನಲ್ಲಿ ಟೆಂಟ್ …
Read More »ತುಳಿತಕೊಳ್ಳಪಟ್ಟ ದಲಿತ ಸಮುದಾಯದ ಸ್ವಾಭಿಮಾನದ ಬದುಕಿಗಾಗಿ ಕಾರ್ಯ ನಿರ್ವಹಿಸುವ ಮಹದಾಸೆ ನಿರೀಕ್ಷಿಸಲು ಸಾಧ್ಯ: ಅಶೋಕ ಪೂಜಾರಿ
ಗೋಕಾಕ : 3, ಸ್ವಾತಂತ್ರ್ಯ ಭಾರತದ ಸಂವಿಧಾನ ಶಿಲ್ಪಿ ಡಾ,ಬಾಬಾಸಾಹೇಬ ಅಂಬೇಡ್ಕರ್ ಅವರ ಪರ್ವ ಕಾಲದಲ್ಲಿ ನಾವಿದ್ದೇವೆ. ಸ್ವಾತಂತ್ರ್ಯ ಮತ್ತು ಸಮಾನತೆ ಬದುಕು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾದ ನ್ಯಾಯ ಸಮ್ಮತ ಆಡಳಿತ ವ್ಯವಸ್ಥೆ, ಸ್ತ್ರೀ ಸ್ವಾತಂತ್ರ್ಯ ಸಮಗ್ರ ಶಿಕ್ಷಣ, ಎಲ್ಲರಿಗೂ ಸಮ ಬಾಳು ಮತ್ತು ಸಮಪಾಲು ಮುಂತಾದ ಉದಾತ್ತ ದ್ಧ್ಯೆಯಗಳೊಂದಿಗೆ ಸಾಂದರ್ಭಿಕ ತಿದ್ದುಪಡಿಗಳ ಅವಕಾಶಗಳೊಂದಿಗೆ ರಚಿಸಲ್ಪಟ್ಟಿರುವ ದೇಶದ ಸಂವಿಧಾನ ಭಾರತೀಯರ ಧರ್ಮ ಗ್ರಂಥವಗಬೇಕೆಂದು ಪ್ರೋ ಎ. ವಾಯ. ಪಂಗಣ್ಣವರ …
Read More »ಶ್ವಾನದ ತಲೆಗೆ ಸಿಲುಕಿದ ಪ್ಲಾಸ್ಟಿಕ್ ಬಾಟಲಿ ; ಅಗ್ನಿಶಾಮಕ ಸಿಬಂದಿಯಿಂದ ರಕ್ಷಣೆ
ತೆಕ್ಕಟ್ಟೆ : ಕಳೆದ ಮೂರು ದಿನಗಳಿಂದ ಶ್ವಾನದ ತಲೆಗೆ ಆಕಸ್ಮಿಕವಾಗಿ ಪ್ಲಾಸ್ಟಿಕ್ ಬಾಟಲಿ ಸಿಲುಕಿ ಪರದಾಡುತ್ತಿದ್ದು, ಕುಂದಾಪುರ ಅಗ್ನಿಶಾಮಕ ದಳದ ಸಿಬಂದಿಗಳ ಸಮಯ ಪ್ರಜ್ಞೆಯಿಂದಾಗಿ ರಕ್ಷಿಸಿದ ಘಟನೆ ಅ.2 ರಂದು ಸಂಭವಿಸಿದೆ. ಘಟನೆ : ಹಿರಿಯ ಪರಿಸರವಾದಿ ಕೊರ್ಗಿ ವಿಠಲ್ ಶೆಟ್ಟಿ ಅವರು ಅ.2 ರಂದು ತಮ್ಮ 76ನೇ ಹುಟ್ಟು ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಕೋಣಿ ಮಾನಸ ಜ್ಯೋತಿಯ ವಿಶೇಷ ಚೇತನ ಮಕ್ಕಳಿಗಾಗಿ ಹಣ್ಣು ಹಂಪಲು ವಿತರಣೆಗೆಂದು ತೆರಳಿದ ಸಂದರ್ಭದಲ್ಲಿ …
Read More »ವಿದ್ಯುತ್ ಅವಘಡ: ಅಜ್ಜಿಯನ್ನು ರಕ್ಷಣೆ ಮಾಡಲು ಹೋದ ಮೊಮ್ಮಗ ಕೂಡ ಸಾವು
ಚಿಕ್ಕೋಡಿ: ವಿದ್ಯುತ್ ಶಾಕ್ಗೆ ಒಳಗಾಗಿದ್ದ ಅಜ್ಜಿಯನ್ನು ರಕ್ಷಣೆ ಮಾಡಲು ಹೋಗಿದ್ದ ಮೊಮ್ಮಗ ಕೂಡ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಮಡ್ಡಿ ಗಲ್ಲಿಯಲ್ಲಿ ನಡೆದಿದೆ. ಅಜ್ಜಿ ಶಾಂತವ್ವಾ ಬಸ್ತವಾಡೆ, ಮೊಮ್ಮಗ ಸಿದ್ದಾರ್ಥ ಬಸ್ತವಾಡೆ (24) ಸ್ಥಳದಲ್ಲೇ ಸಾವನ್ನಪ್ಪಿದ ಮೃತ ದುರ್ದೈವಿಗಳು. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರೆ ಮತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ಮಳೆ ಸುರಿದ ಹಿನ್ನಲೆ ಹಿತ್ತಲಿನಲ್ಲಿ ಬಟ್ಟೆ ಹಾಕುವ ತಂತಿಗೆ …
Read More »ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಬಿಡುಗಡೆಯಲ್ಲಿ ಏರುಪೇರು
ಕೊರೋನಾ ಆರಂಭವಾದಾಗಿನಿಂದ ನೌಕರರ ವೇತನ ಬಿಡುಗಡೆಯಲ್ಲಿ ಏರುಪೇರಾಗುತ್ತಿದೆ. ಕಳೆದ ಒಂದು ವರ್ಷದಿಂದ ನಿಗದಿತ ದಿನಕ್ಕೆ ವೇತನ ಸಿಗುತ್ತಿಲ್ಲ. ಜುಲೈ ತಿಂಗಳ ವೇತನವನ್ನು ಆಗಸ್ಟ್ ಕೊನೆಯ ವಾರದಲ್ಲಿ ಪಾವತಿಸಲಾಗಿತ್ತು. ಆಗಸ್ಟ್ ತಿಂಗಳ ಶೇ.50ರಷ್ಟು ವೇತನವನ್ನು ಗೌರಿ-ಗಣೇಶ ಹಬ್ಬಕ್ಕೂ ಮುನ್ನ ಬಿಡುಗಡೆಗೊಳಿಸಲಾಗಿತ್ತು. ಈಗ ಅಕ್ಟೋಬರ್ ಬಂದರೂ ಆಗಸ್ಟ್ ತಿಂಗಳ ಬಾಕಿ ಶೇ.50ರಷ್ಟುವೇತನ ನೀಡಿಲ್ಲ. ಇದೀಗ ಮಹಾಲಯ ಅಮಾವಾಸ್ಯೆ, ದಸರಾ ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ನೌಕರರಿಗೆ ಹಣದ ಅಗತ್ಯವಿದೆ.
Read More »ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಮಯೋಪಿಯ ಸಮಸ್ಯೆ
ಹೆಚ್ಚಾಗಿ 8- 16 ವರ್ಷದೊಳಗಿನ ಮಕ್ಕಳು ಈ ಕಣ್ಣಿನ ಸಮಸ್ಯೆಗೆ ತುತ್ತಾಗುತ್ತಿರುವುದಾಗಿ ಸಂಶೋಧನೆಯಿಂದ ತಿಳಿದುಬಂದಿದೆ. ಈ ಹಿಂದೆ 10- 15 ಪ್ರತಿಶತ ಮಕ್ಕಳು ಕಣ್ಣಿನ ಸಮಸ್ಯೆ ಹೇಳಿಕೊಂಡು ವೈದ್ಯರ ಬಳಿಗೆ ಬರುತ್ತಿದ್ದರು. ಈಗ ಆ ಸಂಖ್ಯೆ ಶೇ. 30- 40 ಪ್ರತಿಶತಕ್ಕೆ ಏರಿಕೆಯಾಗಿದೆ. ದೀರ್ಘ ಕಾಲ ಡಿಜಿಟಲ್ ಪರದೆಯನ್ನು ದಿಟ್ಟಿಸುವುದರಿಂದ ಕಣ್ನಲ್ಲಿನ ನೀರಿನಂಶ ಬೇಗನೆ ಒಣಗಿ ಹೋಗುತ್ತದೆ. ಇದರಿಂದ ತುರಿಕೆ ಕಂಡುಬರುತ್ತದೆ. ಆಗ ಮಕ್ಕಳು ಕಣ್ಣನ್ನು ಪದೇ ಪದೇ ಉಜ್ಜಿಕೊಳ್ಳುತ್ತಾರೆ. …
Read More »ಟಾಪ್ 10 ಸುದ್ದಿಗಳ ಕ್ವಿಕ್ರೌಂಡಪ್ ATM ಕೇಂದ್ರದಲ್ಲಿ ಯುವತಿಯ ಭರ್ಜರಿ ಡ್ಯಾನ್ಸ್
1. ದೀದಿ ಭವಿಷ್ಯ ನಿರ್ಧಾರಕ್ಕೆ ಕ್ಷಣಗಣನೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭವಿಷ್ಯ ಕೆಲವೇ ಕ್ಷಣಗಳಲ್ಲಿ ನಿರ್ಧಾರವಾಗಲಿದೆ. ಭವಾನಿಪುರ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದೆ. ಭವಾನಿಪುರ ಕ್ಷೇತ್ರದಲ್ಲಿ ಕಳೆದ ಗುರುವಾರ ಮತದಾನ ನಡೆದು, ಶೇಕಡಾ 57ರಷ್ಟು ಮತದಾನವಾಗಿತ್ತು. ಅದರಂತೆ ಇಂದು ಬೆಳಿಗ್ಗೆ 8 ಗಂಟೆಗೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಮಧ್ಯಾಹ್ನದ ವೇಳೆಗೆ ಫಲಿತಾಂಶಗಳು ಟ್ರೆಂಡ್ ಆಧಾರದ ಮೇಲೆ ಸ್ಪಷ್ಟವಾಗುತ್ತವೆ. ಇನ್ನು ಭವಾನಿಪುರ …
Read More »